ಹಾವೇರಿ; ಸೈಕಲ್​ ಟೈರ್​ಗೂ ಟಿಕೆಟ್ ನೀಡಿದ ಕೆಎಸ್​ಆರ್​ಟಿಸಿ ಬಸ್ ಕಂಡಕ್ಟರ್!

ಶಿಕಾರಿಪುರಕ್ಕೆ ಹೊರಟಿದ್ದ ಕೆಎ 42 ಎಫ್ 1237 ಸಂಖ್ಯೆಯ ಸರ್ಕಾರಿ ಬಸ್​​ನಲ್ಲಿ ಉಮೇಶ್ ಪಾಟೀಲ್ ಸೈಕಲ್ ಟಯರ್​​ ಕೊಂಡೊಯ್ಯುತ್ತಿದ್ದರು. ಅದಕ್ಕೂ ಟಿಕೆಟ್ ನೀಡಿದ ಬಗ್ಗೆ ಅವರು ನಿರ್ವಾಹಕನನ್ನು ಪ್ರಶ್ನಿಸಿದ್ದಾರೆ. ಆಗ, ನಮಗೆ ಮೇಲಧಿಕಾರಿಗಳ ಆದೇಶ ಇದೆ ಎಂದು ಅವರು ಹೇಳಿದ್ದಾರೆ.

ಹಾವೇರಿ; ಸೈಕಲ್​ ಟೈರ್​ಗೂ ಟಿಕೆಟ್ ನೀಡಿದ ಕೆಎಸ್​ಆರ್​ಟಿಸಿ ಬಸ್ ಕಂಡಕ್ಟರ್!
ಪ್ರಯಾಣಿಕ ಉಮೇಶ್ ಪಾಟೀಲ್ ಹಾಗೂ ಟಿಕೆಟ್
Follow us
| Updated By: ಗಣಪತಿ ಶರ್ಮ

Updated on:Aug 04, 2023 | 6:40 PM

ಹಾವೇರಿ: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ (KSRTC) ಬಸ್ ನಿರ್ವಾಹಕರೊಬ್ಬರು ಸೈಕಲ್ ಟಯರ್​​​​ಗೂ (Cycle Tyre) ಟಿಕೆಟ್ ನೀಡಿದ ವಿದ್ಯಮಾನ ವರದಿಯಾಗಿದೆ. ಪ್ರಯಾಣಿಕರೊಬ್ಬರ ಬಳಿ ಇದ್ದ ಸೈಕಲ್ ಟಯರ್​​​​​​ಗೂ ನಿರ್ವಾಹಕರು ಟಿಕೆಟ್ ನೀಡಿದ್ದಾರೆ. ಇದನ್ನು ಪ್ರಶ್ನಿಸಿದಾಗ ನಿಗಮದಿಂದ ಬಂದ ಹೊಸ ಆದೇಶದ ಪ್ರಕಾರ ಟಿಕೆಟ್ ನೀಡಿದ್ದೇನೆ ಎಂದು ಹೇಳಿದ್ದಾರೆ ಎನ್ನಲಾಗಿದೆ. ರಾಣೆಬೆನ್ನೂರಿನಿಂದ ಶಿಕಾರಿಪುರಕ್ಕೆ ತೆರಳುತ್ತಿದ್ದ ಕೆಎಸ್​​ಆರ್​​ಟಿಸಿ ಬಸ್​​ನಲ್ಲಿ ಈ ಘಟನೆ ನಡೆದಿದೆ. ಉಮೇಶ್ ಪಾಟೀಲ್ ಎಂಬವರು ಸರ್ಕಾರಿ ಬಸ್​ನಲ್ಲಿ ರಟ್ಟೀಹಳ್ಳಿಗೆ ಪ್ರಯಾಣಿಸುತ್ತಿದ್ದರು. ಅವರ ಬಳಿ ಇದ್ದ ಸೈಕಲ್ ಟಯರ್​​​ಗೆ ಬಸ್​ ನಿರ್ವಾಹಕ 5 ರೂಪಾಯಿ ಟಿಕೆಟ್ ನೀಡಿದ್ದಾರೆ.

