AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Haveri: ಶಾಲೆಯಲ್ಲೇ ಬ್ಯಾಂಕ್​ ಆರಂಭಿಸಿ 50 ಸಾವಿರ ರೂಪಾಯಿವರೆಗೆ ವ್ಯವಹಾರ ಮಾಡಿದ ವಿದ್ಯಾರ್ಥಿಗಳು

ಬ್ಯಾಂಕ್ ಎಂಬುವುದರ ಬಗ್ಗೆ ತಿಳಿಯುವ ವಯಸ್ಸಿನಲ್ಲಿಯೇ ವಿದ್ಯಾರ್ಥಿಗಳು ಶಾಲೆಯಲ್ಲಿ ಬ್ಯಾಂಕ್​ನ್ನು ಆರಂಭಿಸಿದ್ದು, 50 ಸಾವಿರ ರೂಪಾಯಿವರೆಗೆ ವ್ಯವಹಾರ ಕೂಡ ಮಾಡಿದ್ದಾರೆ.

Haveri: ಶಾಲೆಯಲ್ಲೇ ಬ್ಯಾಂಕ್​ ಆರಂಭಿಸಿ 50 ಸಾವಿರ ರೂಪಾಯಿವರೆಗೆ ವ್ಯವಹಾರ ಮಾಡಿದ ವಿದ್ಯಾರ್ಥಿಗಳು
ಶಾಲೆಯಲ್ಲಿ ಬ್ಯಾಂಕ್​ ಆರಂಭಿಸಿದ ವಿದ್ಯಾರ್ಥಿಗಳು
TV9 Web
| Edited By: |

Updated on:Jan 12, 2023 | 12:34 PM

Share

ಹಾವೇರಿ: ಜಿಲ್ಲೆಯ ಬಮ್ಮನಕಟ್ಟಿ ಗ್ರಾಮದ ಸರ್ಕಾರಿ ಶಾಲೆಯಲ್ಲಿ ವಿದ್ಯಾರ್ಥಿಗಳು ಸೇರಿ ಬ್ಯಾಂಕ್​ನ್ನ ಆರಂಭ ಮಾಡಿದ್ದಾರೆ. ಕಳೆದ ಐದು ತಿಂಗಳ ಹಿಂದೆ ಆರಂಭ ಮಾಡಿರುವ ಈ ಬ್ಯಾಂಕ್ . ವಾರದಲ್ಲಿ ಸೋಮವಾರ ಹಾಗೂ ಗುರುವಾರ ಎರಡು ದಿನ ಮಾತ್ರ ಕಾರ್ಯ ನಿರ್ವಹಿಸುತ್ತದೆ, ವಾರಕ್ಕೆ ಒಂದು ಸಾವಿರದಿಂದ ಒಂದೂವರೆ ಸಾವಿರ ರೂಪಾಯಿವರೆಗೆ ವ್ಯವಹಾರ ನಡೆಯುತ್ತದೆ. ಇನ್ನು ಇದಕ್ಕೆ ಮ್ಯಾನೇಜರ್​,ಕ್ಯಾಶಿಯರ್​ ಸೇರಿದಂತೆ ವಿವಿಧ ಅಧಿಕಾರಿಗಳು ಕೂಡ ಇದ್ದಾರೆ.

8 ನೇ ತರಗತಿ ವಿದ್ಯಾರ್ಥಿನಿ ಪವಿತ್ರಾ ಬಡಿಗೇರ್ ಮ್ಯಾನೇಜರ್  ಹಾಗೂ 7 ನೇ ತರಗತಿಯ ಯಶವಂತ ಕರಿಯಮ್ಮನವರ್​  ಕ್ಯಾಶಿಯರ್ ಅಗಿ ಬ್ಯಾಂಕ್ ನಡೆಸುತ್ತಾರೆ. ಇನ್ನು ನೂಡಲ್ ಅಧಿಕಾರಿಯಾಗಿ ಶಾಲೆಯ ಸಹ ಶಿಕ್ಷಕಿ ಆಗಿರುವ ಶೋಭಾ ಬಡಿಗೇರ್ ನಿರ್ವಹಣೆ ಮಾಡುವ ಈ ಬ್ಯಾಂಕ್​ನಲ್ಲಿ ಕಳೆದ ಐದು ತಿಂಗಳಿನಿಂದ 50 ಸಾವಿರ ರೂಪಾಯಿವರೆಗೆ ವ್ಯವಹಾರ ಮಾಡಲಾಗಿದ್ದು, 8 ಸಾವಿರ ರೂಪಾಯಿ ಹಣ ಉಳಿತಾಯವಿದೆ.

