AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಾವೇರಿ; ಸೈಕಲ್​ ಟೈರ್​ಗೂ ಟಿಕೆಟ್ ನೀಡಿದ ಕೆಎಸ್​ಆರ್​ಟಿಸಿ ಬಸ್ ಕಂಡಕ್ಟರ್!

ಶಿಕಾರಿಪುರಕ್ಕೆ ಹೊರಟಿದ್ದ ಕೆಎ 42 ಎಫ್ 1237 ಸಂಖ್ಯೆಯ ಸರ್ಕಾರಿ ಬಸ್​​ನಲ್ಲಿ ಉಮೇಶ್ ಪಾಟೀಲ್ ಸೈಕಲ್ ಟಯರ್​​ ಕೊಂಡೊಯ್ಯುತ್ತಿದ್ದರು. ಅದಕ್ಕೂ ಟಿಕೆಟ್ ನೀಡಿದ ಬಗ್ಗೆ ಅವರು ನಿರ್ವಾಹಕನನ್ನು ಪ್ರಶ್ನಿಸಿದ್ದಾರೆ. ಆಗ, ನಮಗೆ ಮೇಲಧಿಕಾರಿಗಳ ಆದೇಶ ಇದೆ ಎಂದು ಅವರು ಹೇಳಿದ್ದಾರೆ.

ಹಾವೇರಿ; ಸೈಕಲ್​ ಟೈರ್​ಗೂ ಟಿಕೆಟ್ ನೀಡಿದ ಕೆಎಸ್​ಆರ್​ಟಿಸಿ ಬಸ್ ಕಂಡಕ್ಟರ್!
ಪ್ರಯಾಣಿಕ ಉಮೇಶ್ ಪಾಟೀಲ್ ಹಾಗೂ ಟಿಕೆಟ್
Follow us
TV9 Web
| Updated By: Ganapathi Sharma

Updated on:Aug 04, 2023 | 6:40 PM

ಹಾವೇರಿ: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ (KSRTC) ಬಸ್ ನಿರ್ವಾಹಕರೊಬ್ಬರು ಸೈಕಲ್ ಟಯರ್​​​​ಗೂ (Cycle Tyre) ಟಿಕೆಟ್ ನೀಡಿದ ವಿದ್ಯಮಾನ ವರದಿಯಾಗಿದೆ. ಪ್ರಯಾಣಿಕರೊಬ್ಬರ ಬಳಿ ಇದ್ದ ಸೈಕಲ್ ಟಯರ್​​​​​​ಗೂ ನಿರ್ವಾಹಕರು ಟಿಕೆಟ್ ನೀಡಿದ್ದಾರೆ. ಇದನ್ನು ಪ್ರಶ್ನಿಸಿದಾಗ ನಿಗಮದಿಂದ ಬಂದ ಹೊಸ ಆದೇಶದ ಪ್ರಕಾರ ಟಿಕೆಟ್ ನೀಡಿದ್ದೇನೆ ಎಂದು ಹೇಳಿದ್ದಾರೆ ಎನ್ನಲಾಗಿದೆ. ರಾಣೆಬೆನ್ನೂರಿನಿಂದ ಶಿಕಾರಿಪುರಕ್ಕೆ ತೆರಳುತ್ತಿದ್ದ ಕೆಎಸ್​​ಆರ್​​ಟಿಸಿ ಬಸ್​​ನಲ್ಲಿ ಈ ಘಟನೆ ನಡೆದಿದೆ. ಉಮೇಶ್ ಪಾಟೀಲ್ ಎಂಬವರು ಸರ್ಕಾರಿ ಬಸ್​ನಲ್ಲಿ ರಟ್ಟೀಹಳ್ಳಿಗೆ ಪ್ರಯಾಣಿಸುತ್ತಿದ್ದರು. ಅವರ ಬಳಿ ಇದ್ದ ಸೈಕಲ್ ಟಯರ್​​​ಗೆ ಬಸ್​ ನಿರ್ವಾಹಕ 5 ರೂಪಾಯಿ ಟಿಕೆಟ್ ನೀಡಿದ್ದಾರೆ.