ಶಿಕಾರಿಪುರಕ್ಕೆ ಹೊರಟಿದ್ದ ಕೆಎ 42 ಎಫ್ 1237 ಸಂಖ್ಯೆಯ ಸರ್ಕಾರಿ ಬಸ್​​ನಲ್ಲಿ ಉಮೇಶ್ ಪಾಟೀಲ್ ಸೈಕಲ್ ಟಯರ್​​ ಕೊಂಡೊಯ್ಯುತ್ತಿದ್ದರು. ಅದಕ್ಕೂ ಟಿಕೆಟ್ ನೀಡಿದ ಬಗ್ಗೆ ಅವರು ನಿರ್ವಾಹಕನನ್ನು ಪ್ರಶ್ನಿಸಿದ್ದಾರೆ. ಆಗ, ನಮಗೆ ಮೇಲಧಿಕಾರಿಗಳ ಆದೇಶ ಇದೆ ಎಂದು ಅವರು ಹೇಳಿದ್ದಾರೆ.

ಉಮೇಶ್ ಪಾಟೀಲ್ ಅವರು ತಮ್ಮ ಮಗನ ಜತೆ ರಟ್ಟಿಹಳ್ಳಿಯ ತೊಟಗಂಟಿ ಗ್ರಾಮಕ್ಕೆ ಕೆಎಸ್​ಆರ್​ಟಿಸಿ ಬಸ್​​ನಲ್ಲಿ ಪ್ರಯಾಣಿಸುತ್ತಿದ್ದರು. ಈ ನಿಲ್ದಾಣಗಳ ನಡುವೆ ಒಬ್ಬ ವ್ಯಕ್ತಿಗೆ ಟಿಕೆಟ್​​​ಗೆ 35 ರೂ. ಇದ್ದು, ಇಬ್ಬರಿಗೆ 70 ರೂ. ಹಾಗೂ ಸೈಕಲ್ ಚಕ್ರಕ್ಕೆ 5 ರೂ. ಸೇರಿಸಿ 75 ರೂ.ನ ಟಿಕೆಟ್ ನೀಡಲಾಗಿದೆ.

ಇದನ್ನೂ ಓದಿ: ಕೊಪ್ಪಳ: ಬಟನ್ ರೋಸ್ ಬೆಳೆದು ಲಕ್ಷ ಲಕ್ಷ ಆದಾಯ ಗಳಿಸಿದ ಹೊಸೂರು ಗ್ರಾಮದ ರೈತ

ಕೆಎಸ್​ಆರ್​ಟಿಸಿ ನಿಯಮದಲ್ಲೇನಿದೆ?

ಸಾಮಾನ್ಯವಾಗಿ ಕೆಎಸ್​ಆರ್​​ಟಿಸಿ ಬಸ್​​ನಲ್ಲಿ ಪ್ರಯಾಣಿಕರು 30 ಕೆಜಿ ವರೆಗೆ ವಸ್ತುಗಳನ್ನು ಕೊಂಡೊಯ್ಯಲು ಅವಕಾಶವಿದೆ. ಅದಕ್ಕಿಂತ ಕಡಿಮೆ ತೂಕದ ವಸ್ತುಗಳನ್ನು ಕೊಂಡೊಯ್ಯುವುದಕ್ಕೆ ಪ್ರತ್ಯೇಕ ಹಣ ಪಾವತಿಸಬೇಕಿಲ್ಲ. ಆದಾಗ್ಯೂ, ಉಮೇಶ್ ಪಾಟೀಲ್ ಅವರಿಗೆ ನಿರ್ವಾಹಕರು ಲಗೇಜ್ ಯೂನಿಟ್ ಎಂದು ಟಿಕೆಟ್ ನೀಡಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 6:36 pm, Fri, 4 August 23

