AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಾವೇರಿ; ಸೈಕಲ್​ ಟೈರ್​ಗೂ ಟಿಕೆಟ್ ನೀಡಿದ ಕೆಎಸ್​ಆರ್​ಟಿಸಿ ಬಸ್ ಕಂಡಕ್ಟರ್!

ಶಿಕಾರಿಪುರಕ್ಕೆ ಹೊರಟಿದ್ದ ಕೆಎ 42 ಎಫ್ 1237 ಸಂಖ್ಯೆಯ ಸರ್ಕಾರಿ ಬಸ್​​ನಲ್ಲಿ ಉಮೇಶ್ ಪಾಟೀಲ್ ಸೈಕಲ್ ಟಯರ್​​ ಕೊಂಡೊಯ್ಯುತ್ತಿದ್ದರು. ಅದಕ್ಕೂ ಟಿಕೆಟ್ ನೀಡಿದ ಬಗ್ಗೆ ಅವರು ನಿರ್ವಾಹಕನನ್ನು ಪ್ರಶ್ನಿಸಿದ್ದಾರೆ. ಆಗ, ನಮಗೆ ಮೇಲಧಿಕಾರಿಗಳ ಆದೇಶ ಇದೆ ಎಂದು ಅವರು ಹೇಳಿದ್ದಾರೆ.

ಹಾವೇರಿ; ಸೈಕಲ್​ ಟೈರ್​ಗೂ ಟಿಕೆಟ್ ನೀಡಿದ ಕೆಎಸ್​ಆರ್​ಟಿಸಿ ಬಸ್ ಕಂಡಕ್ಟರ್!
ಪ್ರಯಾಣಿಕ ಉಮೇಶ್ ಪಾಟೀಲ್ ಹಾಗೂ ಟಿಕೆಟ್
TV9 Web
| Edited By: |

Updated on:Aug 04, 2023 | 6:40 PM

Share

ಹಾವೇರಿ: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ (KSRTC) ಬಸ್ ನಿರ್ವಾಹಕರೊಬ್ಬರು ಸೈಕಲ್ ಟಯರ್​​​​ಗೂ (Cycle Tyre) ಟಿಕೆಟ್ ನೀಡಿದ ವಿದ್ಯಮಾನ ವರದಿಯಾಗಿದೆ. ಪ್ರಯಾಣಿಕರೊಬ್ಬರ ಬಳಿ ಇದ್ದ ಸೈಕಲ್ ಟಯರ್​​​​​​ಗೂ ನಿರ್ವಾಹಕರು ಟಿಕೆಟ್ ನೀಡಿದ್ದಾರೆ. ಇದನ್ನು ಪ್ರಶ್ನಿಸಿದಾಗ ನಿಗಮದಿಂದ ಬಂದ ಹೊಸ ಆದೇಶದ ಪ್ರಕಾರ ಟಿಕೆಟ್ ನೀಡಿದ್ದೇನೆ ಎಂದು ಹೇಳಿದ್ದಾರೆ ಎನ್ನಲಾಗಿದೆ. ರಾಣೆಬೆನ್ನೂರಿನಿಂದ ಶಿಕಾರಿಪುರಕ್ಕೆ ತೆರಳುತ್ತಿದ್ದ ಕೆಎಸ್​​ಆರ್​​ಟಿಸಿ ಬಸ್​​ನಲ್ಲಿ ಈ ಘಟನೆ ನಡೆದಿದೆ. ಉಮೇಶ್ ಪಾಟೀಲ್ ಎಂಬವರು ಸರ್ಕಾರಿ ಬಸ್​ನಲ್ಲಿ ರಟ್ಟೀಹಳ್ಳಿಗೆ ಪ್ರಯಾಣಿಸುತ್ತಿದ್ದರು. ಅವರ ಬಳಿ ಇದ್ದ ಸೈಕಲ್ ಟಯರ್​​​ಗೆ ಬಸ್​ ನಿರ್ವಾಹಕ 5 ರೂಪಾಯಿ ಟಿಕೆಟ್ ನೀಡಿದ್ದಾರೆ.

