ಹಾವೇರಿ: ಪ್ರಿನ್ಸಿಪಾಲ್​ ನಿಂದನೆ ಆರೋಪ; ದ್ವಿತೀಯ ಪಿಯು ವಿದ್ಯಾರ್ಥಿ ಆತ್ಮಹತ್ಯೆ

ಹಾವೇರಿ ಜಿಲ್ಲೆಯ ಹಾನಗಲ್(Hangal) ತಾಲೂಕಿನ ಎನ್​ಸಿಜೆಸಿ ಕಾಲೇಜಿನ ದ್ವಿತೀಯ ಪಿಯು ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಇವರು ಡೊಳ್ಳೆಶ್ವರ ಗ್ರಾಮದ ಅಜ್ಜಿ ಮನೆಯಲ್ಲಿದ್ದು ವ್ಯಾಸಂಗ ಮಾಡುತ್ತಿದ್ದರು. ನಿನ್ನೆ(ನ.28) ರಾತ್ರಿ ಅಡಿಕೆ ತೋಟದಲ್ಲಿ ಪೆಟ್ರೋಲ್​ ಸುರಿದುಕೊಂಡು ಬೆಂಕಿ ಹಚ್ಚಿಕೊಂಡು ತೀವ್ರ ಗಾಯಗೊಂಡಿದ್ದ.

ಹಾವೇರಿ: ಪ್ರಿನ್ಸಿಪಾಲ್​ ನಿಂದನೆ ಆರೋಪ; ದ್ವಿತೀಯ ಪಿಯು ವಿದ್ಯಾರ್ಥಿ ಆತ್ಮಹತ್ಯೆ
ಮೃತ ವಿದ್ಯಾರ್ಥಿ
Edited By: ಕಿರಣ್ ಹನುಮಂತ್​ ಮಾದಾರ್

Updated on: Nov 29, 2023 | 5:28 PM

ಹಾವೇರಿ, ನ.29: ಪ್ರಿನ್ಸಿಪಾಲ್​ ನಿಂದನೆ ಆರೋಪ ಹಿನ್ನಲೆ ಹಾವೇರಿ ಜಿಲ್ಲೆಯ ಹಾನಗಲ್(Hangal) ತಾಲೂಕಿನ ಎನ್​ಸಿಜೆಸಿ ಕಾಲೇಜಿನ ದ್ವಿತೀಯ ಪಿಯು ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಆದಿತ್ಯಾ(16) ಮೃತ ವಿದ್ಯಾರ್ಥಿ. ಇವರು ಡೊಳ್ಳೆಶ್ವರ ಗ್ರಾಮದ ಅಜ್ಜಿ ಮನೆಯಲ್ಲಿದ್ದು ವ್ಯಾಸಂಗ ಮಾಡುತ್ತಿದ್ದರು. ನಿನ್ನೆ(ನ.28) ರಾತ್ರಿ ಅಡಿಕೆ ತೋಟದಲ್ಲಿ ಪೆಟ್ರೋಲ್​ ಸುರಿದುಕೊಂಡು ಬೆಂಕಿ ಹಚ್ಚಿಕೊಂಡು ತೀವ್ರ ಗಾಯಗೊಂಡಿದ್ದ. ಕೂಡಲೇ ಆತನನ್ನು ಹುಬ್ಬಳ್ಳಿಯ ಖಾಸಗಿ ಆಸ್ಪತ್ರೆಗೆ ಸೇರಿಸಲಾಗಿತ್ತು. ಇಂದು ಚಿಕಿತ್ಸೆ ಫಲಿಸದೆ ಕೊನೆಯುಸಿರೆಳೆದಿದ್ದಾನೆ. ಈ ಕುರಿತು ಹಾನಗಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

