AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಾವೇರಿ: ಬಾವುಟ ಕಟ್ಟುವ ವಿಚಾರದಲ್ಲಿ ಹಿಂದೂ ಮುಸ್ಲಿಂ ಗಲಾಟೆ‌

ಬಾವುಟ ಕಟ್ಟುವ ವಿಚಾರದಲ್ಲಿ ಹಿಂದೂ ಮುಸ್ಲಿಂ ಯುವಕರ ನಡುವೆ ಗಲಾಟೆ ನಡೆದ ಘಟನೆ ಹಾವೇರಿ ನಗರದ ಸುಭಾಷ್ ಸರ್ಕಲ್​ನಲ್ಲಿ ನಡೆದಿದೆ. ಕೇಸರಿ ಬಾವುಟಕ್ಕಿಂತ ದೊಡ್ಡ ಹಸಿರು ಬಾವುಟಗಳನ್ನು ಕಟ್ಟಲಾಗಿದೆ. ಈ ವಿಚಾರವಾಗಿ ಯುವಕರ ನಡುವೆ ಗಲಾಟೆ ನಡೆದಿದೆ.

ಹಾವೇರಿ: ಬಾವುಟ ಕಟ್ಟುವ ವಿಚಾರದಲ್ಲಿ ಹಿಂದೂ ಮುಸ್ಲಿಂ ಗಲಾಟೆ‌
ಬಾವುಟ ಕಟ್ಟುವ ವಿಚಾರವಾಗಿ ಹಾವೇರಿಯಲ್ಲಿ ಹಿಂದೂ ಮುಸ್ಲಿಂ ಯುವಕರ ನಡುವೆ ಜಗಳ
ಸೂರಜ್​, ಮಹಾವೀರ್​ ಉತ್ತರೆ
| Edited By: Rakesh Nayak Manchi|

Updated on: Sep 22, 2023 | 7:58 PM

Share

ಹಾವೇರಿ, ಸೆ.22: ಬಾವುಟ ಕಟ್ಟುವ ವಿಚಾರದಲ್ಲಿ ಹಿಂದೂ ಮುಸ್ಲಿಂ ಯುವಕರ ನಡುವೆ ಗಲಾಟೆ ನಡೆದ ಘಟನೆ ಹಾವೇರಿ (Haveri) ನಗರದ ಸುಭಾಷ್ ಸರ್ಕಲ್​ನಲ್ಲಿ ನಡೆದಿದೆ. ಕೇಸರಿ ಬಾವುಟಕ್ಕಿಂತ ದೊಡ್ಡ ಹಸಿರು ಬಾವುಟಗಳನ್ನು ಕಟ್ಟಲಾಗಿದೆ. ಈ ವಿಚಾರವಾಗಿ ಯುವಕರ ನಡುವೆ ಗಲಾಟೆ ನಡೆದಿದೆ.

ಗಣೇಶ ಹಬ್ಬದ ಪ್ರಯುಕ್ತ ಸರ್ಕಲ್ ತುಂಬ ಕೇಸರಿ ಬಾವುಟ ಕಟ್ಟಲಾಗಿತ್ತು. ಸರ್ಕಾರಿ ಸ್ವಾಮ್ಯದ ಟವರ್ ಹಾಗೂ ಮರಗಳ ಮೇಲೂ ಕೇಸರಿ ಧ್ವಜ ಕಟ್ಟಲಾಗಿತ್ತು. ಆದರೆ ಕೆಲವು ಮುಸ್ಲಿಂ ಯುವಕರು ಕೇಸರಿ ಧ್ವಜಕ್ಕಿಂತ ಎತ್ತರವಾಗಿ ಹಸಿರು ಧ್ವಜ ಕಟ್ಟಿದ್ದಾರೆ.

ಇದನ್ನೂ ಓದಿ: ಹಾವೇರಿಯಲ್ಲಿ ಬಾದಾಮಿ ಚಾಲುಕ್ಯರ ಕಾಲದ ಶಿಲಾಶಾಸನ ಪತ್ತೆ

ಮುಸ್ಲಿಮರು ಬಾವುಟ ಕಟ್ಟಿದ ಹಿನ್ನೆಲೆ ಎರಡು ಕೋಮುಗಳ ಯುವಕರ ನಡುವೆ ವಾಗ್ವಾದ ನಡೆದಿದೆ. ಇದು ಪರಸ್ಪರ ಕೈ ಕೈ ಮಿಲಾಯಿಸುವ ಹಂತಕ್ಕೆ ತಲುಪಿದ್ದು, ಪರಿಸ್ಥಿತಿ ತಲುಪುತ್ತಿದ್ದಂತೆ ಸ್ಥಳಕ್ಕೆ ಆಗಮಿಸಿದ ಪೊಲೀಸರು, ಮನವೋಲಿಸಲು ಹರಸಾಹಪಟ್ಟರು.

ಸರ್ಕಾರಿ ಸ್ವಾಮ್ಯದಲ್ಲಿ ಕಟ್ಟಲಾದ ಕೇಸರಿ ಝೆಂಡಾ ತೆರವಿಗೆ ಮುಸ್ಲಿಂ ಯುವಕರು ಪಟ್ಟು ಹಿಡಿದರೆ, ಇತ್ತ ನಮ್ಮ ಹಬ್ಬ ಇದೆ ನಾವು ಝೆಂಡಾ ಇಳಿಸಲ್ಲ ಅಂತ ಹಿಂದೂ ಯುವಕರ ಪಟ್ಟು ಹಿಡಿದರು. ಕೊನೆಗೆ ಟವರ್ ಮೇಲಿದ್ದ ಎರಡು ಬಾವುಟಗಳನ್ನು ಪೊಲೀಸರು ಕೆಳಗಿಳಿಸಿದರು. ಸದ್ಯ ಸ್ಥಳದಲ್ಲಿ ಹಾವೇರಿ ಡಿವೈಎಸ್​ಪಿ, ಸಿಪಿಐ ಹಾಗೂ ನೂರಕ್ಕೂ ಹೆಚ್ಚು ಪೊಲೀಸರು ಬಿಡು ಬಿಟ್ಟಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Suraj Mahaveer Utture
Suraj Mahaveer Utture

ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ನವಲಿಹಾಳ ಗ್ರಾಮದ ಸೂರಜ ಉತ್ತೂರೆ. ಕಸ್ತೂರಿ ವಾಹಿನಿಯಲ್ಲಿ ರಾಜಕೀಯ ವರದಿಗಾರನಾಗಿ ಪತ್ರಿಕೊದ್ಯಮ ಪ್ರವೇಶಿಸಿದ ಇವರು. ಡಿಸೆಂಬರ್ 2022 ರಂದು ಹಾವೇರಿ ಜಿಲ್ಲೆ tv9 ವರದಿಗಾರನಾಗಿ ಕೆಲಸ ಆರಂಭಿಸಿದ್ರು ನವೆಂಬರ್ 2023 ರಂದು ಉತ್ತರ ಕನ್ನಡ ಜಿಲ್ಲೆಗೆ ವರ್ಗಾವಣೆ ಆಗಿದ್ದೂ ಸದ್ಯ ಉತ್ತರ ಕನ್ನಡ ಜಿಲ್ಲೆಯ tv9 ವರದಿಗಾರನಾಗಿ ಕೆಲಸ ಮಾಡುತ್ತಿದ್ದಾರೆ.

Read More