AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಳಗ್ಗೆ ಕಾಲೇಜಿಗೆ ಹೊರಟಿದ್ದ ಹಾವೇರಿಯ ವಿದ್ಯಾರ್ಥಿನಿ ರಸ್ತೆ ಪಕ್ಕದ ಹೊಂಡದಲ್ಲಿ ಶವವಾಗಿ ಪತ್ತೆ

ವಿದ್ಯಾರ್ಥಿನಿ ಪಟ್ಟಣದ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಬಿಎ ದ್ವಿತೀಯ ವರ್ಷದಲ್ಲಿ ಅಭ್ಯಾಸ ಮಾಡುತ್ತಿದ್ದಳು ಎಂದು ತಿಳಿದುಬಂದಿದೆ.

ಬೆಳಗ್ಗೆ ಕಾಲೇಜಿಗೆ ಹೊರಟಿದ್ದ ಹಾವೇರಿಯ ವಿದ್ಯಾರ್ಥಿನಿ ರಸ್ತೆ ಪಕ್ಕದ ಹೊಂಡದಲ್ಲಿ ಶವವಾಗಿ ಪತ್ತೆ
ಮೃತದೇಹ ಪತ್ತೆಯಾದ ಸ್ಥಳ
Follow us
TV9 Web
| Updated By: guruganesh bhat

Updated on:Aug 23, 2021 | 9:37 PM

ಹಾವೇರಿ: ಬೆಳಗ್ಗೆ ಕಾಲೇಜಿಗೆ ಹೋಗಿದ್ದ ವಿದ್ಯಾರ್ಥಿನಿ ರಸ್ತೆ ಪಕ್ಕದ ಹೊಂಡದಲ್ಲಿ ಶವವಾಗಿ ಪತ್ತೆಯಾದ ದುರ್ಘಟನೆ ಹಾವೇರಿ ಜಿಲ್ಲೆ ಶಿಗ್ಗಾಂವಿ ಹೊರವಲಯದ ಗಂಗಿಬಾವಿ ರಸ್ತೆ ಬಳಿ ಬೆಳಕಿಗೆ ಬಂದಿದೆ. ಮೃತದೇಹ ಶೀಲವಂತ ಸೋಮಾಪುರದ ಕವಿತಾ ಹುಬ್ಬಳ್ಳಿ(20) ಎಂಬ ಪದವಿ ವಿದ್ಯಾರ್ಥಿನಿಯದ್ದು ಎಂದು ತಿಳಿದುಬಂದಿದೆ. ಸ್ಥಳಕ್ಕೆ ಶಿಗ್ಗಾಂವಿ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕವಿತಾ ಇಂದು ಬೆಳಗ್ಗೆ ಮನೆಯಿಂದ ಹೊರಟಿದ್ದಳು. ಸಂಜೆಯ ವೇಳೆಗೆ ಮೃತದೇಹ ಪತ್ತೆಯಾಗಿದೆ. ವಿದ್ಯಾರ್ಥಿನಿ ಪಟ್ಟಣದ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಬಿಎ ದ್ವಿತೀಯ ವರ್ಷದಲ್ಲಿ ಅಭ್ಯಾಸ ಮಾಡುತ್ತಿದ್ದಳು ಎಂದು ತಿಳಿದುಬಂದಿದೆ.

