Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೆಲ್ಮೆಟ್​​ ಕಡ್ಡಾಯಕ್ಕಾಗಿ ಹಾವೇರಿ ಜಿಲ್ಲೆಯಲ್ಲಿ ವಿಶೇಷ ಜಾಗೃತಿ ಅಭಿಯಾನ

ಹಾವೇರಿ ಜಿಲ್ಲೆಗೆ ಹೊಸದಾಗಿ ಬಂದ ಪೋಲಿಸ್ ವರಿಷ್ಠಾಧಿಕಾರಿ ಅಂಶುಕುಮಾರ ಅವರ ವಿಶೇಷ ಆಸಕ್ತಿಯಿಂದ ಜಿಲ್ಲಾದ್ಯಂತ ಕಳೆದ ಎರಡು ವಾರಗಳಿಂದ ಹೆಲ್ಮೆಟ್ ಜಾಗೃತಿ ಜೊತೆಗೆ ದಂಡ ಹಾಕುವ ಪ್ರಕ್ರಿಯೆ ಚಾಲ್ತಿಯಲ್ಲಿದೆ. ಇದರಿಂದ ಜಿಲ್ಲೆಯಲ್ಲಿ ಶೇ 50-60 ರಷ್ಟು ಬೈಕ್ ಸವಾರರು ಕಡ್ಡಾಯವಾಗಿ ಹೆಲ್ಮೆಟ್ ಧರಿಸುತ್ತಿದ್ದಾರೆ.

ಹೆಲ್ಮೆಟ್​​ ಕಡ್ಡಾಯಕ್ಕಾಗಿ ಹಾವೇರಿ ಜಿಲ್ಲೆಯಲ್ಲಿ ವಿಶೇಷ ಜಾಗೃತಿ ಅಭಿಯಾನ
ಹೆಲ್ಮೆಟ್ ಜಾಗೃತಿ
Follow us
TV9 Web
| Updated By: ಗಂಗಾಧರ​ ಬ. ಸಾಬೋಜಿ

Updated on:Dec 14, 2023 | 8:38 PM

ಹಾವೇರಿ, ಡಿಸೆಂಬರ್​​​ 14: ದೊಡ್ಡ ನಗರಗಳಿಗೆ ಮಾತ್ರ ಹೆಲ್ಮೆಟ್ (helmet) ಕಡ್ಡಾಯ ಸಿಮೀತ ಆಗಿತ್ತು ಆದರೆ ಇದೀಗ ಹಾವೇರಿ ಜಿಲ್ಲೆಯಲ್ಲಿ ಕಡ್ಡಾಯ ಆಗಿದೆ. ಜಿಲ್ಲೆಗೆ ಹೊಸದಾಗಿ ಬಂದ ಪೋಲಿಸ್ ವರಿಷ್ಠಾಧಿಕಾರಿ ಅಂಶುಕುಮಾರ ಅವರ ವಿಶೇಷ ಆಸಕ್ತಿಯಿಂದ ಜಿಲ್ಲಾದ್ಯಂತ ಕಳೆದ ಎರಡು ವಾರಗಳಿಂದ ಹೆಲ್ಮೆಟ್ ಜಾಗೃತಿ ಜೊತೆಗೆ ದಂಡ ಹಾಕುವ ಪ್ರಕ್ರಿಯೆ ಚಾಲ್ತಿಯಲ್ಲಿದೆ. ಇದರಿಂದ ಜಿಲ್ಲೆಯಲ್ಲಿ ಶೇ 50-60 ರಷ್ಟು ಬೈಕ್ ಸವಾರರು ಕಡ್ಡಾಯವಾಗಿ ಹೆಲ್ಮೆಟ್ ಧರಿಸುತ್ತಿದ್ದಾರೆ.

