AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Haveri: ಶಾಲೆಯಲ್ಲೇ ಬ್ಯಾಂಕ್​ ಆರಂಭಿಸಿ 50 ಸಾವಿರ ರೂಪಾಯಿವರೆಗೆ ವ್ಯವಹಾರ ಮಾಡಿದ ವಿದ್ಯಾರ್ಥಿಗಳು

ಬ್ಯಾಂಕ್ ಎಂಬುವುದರ ಬಗ್ಗೆ ತಿಳಿಯುವ ವಯಸ್ಸಿನಲ್ಲಿಯೇ ವಿದ್ಯಾರ್ಥಿಗಳು ಶಾಲೆಯಲ್ಲಿ ಬ್ಯಾಂಕ್​ನ್ನು ಆರಂಭಿಸಿದ್ದು, 50 ಸಾವಿರ ರೂಪಾಯಿವರೆಗೆ ವ್ಯವಹಾರ ಕೂಡ ಮಾಡಿದ್ದಾರೆ.

Haveri: ಶಾಲೆಯಲ್ಲೇ ಬ್ಯಾಂಕ್​ ಆರಂಭಿಸಿ 50 ಸಾವಿರ ರೂಪಾಯಿವರೆಗೆ ವ್ಯವಹಾರ ಮಾಡಿದ ವಿದ್ಯಾರ್ಥಿಗಳು
ಶಾಲೆಯಲ್ಲಿ ಬ್ಯಾಂಕ್​ ಆರಂಭಿಸಿದ ವಿದ್ಯಾರ್ಥಿಗಳು
TV9 Web
| Edited By: ಕಿರಣ್ ಹನುಮಂತ್​ ಮಾದಾರ್|

Updated on:Jan 12, 2023 | 12:34 PM

Share

ಹಾವೇರಿ: ಜಿಲ್ಲೆಯ ಬಮ್ಮನಕಟ್ಟಿ ಗ್ರಾಮದ ಸರ್ಕಾರಿ ಶಾಲೆಯಲ್ಲಿ ವಿದ್ಯಾರ್ಥಿಗಳು ಸೇರಿ ಬ್ಯಾಂಕ್​ನ್ನ ಆರಂಭ ಮಾಡಿದ್ದಾರೆ. ಕಳೆದ ಐದು ತಿಂಗಳ ಹಿಂದೆ ಆರಂಭ ಮಾಡಿರುವ ಈ ಬ್ಯಾಂಕ್ . ವಾರದಲ್ಲಿ ಸೋಮವಾರ ಹಾಗೂ ಗುರುವಾರ ಎರಡು ದಿನ ಮಾತ್ರ ಕಾರ್ಯ ನಿರ್ವಹಿಸುತ್ತದೆ, ವಾರಕ್ಕೆ ಒಂದು ಸಾವಿರದಿಂದ ಒಂದೂವರೆ ಸಾವಿರ ರೂಪಾಯಿವರೆಗೆ ವ್ಯವಹಾರ ನಡೆಯುತ್ತದೆ. ಇನ್ನು ಇದಕ್ಕೆ ಮ್ಯಾನೇಜರ್​,ಕ್ಯಾಶಿಯರ್​ ಸೇರಿದಂತೆ ವಿವಿಧ ಅಧಿಕಾರಿಗಳು ಕೂಡ ಇದ್ದಾರೆ.

8 ನೇ ತರಗತಿ ವಿದ್ಯಾರ್ಥಿನಿ ಪವಿತ್ರಾ ಬಡಿಗೇರ್ ಮ್ಯಾನೇಜರ್  ಹಾಗೂ 7 ನೇ ತರಗತಿಯ ಯಶವಂತ ಕರಿಯಮ್ಮನವರ್​  ಕ್ಯಾಶಿಯರ್ ಅಗಿ ಬ್ಯಾಂಕ್ ನಡೆಸುತ್ತಾರೆ. ಇನ್ನು ನೂಡಲ್ ಅಧಿಕಾರಿಯಾಗಿ ಶಾಲೆಯ ಸಹ ಶಿಕ್ಷಕಿ ಆಗಿರುವ ಶೋಭಾ ಬಡಿಗೇರ್ ನಿರ್ವಹಣೆ ಮಾಡುವ ಈ ಬ್ಯಾಂಕ್​ನಲ್ಲಿ ಕಳೆದ ಐದು ತಿಂಗಳಿನಿಂದ 50 ಸಾವಿರ ರೂಪಾಯಿವರೆಗೆ ವ್ಯವಹಾರ ಮಾಡಲಾಗಿದ್ದು, 8 ಸಾವಿರ ರೂಪಾಯಿ ಹಣ ಉಳಿತಾಯವಿದೆ.

