AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗ್ಯಾಂಗ್ ರೇಪ್ ಆಗಿದೆ ಎಂದು ಪೊಲೀಸರನ್ನೇ ಬೇಸ್ತು ಬೀಳಿಸಿದ ಮಹಿಳೆ! ನಿಜಕ್ಕೂ ನಡೆದಿದ್ದೇನು?

ಸಾಲದ ವಿಚಾರಕ್ಕೆ ನಡೆದ ಗಲಾಟೆಗೆ ಮಹಿಳೆ ಅತ್ಯಾಚಾರದ ಕಥೆಕಟ್ಟಿದ್ದ ಘಟನೆಯೊಂದು ಹಾವೇರಿ ಜಿಲ್ಲೆಯ ಬ್ಯಾಡಗಿ ಪಟ್ಟಣದ ಬೆಟ್ಟದ ಮಲ್ಲೇಶ್ವರ ನಗರದಲ್ಲಿ ನಡೆದಿದೆ. ಮಹಿಳೆ ಸೃಷ್ಟಿಸಿದ ಹೈಡ್ರಾಮಾದಿಂದ ಅನುಮಾನಗೊಂಡ ಪೊಲೀಸರು ತೀವ್ರ ವಿಚಾರಣೆ ಮಾಡಿದಾಗ ಅಸಲಿ ಸತ್ಯ ಬಾಯ್ಬಿಟ್ಟಿದ್ದಾರೆ. ಆ ಮೂಲಕ ಬ್ಯಾಡಗಿ ಠಾಣೆ ಪೊಲೀಸರು ನಿರಾಳರಾಗಿದ್ದಾರೆ.

ಗ್ಯಾಂಗ್ ರೇಪ್ ಆಗಿದೆ ಎಂದು ಪೊಲೀಸರನ್ನೇ ಬೇಸ್ತು ಬೀಳಿಸಿದ ಮಹಿಳೆ! ನಿಜಕ್ಕೂ ನಡೆದಿದ್ದೇನು?
ಮಹಿಳೆ ಫೀರಾಂಬಿ
ಗಂಗಾಧರ​ ಬ. ಸಾಬೋಜಿ
|

Updated on:Apr 17, 2025 | 3:11 PM

Share

ಹಾವೇರಿ, ಏಪ್ರಿಲ್​ 17: ಸಾಲದ ವಿಚಾರಕ್ಕೆ ನಡೆದ ಗಲಾಟೆಗೆ ಓರ್ವ ಮಹಿಳೆ (woman) ಅತ್ಯಾಚಾರದ ಕಥೆಕಟ್ಟಿ ಹೈಡ್ರಾಮಾ ಸೃಷ್ಟಿಸಿದ್ದ ಘಟನೆ ಜಿಲ್ಲೆಯ ಬ್ಯಾಡಗಿ (Byadagi) ಪಟ್ಟಣದ ಬೆಟ್ಟದ ಮಲ್ಲೇಶ್ವರ ನಗರದಲ್ಲಿ ನಡೆದಿದೆ. ಬೆಳ್ಳಂಬೆಳಗ್ಗೆ ಪೊಲೀಸರ ಬಳಿ ಬಂದಿದ್ದ ಗಾಯಗೊಂಡಿದ್ದ ಮಹಿಳೆ ಫೀರಾಂಬಿ, ನನ್ನ ಮೇಲೆ ಸಾಮೂಹಿಕ ಅತ್ಯಾಚಾರವಾಗಿದೆ ಎಂದು ಆರೋಪಿಸಿದ್ದರು. ಆದರೆ ಪೊಲೀಸರು ತೀವ್ರ ವಿಚಾರಣೆಗೆ ಒಳಪಡಿಸಿದಾಗ ಅದು ಸುಳ್ಳು ಎಂಬುದು ಪತ್ತೆ ಆಗಿದೆ.

ಬ್ಯಾಡಗಿ ಪಟ್ಟಣದ ಬೆಟ್ಟದ ಮಲ್ಲೇಶ್ವರ ನಗರದ ನಿವಾಸಿ ಫೀರಾಂಬಿ, ಅತ್ಯಾಚಾರದ ಕಥೆಕಟ್ಟಿ ಪೊಲೀಸರಿಗೆ ಟೆನ್ಷನ್​​ ಕೊಟ್ಟಿದ್ದರು. ತನ್ನ ಮೇಲೆ ಸಾಮೂಹಿಕ ಅತ್ಯಾಚಾರವಾಗಿದೆ ಎಂದು ಆರೋಪಿಸಿದ್ದರು. ಅವರ ಮುಖ, ಕುತ್ತಿಗೆ ಭಾಗದಲ್ಲಿ ಆಗಿದ್ದ ಗಾಯವನ್ನು ಕಂಡ ಪೊಲೀಸರು, ಫೀರಾಂಬಿ ಹೇಳಿಕೆಯಂತೆ ತನಿಖೆ ಆರಂಭಿಸಿದ್ದರು.