ಟ್ರಾಕ್ಟರ್ ನಿಯಂತ್ರಣ ತಪ್ಪಿ ಅಪಘಾತ; ಚಾಲಕ ಸಾವು ನಿಯಂತ್ರಣ ತಪ್ಪಿ ಟ್ರ್ಯಾಕ್ಟರ್​ಒಂದಕ್ಕೆ  ಹಳ್ಳಕ್ಕೆ ಬಿದ್ದ ಚಾಲಕ ಸಾವನ್ನಪ್ಪಿದ ಘಟನೆ ಬಾಗಲಕೋಟೆ ಜಿಲ್ಲೆಯ ಇಳಕಲ್ ತಾಲೂಕಿನ ನಿಡಸನೂರು, ಘಟ್ಟಿಗನೂರು ಗ್ರಾಮಗಳ ನಡುವೆ ನಡೆದಿದೆ. ಘಟ್ಟಿಗನೂರಿನ ಚಾಲಕ ವಿನಾಯಕ ಗುರಿಕಾರ(28) ಸಾವನ್ನಪ್ಪಿದ ಚಾಲಕ. ಇಳಕಲ್ ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ನಿಡಸನೂರ ಗ್ರಾಮದಲ್ಲಿ ಹೊಲದ ಕೆಲಸಕ್ಕೆ ಟ್ರ್ಯಾಕ್ಟರ್ ಮೂಲಕ ತೆರಳಿದ್ದ ಚಾಲಕ‌ ವಿನಾಯಕ ಮೃತಪಟ್ಟಿದ್ದಾರೆ. ನಿಡಸನೂರಿನಿಂದ ಮರಳಿ ಸ್ವಗ್ರಾಮ ಘಟ್ಟಿಗನೂರಕ್ಕೆ ಬರುವಾಗ ಘಟನೆ ನಡೆದಿದೆ. ಯುವಕ ಇಳಕಲ್ ತಾಲೂಕಿನ ಘಟ್ಟಿಗನೂರು ಗ್ರಾಮದವರು. ಟ್ರ್ಯಾಕ್ಟರ್ ಮಾಲೀಕ ತುರುಮರಿ ಗ್ರಾಮದವರು. ಸ್ಥಳಕ್ಕೆ ಇಳಕಲ್ ಗ್ರಾಮೀಣ ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಗೃಹಿಣಿಯ ಮೃತದೇಹ ಪತ್ತೆ ಬೆಂಗಳೂರಿನ ರಾಮಮೂರ್ತಿನಗರದ ಮನೆಯೊಂದರಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಗೃಹಿಣಿಯೋರ್ವಳ ಮೃತದೇಹ ಪತ್ತೆಯಾಗಿದೆ. 5 ವರ್ಷದ ಹಿಂದೆ ಮಿಥುನ್ ಎಂಬಾತನನ್ನು ಶ್ರುತಿ ಮದುವೆಯಾಗಿದ್ದಳು. ಶ್ರುತಿ ಕುಟುಂಬಸ್ಥರಿಂದ ವರದಕ್ಷಿಣೆ ಕಿರುಕುಳ ಆರೋಪ ಕೇಳಿಬಂದಿತ್ತು. ಇದೀಗ ಮಿಥುನ್ ಮನೆಯವರೇ ಕೊಲೆ ಮಾಡಿರುವ ಆರೋಪವನ್ನು ಶ್ರುತಿ ಮನೆಯವರು ಮಾಡಿದ್ದು ರಾಮಮೂರ್ತಿ ನಗರ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: 

Greenland Rain: ಇತಿಹಾಸದಲ್ಲೇ ಮೊದಲ ಬಾರಿಗೆ ಭರ್ಜರಿ ಮಳೆ; ಇಲ್ಲಿ ಮಳೆ ಸುರಿದದ್ದೇ ಜಾಗತಿಕ ಮಟ್ಟದಲ್ಲಿ ಚಿಂತೆಗೆ ಕಾರಣ

Burkina Faso: ಆಫ್ರಿಕಾ ಖಂಡದ ಪುಟ್ಟ ದೇಶ ಬುರ್ಕಿನಾ ಫಾಸೋದಲ್ಲಿ ಉಗ್ರರ ಉಪಟಳ; 80 ಜನರು ಬಲಿ: ಭಾರತಕ್ಕೂ ಈ ದೇಶಕ್ಕೂ ಏನು ಸಂಬಂಧ? (Haveri Shiggavi degree Student found dead in roadside pit)

