AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bullock Cart Race: ಹಾವೇರಿಯಲ್ಲಿ ಖಾಲಿ ಗಾಡಾ ಓಟದ ಝಲಕ್ ಇಲ್ಲಿದೆ ನೋಡಿ

ಬರಗಾಲದ ನಡುವೆಯೂ ಹಾವೇರಿ ರೈತರು ಗ್ರಾಮೀಣ ಕ್ರೀಡೆಯನ್ನು ಆಯೋಜಿಸಿ ಖುಷಿ ಪಟ್ಟರು. ಯಾವುದೇ ಅಹಿತಕರ ಘಟನೆ ನಡೆಯದಂತೆ ಜಿಲ್ಲಾಡಳಿತ ಗಾಡಾ ಸ್ಪರ್ಧೆಗೆ ವಿಧಿಸಿದ್ದ ನಿಯಮಗಳನ್ನು ಚಾಚೂತಪ್ಪದೆ ಪಾಲಿಸಿ ಯಶಸ್ವಿ ಸ್ಪರ್ಧೆ ಮಾಡಿದ್ದಾರೆ.

Bullock Cart Race: ಹಾವೇರಿಯಲ್ಲಿ ಖಾಲಿ ಗಾಡಾ ಓಟದ ಝಲಕ್ ಇಲ್ಲಿದೆ ನೋಡಿ
ಹಾವೇರಿಯಲ್ಲಿ ಖಾಲಿ ಗಾಡಾ ಓಟದ ಝಲಕ್ ಇಲ್ಲಿದೆ ನೋಡಿ
ಸಾಧು ಶ್ರೀನಾಥ್​
|

Updated on: Jan 27, 2024 | 5:15 PM

Share

ಉತ್ತರ ಕರ್ನಾಟಕದ ಹೆಬ್ಬಾಗಿಲು ಹಾವೇರಿ ಜಿಲ್ಲೆಯಲ್ಲಿ ಪ್ರತಿ ವರ್ಷದಂತೆ ಈ ವರ್ಷವು ರೈತರು ಕ್ರೀಡೆಗಳನ್ನು ಆಯೋಜಿಸಿ ಖುಷಿ ಪಡುತ್ತಿದ್ದಾರೆ. ಬಹುತೇಕ ಕೃಷಿ ಚಟುವಟಿಕೆಗಳು ಮುಕ್ತಾಯವಾದ ನಂತರ, ತನ್ನ ಸಹಪಾಠಿ ಜಾನುವಾರುಗಳ ಕ್ರೀಡೆಗಳನ್ನ ಆಯೋಜಿಸಿ ಮನರಂಚನೆ ಪಡುತ್ತಿದ್ದಾರೆ . ದನ ಬೆದರಿಸುವುದು, ಎತ್ತಿನಗಾಡಿ ಓಟ ಮತ್ತು ಟಗರು ಕಾಳಗ ಹೀಗೆ ಗ್ರಾಮೀಣ ಸೊಗಡಿನ ಕ್ರೀಡೆ ನೋಡಲು ಬಲು ಚಂದ. ಹಾವೇರಿಯಲ್ಲಿ ಆಯೋಜಿಸಿದ ಖಾಲಿ ಗಾಡಾ ಓಟದ ಝಲಕ್ ಇಲ್ಲಿದೆ ನೋಡಿ

ಒಂದಡೆ ಮಿಂಜಿನ ನಂತೆ ಓಡಿ ದುಳೆಬ್ಬಿಸುತ್ತಿರುವ ಎತ್ತುಗಳು. ಇನ್ನೊಂದಡೆ ಗಾಡಿ ಮೇಲೆ ಕುಳಿತು ಸಿಳ್ಳೆ,ಕೇಕೆ ಚಪ್ಪಾಳೆ ಹೊಡೆದು ಎತ್ತುಗಳನ್ನು ಓಡಿಸುತ್ತಿರುವ ರೈತರು ಮೊತ್ತೊಂದಡೆ ಎತ್ತುಗಳು ಓಡಿದ ಅಂತರ ಗುರುತು ಮಾಡುತ್ತಿರುವ ಆಯೋಜಕರು ಇತ್ತ ಗಾಡಾ ಓಟವನ್ನು ಕಣ್ಣು ತುಂಬಿಕೊಂಡು ಮನರಂಜನೆ ಪಡುತ್ತಿರುವ ರೈತ ಸಮೂಹ ಈ ಎಲ್ಲ ದೃಶ್ಯ ಕಂಡು ಬಂದಿದ್ದು ಹಾವೇರಿ ಜಿಲ್ಲೆಯ ಸವಣೂರು ತಾಲೂಕಿನ ಮೇಳ್ಳಗಟ್ಟಿ ಗ್ರಾಮದ ಹೊರ ಒಲಯದಲ್ಲಿ.

