AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Haveri: ಶಾಲೆಯಲ್ಲೇ ಬ್ಯಾಂಕ್​ ಆರಂಭಿಸಿ 50 ಸಾವಿರ ರೂಪಾಯಿವರೆಗೆ ವ್ಯವಹಾರ ಮಾಡಿದ ವಿದ್ಯಾರ್ಥಿಗಳು

ಬ್ಯಾಂಕ್ ಎಂಬುವುದರ ಬಗ್ಗೆ ತಿಳಿಯುವ ವಯಸ್ಸಿನಲ್ಲಿಯೇ ವಿದ್ಯಾರ್ಥಿಗಳು ಶಾಲೆಯಲ್ಲಿ ಬ್ಯಾಂಕ್​ನ್ನು ಆರಂಭಿಸಿದ್ದು, 50 ಸಾವಿರ ರೂಪಾಯಿವರೆಗೆ ವ್ಯವಹಾರ ಕೂಡ ಮಾಡಿದ್ದಾರೆ.

Haveri: ಶಾಲೆಯಲ್ಲೇ ಬ್ಯಾಂಕ್​ ಆರಂಭಿಸಿ 50 ಸಾವಿರ ರೂಪಾಯಿವರೆಗೆ ವ್ಯವಹಾರ ಮಾಡಿದ ವಿದ್ಯಾರ್ಥಿಗಳು
ಶಾಲೆಯಲ್ಲಿ ಬ್ಯಾಂಕ್​ ಆರಂಭಿಸಿದ ವಿದ್ಯಾರ್ಥಿಗಳು
TV9 Web
| Edited By: |

Updated on:Jan 12, 2023 | 12:34 PM

Share

ಹಾವೇರಿ: ಜಿಲ್ಲೆಯ ಬಮ್ಮನಕಟ್ಟಿ ಗ್ರಾಮದ ಸರ್ಕಾರಿ ಶಾಲೆಯಲ್ಲಿ ವಿದ್ಯಾರ್ಥಿಗಳು ಸೇರಿ ಬ್ಯಾಂಕ್​ನ್ನ ಆರಂಭ ಮಾಡಿದ್ದಾರೆ. ಕಳೆದ ಐದು ತಿಂಗಳ ಹಿಂದೆ ಆರಂಭ ಮಾಡಿರುವ ಈ ಬ್ಯಾಂಕ್ . ವಾರದಲ್ಲಿ ಸೋಮವಾರ ಹಾಗೂ ಗುರುವಾರ ಎರಡು ದಿನ ಮಾತ್ರ ಕಾರ್ಯ ನಿರ್ವಹಿಸುತ್ತದೆ, ವಾರಕ್ಕೆ ಒಂದು ಸಾವಿರದಿಂದ ಒಂದೂವರೆ ಸಾವಿರ ರೂಪಾಯಿವರೆಗೆ ವ್ಯವಹಾರ ನಡೆಯುತ್ತದೆ. ಇನ್ನು ಇದಕ್ಕೆ ಮ್ಯಾನೇಜರ್​,ಕ್ಯಾಶಿಯರ್​ ಸೇರಿದಂತೆ ವಿವಿಧ ಅಧಿಕಾರಿಗಳು ಕೂಡ ಇದ್ದಾರೆ.

8 ನೇ ತರಗತಿ ವಿದ್ಯಾರ್ಥಿನಿ ಪವಿತ್ರಾ ಬಡಿಗೇರ್ ಮ್ಯಾನೇಜರ್  ಹಾಗೂ 7 ನೇ ತರಗತಿಯ ಯಶವಂತ ಕರಿಯಮ್ಮನವರ್​  ಕ್ಯಾಶಿಯರ್ ಅಗಿ ಬ್ಯಾಂಕ್ ನಡೆಸುತ್ತಾರೆ. ಇನ್ನು ನೂಡಲ್ ಅಧಿಕಾರಿಯಾಗಿ ಶಾಲೆಯ ಸಹ ಶಿಕ್ಷಕಿ ಆಗಿರುವ ಶೋಭಾ ಬಡಿಗೇರ್ ನಿರ್ವಹಣೆ ಮಾಡುವ ಈ ಬ್ಯಾಂಕ್​ನಲ್ಲಿ ಕಳೆದ ಐದು ತಿಂಗಳಿನಿಂದ 50 ಸಾವಿರ ರೂಪಾಯಿವರೆಗೆ ವ್ಯವಹಾರ ಮಾಡಲಾಗಿದ್ದು, 8 ಸಾವಿರ ರೂಪಾಯಿ ಹಣ ಉಳಿತಾಯವಿದೆ.

ಇದನ್ನೂ ಓದಿ: Devadristi App: ಕಣ್ಣಿಲ್ಲದವರಿಗೆ “ದೇವದೃಷ್ಟಿ ಆ್ಯಪ್” ದಾರಿದೀಪ, ದಿವ್ಯಾಂಗರ ಬಾಳಿಗೆ ಬೆಳಕಾದ ವಿದ್ಯಾರ್ಥಿಗಳು

ಬ್ಯಾಂಕ್ ಎಂದರೆ ಎನು ಎಂಬುದರ ಬಗ್ಗೆ ಬಾಯಿ ಮಾತಿನಲ್ಲಿ ಪ್ರತಿ ಶಾಲೆಯಲ್ಲಿ ವಿವರಣೆ ನೀಡುತ್ತಾರೆ, ಆದರೆ ಈ ಶಾಲೆಯಲ್ಲಿ ಸ್ವತಃ ವಿದ್ಯಾರ್ಥಿಗಳೆ, ವಿದ್ಯಾರ್ಥಿಗಳಿಗಾಯೇ ಬ್ಯಾಂಕ್ ನಡೆಸಿಕೊಂಡು ಹೋಗುತ್ತಿರುವುದು ನಿಜಕ್ಕೂ ಮಾದರಿ ವಿಷಯವಾಗಿದೆ. ಅಲ್ಲದೆ ಕಳೆದ ತಿಂಗಳು ಇದೆ ಬ್ಯಾಂಕಿನಲ್ಲಿ ಪ್ರತಿ ವಾರ ಹಣ ಉಳಿತಾಯ ಮಾಡಿ ಪ್ರವಾಸಕ್ಕೂ ಹೋಗಿ ಬಂದಿದ್ದಾರೆ.

ವರದಿ: ಸೂರಜ್ ಉತ್ತೂರೆ ಟಿವಿ9 ಬೆಂಗಳೂರು

ಇನ್ನಷ್ಟು ರಾಜ್ಯಸುದ್ದಿಗಳಿಗಾಗಿ ಇಲ್ಲಿ ಕ್ಲಿಕ ಮಾಡಿ

Published On - 12:32 pm, Thu, 12 January 23

Follow Us
Web contact
Web contact

TV9 Kannada

Read More
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