ಪರೀಕ್ಷೆ ವೇಳೆ ನಕಲು‌ ಪತ್ತೆ: ವಿದ್ಯಾರ್ಥಿನಿ ಆತ್ಮಹತ್ಯೆಗೆ ಯತ್ನ

ರಾಯಚೂರು: ಪರೀಕ್ಷೆ ವೇಳೆ ನಕಲು ಪತ್ತೆಯಾದ ಬಳಿಕ ವಿದ್ಯಾರ್ಥಿನಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಡೆದಿತ್ತು. ಕೂಡಲೇ ವಿದ್ಯಾರ್ಥಿಯನ್ನು ರಾಯಚೂರಿನ ಖಾಸಗಿ ಆಸ್ಪತ್ರೆಗೆ ಸೇರಿಸಲಾಗಿತ್ತು. ಈ ಹಿನ್ನಲೆ ಇದೀಗ ರಾಯಚೂರು ವಿಶ್ವ ವಿದ್ಯಾಲಯ ಕುಲಪತಿ ಹರೀಶ್ ರಾಮಸ್ವಾಮಿ ಹಾಗೂ ಸಿಬ್ಬಂದಿ ಭೇಟಿ ನೀಡಿ ವಿದ್ಯಾರ್ಥಿನಿ ಸ್ಥಿತಿ ಬಗ್ಗೆ ಮಾಹಿತಿ ಕಲೆ ಹಾಕಿದ್ದಾರೆ.

ಇದನ್ನೂ ಓದಿ:ಹಾಸನ: ಕಾಲೇಜು ಕಟ್ಟಡದಿಂದ ಜಿಗಿದು ಇಂಜಿನಿಯರಿಂಗ್ ವಿದ್ಯಾರ್ಥಿನಿ ಆತ್ಮಹತ್ಯೆ

ಬಳಿಕ ರಾಯಚೂರು ವಿವಿ ಕುಲಪತಿ ಮಾತನಾಡಿ ‘ವಿದ್ಯಾರ್ಥಿನಿ ಸ್ಟೇಬಲ್ ಆಗಿದ್ದಾಳೆ. ಶಾಕ್​ನಿಂದ ಚೇತರಿಸಿಕೊಳ್ಳುತ್ತಿದ್ದಾಳೆ. ಸ್ಪೈನಲ್‌ ಕಾರ್ಡ್ ಹಾಗೂ ಕಾಲಿಗೆ ಗಾಯಗಳಾಗಿವೆ. ಸದ್ಯ ವಿದ್ಯಾರ್ಥಿನಿ ಚಿಕಿತ್ಸೆ ಪಡೆಯುತ್ತಿದ್ದಾಳೆ. ವಿದ್ಯಾರ್ಥಿನಿ ಕಾಪಿ ಮಾಡುತ್ತಿದ್ದಾಗ ಸಿಕ್ಕಿ ಹಾಕಿಕೊಂಡಿದ್ದಳು. ಇದಾದ ಕೆಲಹೊತ್ತಲ್ಲೇ ಆಕೆ ಈ ರೀತಿ ಮಾಡಿಕೊಂಡಿದ್ದಾಳೆ ಎಂದು ಸ್ಪಷ್ಟನೆ ನೀಡಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 5:00 pm, Wed, 29 November 23

Suraj Mahaveer Utture

ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ನವಲಿಹಾಳ ಗ್ರಾಮದ ಸೂರಜ ಉತ್ತೂರೆ. ಕಸ್ತೂರಿ ವಾಹಿನಿಯಲ್ಲಿ ರಾಜಕೀಯ ವರದಿಗಾರನಾಗಿ ಪತ್ರಿಕೊದ್ಯಮ ಪ್ರವೇಶಿಸಿದ ಇವರು. ಡಿಸೆಂಬರ್ 2022 ರಂದು ಹಾವೇರಿ ಜಿಲ್ಲೆ tv9 ವರದಿಗಾರನಾಗಿ ಕೆಲಸ ಆರಂಭಿಸಿದ್ರು ನವೆಂಬರ್ 2023 ರಂದು ಉತ್ತರ ಕನ್ನಡ ಜಿಲ್ಲೆಗೆ ವರ್ಗಾವಣೆ ಆಗಿದ್ದೂ ಸದ್ಯ ಉತ್ತರ ಕನ್ನಡ ಜಿಲ್ಲೆಯ tv9 ವರದಿಗಾರನಾಗಿ ಕೆಲಸ ಮಾಡುತ್ತಿದ್ದಾರೆ.

Read More
Follow Us