ಶಿಕಾರಿಪುರಕ್ಕೆ ಹೊರಟಿದ್ದ ಕೆಎ 42 ಎಫ್ 1237 ಸಂಖ್ಯೆಯ ಸರ್ಕಾರಿ ಬಸ್​​ನಲ್ಲಿ ಉಮೇಶ್ ಪಾಟೀಲ್ ಸೈಕಲ್ ಟಯರ್​​ ಕೊಂಡೊಯ್ಯುತ್ತಿದ್ದರು. ಅದಕ್ಕೂ ಟಿಕೆಟ್ ನೀಡಿದ ಬಗ್ಗೆ ಅವರು ನಿರ್ವಾಹಕನನ್ನು ಪ್ರಶ್ನಿಸಿದ್ದಾರೆ. ಆಗ, ನಮಗೆ ಮೇಲಧಿಕಾರಿಗಳ ಆದೇಶ ಇದೆ ಎಂದು ಅವರು ಹೇಳಿದ್ದಾರೆ.

ಉಮೇಶ್ ಪಾಟೀಲ್ ಅವರು ತಮ್ಮ ಮಗನ ಜತೆ ರಟ್ಟಿಹಳ್ಳಿಯ ತೊಟಗಂಟಿ ಗ್ರಾಮಕ್ಕೆ ಕೆಎಸ್​ಆರ್​ಟಿಸಿ ಬಸ್​​ನಲ್ಲಿ ಪ್ರಯಾಣಿಸುತ್ತಿದ್ದರು. ಈ ನಿಲ್ದಾಣಗಳ ನಡುವೆ ಒಬ್ಬ ವ್ಯಕ್ತಿಗೆ ಟಿಕೆಟ್​​​ಗೆ 35 ರೂ. ಇದ್ದು, ಇಬ್ಬರಿಗೆ 70 ರೂ. ಹಾಗೂ ಸೈಕಲ್ ಚಕ್ರಕ್ಕೆ 5 ರೂ. ಸೇರಿಸಿ 75 ರೂ.ನ ಟಿಕೆಟ್ ನೀಡಲಾಗಿದೆ.

ಇದನ್ನೂ ಓದಿ: ಕೊಪ್ಪಳ: ಬಟನ್ ರೋಸ್ ಬೆಳೆದು ಲಕ್ಷ ಲಕ್ಷ ಆದಾಯ ಗಳಿಸಿದ ಹೊಸೂರು ಗ್ರಾಮದ ರೈತ

ಕೆಎಸ್​ಆರ್​ಟಿಸಿ ನಿಯಮದಲ್ಲೇನಿದೆ?

ಸಾಮಾನ್ಯವಾಗಿ ಕೆಎಸ್​ಆರ್​​ಟಿಸಿ ಬಸ್​​ನಲ್ಲಿ ಪ್ರಯಾಣಿಕರು 30 ಕೆಜಿ ವರೆಗೆ ವಸ್ತುಗಳನ್ನು ಕೊಂಡೊಯ್ಯಲು ಅವಕಾಶವಿದೆ. ಅದಕ್ಕಿಂತ ಕಡಿಮೆ ತೂಕದ ವಸ್ತುಗಳನ್ನು ಕೊಂಡೊಯ್ಯುವುದಕ್ಕೆ ಪ್ರತ್ಯೇಕ ಹಣ ಪಾವತಿಸಬೇಕಿಲ್ಲ. ಆದಾಗ್ಯೂ, ಉಮೇಶ್ ಪಾಟೀಲ್ ಅವರಿಗೆ ನಿರ್ವಾಹಕರು ಲಗೇಜ್ ಯೂನಿಟ್ ಎಂದು ಟಿಕೆಟ್ ನೀಡಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 6:36 pm, Fri, 4 August 23

