AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಹಿಳೆಯರೇ ಡ್ರಾಪ್ ಕೇಳುವ ಮುನ್ನ ಹುಷಾರ್: ಸಹಾಯ ಮಾಡುವ ನೆಪದಲ್ಲಿ ಹೀಗಾ ಮಾಡೋದು?

ಹಾವೇರಿ ಜಿಲ್ಲೆಯ ಬ್ಯಾಡಗಿ ತಾಲ್ಲೂಕಿನ ತಿರ್ಲಾಪುರ ಕ್ರಾಸ್ ಬಳಿ ಅಘಾತಕಾರಿ ಘಟನೆ ನಡೆದಿದೆ. ಬೈಕ್​ ಸವಾರನ ಬಳಿ ಡ್ರಾಪ್​ ಕೇಳಿದ ಮಹಿಳೆಯ 29 ಗ್ರಾಂ ಮಾಂಗಲ್ಯ ಸರವನ್ನು ಕಳ್ಳ ಕಿತ್ತುಕೊಂಡು ಪರಾರಿಯಾಗಿದ್ದಾನೆ. ಸುಮಾರು ಮೂರು ಲಕ್ಷ ಮೌಲ್ಯದ ಚಿನ್ನಾಭರಣ ಕಳವಾಗಿದೆ. ಕಾಗಿನೆಲೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮಹಿಳೆಯರೇ ಡ್ರಾಪ್ ಕೇಳುವ ಮುನ್ನ ಹುಷಾರ್: ಸಹಾಯ ಮಾಡುವ ನೆಪದಲ್ಲಿ ಹೀಗಾ ಮಾಡೋದು?
ಪ್ರಾತಿನಿಧಿಕ ಚಿತ್ರ
ಗಂಗಾಧರ​ ಬ. ಸಾಬೋಜಿ
|

Updated on: Dec 29, 2025 | 6:27 PM

Share

ಹಾವೇರಿ, ಡಿಸೆಂಬರ್​ 29: ಡ್ರಾಪ್​ ಕೇಳಿದ್ದ ಮಹಿಳೆಯ ಮೂರು ಲಕ್ಷ ಮೌಲ್ಯದ ಚಿನ್ನದ ಸರವನ್ನು (Chain Snatching) ಖದೀಮ ಎಗರಿಸಿದ ಘಟನೆ ಹಾವೇರಿ (Haveri) ಜಿಲ್ಲೆಯ ಬ್ಯಾಡಗಿ ತಾಲೂಕಿನ ತಿರ್ಲಾಪುರ ಕ್ರಾಸ್​​​ ಬಳಿ ನಡೆದಿದೆ. ರತ್ನಾ ಬಣಕಾರ್​​ ಸರ ಕಳೆದುಕೊಂಡ ಮಹಿಳೆ. 29 ಗ್ರಾಂ ಮಾಂಗಲ್ಯ ಸರ ಕಿತ್ತುಕೊಂಡು ಖದೀಮ ಪರಾರಿಯಾಗಿದ್ದಾನೆ. ಕಾಗಿನೆಲೆಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ನಡೆದದ್ದೇನು?

ರತ್ನಾ ಬಣಕಾರ್​​ ಅವರು ಬೈಕ್​​ಗೆ ಕೈ ಮಾಡಿ ಕುಮ್ಮೂರು ಕ್ರಾಸ್​ನಿಂದ ಗುಮ್ಮನಹಳ್ಳಿವರೆಗೆ ಡ್ರಾಪ್ ಕೇಳಿದ್ದಾರೆ. ಬೈಕ್ ಸವಾರ ಹತ್ತಿಸಿಕೊಂಡಿದ್ದಾನೆ. ಹಾವೇರಿ ಜಿಲ್ಲೆಯ ಬ್ಯಾಡಗಿ ತಾಲೂಕಿನ ತಿಪಲಾಪುರ ಕ್ರಾಸ್​​ ಬಳಿ ನಮ್ಮ ಸಂಬಂಧಿಕರು ಬರುತ್ತಿದ್ದಾನೆ ಅಂತಾ ರತ್ನಾ ಅವರನ್ನು ಇಳಿಸಿದ್ದಾನೆ. ಈ ವೇಳೆ ಮಹಿಳೆಯ ಚಿನ್ನದ ಸರ ಕಿತ್ತುಕೊಂಡು ಖದೀಮ ಪರಾರಿ ಆಗಿದ್ದಾನೆ.