Published On - 8:47 pm, Mon, 23 August 21

ಆಪರೇಷನ್ ಸಿಂದೂರದ ಬಗ್ಗೆ ಪಾಕಿಸ್ತಾನಿಗನ ನೇರ ಮಾತು ಕೇಳಿ
ಆಪರೇಷನ್ ಸಿಂದೂರದ ಬಗ್ಗೆ ಪಾಕಿಸ್ತಾನಿಗನ ನೇರ ಮಾತು ಕೇಳಿ
ಪಾಕಿಸ್ತಾನಕ್ಕೆ ಬಲೂಚಿ ಮತ್ತು ತಾಲಿಬಾನಿಗಳಿಂದಲೂ ಉಳಿಗಾಲವಿಲ್ಲ!
ಪಾಕಿಸ್ತಾನಕ್ಕೆ ಬಲೂಚಿ ಮತ್ತು ತಾಲಿಬಾನಿಗಳಿಂದಲೂ ಉಳಿಗಾಲವಿಲ್ಲ!
ಆಪರೇಷನ್​ ಸಿಂಧೂರ್​, ಪ್ರಧಾನಿಗೆ ಧನ್ಯವಾದ ತಿಳಿಸಿದ ಪಹಲ್ಗಾಮ್ ಸಂತ್ರಸ್ತೆ
ಆಪರೇಷನ್​ ಸಿಂಧೂರ್​, ಪ್ರಧಾನಿಗೆ ಧನ್ಯವಾದ ತಿಳಿಸಿದ ಪಹಲ್ಗಾಮ್ ಸಂತ್ರಸ್ತೆ
ಅರಸೊತ್ತಿಗೆ ಕಾಲದಿಂದ ನಡೆದುಕೊಂಡು ಬಂದಿರುವ ಪದ್ಧತಿ: ಅರ್ಚಕ ದೀಕ್ಷಿತ್
ಅರಸೊತ್ತಿಗೆ ಕಾಲದಿಂದ ನಡೆದುಕೊಂಡು ಬಂದಿರುವ ಪದ್ಧತಿ: ಅರ್ಚಕ ದೀಕ್ಷಿತ್
‘ಭರ್ಜರಿ ಬ್ಯಾಚುಲರ್ಸ್’ ಹೊಸ ಎಪಿಸೋಡ್​ಗೆ ಹೊರಾಂಗಣ ಶೂಟಿಂಗ್; ಯಾವ ಜಿಲ್ಲೆ?
‘ಭರ್ಜರಿ ಬ್ಯಾಚುಲರ್ಸ್’ ಹೊಸ ಎಪಿಸೋಡ್​ಗೆ ಹೊರಾಂಗಣ ಶೂಟಿಂಗ್; ಯಾವ ಜಿಲ್ಲೆ?
ಸೋಫಿಯಾ ಖುರೇಷಿ ಬೆಳಗಾವಿಯ ಸೊಸೆ: ಲೆಫ್ಟಿನೆಂಟ್ ಕರ್ನಲ್​ರ ಮಾವ ಹೇಳಿದ್ದೇನು?
ಸೋಫಿಯಾ ಖುರೇಷಿ ಬೆಳಗಾವಿಯ ಸೊಸೆ: ಲೆಫ್ಟಿನೆಂಟ್ ಕರ್ನಲ್​ರ ಮಾವ ಹೇಳಿದ್ದೇನು?
ಸೇನೆಗೆ ವರವಾಯ್ತೇ ಲಕ್ಷ್ಮೀ ಜನಾರ್ದನ ಪ್ರಸಾದ! ಬಲಭಾಗದಿಂದ ಹೂ ನೀಡಿದ ದೇವರು
ಸೇನೆಗೆ ವರವಾಯ್ತೇ ಲಕ್ಷ್ಮೀ ಜನಾರ್ದನ ಪ್ರಸಾದ! ಬಲಭಾಗದಿಂದ ಹೂ ನೀಡಿದ ದೇವರು
Dewald Brevis: ಬೇಬಿ ಎಬಿ ಸಿಡಿಲಬ್ಬರ: ಹೊಸ ದಾಖಲೆ ನಿರ್ಮಾಣ
Dewald Brevis: ಬೇಬಿ ಎಬಿ ಸಿಡಿಲಬ್ಬರ: ಹೊಸ ದಾಖಲೆ ನಿರ್ಮಾಣ
ವಿವೇಕ, ವಿವೇಚನೆ ಮಾರಿಕೊಂಡಿರುವ ಪಾಕಿಸ್ತಾನಕ್ಕೆ ಬುದ್ಧಿ ಬಾರದು
ವಿವೇಕ, ವಿವೇಚನೆ ಮಾರಿಕೊಂಡಿರುವ ಪಾಕಿಸ್ತಾನಕ್ಕೆ ಬುದ್ಧಿ ಬಾರದು
ಸಿಯಾಲ್​ಕೋಟ್ ತೊರೆಯುತ್ತಿರುವ ಪಾಕ್ ಜನ, ಕಾಲ್ತುಳಿದಂಥಾ ಸ್ಥಿತಿ
ಸಿಯಾಲ್​ಕೋಟ್ ತೊರೆಯುತ್ತಿರುವ ಪಾಕ್ ಜನ, ಕಾಲ್ತುಳಿದಂಥಾ ಸ್ಥಿತಿ