Follow Us
ಒಮೈದಿಯಾ ಏರ್​ಪೋರ್ಟ್​ ಮೇಲೆ ಅಮೆರಿಕ ಬಾಂಬ್ ದಾಳಿ
ಒಮೈದಿಯಾ ಏರ್​ಪೋರ್ಟ್​ ಮೇಲೆ ಅಮೆರಿಕ ಬಾಂಬ್ ದಾಳಿ
Dudhsagar Falls: ಹಾಲಿನ ಕಡಲಿನಂತೆ ಹರಿಯುತ್ತಿದೆ ದೂದ್‌ ಸಾಗರ್​!
Dudhsagar Falls: ಹಾಲಿನ ಕಡಲಿನಂತೆ ಹರಿಯುತ್ತಿದೆ ದೂದ್‌ ಸಾಗರ್​!
ಸ್ಕೂಟಿಯಲ್ಲಿ ಗಾಂಜಾ ಮಾರಲು ಬಂದು ಪೊಲೀಸರ ಕೈಗೆ ಸಿಕ್ಕಿಬಿದ್ದ ಮಹಿಳೆ
ಸ್ಕೂಟಿಯಲ್ಲಿ ಗಾಂಜಾ ಮಾರಲು ಬಂದು ಪೊಲೀಸರ ಕೈಗೆ ಸಿಕ್ಕಿಬಿದ್ದ ಮಹಿಳೆ
ಮಿಥುನ ರಾಶಿಯಲ್ಲಿ ಸೂರ್ಯ, ಚಂದ್ರ ಸಂಚಾರ: ಇಂದಿನ ರಾಶಿ ಭವಿಷ್ಯ ಹೇಗಿದೆ ನೋಡಿ
ಮಿಥುನ ರಾಶಿಯಲ್ಲಿ ಸೂರ್ಯ, ಚಂದ್ರ ಸಂಚಾರ: ಇಂದಿನ ರಾಶಿ ಭವಿಷ್ಯ ಹೇಗಿದೆ ನೋಡಿ
ಎಸ್ ಜಾನಕಿ ಅವರೊಟ್ಟಿಗಿನ ಅನುಬಂಧ ನೆನೆದ ಹಿರಿಯ ನಟ ಶ್ರೀನಾಥ್
ಎಸ್ ಜಾನಕಿ ಅವರೊಟ್ಟಿಗಿನ ಅನುಬಂಧ ನೆನೆದ ಹಿರಿಯ ನಟ ಶ್ರೀನಾಥ್
ಬೆಳೆ ಹಾನಿ ಪರಿಹಾರದ ಬಗ್ಗೆ ಸರ್ಕಾರ ನಿರ್ಧಾರ ಮಾಡುತ್ತದೆ: ಸತೀಶ್ ಜಾರಕಿಹೊಳಿ
ಬೆಳೆ ಹಾನಿ ಪರಿಹಾರದ ಬಗ್ಗೆ ಸರ್ಕಾರ ನಿರ್ಧಾರ ಮಾಡುತ್ತದೆ: ಸತೀಶ್ ಜಾರಕಿಹೊಳಿ
ಹೊಳೆ ದಾಟೋಕೆ ದೊಣ್ಣೆ‌ನಾಯಕನ ಅಪ್ಪಣೆ ಬೇಕೆ: ಖರ್ಗೆಗೆ ಜೋಶಿ ತಿರುಗೇಟು
ಹೊಳೆ ದಾಟೋಕೆ ದೊಣ್ಣೆ‌ನಾಯಕನ ಅಪ್ಪಣೆ ಬೇಕೆ: ಖರ್ಗೆಗೆ ಜೋಶಿ ತಿರುಗೇಟು
ಎಸ್ ಜಾನಕಿ ಅವರಿಗೆ ಗೌರವ ವಂದನೆ ಸಮರ್ಪಣೆ: ವಿಡಿಯೋ ನೋಡಿ
ಎಸ್ ಜಾನಕಿ ಅವರಿಗೆ ಗೌರವ ವಂದನೆ ಸಮರ್ಪಣೆ: ವಿಡಿಯೋ ನೋಡಿ
ಎಸ್ ಜಾನಕಿ ಅವರಿಗಿದ್ದ ನೋವೇನು? ಭಾರತಿ ವಿಷ್ಣುವರ್ಧನ್ ಮಾತು
ಎಸ್ ಜಾನಕಿ ಅವರಿಗಿದ್ದ ನೋವೇನು? ಭಾರತಿ ವಿಷ್ಣುವರ್ಧನ್ ಮಾತು
ಜಾನಕಮ್ಮ ಸ್ಮಾರಕಕ್ಕೆ ಬೇಡಿಕೆ: ಶೀಘ್ರದಲ್ಲೇ ತೀರ್ಮಾನ ಮಾಡ್ತೀವಿ ಎಂದ ಯತೀಂದ್
ಜಾನಕಮ್ಮ ಸ್ಮಾರಕಕ್ಕೆ ಬೇಡಿಕೆ: ಶೀಘ್ರದಲ್ಲೇ ತೀರ್ಮಾನ ಮಾಡ್ತೀವಿ ಎಂದ ಯತೀಂದ್