ಶಿಕಾರಿಪುರಕ್ಕೆ ಹೊರಟಿದ್ದ ಕೆಎ 42 ಎಫ್ 1237 ಸಂಖ್ಯೆಯ ಸರ್ಕಾರಿ ಬಸ್​​ನಲ್ಲಿ ಉಮೇಶ್ ಪಾಟೀಲ್ ಸೈಕಲ್ ಟಯರ್​​ ಕೊಂಡೊಯ್ಯುತ್ತಿದ್ದರು. ಅದಕ್ಕೂ ಟಿಕೆಟ್ ನೀಡಿದ ಬಗ್ಗೆ ಅವರು ನಿರ್ವಾಹಕನನ್ನು ಪ್ರಶ್ನಿಸಿದ್ದಾರೆ. ಆಗ, ನಮಗೆ ಮೇಲಧಿಕಾರಿಗಳ ಆದೇಶ ಇದೆ ಎಂದು ಅವರು ಹೇಳಿದ್ದಾರೆ.

ಉಮೇಶ್ ಪಾಟೀಲ್ ಅವರು ತಮ್ಮ ಮಗನ ಜತೆ ರಟ್ಟಿಹಳ್ಳಿಯ ತೊಟಗಂಟಿ ಗ್ರಾಮಕ್ಕೆ ಕೆಎಸ್​ಆರ್​ಟಿಸಿ ಬಸ್​​ನಲ್ಲಿ ಪ್ರಯಾಣಿಸುತ್ತಿದ್ದರು. ಈ ನಿಲ್ದಾಣಗಳ ನಡುವೆ ಒಬ್ಬ ವ್ಯಕ್ತಿಗೆ ಟಿಕೆಟ್​​​ಗೆ 35 ರೂ. ಇದ್ದು, ಇಬ್ಬರಿಗೆ 70 ರೂ. ಹಾಗೂ ಸೈಕಲ್ ಚಕ್ರಕ್ಕೆ 5 ರೂ. ಸೇರಿಸಿ 75 ರೂ.ನ ಟಿಕೆಟ್ ನೀಡಲಾಗಿದೆ.

ಇದನ್ನೂ ಓದಿ: ಕೊಪ್ಪಳ: ಬಟನ್ ರೋಸ್ ಬೆಳೆದು ಲಕ್ಷ ಲಕ್ಷ ಆದಾಯ ಗಳಿಸಿದ ಹೊಸೂರು ಗ್ರಾಮದ ರೈತ

ಕೆಎಸ್​ಆರ್​ಟಿಸಿ ನಿಯಮದಲ್ಲೇನಿದೆ?

ಸಾಮಾನ್ಯವಾಗಿ ಕೆಎಸ್​ಆರ್​​ಟಿಸಿ ಬಸ್​​ನಲ್ಲಿ ಪ್ರಯಾಣಿಕರು 30 ಕೆಜಿ ವರೆಗೆ ವಸ್ತುಗಳನ್ನು ಕೊಂಡೊಯ್ಯಲು ಅವಕಾಶವಿದೆ. ಅದಕ್ಕಿಂತ ಕಡಿಮೆ ತೂಕದ ವಸ್ತುಗಳನ್ನು ಕೊಂಡೊಯ್ಯುವುದಕ್ಕೆ ಪ್ರತ್ಯೇಕ ಹಣ ಪಾವತಿಸಬೇಕಿಲ್ಲ. ಆದಾಗ್ಯೂ, ಉಮೇಶ್ ಪಾಟೀಲ್ ಅವರಿಗೆ ನಿರ್ವಾಹಕರು ಲಗೇಜ್ ಯೂನಿಟ್ ಎಂದು ಟಿಕೆಟ್ ನೀಡಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 6:36 pm, Fri, 4 August 23

