AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಳಗ್ಗೆ ಕಾಲೇಜಿಗೆ ಹೊರಟಿದ್ದ ಹಾವೇರಿಯ ವಿದ್ಯಾರ್ಥಿನಿ ರಸ್ತೆ ಪಕ್ಕದ ಹೊಂಡದಲ್ಲಿ ಶವವಾಗಿ ಪತ್ತೆ

ವಿದ್ಯಾರ್ಥಿನಿ ಪಟ್ಟಣದ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಬಿಎ ದ್ವಿತೀಯ ವರ್ಷದಲ್ಲಿ ಅಭ್ಯಾಸ ಮಾಡುತ್ತಿದ್ದಳು ಎಂದು ತಿಳಿದುಬಂದಿದೆ.

ಬೆಳಗ್ಗೆ ಕಾಲೇಜಿಗೆ ಹೊರಟಿದ್ದ ಹಾವೇರಿಯ ವಿದ್ಯಾರ್ಥಿನಿ ರಸ್ತೆ ಪಕ್ಕದ ಹೊಂಡದಲ್ಲಿ ಶವವಾಗಿ ಪತ್ತೆ
ಮೃತದೇಹ ಪತ್ತೆಯಾದ ಸ್ಥಳ
TV9 Web
| Edited By: |

Updated on:Aug 23, 2021 | 9:37 PM

Share

ಹಾವೇರಿ: ಬೆಳಗ್ಗೆ ಕಾಲೇಜಿಗೆ ಹೋಗಿದ್ದ ವಿದ್ಯಾರ್ಥಿನಿ ರಸ್ತೆ ಪಕ್ಕದ ಹೊಂಡದಲ್ಲಿ ಶವವಾಗಿ ಪತ್ತೆಯಾದ ದುರ್ಘಟನೆ ಹಾವೇರಿ ಜಿಲ್ಲೆ ಶಿಗ್ಗಾಂವಿ ಹೊರವಲಯದ ಗಂಗಿಬಾವಿ ರಸ್ತೆ ಬಳಿ ಬೆಳಕಿಗೆ ಬಂದಿದೆ. ಮೃತದೇಹ ಶೀಲವಂತ ಸೋಮಾಪುರದ ಕವಿತಾ ಹುಬ್ಬಳ್ಳಿ(20) ಎಂಬ ಪದವಿ ವಿದ್ಯಾರ್ಥಿನಿಯದ್ದು ಎಂದು ತಿಳಿದುಬಂದಿದೆ. ಸ್ಥಳಕ್ಕೆ ಶಿಗ್ಗಾಂವಿ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕವಿತಾ ಇಂದು ಬೆಳಗ್ಗೆ ಮನೆಯಿಂದ ಹೊರಟಿದ್ದಳು. ಸಂಜೆಯ ವೇಳೆಗೆ ಮೃತದೇಹ ಪತ್ತೆಯಾಗಿದೆ. ವಿದ್ಯಾರ್ಥಿನಿ ಪಟ್ಟಣದ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಬಿಎ ದ್ವಿತೀಯ ವರ್ಷದಲ್ಲಿ ಅಭ್ಯಾಸ ಮಾಡುತ್ತಿದ್ದಳು ಎಂದು ತಿಳಿದುಬಂದಿದೆ.

