AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಾವೇರಿ: ಪೋಷಕರು ಬೈದಿದ್ದಕ್ಕೆ ಮನೆ ಬಿಟ್ಟು ಹೋಗಿದ್ದ ಅಕ್ಕ-ತಂಗಿ ಪುಣೆಯಲ್ಲಿ ಪತ್ತೆ

ಪೋಷಕರು ಬೈದಿದ್ದಕ್ಕೆ ಅಕ್ಕ ತಂಗಿ ಮನೆ ಬಿಟ್ಟು ಹೋಗಿದ್ದು, ಒಂದು ದಿನದ ಬಳಿಕ ಪುಣೆಯಲ್ಲಿ ಪತ್ತೆ ಆಗಿರುವಂತಹ ಘಟನೆ ನಡೆದಿದೆ. ಹಾವೇರಿಯ ಲಯನ್ಸ್ ಆಂಗ್ಲ ಶಾಲೆಯಲ್ಲಿ ಓದುತ್ತಿದ್ದ ಇಬ್ಬರು ಸಹೋದರಿಯರು ನಿನ್ನೆ ನಾಪತ್ತೆ ಆಗಿದ್ದರು. ಈ ಬಗ್ಗೆ ಹಾವೇರಿ ಮಹಿಳಾ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿತ್ತು.

ಹಾವೇರಿ: ಪೋಷಕರು ಬೈದಿದ್ದಕ್ಕೆ ಮನೆ ಬಿಟ್ಟು ಹೋಗಿದ್ದ ಅಕ್ಕ-ತಂಗಿ ಪುಣೆಯಲ್ಲಿ ಪತ್ತೆ
ಪತ್ತೆಯಾದ ಸಹೋದರಿಯರು
ಗಂಗಾಧರ​ ಬ. ಸಾಬೋಜಿ
|

Updated on:Jul 27, 2025 | 12:57 PM

Share

ಹಾವೇರಿ, ಜುಲೈ 27: ಪೋಷಕರು ಬೈದಿದ್ದಕ್ಕೆ ಮನೆ ಬಿಟ್ಟು ಹೋಗಿದ್ದ ಅಕ್ಕ ತಂಗಿ (sisters) ಪುಣೆಯಲ್ಲಿ ಪತ್ತೆ ಆಗಿರುವಂತಹ ಘಟನೆಯೊಂದು ಬೆಳಕಿಗೆ ಬಂದಿದೆ. ಹಾವೇರಿಯ (Haveri) ಅಬ್ದುಲ್ ಖಾದರ್ ಲೋಹಾರ್ ಪುತ್ರಿಯರಾದ ಉಮರ್ ಖೈರ್ ಫಾತಿಮಾ ಮತ್ತು ಉಮ್ಮಿ ಹಬೀಬಾ ನಾಪತ್ತೆಯಾಗಿದ್ದ ಅಕ್ಕ-ತಂಗಿ. ಹಾವೇರಿ ಮಹಿಳಾ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿತ್ತು.

ಹಾವೇರಿಯ ಲಯನ್ಸ್ ಆಂಗ್ಲ ಶಾಲೆಯಲ್ಲಿ ಓದುತ್ತಿದ್ದ ಸಹೋದರಿಯರು, ಶನಿವಾರ ಶಾಲೆ ಮುಗಿಯುತ್ತಿದ್ದಂತೆ ಕಾಣೆಯಾಗಿದ್ದರು. ಎಷ್ಟೇ ಹುಡಕಾಟ ನಡೆಸಿದರೂ ಸಿಗದ ಕಾರಣ ಆತಂಕಗೊಂಡ ಪೋಷಕರು ನಿನ್ನೆ ಹಾವೇರಿ ಮಹಿಳಾ ಠಾಣೆಯಲ್ಲಿ ಫಾತಿಮಾ ಮತ್ತು ಉಮ್ಮಿ ಹಬೀಬಾ ನಾಪತ್ತೆ ಪ್ರಕರಣ ದಾಖಲಿಸಿದ್ದರು. ಇಂದು ಮಹಾರಾಷ್ಟ್ರದ ಪುಣೆಯಲ್ಲಿ ಅಕ್ಕ-ತಂಗಿ ಪತ್ತೆಯಾಗಿದ್ದಾರೆ.