ರಾಹುಲ್​ಗೆ ತಿರುಗೇಟು ನೀಡಲು ಪ್ಲ್ಯಾನ್ ರೂಪಿಸಿದ್ದ ವಿರಾಟ್ ಕೊಹ್ಲಿ
ರಾಹುಲ್​ಗೆ ತಿರುಗೇಟು ನೀಡಲು ಪ್ಲ್ಯಾನ್ ರೂಪಿಸಿದ್ದ ವಿರಾಟ್ ಕೊಹ್ಲಿ
14 ವರ್ಷದ ವೈಭವ್​ನ 11 ರಾಕೆಟ್ ಸಿಕ್ಸ್​ಗಳು: ವಿಡಿಯೋ ವೀಕ್ಷಿಸಿ
14 ವರ್ಷದ ವೈಭವ್​ನ 11 ರಾಕೆಟ್ ಸಿಕ್ಸ್​ಗಳು: ವಿಡಿಯೋ ವೀಕ್ಷಿಸಿ
VIDEO: ಅತ್ಯಂತ ಕೆಟ್ಟ ದಾಖಲೆ: ಒಂದೇ ಓವರ್​ನಲ್ಲಿ 30 ರನ್ ಚಚ್ಚಿದ ವೈಭವ್
VIDEO: ಅತ್ಯಂತ ಕೆಟ್ಟ ದಾಖಲೆ: ಒಂದೇ ಓವರ್​ನಲ್ಲಿ 30 ರನ್ ಚಚ್ಚಿದ ವೈಭವ್
ಬೆಂಗಳೂರು ವಿಮಾನ ನಿಲ್ದಾಣ ರಸ್ತೆಯಲ್ಲಿ ಸರಣಿ ಅಪಘಾತ, 4 ಕಾರುಗಳು ಜಖಂ
ಬೆಂಗಳೂರು ವಿಮಾನ ನಿಲ್ದಾಣ ರಸ್ತೆಯಲ್ಲಿ ಸರಣಿ ಅಪಘಾತ, 4 ಕಾರುಗಳು ಜಖಂ
ಸ್ತ್ರೀಯರು ಗರ್ಭಾವಸ್ಥೆಯಲ್ಲಿ ನೀತಿಕತೆಗಳನ್ನು ಯಾಕೆ ಕೇಳಬೇಕು?
ಸ್ತ್ರೀಯರು ಗರ್ಭಾವಸ್ಥೆಯಲ್ಲಿ ನೀತಿಕತೆಗಳನ್ನು ಯಾಕೆ ಕೇಳಬೇಕು?
ಮೇಷ ರಾಶಿಯವರಿಗಿಂದು ಐದು ರಾಶಿಗಳ ಶುಭ ಫಲ: ಉಳಿದ ರಾಶಿಗಳ ಫಲಾಫಲವೂ ಇಲ್ಲಿದೆ
ಮೇಷ ರಾಶಿಯವರಿಗಿಂದು ಐದು ರಾಶಿಗಳ ಶುಭ ಫಲ: ಉಳಿದ ರಾಶಿಗಳ ಫಲಾಫಲವೂ ಇಲ್ಲಿದೆ
ಕಾಲು ನೋವಿದ್ದರೂ ವೈಭವ್ ಶತಕಕ್ಕೆ ದ್ರಾವಿಡ್ ಸಂಭ್ರಮ ನೋಡಿ
ಕಾಲು ನೋವಿದ್ದರೂ ವೈಭವ್ ಶತಕಕ್ಕೆ ದ್ರಾವಿಡ್ ಸಂಭ್ರಮ ನೋಡಿ
ಪದ್ಮ ಭೂಷಣ ಪ್ರಶಸ್ತಿ ಪಡೆಯಲು ಬಂದ ಬಾಲಯ್ಯ ಗತ್ತು ಹೇಗಿತ್ತು ನೋಡಿ..
ಪದ್ಮ ಭೂಷಣ ಪ್ರಶಸ್ತಿ ಪಡೆಯಲು ಬಂದ ಬಾಲಯ್ಯ ಗತ್ತು ಹೇಗಿತ್ತು ನೋಡಿ..
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಕೊಪ್ಪಳದ 96 ವರ್ಷದ ಭೀಮವ್ವ ಶಿಳ್ಳೆಕ್ಯಾತರ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಕೊಪ್ಪಳದ 96 ವರ್ಷದ ಭೀಮವ್ವ ಶಿಳ್ಳೆಕ್ಯಾತರ
ಸ್ಪಿನ್ ಲೆಜೆಂಡ್ ಆರ್​. ಅಶ್ವಿನ್​ಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
ಸ್ಪಿನ್ ಲೆಜೆಂಡ್ ಆರ್​. ಅಶ್ವಿನ್​ಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