ಇದನ್ನೂ ಓದಿ: Devadristi App: ಕಣ್ಣಿಲ್ಲದವರಿಗೆ “ದೇವದೃಷ್ಟಿ ಆ್ಯಪ್” ದಾರಿದೀಪ, ದಿವ್ಯಾಂಗರ ಬಾಳಿಗೆ ಬೆಳಕಾದ ವಿದ್ಯಾರ್ಥಿಗಳು

ಬ್ಯಾಂಕ್ ಎಂದರೆ ಎನು ಎಂಬುದರ ಬಗ್ಗೆ ಬಾಯಿ ಮಾತಿನಲ್ಲಿ ಪ್ರತಿ ಶಾಲೆಯಲ್ಲಿ ವಿವರಣೆ ನೀಡುತ್ತಾರೆ, ಆದರೆ ಈ ಶಾಲೆಯಲ್ಲಿ ಸ್ವತಃ ವಿದ್ಯಾರ್ಥಿಗಳೆ, ವಿದ್ಯಾರ್ಥಿಗಳಿಗಾಯೇ ಬ್ಯಾಂಕ್ ನಡೆಸಿಕೊಂಡು ಹೋಗುತ್ತಿರುವುದು ನಿಜಕ್ಕೂ ಮಾದರಿ ವಿಷಯವಾಗಿದೆ. ಅಲ್ಲದೆ ಕಳೆದ ತಿಂಗಳು ಇದೆ ಬ್ಯಾಂಕಿನಲ್ಲಿ ಪ್ರತಿ ವಾರ ಹಣ ಉಳಿತಾಯ ಮಾಡಿ ಪ್ರವಾಸಕ್ಕೂ ಹೋಗಿ ಬಂದಿದ್ದಾರೆ.

ವರದಿ: ಸೂರಜ್ ಉತ್ತೂರೆ ಟಿವಿ9 ಬೆಂಗಳೂರು

ಇನ್ನಷ್ಟು ರಾಜ್ಯಸುದ್ದಿಗಳಿಗಾಗಿ ಇಲ್ಲಿ ಕ್ಲಿಕ ಮಾಡಿ

Published On - 12:32 pm, Thu, 12 January 23

Follow Us
ಮರದ ಕೊಂಬೆ ಬಿದ್ದು ಖಾಸಗಿ ಬಸ್ ಜಖಂ; ಚಾಲಕ, ಕ್ಲೀನರ್ ಜಸ್ಟ್ ಮಿಸ್!
ಮರದ ಕೊಂಬೆ ಬಿದ್ದು ಖಾಸಗಿ ಬಸ್ ಜಖಂ; ಚಾಲಕ, ಕ್ಲೀನರ್ ಜಸ್ಟ್ ಮಿಸ್!
ಕನ್ನಡ ಬಾವುಟಕ್ಕೆ ಅಪಮಾನ: ನಮ್ಮ ಮೆಟ್ರೋ ಸಿಬ್ಬಂದಿ ವಿರುದ್ಧ ಆಕ್ರೋಶ
ಕನ್ನಡ ಬಾವುಟಕ್ಕೆ ಅಪಮಾನ: ನಮ್ಮ ಮೆಟ್ರೋ ಸಿಬ್ಬಂದಿ ವಿರುದ್ಧ ಆಕ್ರೋಶ
ಕೊಳ್ಳೇಗಾಲದಲ್ಲಿ ಪ್ರಿಂಟಿಂಗ್ ಪ್ರೆಸ್‌ಗೆ ನುಗ್ಗಿದ ಬೃಹತ್ ಗಾತ್ರದ ಉಡ
ಕೊಳ್ಳೇಗಾಲದಲ್ಲಿ ಪ್ರಿಂಟಿಂಗ್ ಪ್ರೆಸ್‌ಗೆ ನುಗ್ಗಿದ ಬೃಹತ್ ಗಾತ್ರದ ಉಡ
‘ಆ ರೀತಿ ಗಿಮಿಕ್ ಯಾರೂ ಮಾಡಲ್ಲ’; ವಿನೋದ್ ಆರೋಗ್ಯದ ಬಗ್ಗೆ ಸ್ಪಷ್ಟನೆ
‘ಆ ರೀತಿ ಗಿಮಿಕ್ ಯಾರೂ ಮಾಡಲ್ಲ’; ವಿನೋದ್ ಆರೋಗ್ಯದ ಬಗ್ಗೆ ಸ್ಪಷ್ಟನೆ
ಇಂದು ಈ ರಾಶಿಯವರಿಗೆ ಧನಯೋಗ!
ಇಂದು ಈ ರಾಶಿಯವರಿಗೆ ಧನಯೋಗ!
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