ಇದನ್ನೂ ಓದಿ: ಕರ್ನಾಟಕ ಪ್ರಯಾಣಿಕರಿಗೆ ಶುಭ ಸುದ್ದಿ ನೀಡಿದ ರೈಲ್ವೆ: ಈ ನಿಲ್ದಾಣದಲ್ಲಿ ವಂದೇ ಭಾರತ್ ನಿಲುಗಡೆಗೆ ಆದೇಶ

ಬಳಿಕ ಮಹಿಳೆಯನ್ನು ಹಾವೇರಿ ಜಿಲ್ಲಾಸ್ಪತ್ರೆಗೆ ದಾಖಲಿಸಿದ ಪೊಲೀಸರು, ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದರು. ಇದೇ ವೇಳೆ ಮಾಧ್ಯಮಗಳ ಬಳಿಯೂ ತನ್ನ ಮೇಲೆ ಅತ್ಯಾಚಾರ ಆಗಿದೆ ಎಂದು ಫೀರಾಂಬಿ ಹೇಳಿದ್ದಾರೆ. ಆದರೆ ಅನುಮಾನಗೊಂಡ ಪೊಲೀಸರು ತೀವ್ರ ವಿಚಾರಣೆಗೆ ಒಳಪಡಿಸಿದಾಗ ಮಹಿಳೆಯ ಕಳ್ಳಾಟ ಬಯಲಾಗಿದೆ.

ವಿಚಾರಣೆ ವೇಳೆ ಫೀರಾಂಬಿ, ಯಾವುದೇ ಗ್ಯಾಂಗ್​ರೇಪ್ ಆಗಿಲ್ಲ ಎಂದು ಹೇಳಿದ್ದಾರೆ. ಸಾಲದ ವಿಚಾರಕ್ಕೆ ಫರಿದಾಬಾನು ಹಾಗೂ ಗುಡ್ಡಪ್ಪ ಎಂಬುವರರ ಸೊಸೆ ಜೊತೆ ಜಗಳವಾಗಿದೆ. ಈ ವೇಳೆ ನನ್ನ ಮೇಲೆ ಹಲ್ಲೆ ನಡೆಸಲಾಗಿತ್ತು. ಹೀಗಾಗಿ ನಾನು ಅತ್ಯಾಚಾರ ಆಗಿದೆ ಎಂದು ಕಥೆ ಕಟ್ಟಿದ್ದಾಗಿ ಹೇಳಿದ್ದಾರೆ. ಸದ್ಯ ಮಹಿಳೆ ಸತ್ಯ ಬಾಯ್ಬಿಟ್ಟ ಕಾರಣ ಬ್ಯಾಡಗಿ ಠಾಣೆ ಪೊಲೀಸರು ನಿರಾಳರಾಗಿದ್ದಾರೆ.

ಪ್ರಕರಣಕ್ಕೆ ಹೊಸ ಟ್ವಿಸ್ಟ್

ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಮಹಿಳೆಯನ್ನು ಭೇಟಿ ಮಾಡಿರುವ ಬ್ಯಾಡಗಿ ಮಾಜಿ ಶಾಸಕ ವಿರೂಪಾಕ್ಷಪ್ಪ ಬಳ್ಳಾರಿ ಸಾಂತ್ವನ ಹೇಳಿದ್ದಾರೆ. ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಗ್ಯಾಂಗ್ ರೇಪ್ ನಡೆದಿಲ್ಲ ಎಂದು ಹೇಳುವಂತೆ ಮಹಿಳೆಗೆ ಪೊಲೀಸರು ಒತ್ತಡ ಹಾಕಿದ್ದಾರೆ. ಪೊಲೀಸರಿಗೆ ರಾಜಕೀಯ ಒತ್ತಡ ಇದೆ. ತಮ್ಮ ಮೇಲೆ ಎರಡು ಬಾರಿ ಅತ್ಯಾಚಾರ ಆಗಿರುವುದಾಗಿ ಹೇಳಿದ್ದಾರೆ. ಖುದ್ದು ಮಹಿಳೆ ನನ್ನ ಬಳಿ ಹೇಳಿದ ವಿಡಿಯೋ ಇದೆ ಎಂದು ವಿರೂಪಾಕ್ಷಪ್ಪ ಬಳ್ಳಾರಿ ಹೇಳಿದ್ದಾರೆ.