ತಾಜಾ ಸುದ್ದಿ
 ಪವಿತ್ರಾ ಗೌಡರನ್ನು ನೋಡಲು ಬುತ್ತಿಯೊಂದಿಗೆ ಜೈಲಿಗೆ ಬಂದ ತಂದೆ-ತಾಯಿ, ಸಹೋದರ
 ಪವಿತ್ರಾ ಗೌಡರನ್ನು ನೋಡಲು ಬುತ್ತಿಯೊಂದಿಗೆ ಜೈಲಿಗೆ ಬಂದ ತಂದೆ-ತಾಯಿ, ಸಹೋದರ
ವಿದ್ಯಾರ್ಥಿಗಳ ನಡುವೆಯೂ  ಮುಖ್ಯಮಂತ್ರಿ ಸಿದ್ದರಾಮಯ್ಯ ಸಾಕಷ್ಟು ಜನಪ್ರಿಯರು
ವಿದ್ಯಾರ್ಥಿಗಳ ನಡುವೆಯೂ  ಮುಖ್ಯಮಂತ್ರಿ ಸಿದ್ದರಾಮಯ್ಯ ಸಾಕಷ್ಟು ಜನಪ್ರಿಯರು
 ದುಡ್ಡಿನ ವಿಷಯದಲ್ಲಿ ದರ್ಶನ್ ಕಡ್ಡಿ ಮುರಿದಂತೆ ಮಾತಾಡುತ್ತಿದ್ದರು: ಕೆ ಮಂಜು
 ದುಡ್ಡಿನ ವಿಷಯದಲ್ಲಿ ದರ್ಶನ್ ಕಡ್ಡಿ ಮುರಿದಂತೆ ಮಾತಾಡುತ್ತಿದ್ದರು: ಕೆ ಮಂಜು
ಲೂಟಿ ಹೋಡೆಯೋಕೆ ಸರ್ಕಾರ ಸಿದ್ಧತೆ ಮಾಡ್ತಿದೆ -ಆರ್.ಅಶೋಕ್
ಲೂಟಿ ಹೋಡೆಯೋಕೆ ಸರ್ಕಾರ ಸಿದ್ಧತೆ ಮಾಡ್ತಿದೆ -ಆರ್.ಅಶೋಕ್
ಏಯ್ ಅಂದ ಬಿಜೆಪಿ ಶಾಸಕ ವೇದವ್ಯಾಸ್ ಕಾಮತ್ ಜೊತೆ ಜಗಳಕ್ಕೆ ನಿಂತ ಪೊಲೀಸ್!
ಏಯ್ ಅಂದ ಬಿಜೆಪಿ ಶಾಸಕ ವೇದವ್ಯಾಸ್ ಕಾಮತ್ ಜೊತೆ ಜಗಳಕ್ಕೆ ನಿಂತ ಪೊಲೀಸ್!
ವಿದ್ಯಾರ್ಥಿಗಳೊಂದಿಗೆ ಕುಣಿದು ಕುಪ್ಪಳಿಸಿದ ಶಾಸಕ ಸಮೃದ್ದಿ ಮಂಜುನಾಥ್
ವಿದ್ಯಾರ್ಥಿಗಳೊಂದಿಗೆ ಕುಣಿದು ಕುಪ್ಪಳಿಸಿದ ಶಾಸಕ ಸಮೃದ್ದಿ ಮಂಜುನಾಥ್
ರಾಷ್ಟ್ರಪತಿ ಭಾಷಣದ ವಂದನಾ ನಿರ್ಣಯದ ಮೇಲೆ ರಾಜ್ಯಸಭೆಯಲ್ಲಿ ಮೋದಿ ಮಾತು
ರಾಷ್ಟ್ರಪತಿ ಭಾಷಣದ ವಂದನಾ ನಿರ್ಣಯದ ಮೇಲೆ ರಾಜ್ಯಸಭೆಯಲ್ಲಿ ಮೋದಿ ಮಾತು
ಮುಡಾ ಹಗರಣದ ಕಡತಗಳನ್ನು ಸಚಿವ ಸುರೇಶ್ ಬೆಂಗಳೂರುಗೆ ತಂದಿದ್ದಾರೆ: ವಿಜಯೇಂದ್ರ
ಮುಡಾ ಹಗರಣದ ಕಡತಗಳನ್ನು ಸಚಿವ ಸುರೇಶ್ ಬೆಂಗಳೂರುಗೆ ತಂದಿದ್ದಾರೆ: ವಿಜಯೇಂದ್ರ
ಉಡುಪಿ: ಬೈಕ್​ನ ಹೆಡ್ ಲೈಟ್ ವೈಸರ್​ನಲ್ಲಿ ಹಾವು ಪ್ರತ್ಯಕ್ಷ
ಉಡುಪಿ: ಬೈಕ್​ನ ಹೆಡ್ ಲೈಟ್ ವೈಸರ್​ನಲ್ಲಿ ಹಾವು ಪ್ರತ್ಯಕ್ಷ
‘ನನ್ನ ದೇವ್ರು’ ಮೂಲಕ ಕಿರತೆರೆಗೆ ಮರಳಿದ ಅಶ್ವಿನಿ ನಕ್ಷತ್ರದ ‘ಹೆಂಡ್ತಿ’
‘ನನ್ನ ದೇವ್ರು’ ಮೂಲಕ ಕಿರತೆರೆಗೆ ಮರಳಿದ ಅಶ್ವಿನಿ ನಕ್ಷತ್ರದ ‘ಹೆಂಡ್ತಿ’