AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನೀರಿಗಾಗಿ ಹಾಹಾಕಾರ: ಟ್ಯಾಂಕರ್ ಮೂಲಕ ಮನೆ-ಮನೆಗೆ ನೀರು ನೀಡ್ತಿರುವ ಯುವಕರು

ಲೋಕಸಭಾ ಸಮರ ಗೆಲ್ಲುವ ರಣ ತಂತ್ರ ಹೆಣೆಯುತ್ತಿರುವ ಕೈ- ಕಮಲ ನಾಯಕರು, ರಾಜ್ಯದಲ್ಲಿ ಭೀಕರ ಬರಗಾಲ ಆವರಿಸಿದೆ ಎನ್ನುವುದನ್ನೇ ಮರೆತು ಬಿಟ್ಟಿದ್ದಾರೆ. ಜನ- ಜಾನುವಾರುಗಳಿಗೆ ಕುಡಿಯಲು ನೀರು ಸಿಗದೆ ಪರದಾಡುತ್ತಿದ್ದರೂ ನೋಡದೇ ಬಿಡುವಿಲ್ಲದೇ ಅಬ್ಬರದ ಪ್ರಚಾರ ಮಾಡುತ್ತಿದ್ದಾರೆ. ಆದರೆ, ಆ ಗ್ರಾಮದ ಯುವಕರು ಗ್ರಾಮದಲ್ಲಿ ಎದುರಾಗಿರುವ ಜಲಕ್ಷಾಮ ಹೋಗಲಾಡಿಸಲು ಪಣ ತೊಟ್ಟು, ಕೈಲಾದ ಸಹಾಯ ಮಾಡುತ್ತಿದ್ದಾರೆ. 

ನೀರಿಗಾಗಿ ಹಾಹಾಕಾರ: ಟ್ಯಾಂಕರ್ ಮೂಲಕ ಮನೆ-ಮನೆಗೆ ನೀರು ನೀಡ್ತಿರುವ ಯುವಕರು
ಹಾನಗಲ್ಲ ತಾಲೂಕಿನ ಬಾಳಂಬಿಡ ಗ್ರಾಮದಲ್ಲಿ ನೀರಿನ ಸಮಸ್ಯೆ
Follow us
TV9 Web
| Updated By: ಕಿರಣ್ ಹನುಮಂತ್​ ಮಾದಾರ್

Updated on: Apr 05, 2024 | 7:43 AM

ಹಾವೇರಿ, ಏ.05: ರಾಜ್ಯಾದ್ಯಂತ ಈ ಭಾರಿಯ ಬರಗಾಲಕ್ಕೆ ಕುಡಿಯಲು ನೀರು ಸಿಗದೆ(Water Crisis) ಜನ-ಜಾನುವಾರುಗಳು ಪರದಾಡುವ ಸ್ಥಿತಿ ನಿರ್ಮಾಣವಾಗಿದೆ. ಇದಕ್ಕೆ ಹಾವೇರಿ(Haveri) ಜಿಲ್ಲೆ ಏನು ಹೊರತಾಗಿಲ್ಲ. ಜಿಲ್ಲೆಯಲ್ಲಿ ಈ ಬಾರಿ ವಾಡಿಕೆಗಿಂತ 70 ಪ್ರತಿಶತ ಮಳೆ ಕಡಿಮೆಯಾಗಿ ಇರುವ ಪ್ರಮುಖ ನಾಲ್ಕು ನದಿಗಳು ಬತ್ತಿಹೋಗಿದೆ. ಕೆರೆ-ಕಟ್ಟೆಗಳೆಲ್ಲ ಖಾಲಿ-ಖಾಲಿಯಾಗಿ ಅಂತರ್ಜಲ ಪಾತಾಳಕ್ಕೆ ಕುಸಿದಿದೆ. ಹೀಗಾಗಿ ಹಳ್ಳಿ-ಹಳ್ಳಿಗಳಲ್ಲಿ ಮಹಿಳೆಯರು ನೀರಿಗಾಗಿ ಕೊಳಾಯ ಮುಂದೆ ದಿನವಿಡಿ ನಿಲ್ಲುತ್ತಿದ್ದಾರೆ. ಇದನ್ನು ಮನಗಂಡ ಹಾನಗಲ್ಲ ತಾಲೂಕಿನ ಬಾಳಂಬಿಡ ಗ್ರಾಮದ ಸಂತೋಷ ದುಂಡಣ್ಣನವರ್ ಮತ್ತು ಅವರ ಸ್ನೇಹಿತರ ಬಳಗ ಇದೀಗ ಗ್ರಾಮಕ್ಕೆ ಕುಡಿಯುವ ನೀರು ಪೂರೈಸಲು ಮುಂದಾಗಿದೆ.

ಯುವಕರ ಕಾರ್ಯಕ್ಕೆ ಕೈ ಜೋಡಿಸಿದ ಅನ್ನದಾತರು

ಹೌದು, ತಮ್ಮದೇ ಆದ ಟ್ರ್ಯಾಕ್ಟರ್ ತಗೆದುಕೊಂಡು ಅದಕ್ಕೆ ತಾವೇ ಡಿಸೇಲ್ ಹಾಕಿಕೊಂಡು ಅದರಲ್ಲಿ ಸಾವಿರ ಲೀಟರ್‌ನ ಎರಡು ಸಿಂಟ್ಯಾಕ್ಸ್‌ಗಳನ್ನು ಇಟ್ಟುಕೊಂಡು ಗ್ರಾಮದ ಜನರ ಕುಡಿಯುವ ನೀರಿನ ದಾಹ ತೀರಿಸಲು ಈ ಯುವಪಡೆ ಮುಂದಾಗಿದೆ. ಈ ಯುವಕರ ಕಾರ್ಯಕ್ಕೆ ಗ್ರಾಮದ ರೈತರು ಕೈ ಜೋಡಿಸಿದ್ದಾರೆ. ಜಮೀನುಗಳಲ್ಲಿ ಇರುವ ಬೋರ್​ವೇಲ್​ನಿಂದ ಉಚಿತವಾಗಿ ನೀರು ಒದಗಿಸುತ್ತಿದ್ದಾರೆ. ಟ್ರ್ಯಾಕ್ಟರ್‌ನಲ್ಲಿರುವ ಸಿಂಟ್ಯಾಕ್ಸ್‌ಗಳಿಗೆ ನೀರು ತುಂಬಿಕೊಂಡು ಗ್ರಾಮಕ್ಕೆ ಆಗಮಿಸುವ ಯುವಕರು, ಗ್ರಾಮದ ಮನೆ-ಮನೆಗಳಿಗೆ ಕುಡಿಯುವ ನೀರು ಪೂರೈಕೆ ಮಾಡುತ್ತಿದ್ದಾರೆ.

ಇದನ್ನೂ ಓದಿ:Water Crisis: ಬೆಂಗಳೂರಿನಂತೆಯೇ ಸಂಕಷ್ಟಕ್ಕೀಡಾದ ಮಂಡ್ಯ, 38 ಹಳ್ಳಿಗಳಲ್ಲಿ ನೀರಿಗೆ ಹಾಹಾಕಾರ

ಗ್ರಾಮದ ಪ್ರಮುಖ ಓಣಿಯ ವೃತ್ತದಲ್ಲಿ ಟ್ರ್ಯಾಕ್ಟರ್​ ನಿಲ್ಲಿಸುವ ಯುವಕರು, ಮಹಿಳೆಯರು ತರುವ ಕೊಡಪಾನಗಳಿಗೆ ನೀರು ತುಂಬಿಸುತ್ತಾರೆ. ಒಂದು ದಿನಕ್ಕೆ 10 ಸಾವಿರ ಲೀಟರ್ ನೀರಿನಿಂದ ಹಿಡಿದು 12 ಸಾವಿರ ಲೀಟರ್​ವರೆಗೆ ಈ ಯುವಕರು ಕುಡಿಯುವ ನೀರು ಪೂರೈಸುತ್ತಿದ್ದಾರೆ. ಪ್ರತಿ ಮನೆಗೆ ನಾಲ್ಕು ಕೊಡಪಾನಗಳಂತೆ ಸರತಿಯಲ್ಲಿ ನಿಂತ ಗ್ರಾಮಸ್ಥರು ಕುಡಿಯುವ ನೀರು ಪಡೆಯುತ್ತಾರೆ. ಈ ರೀತಿ ಮುಂಜಾನೆ ಆರಂಭವಾದ ಈ ಯುವಕರ ಕಾರ್ಯಕ್ಕೆ ಊಟದ ಸಮಯ ಸಹ ಸಿಗುವುದಿಲ್ಲ. ಒಟ್ಟಾರೆ ಈ ಯುವಕರ ಕಾರ್ಯ ಉಳಿದ ಗ್ರಾಮದ ಯುವಕರಿಗೂ ಸ್ಪೂರ್ತಿಯಾಗಲಿ ಎನ್ನುವುದು ನಮ್ಮ ಆಶಯ. ಜೊತೆಗೆ ಈ ಯುವಕರು ಈ ಕಾರ್ಯವನ್ನು ಮಳೆಗಾಲ ಆರಂಭವಾಗುವರೆಗೂ ಮುಂದುವರೆಸುವ ಅನಿವಾರ್ಯತೆ ಇದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ರಾಮನ ಹಾಡು ಹಾಡಿ ಮಗುವ ಮಲಗಿಸಿದ ನಟಿ ಹರಿಪ್ರಿಯಾ, ವಿಡಿಯೋ ನೋಡಿ
ರಾಮನ ಹಾಡು ಹಾಡಿ ಮಗುವ ಮಲಗಿಸಿದ ನಟಿ ಹರಿಪ್ರಿಯಾ, ವಿಡಿಯೋ ನೋಡಿ
ರೌಡಿಶೀಟರ್ ಎಂದ ಮಾತ್ರಕ್ಕೆ ಎಲ್ಲರೂ ರೌಡಿಶೀಟರ್​​ಗಲ್ಲ: ಸಿಟಿ ರವಿ
ರೌಡಿಶೀಟರ್ ಎಂದ ಮಾತ್ರಕ್ಕೆ ಎಲ್ಲರೂ ರೌಡಿಶೀಟರ್​​ಗಲ್ಲ: ಸಿಟಿ ರವಿ
ಅನೀಸುದ್ದೀನ್ ಹೆಸರಿನ ವ್ಯಕ್ತಿಯಿಂದ ಎಕ್ಸ್ ಹ್ಯಾಂಡಲ್​ನಲ್ಲಿ ಪೋಸ್ಟ್​
ಅನೀಸುದ್ದೀನ್ ಹೆಸರಿನ ವ್ಯಕ್ತಿಯಿಂದ ಎಕ್ಸ್ ಹ್ಯಾಂಡಲ್​ನಲ್ಲಿ ಪೋಸ್ಟ್​
ಭಾರತದ ಷರತ್ತುಗಳನ್ನು ಪ್ರಧಾನಿ ಮೋದಿ ಸ್ಪಷ್ಟಪಡಿಸಿದ್ದಾರೆ: ಯದುವೀರ್
ಭಾರತದ ಷರತ್ತುಗಳನ್ನು ಪ್ರಧಾನಿ ಮೋದಿ ಸ್ಪಷ್ಟಪಡಿಸಿದ್ದಾರೆ: ಯದುವೀರ್
ಮೈಸೂರು ಕ್ರಿಕೆಟ್ ಸ್ಟೇಡಿಯಂ ಬಗ್ಗೆ ಸಂಸದ ಯದುವೀರ್ ಮಹತ್ವದ ಮಾಹಿತಿ
ಮೈಸೂರು ಕ್ರಿಕೆಟ್ ಸ್ಟೇಡಿಯಂ ಬಗ್ಗೆ ಸಂಸದ ಯದುವೀರ್ ಮಹತ್ವದ ಮಾಹಿತಿ
ಮಳೆಗಾಲವನ್ನು ನೆನಪಿಸಿಕೊಳ್ಳಲೂ ಸಾಯಿ ಲೇಔಟ್ ಜನ ತಯಾರಿಲ್ಲ!
ಮಳೆಗಾಲವನ್ನು ನೆನಪಿಸಿಕೊಳ್ಳಲೂ ಸಾಯಿ ಲೇಔಟ್ ಜನ ತಯಾರಿಲ್ಲ!
ಸೋಫಿಯಾ ಮಾವನ ಮನೆ ಮೇಲೆ ದಾಳಿ ನಡೆಸುವ ಮನಸ್ಥಿತಿ ಕನ್ನಡಿಗರು ಕ್ಷಮಿಸಲಾರರು
ಸೋಫಿಯಾ ಮಾವನ ಮನೆ ಮೇಲೆ ದಾಳಿ ನಡೆಸುವ ಮನಸ್ಥಿತಿ ಕನ್ನಡಿಗರು ಕ್ಷಮಿಸಲಾರರು
ನೆಚ್ಚಿನ ನಾಯಕಿಯ ಯಶಸ್ಸಿಗೆ ಹರಕೆ ತೀರಿಸಿದ ಡ್ರೋನ್ ಪ್ರತಾಪ್
ನೆಚ್ಚಿನ ನಾಯಕಿಯ ಯಶಸ್ಸಿಗೆ ಹರಕೆ ತೀರಿಸಿದ ಡ್ರೋನ್ ಪ್ರತಾಪ್
ಹೊಂಡದಂತಾದ ಸುಲ್ತಾನಪುರ, ಮನೆ ಮತ್ತು ಗುಡಿಗಳು ಜಲಾವೃತ
ಹೊಂಡದಂತಾದ ಸುಲ್ತಾನಪುರ, ಮನೆ ಮತ್ತು ಗುಡಿಗಳು ಜಲಾವೃತ
ಪಾಕ್ ಶೆಲ್ಲಿಂಗ್​ನಲ್ಲಿ ಗಾಯಗೊಂಡವರಿಗೆ ಸೇನಾ ವೈದ್ಯರಿಂದ ಚಿಕಿತ್ಸೆ
ಪಾಕ್ ಶೆಲ್ಲಿಂಗ್​ನಲ್ಲಿ ಗಾಯಗೊಂಡವರಿಗೆ ಸೇನಾ ವೈದ್ಯರಿಂದ ಚಿಕಿತ್ಸೆ