ಬೆಂಗಳೂರಿನಲ್ಲಿ ಸರಣಿ ಕಳ್ಳತನ

ಬೆಂಗಳೂರಿನ ಹುಳಿಮಾವು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಭಾನುವಾರ ರಾತ್ರಿ ಸರಣಿ ಕಳ್ಳತನ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಹುಳಿಮಾವು 80 ಅಡಿ ರಸ್ತೆಯ ಪ್ಯಾರಮೌಂಟ್ ಅಪಾರ್ಟ್ಮೆಂಟ್ ಮುಂಭಾಗದ ಮಳಿಗೆಗಳಲ್ಲಿ ಸರಣಿ ಕಳ್ಳತನ ನಡೆದಿದೆ. ತಾರಸಿ ಶೀಟ್ ಮುರಿದು ಒಳ ನುಗ್ಗಿರುವ ಕಳ್ಳ ಮೊದಲು ಎಸ್​.ಎಸ್ ಲಿಕ್ಕರ್ ಶಾಪ್​ನಲ್ಲಿ 3 ಸಾವಿರ ನಗದು ಮದ್ಯದ ಬಾಟಲಿ ಕದ್ದಿದ್ದಾರೆ.

ಇದನ್ನೂ ಓದಿ: ಗೋಲ್ಡ್ ಇಟ್ಟಿಲ್ಲ, ಲೋನ್ ಪಡೆದಿಲ್ಲ: ಮತ್ತೊಂದು ಕೆನರಾ ಬ್ಯಾಂಕಿನಿಂದ ಮಹಾ ಮೋಸ

ಕರ್ನಾಟಕ ಪ್ಲೈವುಡ್ ಮತ್ತು ಹಾರ್ಡ್ ವೇರ್ ಶಾಪ್​​ನಲ್ಲಿ 50 ಸಾವಿರ ನಗದು ಎಗರಿಸಿದ್ದಾರೆ. ಪಕ್ಕದ ಆಟೋಮೊಬೈಲ್ ಶಾಪ್​​ನಲ್ಲಿ ಹತ್ತು ಸಾವಿರ ನಗದು ಕಳವು ಮಾಡಿ ಆರೋಪಿ ಎಸ್ಕೇಪ್ ಆಗಿದ್ದಾನೆ. ಸೋಮವಾರ ಬೆಳಗ್ಗೆ ಸಿಬ್ಬಂದಿಗಳು ಮಳಿಗೆ ಬಳಿ ಬಂದಾಗ ಕಳ್ಳತನ ಪ್ರಕರಣ ಬೆಳಕಿಗೆ ಬಂದಿದೆ. ಬಾರ್ ಮೇಲ್ವಿಚಾರಣೆ ತೆಗೆದು ಕಳ್ಳ ಒಳಗೆ ಎಂಟ್ರಿಯಾಗುತ್ತಿರುವ ದೃಶ್ಯ ಸಿಸಿಟಿವಿ ಕ್ಯಾಮಾರಾದಲ್ಲಿ ಸೆರೆಯಾಗಿದೆ. ಸರಣಿ ಕಳ್ಳತನ ಸಂಬಂಧ ಹುಳಿಮಾವು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
ಕಾರಿಗೆ ಡಿಕ್ಕಿ ಹೊಡೆದು 1.5 ಕಿ.ಮೀ ಎಳೆದೊಯ್ದ ಟ್ರಕ್
ಕಾರಿಗೆ ಡಿಕ್ಕಿ ಹೊಡೆದು 1.5 ಕಿ.ಮೀ ಎಳೆದೊಯ್ದ ಟ್ರಕ್
2ನೇ ಇನ್ನಿಂಗ್ಸ್​ಗೂ ಮುನ್ನ ಮಾರಿಕಾಂಬಾ ದರ್ಶನ ಪಡೆದ ಅನಂತ್ ಕುಮಾರ್ ಹೆಗಡೆ