ಪೋಕರ್ ಗೇಮ್ ‘ಪ್ರೇಮಿ’ಯ ಕಿಡ್ನಾಪ್: 2.5 ಕೋಟಿಗೆ ಡಿಮ್ಯಾಂಡ್

ಬೆಂಗಳೂರಿನಲ್ಲಿ ಯುವಕನ ಕಿಡ್ನ್ಯಾಪ್ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ನಾಲ್ವರನ್ನು ಪೊಲೀಸರು ಬಂಧಿಸಿದ್ದಾರೆ. ಇದೀಗ ಪ್ರಮುಖ ಆರೋಪಿ ಮಹಿಮಾ ಲಾರೆನ್ಸ್​​ನ ಮಾಜಿ ಪ್ರಿಯತಮೆ ಎನ್ನುವುದು ಬೆಳಕಿಗೆ ಬಂದಿದೆ. ಮಹಿಮಾ ಮತ್ತು ಸುರೇಶ್ ಎಂಬುವವರು ಲಾರೆನ್ಸ್ ಕಿಡ್ನ್ಯಾಪ್​ಗೆ ಸ್ಕೇಚ್ ಹಾಕಿದ್ದರು. ಅದರಂತೆ ಪೋಕರ್ ಗೇಮ್ ಆಡಲು ಇಂದಿರಾನಗರ ಪಬ್​ನಲ್ಲಿದ್ದ ಲಾರೆನ್ಸ್​​ನ್ನು ಹೊರಗೆ ಬಾ, ನಿನ್ನ ಮೀಟ್ ಮಾಡಬೇಕು ಅಂತಾ ಮಹಿಮಾ ಕರೆ ಮಾಡಿದ್ದಾಳೆ. ಹೊರಗೆ ಬಂದ ಲಾರೆನ್ಸ್​ನನ್ನ ಕಿಡ್ನ್ಯಾಪ್ ಮಾಡಲಾಗಿದೆ.

ಲಾರೆನ್ಸ್​ನನ್ನ ಕಿಡ್ನ್ಯಾಪ್​​ ಮಾಡಿ ಇಂದಿರಾನಗರದ ಸರ್ವಿಸ್ ಅಪಾರ್ಟ್ಮೆಂಟ್​ನಲ್ಲಿ ಕೂಡಿ ಹಾಕಿದ್ದಾರೆ. ಎರಡೂವರೇ ಕೋಟಿ ಹಣ ನೀಡುವಂತೆ ಪ್ರತಿದಿನ ಹಲ್ಲೆ ಮಾಡಿ ಕಿರುಕುಳ ನೀಡಿದ್ದಾರೆ. ಒಂದು ದಿನ ಲಾರೆನ್ಸ್​ ಜೋರಾಗಿ ಕೂಗಿಕೊಂಡಿದ್ದಾನೆ. ಪಕ್ಕದ ಮನೆಯವರ ಮೂಲಕ ತಂಗಿಯನ್ನ ಸಂಪರ್ಕಿಸಿ ಪೊಲೀಸರಿಗೆ ವಿಚಾರ ಮುಟ್ಟಿಸಲಾಗಿತ್ತು.

ಇದನ್ನೂ ಓದಿ: ‘ಭೇಟಿಯಾಗೋಣ ಬಾ ಗೆಳೆಯ’ ಸ್ನೇಹಿತೆಯ ಮಾತು ನಂಬಿ ಹೋಟೆಲ್​ನಿಂದ ಹೊರಬಂದ ಯುವಕ ಕಿಡ್ನ್ಯಾಪ್​

ಪೊಲೀಸರು ಫೋನ್​ ಲೊಕೇಶನ್ ಹುಡುಕಿ ಮನೆ ಬಳಿ ಹೋದಾಗ ಆರೋಪಿಗಳು ಕಾರಿನಲ್ಲಿ ಪರಾರಿ ಆಗಿದ್ದರು. ಬಳಿಕ ಲಾರೆನ್ಸ್​ನನ್ನ ಯಶವಂತಪುರ ಬಳಿ ಇಳಿಸಿ ಹೋಗಿದ್ದರು. ಸದ್ಯ ಪೊಲೀಸರು ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ. ಕಿಂಗ್ ಪಿನ್ ಮಹಿಮಾ, ಸುರೇಶ್ ಸೇರಿ ಇನ್ನೂ ನಾಲ್ವರಿಗಾಗಿ ತೀವ್ರ ಹುಡುಕಾಟ ನಡೆದಿದೆ.

