AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೃಷಿಕರಿಗೆ ಹೆಣ್ಣು ಕೊಡಲು ಹಿಂದೇಟು: ಕನ್ಯೆ ಭಾಗ್ಯ ಆರಂಭಿಸುವಂತೆ ಸಿದ್ದರಾಮಯ್ಯ ಮೊರೆ ಹೋದ ಯುವ ರೈತರು

ಕೃಷಿಕರಿಗೆ ಹೆಣ್ಣು ಕೊಡಲು ಹಿಂದೇಟು ಹಾಕುತ್ತಿರುವ ಹಿನ್ನೆಯಲ್ಲಿ ಗೃಹಲಕ್ಷ್ಮೀ ಯೋಜನೆ ಮಾದರಿಯಲ್ಲಿ ಕನ್ಯೆ ಭಾಗ್ಯ ಆರಂಭಿಸುವಂತೆ ಹಾವೇರಿ ಜಿಲ್ಲೆಯ ಮದುವೆ ಆಗದ ಯುವ ರೈತರು ಸಿದ್ದರಾಮಯ್ಯಗೆ ಪತ್ರ ಬರೆದಿದ್ದಾರೆ.

ಕೃಷಿಕರಿಗೆ ಹೆಣ್ಣು ಕೊಡಲು ಹಿಂದೇಟು: ಕನ್ಯೆ ಭಾಗ್ಯ ಆರಂಭಿಸುವಂತೆ ಸಿದ್ದರಾಮಯ್ಯ ಮೊರೆ ಹೋದ ಯುವ ರೈತರು
ಸೂರಜ್​, ಮಹಾವೀರ್​ ಉತ್ತರೆ
| Edited By: |

Updated on: Jul 19, 2023 | 9:43 AM

Share

ಹಾವೇರಿ, (ಜುಲೈ 19): ರೈತ(Former) ದೇಶದ ಬೆನ್ನೆಲುಬು ಅಂತಾರೆ. ಆದ್ರೆ, ಅದೇ ರೈತನಿಗೆ ಮದುವೆಯಾಗಲು ಕನ್ಯೆ ಕೊಡದ ಕಾಲ ಬಂದೊದಗಿದೆ. ಕೃಷಿಕರಿಗೆ ಮದುವೆಯಾಗಲು (marriage) ಹೆಣ್ಣು ಕೊಡಲು ಹಿಂದೇಟು ಹಾಕುತ್ತಿರುವುದಕ್ಕೆ ಬೇಸತ್ತ ಹಾವೇರಿ(ಃಅವೆರಿ) ಜಿಲ್ಲೆಯ ಯುವಕರು ಮುಖ್ಯಮಂತ್ರಿ ಸಿದ್ದರಾಮಯ್ಯನವರ(Siddaramaiah) ಮೊರೆ ಹೋಗಿದ್ದು, ಕನ್ಯೆ(Bride) ಭಾಗ್ಯ ಆರಂಭಿಸುವಂತೆ ಬ್ಯಾಡಗಿ ತಾಲೂಕಿನ‌ ಮದುವೆ ಆಗದ ಯುವ ರೈತರು ಪತ್ರದ ಮೂಲಕ ಮನವಿ ಮಾಡಿಕೊಂಡಿದ್ದಾರೆ. ಮನೆಯೊಡತಿಗೆ 2 ಸಾವಿರ ರೂ. ಕೊಡುವ ಮಾದರಿಯಲ್ಲಿ ರೈತರನ್ನು ಮದುವೆಯಾದವರಿಗೂ ಸಹ ಹಣ ನೀಡುವ ಕಾರ್ಯಕ್ರಮ ಘೋಷಣೆ ಮಾಡುವಂತೆ ಒತ್ತಾಯಿಸಿದ್ದಾರೆ.

ಇದನ್ನೂ ಓದಿ: ವಧು ಹುಡುಕಿ ಸುಸ್ತಾದ 28 ವರ್ಷದ ಯುವಕ ತನಗೆ ಕನ್ಯೆ ಭಾಗ್ಯ ಕಲ್ಪಿಸುವಂತೆ ಸಿದ್ದರಾಮಯ್ಯ ಸರ್ಕಾರಕ್ಕೆ ಮೊರೆಯಿಟ್ಟ!

5 ರಿಂದ 6 ಎಕರೆ ಜಮೀನು ಇದರೂ ಸಹ ಹೆಣ್ಣು ಕೊಡಲು ಹಿಂದೇಟು ಹಾಕುತ್ತಿದ್ದಾರೆ. ಕೃಷಿಕ ಎಂದ ಮಾತ್ರಕ್ಕೆ ಎಷ್ಟೋ ಜನ ಕನ್ಯೆಯನ್ನು ತೊರಿಸುತ್ತಿಲ್ಲ. 5 ಸಾವಿರ ರೂ. ಸಂಬಳ ಬರುವ ವ್ಯಕ್ತಿಗೆ ಹೆಣ್ಣು ಕೊಡಲು ಮುಂದಾಗುತ್ತಾರೆ. ನಾವು ಕೂಡ ಉತ್ತಮ ಮಳೆ ಬಂದ್ರೆ ಲಕ್ಷಾಂತರ ರೂಪಾಯಿ ಗಳಿಸುತ್ತೇವೆ. ಆದ್ರೆ ಹವಾಮಾನ ವೈಪರಿತ್ಯದಿಂದ ನಷ್ಟ ಅನುಭವುಸುತ್ತಿರುವುದನ್ನು ಅರಿತು ಕೃಷಿ ಮಾಡುತ್ತಿರುವವನು ಕೂಡ ತನ್ನ ಮಗಳಿಗೆ ಕೃಷಿಕನಿಗೆ ಕೊಡಲು ಹಿಂದೇಟು ಹಾಕುತ್ತಿದ್ದಾರೆ. ಈ ಸಂಬಂಧ ಯುವ ರೈತರನ್ನು ಮದುವೆ ಆದ ಯುವತಿಯರಿಗೆ ಕನಿಷ್ಠ2 ಲಕ್ಷ ರೂ ಪ್ರೋತ್ಸಾಹ ಧನ ಘೋಷಿಸಿ ಎಂದು ಮನವಿ ಮಾಡಿದ್ದಾರೆ.

ರೈತರನ್ನು ಮದುವೆ ಆದ ವಿದ್ಯಾವಂತ ಯುವತಿಯರಿಗೆ ಸರ್ಕಾರಿ ಹಾಗೂ ಅರೇ ಸರ್ಕಾರಿ ನೌಕರಿಯಲ್ಲಿ ಮೀಸಲಾತಿ ನೀಡಿ. ಮನೆಯೊಡತಿಗೆ 2 ಸಾವಿರ ರೂ. ಕೊಡುವ ಮಾದರಿಯಲ್ಲಿ ರೈತರನ್ನು ಮದುವೆ ಆದವರಿಗೂ ಹಣ ಕೊಡಬೇಕು. ಇಂತಹ ಕಾರ್ಯಕ್ರಗಳನ್ನೊಳಗೊಂಡ ಕನ್ಯಾ ಭಾಗ್ಯ ಯೋಜನೆ ಜಾರಿಗೆ ತರಬೇಕೆಂದು ಹಾವೇರಿ ಜಿಲ್ಲೆಯ ಬ್ಯಾಡಗಿ ತಾಲೂಕಿನ‌ ಮದುವೆ ಆಗದ ಯುವ ರೈತರು ಪತ್ರದ ಮೂಲಕ ಆಗ್ರಹಿಸಿದ್ದಾರೆ.

ಇನ್ನು ಇತ್ತೀಚೆಗೆಷ್ಟೇ ಕನ್ಯೆ ಹುಡುಕಿ ಹುಡುಕಿ ಸುಸ್ತಾದ ಗದಗ ಜಿಲ್ಲೆಯ ಮುತ್ತು ಹೂಗಾರ ಎನ್ನುವ ಯುವಕನೊಬ್ಬ, ತನಗೊಂದು ಕನ್ಯೆಯನ್ನು ಹುಡುಕಿಕೊಡಿ ಎಂದು ಮುಂಡರಗಿ (mundaragi) ತಾಲೂಕಿನ ಡಂಬಳ (dambal) ಗ್ರಾಮ ಪಂಚಾಯತಿ ಪಿಡಿಒಗೆ ಪತ್ರ ಬರೆಯುವ ಮೂಲಕ ಕರ್ನಾಟಕ ಸರ್ಕಾರಕ್ಕೆ ಒತ್ತಾಯಿಸಿದ್ದನ್ನು ಇಲ್ಲಿ ಸ್ಮರಿಸಬಹದು.

ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

ಹೇಗಿದೆ ನೋಡಿ ‘ಗಿಚ್ಚಿ ಗಿಲಿಗಿಲಿ’ ಜೂನಿಯರ್ ಟೀಂ
ಹೇಗಿದೆ ನೋಡಿ ‘ಗಿಚ್ಚಿ ಗಿಲಿಗಿಲಿ’ ಜೂನಿಯರ್ ಟೀಂ
ನದಿಗೆ ಬಿದ್ದ ಪ್ಯಾರಾಗ್ಲೈಡರ್​ಗಳು, ಹೇಗೋ ಅಪಾಯದಿಂದ ಪಾರು
ನದಿಗೆ ಬಿದ್ದ ಪ್ಯಾರಾಗ್ಲೈಡರ್​ಗಳು, ಹೇಗೋ ಅಪಾಯದಿಂದ ಪಾರು
ಲಂಚ ಪಡೆಯುತ್ತಾ ರೆಡ್ ಹ್ಯಾಂಡೆಡ್ ಆಗಿ ಸಿಕ್ಕಿ ಬಿದ್ದ ಇನ್ಸ್‌ಪೆಕ್ಟರ್!
ಲಂಚ ಪಡೆಯುತ್ತಾ ರೆಡ್ ಹ್ಯಾಂಡೆಡ್ ಆಗಿ ಸಿಕ್ಕಿ ಬಿದ್ದ ಇನ್ಸ್‌ಪೆಕ್ಟರ್!
ಆಟೋ ಚಾಲಕನನ್ನು ಬಾನೆಟ್ ಮೇಲೆ ಹೊತ್ತೊಯ್ದ ಜೀಪ್ ಚಾಲಕ
ಆಟೋ ಚಾಲಕನನ್ನು ಬಾನೆಟ್ ಮೇಲೆ ಹೊತ್ತೊಯ್ದ ಜೀಪ್ ಚಾಲಕ
ಲಕ್ಕುಂಡಿಯಲ್ಲಿ ಉತ್ಖನನ ನಡೆಯುತ್ತಿರುವ ಸ್ಥಳದಲ್ಲೇ ಹಾವು ಪ್ರತ್ಯಕ್ಷ!
ಲಕ್ಕುಂಡಿಯಲ್ಲಿ ಉತ್ಖನನ ನಡೆಯುತ್ತಿರುವ ಸ್ಥಳದಲ್ಲೇ ಹಾವು ಪ್ರತ್ಯಕ್ಷ!
ಗುರುಗ್ರಾಮದ ವಿಜಯ್ ವಿಹಾರದಲ್ಲಿ ಜನರ ಮೇಲೆ ಬೀದಿ ನಾಯಿಗಳ ದಾಳಿ
ಗುರುಗ್ರಾಮದ ವಿಜಯ್ ವಿಹಾರದಲ್ಲಿ ಜನರ ಮೇಲೆ ಬೀದಿ ನಾಯಿಗಳ ದಾಳಿ
ಕಿರಿದಾದ ರಸ್ತೆಯಲ್ಲಿ ಸ್ಕೂಲ್ ಬಸ್ ಅಟ್ಟಾಡಿಸಿದ ಭಾರಿ ಗಾತ್ರದ ಒಂಟಿ ಸಲಗ!
ಕಿರಿದಾದ ರಸ್ತೆಯಲ್ಲಿ ಸ್ಕೂಲ್ ಬಸ್ ಅಟ್ಟಾಡಿಸಿದ ಭಾರಿ ಗಾತ್ರದ ಒಂಟಿ ಸಲಗ!
ಕೆಂಪೇಗೌಡ ಏರ್​ಪೋರ್ಟ್​ನಲ್ಲಿ ಕೆಲ‌ಕಾಲ ವಿಮಾನಗಳ ಹಾರಾಟದಲ್ಲಿ ವ್ಯತ್ಯಯ
ಕೆಂಪೇಗೌಡ ಏರ್​ಪೋರ್ಟ್​ನಲ್ಲಿ ಕೆಲ‌ಕಾಲ ವಿಮಾನಗಳ ಹಾರಾಟದಲ್ಲಿ ವ್ಯತ್ಯಯ
ಕೊಪ್ಪಳ: ಕಿಮ್ಸ್ ಆಡಳಿತಾಧಿಕಾರಿ ಕಲ್ಲೇಶ್ ಮನೆ ಸೇರಿ 6 ಕಡೆ ಲೋಕಾಯುಕ್ತ ದಾಳಿ
ಕೊಪ್ಪಳ: ಕಿಮ್ಸ್ ಆಡಳಿತಾಧಿಕಾರಿ ಕಲ್ಲೇಶ್ ಮನೆ ಸೇರಿ 6 ಕಡೆ ಲೋಕಾಯುಕ್ತ ದಾಳಿ
ನಟಿಯರ ಪರವಾಗಿ ಚಿತ್ರರಂಗಕ್ಕೆ ವಿಶೇಷ ಮನವಿ ಮಾಡಿದ ರಚಿತಾ ರಾಮ್
ನಟಿಯರ ಪರವಾಗಿ ಚಿತ್ರರಂಗಕ್ಕೆ ವಿಶೇಷ ಮನವಿ ಮಾಡಿದ ರಚಿತಾ ರಾಮ್