AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಾವೇರಿ: ಪೋಷಕರು ಬೈದಿದ್ದಕ್ಕೆ ಮನೆ ಬಿಟ್ಟು ಹೋಗಿದ್ದ ಅಕ್ಕ-ತಂಗಿ ಪುಣೆಯಲ್ಲಿ ಪತ್ತೆ

ಪೋಷಕರು ಬೈದಿದ್ದಕ್ಕೆ ಅಕ್ಕ ತಂಗಿ ಮನೆ ಬಿಟ್ಟು ಹೋಗಿದ್ದು, ಒಂದು ದಿನದ ಬಳಿಕ ಪುಣೆಯಲ್ಲಿ ಪತ್ತೆ ಆಗಿರುವಂತಹ ಘಟನೆ ನಡೆದಿದೆ. ಹಾವೇರಿಯ ಲಯನ್ಸ್ ಆಂಗ್ಲ ಶಾಲೆಯಲ್ಲಿ ಓದುತ್ತಿದ್ದ ಇಬ್ಬರು ಸಹೋದರಿಯರು ನಿನ್ನೆ ನಾಪತ್ತೆ ಆಗಿದ್ದರು. ಈ ಬಗ್ಗೆ ಹಾವೇರಿ ಮಹಿಳಾ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿತ್ತು.

ಹಾವೇರಿ: ಪೋಷಕರು ಬೈದಿದ್ದಕ್ಕೆ ಮನೆ ಬಿಟ್ಟು ಹೋಗಿದ್ದ ಅಕ್ಕ-ತಂಗಿ ಪುಣೆಯಲ್ಲಿ ಪತ್ತೆ
ಪತ್ತೆಯಾದ ಸಹೋದರಿಯರು
ಗಂಗಾಧರ​ ಬ. ಸಾಬೋಜಿ
|

Updated on:Jul 27, 2025 | 12:57 PM

Share

ಹಾವೇರಿ, ಜುಲೈ 27: ಪೋಷಕರು ಬೈದಿದ್ದಕ್ಕೆ ಮನೆ ಬಿಟ್ಟು ಹೋಗಿದ್ದ ಅಕ್ಕ ತಂಗಿ (sisters) ಪುಣೆಯಲ್ಲಿ ಪತ್ತೆ ಆಗಿರುವಂತಹ ಘಟನೆಯೊಂದು ಬೆಳಕಿಗೆ ಬಂದಿದೆ. ಹಾವೇರಿಯ (Haveri) ಅಬ್ದುಲ್ ಖಾದರ್ ಲೋಹಾರ್ ಪುತ್ರಿಯರಾದ ಉಮರ್ ಖೈರ್ ಫಾತಿಮಾ ಮತ್ತು ಉಮ್ಮಿ ಹಬೀಬಾ ನಾಪತ್ತೆಯಾಗಿದ್ದ ಅಕ್ಕ-ತಂಗಿ. ಹಾವೇರಿ ಮಹಿಳಾ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿತ್ತು.

ಹಾವೇರಿಯ ಲಯನ್ಸ್ ಆಂಗ್ಲ ಶಾಲೆಯಲ್ಲಿ ಓದುತ್ತಿದ್ದ ಸಹೋದರಿಯರು, ಶನಿವಾರ ಶಾಲೆ ಮುಗಿಯುತ್ತಿದ್ದಂತೆ ಕಾಣೆಯಾಗಿದ್ದರು. ಎಷ್ಟೇ ಹುಡಕಾಟ ನಡೆಸಿದರೂ ಸಿಗದ ಕಾರಣ ಆತಂಕಗೊಂಡ ಪೋಷಕರು ನಿನ್ನೆ ಹಾವೇರಿ ಮಹಿಳಾ ಠಾಣೆಯಲ್ಲಿ ಫಾತಿಮಾ ಮತ್ತು ಉಮ್ಮಿ ಹಬೀಬಾ ನಾಪತ್ತೆ ಪ್ರಕರಣ ದಾಖಲಿಸಿದ್ದರು. ಇಂದು ಮಹಾರಾಷ್ಟ್ರದ ಪುಣೆಯಲ್ಲಿ ಅಕ್ಕ-ತಂಗಿ ಪತ್ತೆಯಾಗಿದ್ದಾರೆ.