ಈ ಗ್ರಾಮದಲ್ಲಿ ಇರುವ ಬಸವೇಶ್ವರ ಯುವಕ ಮಂಡಳಿ ರೈತರನ್ನು ರಂಜಿಸಲು ಪ್ರಪ್ರಥಮ ರಾಜ್ಯ ಮಟ್ಟದ ಭಾರಿ ಗಾಡಾ ಓಡಿಸುವ ಸ್ಪರ್ಧೆ ಆಯೋಜಿಸಿದ್ದರು. ಇಲ್ಲಿ ಅತೀ ವೇಗದಲ್ಲಿ ಓಡಿದ ಜೋಡಿ ಎತ್ತಿಗೆ ಮೊದಲನೇ ಬಹುನಾ ಒಂದು ಎಚ್.ಎಫ್ ಬೈಕ್. ಎರಡನೇ ಬಹುಮಾನ ಐದು ಗ್ರಾಮ ಚಿನ್ನ ನೀಡಿ ಗೌರವಿಸಿದರು. ಈ ಸ್ಪರ್ಧೆಗೆ ಜಿಲ್ಲೆ ಮತ್ತು ಹೊರ ಜಿಲ್ಲೆಯಿಂದ ರೈತರು ಆಗಮಿಸಿದ್ದರು ದೂರ ದೂರದ ಊರುಗಳಿಂದ ಆಗಮಿಸಿದ ರೈತರು ತಮ್ಮ ನೆಚ್ಚಿನ ಹೋರಿಗಳನ್ನ ಗಾಡಿಗೆ ಕಟ್ಟಿ ಓಡಿಸಿದರು.

ಕೆಲ ಹೋರಿಗಳು ಧೂಳೆಬ್ಬಿಸಿದರೆ, ಇನ್ನೂ ಕೆಲ ಎತ್ತುಗಳು ಮಿಂಚಿನಂತೆ ಓಡಿ ನೋಡುಗರ ಮೈಜುಮ್ಮೆನಿಸಿದವು. ರೈತರ ಈ ಹುಮ್ಮಸ್ಸಿಗೆ ಪ್ರೇಕ್ಷಕರು ಚಪ್ಪಾಳೆ ಸೀಟಿ ಕೇಕೆ ಹಾಕಿ ಉತ್ತೇಜನ ನೀಡಿದರು. ಪ್ರತಿ ವರ್ಷವು ಉತ್ತರ ಕರ್ನಾಟಕ ಭಾಗರದಲ್ಲಿ ಡಿಸೆಂಬರ್ ತಿಂಗಳಲ್ಲಿ ಆರಂಭವಾಗುವ ಈ ಸ್ಪರ್ಧೆಗಳು ಮುಂಗಾರು ಆರಂಭವಾಗುವರೆಗೆ ಮುಂದುವರೆಯುತ್ತವೆ.

ಈ ಕ್ರೀಡೆ ಎಂದರೆ ರೈತರಿಗೆ ಬಹಳ ಅಚ್ಚು ಮೇಚ್ಚು. ಕೃಷಿ ಕೆಲಸದ ಜೊತೆಗೆ ಬಂಡಿ ಓಟಕ್ಕೆ ಅಂತಲೇ ಎತ್ತುಗಳ ಮಾಲೀಕರು ಎತ್ತುಗಳನ್ನ ಕಟ್ಟುಮಸ್ತಾಗಿ ಬೆಳೆಸಿರುತ್ತಾರೆ. ಹುರುಳಿ ಕಾಳು, ಜೋಳದ ನುಚ್ಚು, ಹಿಂಡಿ ಸೇರಿದಂತೆ ವಿವಿಧ ರೀತಿಯ ಪೌಷ್ಠಿಕಾಂಶಭರಿತ ಪದಾರ್ಥಗಳನ್ನ ತಿನ್ನಿಸಿ ಮಾಲೀಕರು ಎತ್ತುಗಳನ್ನ ಭರ್ಜರಿಯಾಗಿ ರೆಡಿ ಮಾಡಿ ಅಖಾಡಕ್ಕೆ ತಂದಿರುತ್ತಾರೆ. ಒಂದು ನಿಮಿಷದಲ್ಲಿ ಯಾವ ಜೋಡಿ ಎತ್ತುಗಳು ಹೆಚ್ಚಿನ ದೂರ ಓಡುತ್ತವೆಯೋ ಆ ಜೋಡಿ ಎತ್ತುಗಳಿಗೆ ಪ್ರಥಮ ಬಹುಮಾನ ನೀಡಿ ಗೌರವಿಸಲಾಗುತ್ತೆ.

ಬೆಳಿಗ್ಗೆಯಿಂದ ಬೇರೆ ಬೇರೆ ಊರುಗಳಿಂದ ಬಂದ ರೈತರು ತಮ್ಮ ಹೋರಿಗಳ ತಾಕತ್ತು ಪರೀಕ್ಷೆ ಮಾಡಿದರು. ಒಂದು ನಿಮಿಷದಲ್ಲಿ ಕೆಲವು ಜೋಡಿಗಳು 14 ನೂರು ಅಡಿವರೆಗೆ ಓಡಿದರೆ, ಕೆಲವು ಜೋಡಿಗಳು 15, 16, 18 19 ನೂರು ಅಡಿ​ಗಳವರೆಗೆ ಓಡಿ ನೋಡುಗರ ಗಮನ ಸೆಳೆದವು. ಕೆಲವು ಜೋಡಿ ಎತ್ತುಗಳ ಅಭಿಮಾನಿಗಳು ಎತ್ತುಗಳು ಅಖಾಡದಲ್ಲಿ ಮಿಂಚಿನ ಓಟ ಓಡುತ್ತಿದ್ದಂತೆ ಅವುಗಳ ಜೊತೆ ಜೊತೆಗೆ ಓಡಿ ಹುರುಪು ತುಂಬಿದರು.

ಇನ್ನು ಗಾಡಾ ಓಡೋ ಅಖಾಡದ ಅಕ್ಕಪಕ್ಕದಲ್ಲಿ ನಿಂತಿರುವ ರೈತರು ಹಾಗೂ ಎತ್ತುಗಳ ಅಭಿಮಾನಿಗಳು ಕೇಕೆ, ಸಿಳ್ಳೆ, ಚಪ್ಪಾಳೆಗಳ ಮೂಲಕ ಎತ್ತುಗಳಿಗೆ ಶರವೇಗದ ಓಟ ಓಡಲು ಹುಮ್ಮಸ್ಸು ತುಂಬಿದರು ಎತ್ತುಗಳ ಮಾಲೀಕರಂತೂ ತಮ್ಮ ತಮ್ಮ ಎತ್ತುಗಳು ಭರ್ಜರಿಯಾಗಿ ಓಡುವುದನ್ನು ನೋಡಿ ಸಂತೋಷಪಟ್ಟರು.

(ವರದಿ: ಅಣ್ಣಪ್ಪ ಬಾರ್ಕಿ, ಟಿವಿ9, ಹಾವೇರಿ)

Follow Us
sadhu srinath
sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Read More
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ
ದಿಲೀಪ್ ರಾಜ್​​ ವಿಶೇಷ ನೆನಪು; ಹೇಗಿತ್ತು ನೋಡಿ ಅವರ ಜರ್ನಿ
ದಿಲೀಪ್ ರಾಜ್​​ ವಿಶೇಷ ನೆನಪು; ಹೇಗಿತ್ತು ನೋಡಿ ಅವರ ಜರ್ನಿ
ಗಂಡನ ಜೊತೆಗಿದ್ದರೂ ಬರ್ತೀಯಾ ಎಂದು ಕೇಳ್ತಾರೆ
ಗಂಡನ ಜೊತೆಗಿದ್ದರೂ ಬರ್ತೀಯಾ ಎಂದು ಕೇಳ್ತಾರೆ