ಹೆಲ್ಮೆಟ್ ಕಡ್ಡಾಯಕ್ಕಾಗಿ ವಿಶೇಷ ಜಾಗೃತಿ ಅಭಿಯಾನ

ಜೀವ ಉಳಿಸುವ ಹೆಲ್ಮೆಟ್ ಕಡ್ಡಾಯಕ್ಕಾಗಿ ಹಾವೇರಿ ಪೋಲಿಸರು ಸಾರ್ವಜನಿಕರಲ್ಲಿ ವಿಶೇಷ ಅಭಿಯಾನ ಮಾಡುತ್ತಿದ್ದಾರೆ. ರಾಣೆಬೆನ್ನೂರ ಪೋಲಿಸರು ಯಮಧರ್ಮ, ಚಿತ್ರಗುಪ್ತ, ಯಮಕಿಂಕರ ವೇಷ ಧರಿಸಿ ಯಮ ಪಾಷ ಹಾಕಿ ಹೆಲ್ಮೆಟ್ ಹಾಕದಿದ್ದರೆ ನಿಮ್ಮ ಜೀವಗಳಿಗೆ ಆಪತ್ತು ಎಂದು ಭಯ ಹುಟ್ಟಿಸುವ ಕೇಲಸ ಮಡಿದ್ದಾರೆ. ಬೈಕ್ ಸವಾರರಿಗೆ ಗುಲಾಬಿ ಹೂ ನೀಡಿ ವಿನಂತಿಸಿಕೊಳ್ಳುತ್ತಿದ್ದಾರೆ. ಬೈಕ್ ಸವಾರರನ್ನು ಪೋಲಿಸರು ತಡೆದು ನಿಲ್ಲಿಸಿದಾಗ ರಾಜಕಾರಣಿಗಳು, ಹಿಂಬಾಲಕರ ಒತ್ತಡಕ್ಕೆ ಪೋಲಿಸರು ಡೊಂಟ್ ಕೇರ ಅನ್ನುತ್ತಿದ್ದಾರೆ.

ಸರಕಾರಿ ಅಧಿಕಾರಿಗಳಿಗೂ ದಂಡ

ಸರಕಾರಿ ನೌಕರರು ತಮ್ಮ ಗುರುತಿನ ಚೀಟಿ ತೋರಿಸಿ ದಂಡದಿಂದ ವಿನಾಯಿತಿ ಪಡೆಯುತ್ತಿದ್ದರು. ಆದರೆ ಈಗ ಎಸ್ಪಿಯವರು ಸರಕಾರಿ ಅಧಿಕಾರಿಗಳಿಗೆ ಹೆಚ್ಚಿನ ದಂಡ ವಿಧಿಸಲಾಗುತ್ತಿದೆ.

ಇದನ್ನೂ ಓದಿ: ಯಮಧರ್ಮ, ಚಿತ್ರಗುಪ್ತ, ಯಮಕಿಂಕರರ ವೇಷ ಧರಿಸಿ ವಿನೂತನವಾಗಿ ಹೆಲ್ಮೆಟ್ ಜಾಗೃತಿ ಮೂಡಿಸಿದ ಹಾವೇರಿ ಪೊಲೀಸರು

ಮಹಿಳಾ ಸವಾರರು ಬೇಕಾಬಿಟ್ಟಿಯಾಗಿ ಒಡಾಡುತ್ತಿದ್ದರು ಇದೀಗ ಕಡ್ಡಾಯವಾಗಿ ದಂಡ ಕಟ್ಟಲೆಬೇಕಾದ ಪರಿಸ್ಥಿತಿ ಒದಗಿದ್ದು ಕೇಲವೊಂದು ಸಲ ಕಣ್ಣಿರು ಹಾಕುವಂತಾಗಿದೆ.

ಪೋಲಿಸ್ ವರಿಷ್ಠಾಧಿಕಾರಿ ಅಂಶುಕುಮಾರ ಅವರಿಗೆ ಅಭಿನಂದನೆಯ ಮಹಾಪೂರ

ಜಿಲ್ಲೆಯಲ್ಲಿ ಕಳೆದ ಮೂರು ವರ್ಷದಲ್ಲಿ 742 ಬೈಕ್ ಸವಾರರು ಸಾವನ್ನಪ್ಪಿದ್ದಾರೆ. ಇದರಿಂದ ಪೋಲಿಸರು ಹೆಲ್ಮೆಟ್ ಕಡ್ಡಾಯ ಮಾಡಿ ಜಾಗೃತಿ ಹಾಗು ದಂಡ ಹಾಕುತ್ತಿರುವದರಿಂದ ಜಿಲ್ಲೆಯ ಶೇ 50-60 ರಷ್ಟು ಸವಾರರು ಹೆಲ್ಮೆಟ್ ಹಾಕುತ್ತಿದ್ದಾರೆ ಇದರಿಂದ ಸಾರ್ವಜನಿಕರಿಂದ ಚ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಅಭಿನಂದನೆಗಳ ಮಹಾಪುರ ಹರಿದುಬಂದಿದೆ.