ಪೋಕರ್ ಗೇಮ್ ‘ಪ್ರೇಮಿ’ಯ ಕಿಡ್ನಾಪ್: 2.5 ಕೋಟಿಗೆ ಡಿಮ್ಯಾಂಡ್

ಬೆಂಗಳೂರಿನಲ್ಲಿ ಯುವಕನ ಕಿಡ್ನ್ಯಾಪ್ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ನಾಲ್ವರನ್ನು ಪೊಲೀಸರು ಬಂಧಿಸಿದ್ದಾರೆ. ಇದೀಗ ಪ್ರಮುಖ ಆರೋಪಿ ಮಹಿಮಾ ಲಾರೆನ್ಸ್​​ನ ಮಾಜಿ ಪ್ರಿಯತಮೆ ಎನ್ನುವುದು ಬೆಳಕಿಗೆ ಬಂದಿದೆ. ಮಹಿಮಾ ಮತ್ತು ಸುರೇಶ್ ಎಂಬುವವರು ಲಾರೆನ್ಸ್ ಕಿಡ್ನ್ಯಾಪ್​ಗೆ ಸ್ಕೇಚ್ ಹಾಕಿದ್ದರು. ಅದರಂತೆ ಪೋಕರ್ ಗೇಮ್ ಆಡಲು ಇಂದಿರಾನಗರ ಪಬ್​ನಲ್ಲಿದ್ದ ಲಾರೆನ್ಸ್​​ನ್ನು ಹೊರಗೆ ಬಾ, ನಿನ್ನ ಮೀಟ್ ಮಾಡಬೇಕು ಅಂತಾ ಮಹಿಮಾ ಕರೆ ಮಾಡಿದ್ದಾಳೆ. ಹೊರಗೆ ಬಂದ ಲಾರೆನ್ಸ್​ನನ್ನ ಕಿಡ್ನ್ಯಾಪ್ ಮಾಡಲಾಗಿದೆ.

ಲಾರೆನ್ಸ್​ನನ್ನ ಕಿಡ್ನ್ಯಾಪ್​​ ಮಾಡಿ ಇಂದಿರಾನಗರದ ಸರ್ವಿಸ್ ಅಪಾರ್ಟ್ಮೆಂಟ್​ನಲ್ಲಿ ಕೂಡಿ ಹಾಕಿದ್ದಾರೆ. ಎರಡೂವರೇ ಕೋಟಿ ಹಣ ನೀಡುವಂತೆ ಪ್ರತಿದಿನ ಹಲ್ಲೆ ಮಾಡಿ ಕಿರುಕುಳ ನೀಡಿದ್ದಾರೆ. ಒಂದು ದಿನ ಲಾರೆನ್ಸ್​ ಜೋರಾಗಿ ಕೂಗಿಕೊಂಡಿದ್ದಾನೆ. ಪಕ್ಕದ ಮನೆಯವರ ಮೂಲಕ ತಂಗಿಯನ್ನ ಸಂಪರ್ಕಿಸಿ ಪೊಲೀಸರಿಗೆ ವಿಚಾರ ಮುಟ್ಟಿಸಲಾಗಿತ್ತು.

ಇದನ್ನೂ ಓದಿ: ‘ಭೇಟಿಯಾಗೋಣ ಬಾ ಗೆಳೆಯ’ ಸ್ನೇಹಿತೆಯ ಮಾತು ನಂಬಿ ಹೋಟೆಲ್​ನಿಂದ ಹೊರಬಂದ ಯುವಕ ಕಿಡ್ನ್ಯಾಪ್​

ಪೊಲೀಸರು ಫೋನ್​ ಲೊಕೇಶನ್ ಹುಡುಕಿ ಮನೆ ಬಳಿ ಹೋದಾಗ ಆರೋಪಿಗಳು ಕಾರಿನಲ್ಲಿ ಪರಾರಿ ಆಗಿದ್ದರು. ಬಳಿಕ ಲಾರೆನ್ಸ್​ನನ್ನ ಯಶವಂತಪುರ ಬಳಿ ಇಳಿಸಿ ಹೋಗಿದ್ದರು. ಸದ್ಯ ಪೊಲೀಸರು ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ. ಕಿಂಗ್ ಪಿನ್ ಮಹಿಮಾ, ಸುರೇಶ್ ಸೇರಿ ಇನ್ನೂ ನಾಲ್ವರಿಗಾಗಿ ತೀವ್ರ ಹುಡುಕಾಟ ನಡೆದಿದೆ.

ವರದಿ: ಅಣ್ಣಪ್ಪ ಬಾರ್ಕಿ ಹಾವೇರಿ 

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 12:15 pm, Sun, 27 July 25

Follow Us
ತಾಯಿನ ಕಂಡು ರಸ್ತೆಯಲ್ಲಿ ಓಡಿ ಬಂದ ಮಗುವಿನ ಮೇಲೆ ಹರಿದ ಲಾರಿ
ತಾಯಿನ ಕಂಡು ರಸ್ತೆಯಲ್ಲಿ ಓಡಿ ಬಂದ ಮಗುವಿನ ಮೇಲೆ ಹರಿದ ಲಾರಿ
ಗ್ಯಾಸ್ ದರ ಇಳಿಸುವಂತೆ ಬೆಂಗಳೂರು ಹೋಟೆಲ್ ಅಸೋಸಿಯೇಷನ್​ನಿಂದ ಮೋದಿಗೆ ಪತ್ರ
ಗ್ಯಾಸ್ ದರ ಇಳಿಸುವಂತೆ ಬೆಂಗಳೂರು ಹೋಟೆಲ್ ಅಸೋಸಿಯೇಷನ್​ನಿಂದ ಮೋದಿಗೆ ಪತ್ರ
ಹಾವಿನ ಜೊತೆ ಸಾಹಸ ಮಾಡಲು ಹೋದ ವ್ಯಕ್ತಿ ಸಾವು
ಹಾವಿನ ಜೊತೆ ಸಾಹಸ ಮಾಡಲು ಹೋದ ವ್ಯಕ್ತಿ ಸಾವು
ರಣಬಿಸಿಲಿಗೆ ಪ್ರಾಣಿ, ಪಕ್ಷಿ, ಮನುಷ್ಯರ ನರಳಾಟ; ರಾಯಚೂರಿನಲ್ಲಿ ಇಬ್ಬರ ಸಾವು
ರಣಬಿಸಿಲಿಗೆ ಪ್ರಾಣಿ, ಪಕ್ಷಿ, ಮನುಷ್ಯರ ನರಳಾಟ; ರಾಯಚೂರಿನಲ್ಲಿ ಇಬ್ಬರ ಸಾವು
‘ಸಾರಾ ಗೋವಿಂದ್ ನನಗೆ ಧಮ್ಕಿ ಹಾಕೋ ರೀತಿ ಮಾತಾಡಿದ್ರು’; ಚೇತನ್
‘ಸಾರಾ ಗೋವಿಂದ್ ನನಗೆ ಧಮ್ಕಿ ಹಾಕೋ ರೀತಿ ಮಾತಾಡಿದ್ರು’; ಚೇತನ್
ಗೃಹಿಣಿ ಅನುಮಾನಾಸ್ಪದ ಸಾವು: ವರದಕ್ಷಿಣೆ ಕಿರುಕುಳ ಕೊಟ್ಟು ಕೊಲೆ ಮಾಡಿದ ಆರೋಪ
ಗೃಹಿಣಿ ಅನುಮಾನಾಸ್ಪದ ಸಾವು: ವರದಕ್ಷಿಣೆ ಕಿರುಕುಳ ಕೊಟ್ಟು ಕೊಲೆ ಮಾಡಿದ ಆರೋಪ
ಪ್ರವಾಸಿಗರ ಕಣ್ಣಿಗೆ ಬಿದ್ದ ಅಪರೂಪದ 'ಬಿಳಿ ಜಿಂಕೆ'!
ಪ್ರವಾಸಿಗರ ಕಣ್ಣಿಗೆ ಬಿದ್ದ ಅಪರೂಪದ 'ಬಿಳಿ ಜಿಂಕೆ'!
ಪೆಟ್ರೋಲ್, ಡಿಸೇಲ್ ಏರಿಕೆ ಭೀತಿ! ಪೆಟ್ರೋಲ್ ಬಂಕ್​ಗಳಿಗೆ ಮುಗಿಬಿದ್ದ ಜನ
ಪೆಟ್ರೋಲ್, ಡಿಸೇಲ್ ಏರಿಕೆ ಭೀತಿ! ಪೆಟ್ರೋಲ್ ಬಂಕ್​ಗಳಿಗೆ ಮುಗಿಬಿದ್ದ ಜನ
ರೋಚಕ ಪಂದ್ಯದಲ್ಲಿ 2 ರನ್​ಗಳ ಜಯ ಸಾಧಿಸಿ ಫೈನಲ್​ಗೇರಿದ ಹೈದರಾಬಾದ್
ರೋಚಕ ಪಂದ್ಯದಲ್ಲಿ 2 ರನ್​ಗಳ ಜಯ ಸಾಧಿಸಿ ಫೈನಲ್​ಗೇರಿದ ಹೈದರಾಬಾದ್
ಅಳಿಯನ ಮನೆಗೇ ಕನ್ನ ಹಾಕಿ ಸಿಕ್ಕಿಬಿದ್ದ ಅತ್ತೆ: ಕದ್ದ ಬಂಗಾರ ಎಷ್ಟು ಗೊತ್ತಾ?
ಅಳಿಯನ ಮನೆಗೇ ಕನ್ನ ಹಾಕಿ ಸಿಕ್ಕಿಬಿದ್ದ ಅತ್ತೆ: ಕದ್ದ ಬಂಗಾರ ಎಷ್ಟು ಗೊತ್ತಾ?