AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಟಾವಿಗೆ ಬಂದಿದ್ದ ಈರುಳ್ಳಿ ರಾತ್ರೋರಾತ್ರಿ ಕದ್ದೊಯ್ದ ಖದೀಮರು: ದೂರು ದಾಖಲು

ಹಾವೇರಿ ತಾಲೂಕಿನ ಯಲಗಚ್ಚ ಗ್ರಾಮದಲ್ಲಿ ಎರಡು ಎಕರೆ ಜಮೀನಿನಲ್ಲಿ ಬೆಳೆದು ನಿಂತಿದ್ದ ಈರುಳ್ಳಿಯನ್ನು ರಾತ್ರೋರಾತ್ರಿ ಖದೀಮರು ಕದ್ದುಕೊಂಡು ಪರಾರಿಯಾಗಿದ್ದಾರೆ. ಈರುಳ್ಳಿ ಕಳ್ಳತನ ಬಗ್ಗೆ ರೈತ ಮಾದೇವಪ್ಪ ಗುತ್ತಲ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಗುತ್ತಲ ಠಾಣೆಯ ಪೊಲೀಸರು ಆರೋಪಿಗಳ ಪತ್ತೆಗಾಗಿ ಜಾಲ ಬಿಸಿದ್ದಾರೆ.

ಕಟಾವಿಗೆ ಬಂದಿದ್ದ ಈರುಳ್ಳಿ ರಾತ್ರೋರಾತ್ರಿ ಕದ್ದೊಯ್ದ ಖದೀಮರು: ದೂರು ದಾಖಲು
ಈರುಳ್ಳಿ ಕಳ್ಳತನ
ಸೂರಜ್ ಪ್ರಸಾದ್ ಎಸ್.ಎನ್
| Edited By: |

Updated on: Dec 20, 2023 | 4:56 PM

Share

ಹಾವೇರಿ, ಡಿಸೆಂಬರ್​ 20: ಜಮೀನಿನಲ್ಲಿ ಬೆಳೆದು ನಿಂತಿದ್ದ ಈರುಳ್ಳಿ (onions) ಯನ್ನು ರಾತ್ರೋರಾತ್ರಿ ಖದೀಮರು ಕದ್ದುಕೊಂಡು ಪರಾರಿಯಾಗಿರುವ ಘಟನೆ ಹಾವೇರಿ ತಾಲೂಕಿನ ಯಲಗಚ್ಚ ಗ್ರಾಮದಲ್ಲಿ ಘಟನೆ ನಡೆದಿದೆ. ರೈತ ಮಾದೇವಪ್ಪ ಹಳೇರಿತ್ತಿ ಎಂಬುವರು ಎರಡು ಎಕರೆ ಜಮೀನಿನಲ್ಲಿ ಈರುಳ್ಳಿ ಬೆಳೆದಿದ್ದರು. ರೈತ ಮಾಹದೇವಪ್ಪ ಕಣ್ಣೀರು ಹಾಕಿದ್ದಾನೆ. ಹಗಲು ರಾತ್ರಿ ಎನ್ನದೆ ಕಷ್ಟಪಟ್ಟು ಜಮೀನಿನಲ್ಲಿದ್ದು ಈರುಳ್ಳಿ ಬೆಳೆಯನ್ನು ಜೋಪಾನ ಮಾಡಿದ್ದರು.

ರೈತನ ಶ್ರಮಕ್ಕೆ ತಕ್ಕಂತೆ ಈರುಳ್ಳಿ ಬೆಳೆ ಉತ್ತಮವಾಗಿಯೇ ಬೆಳೆದಿತ್ತು. ಕಳೆದ ಕೆಲವು ದಿನಗಳ ಹಿಂದಷ್ಟೇ ಮೊದಲ ಹಂತದ ಕಟಾವು ಮಾಡಿ ಬೆಂಗಳೂರಿನ ಮಾರುಕಟ್ಟೆಯಲ್ಲಿ ಕ್ವಿಂಟಲ್​ಗೆ ಮೂರೂವರೆ ಸಾವಿರ ರೂಪಾಯಿಯಂತೆ ಈರುಳ್ಳಿ ಮಾರಾಟ ಮಾಡಿ ಬಂದಿದ್ದರು. ಜಮೀನಿನಲ್ಲಿ ಸಾಕಷ್ಟು ಪ್ರಮಾಣದ ಈರುಳ್ಳಿ ಬೆಳೆ ಇತ್ತು. ಕನಿಷ್ಠ ಅಂದರು ಇನ್ನೂ 70 ರಿಂದ 80 ಸಾವಿರ ರೂ. ಹಣ ಬರುವಷ್ಟು ಈರುಳ್ಳಿ ಜಮೀನಿನಲ್ಲಿತ್ತು.