ಟ್ರಾಕ್ಟರ್ ನಿಯಂತ್ರಣ ತಪ್ಪಿ ಅಪಘಾತ; ಚಾಲಕ ಸಾವು ನಿಯಂತ್ರಣ ತಪ್ಪಿ ಟ್ರ್ಯಾಕ್ಟರ್​ಒಂದಕ್ಕೆ  ಹಳ್ಳಕ್ಕೆ ಬಿದ್ದ ಚಾಲಕ ಸಾವನ್ನಪ್ಪಿದ ಘಟನೆ ಬಾಗಲಕೋಟೆ ಜಿಲ್ಲೆಯ ಇಳಕಲ್ ತಾಲೂಕಿನ ನಿಡಸನೂರು, ಘಟ್ಟಿಗನೂರು ಗ್ರಾಮಗಳ ನಡುವೆ ನಡೆದಿದೆ. ಘಟ್ಟಿಗನೂರಿನ ಚಾಲಕ ವಿನಾಯಕ ಗುರಿಕಾರ(28) ಸಾವನ್ನಪ್ಪಿದ ಚಾಲಕ. ಇಳಕಲ್ ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ನಿಡಸನೂರ ಗ್ರಾಮದಲ್ಲಿ ಹೊಲದ ಕೆಲಸಕ್ಕೆ ಟ್ರ್ಯಾಕ್ಟರ್ ಮೂಲಕ ತೆರಳಿದ್ದ ಚಾಲಕ‌ ವಿನಾಯಕ ಮೃತಪಟ್ಟಿದ್ದಾರೆ. ನಿಡಸನೂರಿನಿಂದ ಮರಳಿ ಸ್ವಗ್ರಾಮ ಘಟ್ಟಿಗನೂರಕ್ಕೆ ಬರುವಾಗ ಘಟನೆ ನಡೆದಿದೆ. ಯುವಕ ಇಳಕಲ್ ತಾಲೂಕಿನ ಘಟ್ಟಿಗನೂರು ಗ್ರಾಮದವರು. ಟ್ರ್ಯಾಕ್ಟರ್ ಮಾಲೀಕ ತುರುಮರಿ ಗ್ರಾಮದವರು. ಸ್ಥಳಕ್ಕೆ ಇಳಕಲ್ ಗ್ರಾಮೀಣ ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಗೃಹಿಣಿಯ ಮೃತದೇಹ ಪತ್ತೆ ಬೆಂಗಳೂರಿನ ರಾಮಮೂರ್ತಿನಗರದ ಮನೆಯೊಂದರಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಗೃಹಿಣಿಯೋರ್ವಳ ಮೃತದೇಹ ಪತ್ತೆಯಾಗಿದೆ. 5 ವರ್ಷದ ಹಿಂದೆ ಮಿಥುನ್ ಎಂಬಾತನನ್ನು ಶ್ರುತಿ ಮದುವೆಯಾಗಿದ್ದಳು. ಶ್ರುತಿ ಕುಟುಂಬಸ್ಥರಿಂದ ವರದಕ್ಷಿಣೆ ಕಿರುಕುಳ ಆರೋಪ ಕೇಳಿಬಂದಿತ್ತು. ಇದೀಗ ಮಿಥುನ್ ಮನೆಯವರೇ ಕೊಲೆ ಮಾಡಿರುವ ಆರೋಪವನ್ನು ಶ್ರುತಿ ಮನೆಯವರು ಮಾಡಿದ್ದು ರಾಮಮೂರ್ತಿ ನಗರ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: 

Greenland Rain: ಇತಿಹಾಸದಲ್ಲೇ ಮೊದಲ ಬಾರಿಗೆ ಭರ್ಜರಿ ಮಳೆ; ಇಲ್ಲಿ ಮಳೆ ಸುರಿದದ್ದೇ ಜಾಗತಿಕ ಮಟ್ಟದಲ್ಲಿ ಚಿಂತೆಗೆ ಕಾರಣ

Burkina Faso: ಆಫ್ರಿಕಾ ಖಂಡದ ಪುಟ್ಟ ದೇಶ ಬುರ್ಕಿನಾ ಫಾಸೋದಲ್ಲಿ ಉಗ್ರರ ಉಪಟಳ; 80 ಜನರು ಬಲಿ: ಭಾರತಕ್ಕೂ ಈ ದೇಶಕ್ಕೂ ಏನು ಸಂಬಂಧ? (Haveri Shiggavi degree Student found dead in roadside pit)

Published On - 8:47 pm, Mon, 23 August 21

Follow Us
Web contact
Web contact

TV9 Kannada

Read More
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು