AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಹಿಳೆಯರೇ ಡ್ರಾಪ್ ಕೇಳುವ ಮುನ್ನ ಹುಷಾರ್: ಸಹಾಯ ಮಾಡುವ ನೆಪದಲ್ಲಿ ಹೀಗಾ ಮಾಡೋದು?

ಹಾವೇರಿ ಜಿಲ್ಲೆಯ ಬ್ಯಾಡಗಿ ತಾಲ್ಲೂಕಿನ ತಿರ್ಲಾಪುರ ಕ್ರಾಸ್ ಬಳಿ ಅಘಾತಕಾರಿ ಘಟನೆ ನಡೆದಿದೆ. ಬೈಕ್​ ಸವಾರನ ಬಳಿ ಡ್ರಾಪ್​ ಕೇಳಿದ ಮಹಿಳೆಯ 29 ಗ್ರಾಂ ಮಾಂಗಲ್ಯ ಸರವನ್ನು ಕಳ್ಳ ಕಿತ್ತುಕೊಂಡು ಪರಾರಿಯಾಗಿದ್ದಾನೆ. ಸುಮಾರು ಮೂರು ಲಕ್ಷ ಮೌಲ್ಯದ ಚಿನ್ನಾಭರಣ ಕಳವಾಗಿದೆ. ಕಾಗಿನೆಲೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮಹಿಳೆಯರೇ ಡ್ರಾಪ್ ಕೇಳುವ ಮುನ್ನ ಹುಷಾರ್: ಸಹಾಯ ಮಾಡುವ ನೆಪದಲ್ಲಿ ಹೀಗಾ ಮಾಡೋದು?
ಪ್ರಾತಿನಿಧಿಕ ಚಿತ್ರ
ಗಂಗಾಧರ​ ಬ. ಸಾಬೋಜಿ
|

Updated on: Dec 29, 2025 | 6:27 PM

Share

ಹಾವೇರಿ, ಡಿಸೆಂಬರ್​ 29: ಡ್ರಾಪ್​ ಕೇಳಿದ್ದ ಮಹಿಳೆಯ ಮೂರು ಲಕ್ಷ ಮೌಲ್ಯದ ಚಿನ್ನದ ಸರವನ್ನು (Chain Snatching) ಖದೀಮ ಎಗರಿಸಿದ ಘಟನೆ ಹಾವೇರಿ (Haveri) ಜಿಲ್ಲೆಯ ಬ್ಯಾಡಗಿ ತಾಲೂಕಿನ ತಿರ್ಲಾಪುರ ಕ್ರಾಸ್​​​ ಬಳಿ ನಡೆದಿದೆ. ರತ್ನಾ ಬಣಕಾರ್​​ ಸರ ಕಳೆದುಕೊಂಡ ಮಹಿಳೆ. 29 ಗ್ರಾಂ ಮಾಂಗಲ್ಯ ಸರ ಕಿತ್ತುಕೊಂಡು ಖದೀಮ ಪರಾರಿಯಾಗಿದ್ದಾನೆ. ಕಾಗಿನೆಲೆಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ನಡೆದದ್ದೇನು?

ರತ್ನಾ ಬಣಕಾರ್​​ ಅವರು ಬೈಕ್​​ಗೆ ಕೈ ಮಾಡಿ ಕುಮ್ಮೂರು ಕ್ರಾಸ್​ನಿಂದ ಗುಮ್ಮನಹಳ್ಳಿವರೆಗೆ ಡ್ರಾಪ್ ಕೇಳಿದ್ದಾರೆ. ಬೈಕ್ ಸವಾರ ಹತ್ತಿಸಿಕೊಂಡಿದ್ದಾನೆ. ಹಾವೇರಿ ಜಿಲ್ಲೆಯ ಬ್ಯಾಡಗಿ ತಾಲೂಕಿನ ತಿಪಲಾಪುರ ಕ್ರಾಸ್​​ ಬಳಿ ನಮ್ಮ ಸಂಬಂಧಿಕರು ಬರುತ್ತಿದ್ದಾನೆ ಅಂತಾ ರತ್ನಾ ಅವರನ್ನು ಇಳಿಸಿದ್ದಾನೆ. ಈ ವೇಳೆ ಮಹಿಳೆಯ ಚಿನ್ನದ ಸರ ಕಿತ್ತುಕೊಂಡು ಖದೀಮ ಪರಾರಿ ಆಗಿದ್ದಾನೆ.

ಬೆಂಗಳೂರಿನಲ್ಲಿ ಸರಣಿ ಕಳ್ಳತನ

ಬೆಂಗಳೂರಿನ ಹುಳಿಮಾವು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಭಾನುವಾರ ರಾತ್ರಿ ಸರಣಿ ಕಳ್ಳತನ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಹುಳಿಮಾವು 80 ಅಡಿ ರಸ್ತೆಯ ಪ್ಯಾರಮೌಂಟ್ ಅಪಾರ್ಟ್ಮೆಂಟ್ ಮುಂಭಾಗದ ಮಳಿಗೆಗಳಲ್ಲಿ ಸರಣಿ ಕಳ್ಳತನ ನಡೆದಿದೆ. ತಾರಸಿ ಶೀಟ್ ಮುರಿದು ಒಳ ನುಗ್ಗಿರುವ ಕಳ್ಳ ಮೊದಲು ಎಸ್​.ಎಸ್ ಲಿಕ್ಕರ್ ಶಾಪ್​ನಲ್ಲಿ 3 ಸಾವಿರ ನಗದು ಮದ್ಯದ ಬಾಟಲಿ ಕದ್ದಿದ್ದಾರೆ.

ಇದನ್ನೂ ಓದಿ: ಗೋಲ್ಡ್ ಇಟ್ಟಿಲ್ಲ, ಲೋನ್ ಪಡೆದಿಲ್ಲ: ಮತ್ತೊಂದು ಕೆನರಾ ಬ್ಯಾಂಕಿನಿಂದ ಮಹಾ ಮೋಸ

ಕರ್ನಾಟಕ ಪ್ಲೈವುಡ್ ಮತ್ತು ಹಾರ್ಡ್ ವೇರ್ ಶಾಪ್​​ನಲ್ಲಿ 50 ಸಾವಿರ ನಗದು ಎಗರಿಸಿದ್ದಾರೆ. ಪಕ್ಕದ ಆಟೋಮೊಬೈಲ್ ಶಾಪ್​​ನಲ್ಲಿ ಹತ್ತು ಸಾವಿರ ನಗದು ಕಳವು ಮಾಡಿ ಆರೋಪಿ ಎಸ್ಕೇಪ್ ಆಗಿದ್ದಾನೆ. ಸೋಮವಾರ ಬೆಳಗ್ಗೆ ಸಿಬ್ಬಂದಿಗಳು ಮಳಿಗೆ ಬಳಿ ಬಂದಾಗ ಕಳ್ಳತನ ಪ್ರಕರಣ ಬೆಳಕಿಗೆ ಬಂದಿದೆ. ಬಾರ್ ಮೇಲ್ವಿಚಾರಣೆ ತೆಗೆದು ಕಳ್ಳ ಒಳಗೆ ಎಂಟ್ರಿಯಾಗುತ್ತಿರುವ ದೃಶ್ಯ ಸಿಸಿಟಿವಿ ಕ್ಯಾಮಾರಾದಲ್ಲಿ ಸೆರೆಯಾಗಿದೆ. ಸರಣಿ ಕಳ್ಳತನ ಸಂಬಂಧ ಹುಳಿಮಾವು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
ಮೇಷಕ್ಕೆ ಹೂಡಿಕೆಯಲ್ಲಿ ಲಾಭ, ವೃಷಭಕ್ಕೆ ಉದ್ಯೋಗದಲ್ಲಿ ಸ್ಥಾನ ಪಲ್ಲಟದ ಯೋಗ
ಮೇಷಕ್ಕೆ ಹೂಡಿಕೆಯಲ್ಲಿ ಲಾಭ, ವೃಷಭಕ್ಕೆ ಉದ್ಯೋಗದಲ್ಲಿ ಸ್ಥಾನ ಪಲ್ಲಟದ ಯೋಗ
ಕುಮಾರ್ ಬಂಗಾರಪ್ಪ ಹೊಗಳಿಕೆ ಮಾತು ಕೇಳಿ ತಬ್ಬಿಕೊಂಡ ರಾಗಿಣಿ ದ್ವಿವೇದಿ
ಕುಮಾರ್ ಬಂಗಾರಪ್ಪ ಹೊಗಳಿಕೆ ಮಾತು ಕೇಳಿ ತಬ್ಬಿಕೊಂಡ ರಾಗಿಣಿ ದ್ವಿವೇದಿ
ಕೊಲೆ ಆರೋಪಿಗಳ ಪರೇಡ್; ಪೊಲೀಸರೆದುರೇ ಹಂತಕರಿಗೆ ಚಪ್ಪಲಿಯಲ್ಲಿ ಹೊಡೆದ ಮಹಿಳೆ
ಕೊಲೆ ಆರೋಪಿಗಳ ಪರೇಡ್; ಪೊಲೀಸರೆದುರೇ ಹಂತಕರಿಗೆ ಚಪ್ಪಲಿಯಲ್ಲಿ ಹೊಡೆದ ಮಹಿಳೆ
ನಟಿ ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಷ್ಣ’; ಏನಿದರ ಕಥೆ?
ನಟಿ ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಷ್ಣ’; ಏನಿದರ ಕಥೆ?
ಬಸ್ ಮೇಲೆ ಬಿದ್ದ ಬೃಹತ್ ಮರ; ಯುಕೆಜಿ ಬಾಲಕಿ ಚಿರನ್ವಿ ಸಾವು
ಬಸ್ ಮೇಲೆ ಬಿದ್ದ ಬೃಹತ್ ಮರ; ಯುಕೆಜಿ ಬಾಲಕಿ ಚಿರನ್ವಿ ಸಾವು
'ಮೊಟ್ಟೆ ಹೊಡೆಯುವ ಸಂಸ್ಕೃತಿ ಶುರು ಮಾಡಿದ್ದೇ ಬಿಜೆಪಿಯವರು': ಹರಿಪ್ರಸಾದ್
'ಮೊಟ್ಟೆ ಹೊಡೆಯುವ ಸಂಸ್ಕೃತಿ ಶುರು ಮಾಡಿದ್ದೇ ಬಿಜೆಪಿಯವರು': ಹರಿಪ್ರಸಾದ್
‘ಮುಂಗಾರು ಮಳೆ’, ‘ಕೆಜಿಎಫ್’ ಸಿನಿಮಾಗಳ ಸ್ಮರಿಸಿದ ತೆಲುಗು ನಟ: ವಿಡಿಯೋ
‘ಮುಂಗಾರು ಮಳೆ’, ‘ಕೆಜಿಎಫ್’ ಸಿನಿಮಾಗಳ ಸ್ಮರಿಸಿದ ತೆಲುಗು ನಟ: ವಿಡಿಯೋ
ಪತ್ನಿಗೆ ಗೃಹಲಕ್ಷ್ಮಿ ಹಣ ಬಂದಿಲ್ಲ: ಪತಿ ಏಕಾಂಗಿಯಾಗಿ ಪ್ರತಿಭಟನೆ
ಪತ್ನಿಗೆ ಗೃಹಲಕ್ಷ್ಮಿ ಹಣ ಬಂದಿಲ್ಲ: ಪತಿ ಏಕಾಂಗಿಯಾಗಿ ಪ್ರತಿಭಟನೆ
‘ಬಿಜೆಪಿಗರ ಮೇಲೆ ಮೊಟ್ಟೆ ಎಸೆತ ಪೂರ್ವ ನಿಯೋಜಿತ ಕೃತ್ಯ’ ಎಂದ ಆರ್​​ ಅಶೋಕ್
‘ಬಿಜೆಪಿಗರ ಮೇಲೆ ಮೊಟ್ಟೆ ಎಸೆತ ಪೂರ್ವ ನಿಯೋಜಿತ ಕೃತ್ಯ’ ಎಂದ ಆರ್​​ ಅಶೋಕ್
ಸಿಬ್ಬಂದಿಗೆ ಬ್ಯಾಂಕ್ ಮ್ಯಾನೇಜರ್ ಕಿರುಕುಳ ಆರೋಪ
ಸಿಬ್ಬಂದಿಗೆ ಬ್ಯಾಂಕ್ ಮ್ಯಾನೇಜರ್ ಕಿರುಕುಳ ಆರೋಪ