ಇದನ್ನೂ ಓದಿ: ಚಿತ್ರದುರ್ಗ: ಕೆಜಿಗೆ 300 ರೂ ಏರಿಕೆ ಬೆನ್ನಲೇ 6 ಲಕ್ಷ ಮೌಲ್ಯದ ಬೆಳ್ಳುಳ್ಳಿ ಕಳ್ಳತನ

ಇನ್ನೊಂದೆರಡು ದಿನಗಳಲ್ಲಿ ಅದನ್ನೂ ಕಟಾವು ಮಾಡಿ ಮಾರಾಟ ಮಾಡಲು ರೈತ ಯೋಚಿಸಿದ್ದ‌. ಪ್ರತಿದಿನ ರಾತ್ರಿ ಈರುಳ್ಳಿ ಜಮೀನಿನಲ್ಲೇ ಮಲಗುತ್ತಿದ್ದ. ಆದರೆ ರೈತ ಮಾದೇವಪ್ಪ ಇನ್ನೊಂದು ಜಮೀನಿನಲ್ಲಿ ಬೆಳೆದಿದ್ದ ಮೆಕ್ಕೆಜೋಳವನ್ನು ಮಷೀನ್​ಗೆ ಹಾಕಿಸಿದ್ದರಿಂದ ಈರುಳ್ಳಿ ಜಮೀನಿನ ಬದಲು ಮೆಕ್ಕೆಜೋಳದ ಜಮೀನಿನಲ್ಲಿ ಮಲಗಿಕೊಂಡಿದ್ದ.

ಇದನ್ನೂ ಓದಿ: ಮೆಣಸಿನಕಾಯಿಗೆ ಚಿನ್ನದ ಬೆಲೆ ಬಂದಿದೆ ಅಂತ ರೈತರಿಗೆ ಇಲ್ಲ ಖುಷಿ, ಕಳ್ಳರ ಹಾವಳಿಗೆ ಗದಗ ಅನ್ನದಾತರು ಬೆಚ್ಚಿಬಿದ್ದಿದ್ದಾರೆ!

ಈರುಳ್ಳಿ ಜಮೀನಿನಲ್ಲಿ ಯಾರೂ ಇಲ್ಲದ್ದನ್ನು ಗಮನಿಸಿದ ಖದೀಮರ ತಂಡ ರಾತ್ರೋರಾತ್ರಿ ಈಡಿ ಜಮೀನಿನಲ್ಲಿ ಬೆಳೆದಿದ್ದ ದೊಡ್ಡ ದೊಡ್ಡ ಗಾತ್ರದ ಈರುಳ್ಳಿಯನ್ನೇ ಕದ್ದುಕೊಂಡು ಪರಾರಿ ಆಗಿದ್ದಾರೆ. ಬೆಳಿಗ್ಗೆ ರೈತ ಮಾದೇವಪ್ಪ ಜಮೀನಿಗೆ ಬಂದಾಗ ಈರುಳ್ಳಿ ಕಳ್ಳತನ ಆಗಿರುವುದು ಬೆಳಕಿಗೆ ಬಂದಿದೆ. ಈರುಳ್ಳಿ ಕಳ್ಳತನ ಆಗಿರುವ ಬಗ್ಗೆ ರೈತ ಮಾದೇವಪ್ಪ ಗುತ್ತಲ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ದೂರು ದಾಖಲಿಸಿಕೊಂಡಿರುವ ಗುತ್ತಲ ಠಾಣೆಯ ಪೊಲೀಸರು ಆರೋಪಿಗಳ ಪತ್ತೆಗಾಗಿ ಜಾಲ ಬಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
Suraj Prasad SN
Suraj Prasad SN