ಇದನ್ನೂ ಓದಿ: Devadristi App: ಕಣ್ಣಿಲ್ಲದವರಿಗೆ “ದೇವದೃಷ್ಟಿ ಆ್ಯಪ್” ದಾರಿದೀಪ, ದಿವ್ಯಾಂಗರ ಬಾಳಿಗೆ ಬೆಳಕಾದ ವಿದ್ಯಾರ್ಥಿಗಳು

ಬ್ಯಾಂಕ್ ಎಂದರೆ ಎನು ಎಂಬುದರ ಬಗ್ಗೆ ಬಾಯಿ ಮಾತಿನಲ್ಲಿ ಪ್ರತಿ ಶಾಲೆಯಲ್ಲಿ ವಿವರಣೆ ನೀಡುತ್ತಾರೆ, ಆದರೆ ಈ ಶಾಲೆಯಲ್ಲಿ ಸ್ವತಃ ವಿದ್ಯಾರ್ಥಿಗಳೆ, ವಿದ್ಯಾರ್ಥಿಗಳಿಗಾಯೇ ಬ್ಯಾಂಕ್ ನಡೆಸಿಕೊಂಡು ಹೋಗುತ್ತಿರುವುದು ನಿಜಕ್ಕೂ ಮಾದರಿ ವಿಷಯವಾಗಿದೆ. ಅಲ್ಲದೆ ಕಳೆದ ತಿಂಗಳು ಇದೆ ಬ್ಯಾಂಕಿನಲ್ಲಿ ಪ್ರತಿ ವಾರ ಹಣ ಉಳಿತಾಯ ಮಾಡಿ ಪ್ರವಾಸಕ್ಕೂ ಹೋಗಿ ಬಂದಿದ್ದಾರೆ.

ವರದಿ: ಸೂರಜ್ ಉತ್ತೂರೆ ಟಿವಿ9 ಬೆಂಗಳೂರು

ಇನ್ನಷ್ಟು ರಾಜ್ಯಸುದ್ದಿಗಳಿಗಾಗಿ ಇಲ್ಲಿ ಕ್ಲಿಕ ಮಾಡಿ

Published On - 12:32 pm, Thu, 12 January 23

Follow Us
ರೇಷ್ಮೆ ಸೀರೆ ಉಟ್ಟು ಬಂದ ನೋರಾ ಫತೇಹಿ, ಹೇಳಿದ್ದೇನು? ವಿಡಿಯೋ ನೋಡಿ
ರೇಷ್ಮೆ ಸೀರೆ ಉಟ್ಟು ಬಂದ ನೋರಾ ಫತೇಹಿ, ಹೇಳಿದ್ದೇನು? ವಿಡಿಯೋ ನೋಡಿ
ನೋರಾ ಫತೇಹಿ ಬಗ್ಗೆ ನಟಿ ರಕ್ಷಿತಾ ಮಾತು: ವಿಡಿಯೋ ನೋಡಿ
ನೋರಾ ಫತೇಹಿ ಬಗ್ಗೆ ನಟಿ ರಕ್ಷಿತಾ ಮಾತು: ವಿಡಿಯೋ ನೋಡಿ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ತಂದೆಯ ಅಂತ್ಯಸಂಸ್ಕಾರ ನೆರವೇರಿಸಿ ಲಿಂಗಸಮಾನತೆಯ ಸಂದೇಶ ಸಾರಿದ ಸಹೋದರಿಯರು
ತಂದೆಯ ಅಂತ್ಯಸಂಸ್ಕಾರ ನೆರವೇರಿಸಿ ಲಿಂಗಸಮಾನತೆಯ ಸಂದೇಶ ಸಾರಿದ ಸಹೋದರಿಯರು
ಮನೆಯ ಅಂಗಳದಲ್ಲಿ ಮಲಗಿದ್ದ ವೃದ್ಧೆಗೆ ಕಡಿದೇ ಬಿಡ್ತು ಹಾವು!
ಮನೆಯ ಅಂಗಳದಲ್ಲಿ ಮಲಗಿದ್ದ ವೃದ್ಧೆಗೆ ಕಡಿದೇ ಬಿಡ್ತು ಹಾವು!