ಭರ್ಜರಿ ಹೆಲ್ಮೆಟ್ ಮಾರಾಟ

ಹೆಲ್ಮೆಟ್ ಕಡ್ಡಾಯ ಎನ್ನುವದು ಖಚಿತವಾಗಿ ಬೈಕ್ ಸವಾರರು ದಂಡ ಕಟ್ಟಲಾಗದೆ ಹೆಲ್ಮೆಟ್ ಖರಿದಿಸಲು ಮುಂದಾಗಿದ್ದಾರೆ. ರಸ್ತೆ ಪಕ್ಕದಲ್ಲಿ ಹೆಲ್ಮೆಟ್ ಮಾರಾಟಗಾರರು ಅಂಗಡಿಗಳನ್ನು ತೇರೆದು ಹೆಲ್ಮೆಟ್ ಮಾರುತ್ತಿದ್ದಾರೆ. ಹೆಲ್ಮೆಟ್ ಕಡ್ಡಾಯ ಎಂದ ತಕ್ಷಣ ಎಲ್ಲೆಂದರಲ್ಲಿ ಹೆಲ್ಮೆಟ್ ಮಾರಾಟ ಮಾಡಲು ಮುಂದಾಗಿದ್ದಾರೆ. ಅದರಲ್ಲಿ ಉತ್ತಮ ಗುಣಮಟ್ಟದ ಅಂದರೆ ಐಎಸ್ಐ ಗುರುತಿನ ಶಿರಸ್ತ್ರಾಣ ಖರೀದಿಸಲು ಮನವಿ ಮಾಡಿದ್ದಾರೆ. ಇದರಿಂದ ಅಪಘಾತವಾದಾಗ ತಲೆಗೆ ಯಾವುದೆ ಪೆಟ್ಟಾಗುವುದಿಲ್ಲ.

ಇದನ್ನೂ ಓದಿ: ಬೆಂಗಳೂರು: ಹೆಲ್ಮೆಟ್ ಕಳ್ಳತನ, ಹುಡುಕಿಕೊಡಿ ಎಂದು ಪೊಲೀಸ್ ಠಾಣೆಗೆ ದೂರು

ಡಿಸೆಂಬರ್ 13 ರಂದು ಹಾವೇರಿ ಜಿಲ್ಲೆ ಹಾನಗಲ್ ತಾಲುಕಿನ ಅಕ್ಕಿ ಆಲುರ ಬಳಿ ನಡೆದ ಅಪಘಾತದಲ್ಲಿ ಗಂಗಪ್ಪ ಹಲಸೂರ ಎಂಬುವರು ಹೆಸರಿಗಷ್ಟೆ ಹೆಲ್ಮೆಟ್ ಧರಿಸಿ ಬೈಕ್ ಮುಖಾಮುಖಿ ಡಿಕ್ಕಿಯಾಗಿ ಸಾವನ್ನಪ್ಪಿದ್ದಾರೆ. ಅದ್ದರಿಂದ ಉತ್ತಮ ಗುಣ ಮಟ್ಟದ ಹೆಲ್ಮೆಟ್ ಖರೀದಿಸಿ ಎನ್ನುತ್ತಾರೆ ಪೋಲಿಸ್ ವರಿಷ್ಠಾಧಿಕಾರಿ ಅಂಶುಕುಮಾರ.

ದಾಖಲೆ ಮಟ್ಟದ ದಂಡ ಸಂಗ್ರಹ

ಡಿಸೆಂಬರ್ 1 ರಿಂದ ಜಿಲ್ಲೆಯಲ್ಲಿ ಹೆಲ್ಮೆಟ್ ಕಡ್ಡಾಯಗೊಳಿಸಿ ಸವಾರರಿಗೆ ದಂಡ ವಿಧಿಸುತ್ತಿದ್ದಾರೆ. ಜಿಲ್ಲೆಯಾದ್ಯಂತ 3670 ಪ್ರಕರಣಗಳು ದಾಖಲಾಗಿದ್ದು, 1835000ರೂ ದಾಖಲೆಯ ಮೊತ್ತ ಸಂಗ್ರಹವಾಗಿದೆ.