2ನೇ ಇನ್ನಿಂಗ್ಸ್​ಗೂ ಮುನ್ನ ಮಾರಿಕಾಂಬಾ ದರ್ಶನ ಪಡೆದ ಅನಂತ್ ಕುಮಾರ್ ಹೆಗಡೆ
ಕುಸ್ತಿ ಕಾಳಗದಲ್ಲಿ ದಾವಣಗೆರೆ ಜನರ ಗಮನ ಸೆಳೆದ ಇರಾನ್ ಪೈಲ್ವಾನ್ ಮಿರ್ಜಾ
ಕುಸ್ತಿ ಕಾಳಗದಲ್ಲಿ ದಾವಣಗೆರೆ ಜನರ ಗಮನ ಸೆಳೆದ ಇರಾನ್ ಪೈಲ್ವಾನ್ ಮಿರ್ಜಾ
ಆನೇಕಲ್: ರೈಲು ಹಳಿಯ ಮೇಲೆಯೇ ಕೆಟ್ಟು ನಿಂತ BMTC ಬಸ್, ಆಮೇಲೇನಾಯ್ತು ನೋಡಿ
ಆನೇಕಲ್: ರೈಲು ಹಳಿಯ ಮೇಲೆಯೇ ಕೆಟ್ಟು ನಿಂತ BMTC ಬಸ್, ಆಮೇಲೇನಾಯ್ತು ನೋಡಿ
ತಮ್ಮ ವಿವಾಹದ ಬಳಿಕ ಮತ್ತೊದು ಮದುವೆಗೆ ಹಾಜರಿ ಹಾಕಿದ ವಿಜಯ್-ರಶ್ಮಿಕಾ
ತಮ್ಮ ವಿವಾಹದ ಬಳಿಕ ಮತ್ತೊದು ಮದುವೆಗೆ ಹಾಜರಿ ಹಾಕಿದ ವಿಜಯ್-ರಶ್ಮಿಕಾ
ಬೆಂಗಳೂರು ಏರ್​ಪೋರ್ಟ್​ಗೂ ತಟ್ಟಿದ ಯುದ್ಧದ ಬಿಸಿ: 15 ವಿಮಾನಗಳ ಹಾರಾಟ ರದ್ದು
ಬೆಂಗಳೂರು ಏರ್​ಪೋರ್ಟ್​ಗೂ ತಟ್ಟಿದ ಯುದ್ಧದ ಬಿಸಿ: 15 ವಿಮಾನಗಳ ಹಾರಾಟ ರದ್ದು
ಮಂತ್ರಗಳನ್ನು ಹೇಳುವುದು ಜೀವನಕ್ಕೆ ಶುಭ, ಅಶುಭ ಎರೆಡೂ ಆಗುತ್ತೆ, ಅದು ಹೇಗೆ?
ಮಂತ್ರಗಳನ್ನು ಹೇಳುವುದು ಜೀವನಕ್ಕೆ ಶುಭ, ಅಶುಭ ಎರೆಡೂ ಆಗುತ್ತೆ, ಅದು ಹೇಗೆ?
ಈ ರಾಶಿಯವರು ಇಂದು ಮಾಡುವ ಎಲ್ಲ ಕಾರ್ಯಗಳು ಯಶಸ್ಸು ಕಾಣಲಿದೆ
ಈ ರಾಶಿಯವರು ಇಂದು ಮಾಡುವ ಎಲ್ಲ ಕಾರ್ಯಗಳು ಯಶಸ್ಸು ಕಾಣಲಿದೆ
ಮತ್ತೆ ವಿವಾದದ ಕಿಡಿ ಹೊತ್ತಿಸಿದ ಕನ್ಹೇರಿ ಸ್ವಾಮೀಜಿ , ಏನು ಹೇಳಿದ್ರು ಕೇಳಿ
ಮತ್ತೆ ವಿವಾದದ ಕಿಡಿ ಹೊತ್ತಿಸಿದ ಕನ್ಹೇರಿ ಸ್ವಾಮೀಜಿ , ಏನು ಹೇಳಿದ್ರು ಕೇಳಿ
‘ಪೆದ್ದಿ’ ಡಬ್ಬಿಂಗ್​​ನಲ್ಲಿ ನಿರ್ದೇಶಕನ ಕಾಲೆಳೆದ ರಾಮ್ ಚರಣ್: ವಿಡಿಯೋ
‘ಪೆದ್ದಿ’ ಡಬ್ಬಿಂಗ್​​ನಲ್ಲಿ ನಿರ್ದೇಶಕನ ಕಾಲೆಳೆದ ರಾಮ್ ಚರಣ್: ವಿಡಿಯೋ