ವರದಿ: ಅಣ್ಣಪ್ಪ ಬಾರ್ಕಿ ಹಾವೇರಿ 

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 12:15 pm, Sun, 27 July 25

Follow Us
ರಾಷ್ಟ್ರಪತಿಗಳ ಗಮನಸೆಳೆದ ಕರಗ: ದ್ರೌಪದಿ ಮುರ್ಮು ಹೇಳಿದ್ದೇನು ಗೊತ್ತಾ?
ರಾಷ್ಟ್ರಪತಿಗಳ ಗಮನಸೆಳೆದ ಕರಗ: ದ್ರೌಪದಿ ಮುರ್ಮು ಹೇಳಿದ್ದೇನು ಗೊತ್ತಾ?
ಮೊದಲ ಪಂದ್ಯದಲ್ಲಿ ಗೋಲ್ಡನ್ ಡಕ್​ಗೆ ಬಲಿಯಾದ ಕೆಎಲ್ ರಾಹುಲ್
ಮೊದಲ ಪಂದ್ಯದಲ್ಲಿ ಗೋಲ್ಡನ್ ಡಕ್​ಗೆ ಬಲಿಯಾದ ಕೆಎಲ್ ರಾಹುಲ್
ಚಂಡೀಗಢದ ಬಿಜೆಪಿ ಕಚೇರಿಯ ಹೊರಗೆ ಗ್ರೆನೇಡ್ ಸ್ಫೋಟ; ವಿಡಿಯೋ ಇಲ್ಲಿದೆ
ಚಂಡೀಗಢದ ಬಿಜೆಪಿ ಕಚೇರಿಯ ಹೊರಗೆ ಗ್ರೆನೇಡ್ ಸ್ಫೋಟ; ವಿಡಿಯೋ ಇಲ್ಲಿದೆ
ನೀವು ಯಾಕೆ ಚುನಾವಣೆಯಲ್ಲಿ ಸ್ಪರ್ಧಿಸಲ್ಲ? ನೇರವಾಗಿ ಉತ್ತರಿಸಿದ ಉಪೇಂದ್ರ
ನೀವು ಯಾಕೆ ಚುನಾವಣೆಯಲ್ಲಿ ಸ್ಪರ್ಧಿಸಲ್ಲ? ನೇರವಾಗಿ ಉತ್ತರಿಸಿದ ಉಪೇಂದ್ರ
ಮೊದಲ ಪಂದ್ಯದಲ್ಲೇ ರಿಷಭ್ ಪಂತ್​ಗೆ ಕೈಕೊಟ್ಟ ಅದೃಷ್ಟ
ಮೊದಲ ಪಂದ್ಯದಲ್ಲೇ ರಿಷಭ್ ಪಂತ್​ಗೆ ಕೈಕೊಟ್ಟ ಅದೃಷ್ಟ
ದಾವಣಗೆರೆಗೆ ಬಂದ ಸಿದ್ದರಾಮಯ್ಯಗೆ ಪ್ರೀತಿಯಿಂದ ಕ್ಲಾಸ್ ತೆಗೆದುಕೊಂಡ ಅಭಿಮಾನಿ
ದಾವಣಗೆರೆಗೆ ಬಂದ ಸಿದ್ದರಾಮಯ್ಯಗೆ ಪ್ರೀತಿಯಿಂದ ಕ್ಲಾಸ್ ತೆಗೆದುಕೊಂಡ ಅಭಿಮಾನಿ
ಟೋಲ್‌ನಲ್ಲಿ ಹೊಸ ನಿಯಮ ಪರಿಣಾಮ: ಫಾಸ್ಟ್‌ಟ್ಯಾಗ್​ಗೆ ಹೆಚ್ಚಿದ ಬೇಡಿಕೆ
ಟೋಲ್‌ನಲ್ಲಿ ಹೊಸ ನಿಯಮ ಪರಿಣಾಮ: ಫಾಸ್ಟ್‌ಟ್ಯಾಗ್​ಗೆ ಹೆಚ್ಚಿದ ಬೇಡಿಕೆ
ಯಮರಾಜನನ್ನು ಭೇಟಿಯಾದ ರಾಹುಲ್ ಗಾಂಧಿ
ಯಮರಾಜನನ್ನು ಭೇಟಿಯಾದ ರಾಹುಲ್ ಗಾಂಧಿ
ಮಹಿಳಾ ಉದ್ಯೋಗಿಯ ತುಟಿಗೆ ಚುಂಬಿಸಲು ಹೋದ ಕಾಮುಕ: ವೀಡಿಯೋ ವೈರಲ್
ಮಹಿಳಾ ಉದ್ಯೋಗಿಯ ತುಟಿಗೆ ಚುಂಬಿಸಲು ಹೋದ ಕಾಮುಕ: ವೀಡಿಯೋ ವೈರಲ್
ಜನಗಣತಿ: ಸ್ವಯಂ ಗಣತಿ ಹೇಗೆ ಮಾಡುವುದು? ಸಾರ್ವಜನಿಕರು ಭಾಗಿಯಾಗೋದು ಹೇಗೆ?
ಜನಗಣತಿ: ಸ್ವಯಂ ಗಣತಿ ಹೇಗೆ ಮಾಡುವುದು? ಸಾರ್ವಜನಿಕರು ಭಾಗಿಯಾಗೋದು ಹೇಗೆ?