ರವಿ ಹೂಗಾರ. Tv9 ಹಾವೇರಿ

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 8:27 pm, Thu, 14 December 23

‘ಇಂಟರ್​ವಲ್​’ ಸಿನಿಮಾ ಗೆದ್ದಿದ್ದು ಹೇಗೆ? 25 ಡೇಸ್ ಸಂಭ್ರಮದಲ್ಲಿ ಚಿತ್ರತಂಡ
‘ಇಂಟರ್​ವಲ್​’ ಸಿನಿಮಾ ಗೆದ್ದಿದ್ದು ಹೇಗೆ? 25 ಡೇಸ್ ಸಂಭ್ರಮದಲ್ಲಿ ಚಿತ್ರತಂಡ
ಪತಿರಾನ ಓವರ್​ನಲ್ಲಿ ಹ್ಯಾಟ್ರಿಕ್ ಸಿಕ್ಸರ್ ಸಿಡಿಸಿದ ಪ್ರಿಯಾಂಶ್
ಪತಿರಾನ ಓವರ್​ನಲ್ಲಿ ಹ್ಯಾಟ್ರಿಕ್ ಸಿಕ್ಸರ್ ಸಿಡಿಸಿದ ಪ್ರಿಯಾಂಶ್
ಬಿಸಿಲ ತಾಪದಿಂದ ಅಹಮದಾಬಾದ್‌ನಲ್ಲಿ ಪ್ರಜ್ಞೆ ತಪ್ಪಿ ಬಿದ್ದ ಪಿ. ಚಿದಂಬರಂ
ಬಿಸಿಲ ತಾಪದಿಂದ ಅಹಮದಾಬಾದ್‌ನಲ್ಲಿ ಪ್ರಜ್ಞೆ ತಪ್ಪಿ ಬಿದ್ದ ಪಿ. ಚಿದಂಬರಂ
ಹಣದ ಕೊರತೆಯಿಂದ ಕಾರು ಮಾರಿದ ಅಜಯ್ ರಾವ್; ಕಣ್ಣೀರು ಹಾಕಿದ ಮಗಳು
ಹಣದ ಕೊರತೆಯಿಂದ ಕಾರು ಮಾರಿದ ಅಜಯ್ ರಾವ್; ಕಣ್ಣೀರು ಹಾಕಿದ ಮಗಳು
ಬಂಗಾಳದಲ್ಲಿ ವಕ್ಫ್ ಮಸೂದೆ ಹಿಂಪಡೆಯಲು ಒತ್ತಾಯಿಸಿ ಭುಗಿಲೆದ್ದ ಹಿಂಸಾಚಾರ
ಬಂಗಾಳದಲ್ಲಿ ವಕ್ಫ್ ಮಸೂದೆ ಹಿಂಪಡೆಯಲು ಒತ್ತಾಯಿಸಿ ಭುಗಿಲೆದ್ದ ಹಿಂಸಾಚಾರ
ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಸಿನಿಮಾ ವಾಹನಗಳ ಪ್ರವೇಶ: ಆಕ್ರೋಶ
ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಸಿನಿಮಾ ವಾಹನಗಳ ಪ್ರವೇಶ: ಆಕ್ರೋಶ
ಯತ್ನಾಳ್ ಅಸಲಿಗೆ ಒಬ್ಬ ನಕಲಿ ಹಿಂದೂ ಹುಲಿ: ರೇಣುಕಾಚಾರ್ಯ
ಯತ್ನಾಳ್ ಅಸಲಿಗೆ ಒಬ್ಬ ನಕಲಿ ಹಿಂದೂ ಹುಲಿ: ರೇಣುಕಾಚಾರ್ಯ
ರಹಾನೆ ಸ್ಫೋಟಕ ಬ್ಯಾಟಿಂಗ್​ಗೆ ದಂಗಾದ ಲಕ್ನೋ ಬೌಲರ್ಸ್
ರಹಾನೆ ಸ್ಫೋಟಕ ಬ್ಯಾಟಿಂಗ್​ಗೆ ದಂಗಾದ ಲಕ್ನೋ ಬೌಲರ್ಸ್
ಮೃತ್ಯುಂಜಯ ಸ್ವಾಮೀಜಿ ಯತ್ನಾಳ್​ಗೆ ಬುದ್ಧಿ ಹೇಳಲಿ: ಚಂದ್ರಶೇಖರ್ ಪೂಜಾರ್
ಮೃತ್ಯುಂಜಯ ಸ್ವಾಮೀಜಿ ಯತ್ನಾಳ್​ಗೆ ಬುದ್ಧಿ ಹೇಳಲಿ: ಚಂದ್ರಶೇಖರ್ ಪೂಜಾರ್
ಕೆಕೆಆರ್​ ಬೌಲರ್‌ಗಳ ಬೆವರಿಳಿಸಿದ ಪೂರನ್
ಕೆಕೆಆರ್​ ಬೌಲರ್‌ಗಳ ಬೆವರಿಳಿಸಿದ ಪೂರನ್