ಮಹಿಳೆ ಮೇಲೆ ಗ್ಯಾಂಗ್ ರೇಪ್ ಆಗಿಲ್ಲ: ಹಾವೇರಿ ಎಸ್​ಪಿ ಅಂಶುಕುಮಾರ್

ಘಟನೆ ಬಗ್ಗೆ ಹಾವೇರಿ ಎಸ್​ಪಿ ಅಂಶುಕುಮಾರ್ ಪ್ರತಿಕ್ರಿಯಿಸಿದ್ದು, ಕೆಲವು ಮಾಧ್ಯಮಗಳಲ್ಲಿ ಮಹಿಳೆ ಮೇಲೆ ಗ್ಯಾಂಗ್ ರೇಪ್ ಆಗಿದೆ ಎಂಬ ವರದಿ ಪ್ರಸಾರ ಆಗಿದೆ. ಮಹಿಳೆ ಮೇಲೆ ಗ್ಯಾಂಗ್ ರೇಪ್ ಆಗಿಲ್ಲ. ಯಾವುದೇ ಲೈಂಗಿಕ ದೌರ್ಜನ್ಯ ಕೂಡ ಆಗಿಲ್ಲ. ಇದು ಅವರ ವೈಯಕ್ತಿಕ ವಿಚಾರಗಳಿಗೆ ಜಗಳ ಆಗಿದೆ ಎಂದಿದ್ದಾರೆ.

ಇದನ್ನೂ ಓದಿ: ಹಾಲು ಉತ್ಪಾದಕರ ಆಕ್ರೋಶಕ್ಕೆ ಮಣಿದ ಹಾಲು ಒಕ್ಕೂಟ: ಲೀಟರ್​ ಹಾಲಿನ ದರ ಏರಿಕೆ

ಫರಿದಾಬಾನು, ನಬಿವುಲ್ಲಾ ಹಾಗೂ ಓರ್ವ ಮಹಿಳೆಯಿಂದ ಹಲ್ಲೆ ಮಾಡಲಾಗಿದೆ. ನಮ್ಮ ಮಹಿಳಾ ಪೊಲೀಸ್ ಅಧಿಕಾರಿಗಳು ವಿಸ್ತಾರವಾಗಿ ವಿಚಾರಣೆ ಮಾಡಿದ್ದರು. ಈ ವೇಳೆ ತಮ್ಮ ಮೇಲೆ ಗ್ಯಾಂಗ್ ರೇಪ್ ಆಗಿಲ್ಲ ಎಂದು ಮಹಿಳೆ ಹೇಳಿದ್ದಾರೆ. ಈ ಬಗ್ಗೆ ಹೆಚ್ಚಿನ ತನಿಖೆ ನಡೆದಿದೆ. ವೈದ್ಯಕೀಯ ತಪಾಸಣೆ ಕೂಡ ಮಾಡಲಾಗಿದೆ. ವರದಿ ಬರುವುದು ಬಾಕಿಯಿದೆ. ವರದಿ ಆಧರಿಸಿ ಹೆಚ್ಚಿನ ತನಿಖೆ ನಡೆಸುತ್ತೇವೆ ಎಂದಿದ್ದಾರೆ.

ವರದಿ: ಅಣ್ಣಪ್ಪ ಬಾರ್ಕಿ

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 11:19 am, Thu, 17 April 25

Follow Us
Gangadhar Saboji
Gangadhar Saboji

ಬಾಗಲಕೋಟೆ ಜಿಲ್ಲೆಯ ರಬಕವಿ-ಬನಹಟ್ಟಿ ತಾಲೂಕಿನ ರಬಕವಿ ನನ್ನೂರು. ಡಿಗ್ರಿ ಬಳಿಕ ಮನಸ್ಸು ವಾಲಿದ್ದು ಮಾಧ್ಯಮ ಕ್ಷೇತ್ರದ ಕಡೆ. ಹಾಗಾಗಿ ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಎಂಎ ಪತ್ರಿಕೋದ್ಯಮ ಪದವಿ ಮಾಡಿದೆ. ಆ ಸಂದರ್ಭದಲ್ಲಿಯೇ ಲೋಕಲ್ ಚಾನೆಲ್​ನಲ್ಲಿ ಸುದ್ದಿ ಬರವಣಿಗೆ, ಆ್ಯಂಕರಿಂಗ್​, ವೈಯಿಸ್​ ಓವರ್​, ಎಡಿಟಿಂಗ್​ ಕಲಿಕೆ. ಬಳಿಕ ಟಿವಿ6 ಸುದ್ದಿ ವಾಹಿನಿಯಲ್ಲಿ ಇಂಟರ್ನ್‌ಶಿಪ್. ನಂತರ ದಾವಣಗೆರೆ ವಿಶ್ವವಿದ್ಯಾಲಯದಲ್ಲಿ ಬೋಧನಾ ಸಹಾಯಕನಾಗಿ ನನ್ನ ಜ್ಞಾನವನ್ನು ಇತತರಿಗೆ ಹಂಚುವ ಕೆಲಸ. ಇದೀಗ ‘ಉತ್ತಮ ಸಮಾಜಕ್ಕಾಗಿ’ ನನ್ನ ಕಾಯಕ. ಓದು, ಬರವಣಿಗೆ, ಸಿನಿಮಾ ನನ್ನ ಆಸಕ್ತಿ.

Read More
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು