AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Haveri: ಶಾಲೆಯಲ್ಲೇ ಬ್ಯಾಂಕ್​ ಆರಂಭಿಸಿ 50 ಸಾವಿರ ರೂಪಾಯಿವರೆಗೆ ವ್ಯವಹಾರ ಮಾಡಿದ ವಿದ್ಯಾರ್ಥಿಗಳು

ಬ್ಯಾಂಕ್ ಎಂಬುವುದರ ಬಗ್ಗೆ ತಿಳಿಯುವ ವಯಸ್ಸಿನಲ್ಲಿಯೇ ವಿದ್ಯಾರ್ಥಿಗಳು ಶಾಲೆಯಲ್ಲಿ ಬ್ಯಾಂಕ್​ನ್ನು ಆರಂಭಿಸಿದ್ದು, 50 ಸಾವಿರ ರೂಪಾಯಿವರೆಗೆ ವ್ಯವಹಾರ ಕೂಡ ಮಾಡಿದ್ದಾರೆ.

Haveri: ಶಾಲೆಯಲ್ಲೇ ಬ್ಯಾಂಕ್​ ಆರಂಭಿಸಿ 50 ಸಾವಿರ ರೂಪಾಯಿವರೆಗೆ ವ್ಯವಹಾರ ಮಾಡಿದ ವಿದ್ಯಾರ್ಥಿಗಳು
ಶಾಲೆಯಲ್ಲಿ ಬ್ಯಾಂಕ್​ ಆರಂಭಿಸಿದ ವಿದ್ಯಾರ್ಥಿಗಳು
TV9 Web
| Edited By: ಕಿರಣ್ ಹನುಮಂತ್​ ಮಾದಾರ್|

Updated on:Jan 12, 2023 | 12:34 PM

Share

ಹಾವೇರಿ: ಜಿಲ್ಲೆಯ ಬಮ್ಮನಕಟ್ಟಿ ಗ್ರಾಮದ ಸರ್ಕಾರಿ ಶಾಲೆಯಲ್ಲಿ ವಿದ್ಯಾರ್ಥಿಗಳು ಸೇರಿ ಬ್ಯಾಂಕ್​ನ್ನ ಆರಂಭ ಮಾಡಿದ್ದಾರೆ. ಕಳೆದ ಐದು ತಿಂಗಳ ಹಿಂದೆ ಆರಂಭ ಮಾಡಿರುವ ಈ ಬ್ಯಾಂಕ್ . ವಾರದಲ್ಲಿ ಸೋಮವಾರ ಹಾಗೂ ಗುರುವಾರ ಎರಡು ದಿನ ಮಾತ್ರ ಕಾರ್ಯ ನಿರ್ವಹಿಸುತ್ತದೆ, ವಾರಕ್ಕೆ ಒಂದು ಸಾವಿರದಿಂದ ಒಂದೂವರೆ ಸಾವಿರ ರೂಪಾಯಿವರೆಗೆ ವ್ಯವಹಾರ ನಡೆಯುತ್ತದೆ. ಇನ್ನು ಇದಕ್ಕೆ ಮ್ಯಾನೇಜರ್​,ಕ್ಯಾಶಿಯರ್​ ಸೇರಿದಂತೆ ವಿವಿಧ ಅಧಿಕಾರಿಗಳು ಕೂಡ ಇದ್ದಾರೆ.

8 ನೇ ತರಗತಿ ವಿದ್ಯಾರ್ಥಿನಿ ಪವಿತ್ರಾ ಬಡಿಗೇರ್ ಮ್ಯಾನೇಜರ್  ಹಾಗೂ 7 ನೇ ತರಗತಿಯ ಯಶವಂತ ಕರಿಯಮ್ಮನವರ್​  ಕ್ಯಾಶಿಯರ್ ಅಗಿ ಬ್ಯಾಂಕ್ ನಡೆಸುತ್ತಾರೆ. ಇನ್ನು ನೂಡಲ್ ಅಧಿಕಾರಿಯಾಗಿ ಶಾಲೆಯ ಸಹ ಶಿಕ್ಷಕಿ ಆಗಿರುವ ಶೋಭಾ ಬಡಿಗೇರ್ ನಿರ್ವಹಣೆ ಮಾಡುವ ಈ ಬ್ಯಾಂಕ್​ನಲ್ಲಿ ಕಳೆದ ಐದು ತಿಂಗಳಿನಿಂದ 50 ಸಾವಿರ ರೂಪಾಯಿವರೆಗೆ ವ್ಯವಹಾರ ಮಾಡಲಾಗಿದ್ದು, 8 ಸಾವಿರ ರೂಪಾಯಿ ಹಣ ಉಳಿತಾಯವಿದೆ.

ಇದನ್ನೂ ಓದಿ: Devadristi App: ಕಣ್ಣಿಲ್ಲದವರಿಗೆ “ದೇವದೃಷ್ಟಿ ಆ್ಯಪ್” ದಾರಿದೀಪ, ದಿವ್ಯಾಂಗರ ಬಾಳಿಗೆ ಬೆಳಕಾದ ವಿದ್ಯಾರ್ಥಿಗಳು

ಬ್ಯಾಂಕ್ ಎಂದರೆ ಎನು ಎಂಬುದರ ಬಗ್ಗೆ ಬಾಯಿ ಮಾತಿನಲ್ಲಿ ಪ್ರತಿ ಶಾಲೆಯಲ್ಲಿ ವಿವರಣೆ ನೀಡುತ್ತಾರೆ, ಆದರೆ ಈ ಶಾಲೆಯಲ್ಲಿ ಸ್ವತಃ ವಿದ್ಯಾರ್ಥಿಗಳೆ, ವಿದ್ಯಾರ್ಥಿಗಳಿಗಾಯೇ ಬ್ಯಾಂಕ್ ನಡೆಸಿಕೊಂಡು ಹೋಗುತ್ತಿರುವುದು ನಿಜಕ್ಕೂ ಮಾದರಿ ವಿಷಯವಾಗಿದೆ. ಅಲ್ಲದೆ ಕಳೆದ ತಿಂಗಳು ಇದೆ ಬ್ಯಾಂಕಿನಲ್ಲಿ ಪ್ರತಿ ವಾರ ಹಣ ಉಳಿತಾಯ ಮಾಡಿ ಪ್ರವಾಸಕ್ಕೂ ಹೋಗಿ ಬಂದಿದ್ದಾರೆ.

ವರದಿ: ಸೂರಜ್ ಉತ್ತೂರೆ ಟಿವಿ9 ಬೆಂಗಳೂರು

ಇನ್ನಷ್ಟು ರಾಜ್ಯಸುದ್ದಿಗಳಿಗಾಗಿ ಇಲ್ಲಿ ಕ್ಲಿಕ ಮಾಡಿ

Published On - 12:32 pm, Thu, 12 January 23

Follow Us
ಉಪೇಂದ್ರ ಹುಟ್ಟುಹಬ್ಬದ ಸಂಭ್ರಮ; ಹೊಸ ಸಿನಿಮಾ ಪೋಸ್ಟರ್ ಬಿಡುಗಡೆ
ಉಪೇಂದ್ರ ಹುಟ್ಟುಹಬ್ಬದ ಸಂಭ್ರಮ; ಹೊಸ ಸಿನಿಮಾ ಪೋಸ್ಟರ್ ಬಿಡುಗಡೆ
ಮೋಸ ಮಾಡಿ ರೆಡ್ ಹ್ಯಾಂಡ್​ ಆಗಿ ಸಿಕ್ಕಿಬಿದ್ದ ಗಗನ್ ಚಿನ್ನಪ್ಪ
ಮೋಸ ಮಾಡಿ ರೆಡ್ ಹ್ಯಾಂಡ್​ ಆಗಿ ಸಿಕ್ಕಿಬಿದ್ದ ಗಗನ್ ಚಿನ್ನಪ್ಪ
ಲೂಟಿ ಹಣದಲ್ಲಿ ಗೆಳತಿಗ ಲಕ್ಷಾಂತರ ರೂ. ಚಿನ್ನಾಭರಣ ಕೊಡಿಸಿದ್ದ ಜ್ಞಾನೇಂದ್ರ!
ಲೂಟಿ ಹಣದಲ್ಲಿ ಗೆಳತಿಗ ಲಕ್ಷಾಂತರ ರೂ. ಚಿನ್ನಾಭರಣ ಕೊಡಿಸಿದ್ದ ಜ್ಞಾನೇಂದ್ರ!
ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್​ವೇ ಫ್ಲೈಓವರ್‌‌ನಿಂದ ಕೆಳಗೆ ಬಿದ್ದ ಕಾರು
ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್​ವೇ ಫ್ಲೈಓವರ್‌‌ನಿಂದ ಕೆಳಗೆ ಬಿದ್ದ ಕಾರು
ಪ್ರತಿ ಲೀಟರ್‌ ಹಾಲಿನ ದರ ₹8 ಹೆಚ್ಚಳಕ್ಕೆ ಹಾಲು ಒಕ್ಕೂಟಗಳ ಆಗ್ರಹ
ಪ್ರತಿ ಲೀಟರ್‌ ಹಾಲಿನ ದರ ₹8 ಹೆಚ್ಚಳಕ್ಕೆ ಹಾಲು ಒಕ್ಕೂಟಗಳ ಆಗ್ರಹ
ಕದ್ರಿ ಮಂಜುನಾಥ ದೇವಸ್ಥಾನಕ್ಕೆ ಸಿಎಂ ಡಿ.ಕೆ. ಶಿವಕುಮಾರ್ ಭೇಟಿ
ಕದ್ರಿ ಮಂಜುನಾಥ ದೇವಸ್ಥಾನಕ್ಕೆ ಸಿಎಂ ಡಿ.ಕೆ. ಶಿವಕುಮಾರ್ ಭೇಟಿ
ಟಿ ನರಸೀಪುರದಲ್ಲಿ ಬಿಗಿ ಭದ್ರತೆ: 600ಕ್ಕೂ ಹೆಚ್ಚು ಪೊಲೀಸರ ನಿಯೋಜನೆ
ಟಿ ನರಸೀಪುರದಲ್ಲಿ ಬಿಗಿ ಭದ್ರತೆ: 600ಕ್ಕೂ ಹೆಚ್ಚು ಪೊಲೀಸರ ನಿಯೋಜನೆ
ಗಗ್ಗರ ಮನರಂಜನೆ ವಸ್ತುವಲ್ಲ, ಚಪ್ಪಲಿ ಹಾಕಿ ವೀಕ್ಷಣೆ ಸಲ್ಲ: ಬಿಜೆಪಿ ಕಿಡಿ
ಗಗ್ಗರ ಮನರಂಜನೆ ವಸ್ತುವಲ್ಲ, ಚಪ್ಪಲಿ ಹಾಕಿ ವೀಕ್ಷಣೆ ಸಲ್ಲ: ಬಿಜೆಪಿ ಕಿಡಿ
ಶಿಷ್ಟಾಚಾರ ಉಲ್ಲಂಘನೆ: ಬೀದರ್ ಡಿಹೆಚ್ಒ, ಬಸವಕಲ್ಯಾಣ ಟಿಹೆಚ್ಒ ಅಮಾನತು
ಶಿಷ್ಟಾಚಾರ ಉಲ್ಲಂಘನೆ: ಬೀದರ್ ಡಿಹೆಚ್ಒ, ಬಸವಕಲ್ಯಾಣ ಟಿಹೆಚ್ಒ ಅಮಾನತು
ಹುಲಿ ವೇಷದ ತಾಸೆಯ ಪೆಟ್ಟಿಗೆ ಬಸನಗೌಡ ಪಾಟೀಲ್ ಭರ್ಜರಿ ಸ್ಟೆಪ್ಸ್
ಹುಲಿ ವೇಷದ ತಾಸೆಯ ಪೆಟ್ಟಿಗೆ ಬಸನಗೌಡ ಪಾಟೀಲ್ ಭರ್ಜರಿ ಸ್ಟೆಪ್ಸ್