ಸೂರಜ್ ಪ್ರಸಾದ್ ಎಸ್.ಎನ್ ಆದ ನಾನು ಹುಟ್ಟಿದ್ದು ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯಲ್ಲಿ. ಬೆಳೆದಿದ್ದು ದಾವಣಗರೆ ಜಿಲ್ಲೆ ನ್ಯಾಮತಿ ತಾಲೂಕಿನಲ್ಲಿ. ಶಿವಮೊಗ್ಗದ ಸಹ್ಯಾದ್ರಿ ಕಾಲೇಜ್ ನಲ್ಲಿ ಪತ್ರಿಕೋದ್ಯಮದಲ್ಲಿ ಪದವಿಪೂರ್ವ ಶಿಕ್ಷಣ ಪಡೆದಿದ್ದು 2014ರಿಂದ ನನ್ನ ಎಲೆಕ್ಟ್ರಾನಿಕ್ ಮಾದ್ಯಮದ ವೃತ್ತಿ ಜೀವನವನ್ನ ಬೆಂಗಳೂರಿನಲ್ಲಿ ಕ್ರೈಂ ಬೀಟ್ ವರದಿಗಾರನಾಗಿ ಆರಂಭಿಸಿದ್ದು ಬೆಂಗಳೂರಿನಲ್ಲಿ 8 ವರ್ಷಗಳ ಕ್ರೈಂ ವರದಿಗಾರನಾಗಿ ಸೇವೆ ಸಲ್ಲಿಸಿ. ನಾಲ್ಕು ಸಂಸ್ಥೆಯಲ್ಲಿ ಕ್ರೈಂ ರಿಪೋರ್ಟರ್ ಹಾಗೂ ಕ್ರೈಂ ಇನ್ವೆಸ್ಟಿಗೇಟಿವ್ ವರದಿಗಾರನಾಗಿ ಹಾಗೂ ಸ್ಟಿಂಗ್ ಅಪರೇಷನ್ ಗಳನ್ನ ಮಾಡಿದ್ದೇನೆ. ಗೌರಿ ಲಂಕೇಶ್ ಕೊಲೆ ಕೇಸನ್ನ ರಾಜ್ಯದಲ್ಲೇ ಮೊದಲು ಬ್ರೇಕ್ ಮಾಡಿ ಈ ಹಿಂದಿನ ಸಂಸ್ಥೆಯಿಂದ ಪ್ರಶಂಸೆ ಪಡೆದಿರುತ್ನೇನೆ2019 ರಲ್ಲಿ ಪಿಎಸ್ಐ ಅಕ್ರಮದ ಸ್ಟಿಂಗ್ ಆಪರೇಷನ್ ಹಾಗೂ ಬೆಂಗಳೂರು ಸಿಂಥಟಿಕ್ ಡ್ರಗ್ ಮಾಫಿಯಾದ ಸ್ಟಿಂಗ್ ಆಪರೇಷನ್ ಮಾಡಿದ್ದು. ಕಳೆದ 10 ವರ್ಷಗಳಿಂದ ಸಕ್ರೀಯವಾಗಿ ಕಾರ್ಯ ನಿರ್ವಹಿಸುತ್ತಿದ್ದೇನೆ. ಟಿವಿ9 ಸಂಸ್ಥೆಗೆ ಮಂಡ್ಯ ಜಿಲ್ಲಾ ವರದಿಗಾರನಾಗಿ ಕೆಲಸ ಮಾಡಿ ಬಳಿಕ ಚಾಮರಾಜನಗರಕ್ಕೆ ವರ್ಗಾವಣೆಯಾಗಿ ಈಗ ಪ್ರಸ್ಥುತ ಚಾಮರಾಜನಗರ ಜಿಲ್ಲಾ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಹವ್ಯಾಸ ಅಡಿಗೆ ಮಾಡುವುದು, ಕ್ರಿಕೆಟ್ ಆಡುವುದು ಕ್ರೈಂ ಇನ್ವೆಷ್ಟಿಗೇಷನ್ ನಾವೆಲ್ ಗಳನ್ನ ಓದುವುದು.

Read More