AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಾನಗಲ್ ಪ್ರಚಾರ ಅಖಾಡದಲ್ಲಿ ಸಿಎಂ ಬೊಮ್ಮಾಯಿ, ಸುಖಕರ ಪ್ರಯಾಣಕ್ಕೆ ಸ್ಪೀಡ್ ಬ್ರೇಕರ್ ತೆರವು

ಹಾನಗಲ್ ಕ್ಷೇತ್ರದ ಉಪಚುನಾವಣೆ ಹಿನ್ನೆಲೆಯಲ್ಲಿ ಪ್ರಚಾರಕ್ಕೆಂದು ಇಂದು ಆಲದಕಟ್ಟಿ ಗ್ರಾಮಕ್ಕೆ ಸಿಎಂ ಬೊಮ್ಮಾಯಿ ಆಗಮಿಸಿದ್ದಾರೆ. ಹೀಗಾಗಿ PWD ಅಧಿಕಾರಿಗಳಿಂದ ಹಂಪ್ಸ್ ತೆರವು ಮಾಡಲಾಗಿದೆ. ಹಾವೇರಿ-ಹಾನಗಲ್ ರಸ್ತೆಯಲ್ಲಿರುವ 8-10 ಹಂಪ್ಸ್ ತೆರವು ಮಾಡಲಾಗಿದೆ.

ಹಾನಗಲ್ ಪ್ರಚಾರ ಅಖಾಡದಲ್ಲಿ ಸಿಎಂ ಬೊಮ್ಮಾಯಿ, ಸುಖಕರ ಪ್ರಯಾಣಕ್ಕೆ ಸ್ಪೀಡ್ ಬ್ರೇಕರ್ ತೆರವು
ಸ್ಪೀಡ್ ಬ್ರೇಕರ್ ತೆರವು
TV9 Web
| Edited By: |

Updated on: Oct 21, 2021 | 12:40 PM

Share

ಹಾವೇರಿ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆಗಮನ ಹಿನ್ನೆಲೆಯಲ್ಲಿ ಸಿಎಂ ಪ್ರಯಾಣಿಸುವ ರಸ್ತೆಯಲ್ಲಿನ ಸ್ಪೀಡ್ ಬ್ರೇಕರ್ ತೆರವು ಮಾಡಲಾಗಿದೆ. ಹಾವೇರಿ ಜಿಲ್ಲೆ ಹಾನಗಲ್ ಕ್ಷೇತ್ರದ ಉಪಚುನಾವಣೆ ಹಿನ್ನೆಲೆಯಲ್ಲಿ ಪ್ರಚಾರಕ್ಕೆಂದು ಇಂದು ಆಲದಕಟ್ಟಿ ಗ್ರಾಮಕ್ಕೆ ಸಿಎಂ ಬೊಮ್ಮಾಯಿ ಆಗಮಿಸಿದ್ದಾರೆ. ಹೀಗಾಗಿ PWD ಅಧಿಕಾರಿಗಳಿಂದ ಹಂಪ್ಸ್ ತೆರವು ಮಾಡಲಾಗಿದೆ. ಹಾವೇರಿ-ಹಾನಗಲ್ ರಸ್ತೆಯಲ್ಲಿರುವ 8-10 ಹಂಪ್ಸ್ ತೆರವು ಮಾಡಲಾಗಿದೆ. ಕಳೆದ ಎರಡು ವರ್ಷಗಳಿಂದ ಇರೋ ರೋಡ್ ಹಂಪ್ಸ್ ತೆರವು ಮಾಡಲಾಗುತ್ತಿದೆ. ಶಾಲೆ ಇರೋ‌ ಕಾರಣಕ್ಕಾಗಿ ಹಂಪ್ಸ್ ಹಾಕಲಾಗಿತ್ತು.

ಸದ್ಯ ಸಿಎಂ ಬೊಮ್ಮಾಯಿ ಕ್ಷೇತ್ರ ವ್ಯಾಪ್ತಿಯ ಗಡಿಯಂಕನಹಳ್ಳಿ ಗ್ರಾಮದ ಬಳಿ ಇರೋ ವಂಶಿ ಫಾರ್ಮ್ ನಲ್ಲಿ ಮುಖಂಡರ ಜೊತೆ ಮಾತುಕತೆ ನಡೆಸಲಿದ್ದಾರೆ. ಮಧ್ಯಾಹ್ನ 3.30 ರಿಂದ ರಾತ್ರಿ 7 ಗಂಟೆಯವರೆಗೆ ಪ್ರಚಾರ ಮಾಡಲಿದ್ದಾರೆ. ಮಕರವಳ್ಳಿ, ಹೊಂಕಣ, ತಿಳುವಳ್ಳಿ, ಬ್ಯಾತನಾಳ, ಕೂಸನೂರ, ಬ್ಯಾಗಬಾದಿ ಮತ್ತು ಉಪ್ಪುಣಸಿ ಗ್ರಾಮಗಳಲ್ಲಿ ಸಿಎಂ ಮತಬೇಟೆ ನಡೆಸಲಿದ್ದಾರೆ‌.) ಇನ್ನು, ಸಚಿವರಾದ ಡಾ.ಸುಧಾಕರ್, ಮುನಿರತ್ನ, ಬಿ.ಸಿ.ಪಾಟೀಲ್, ಎಸ್.ಟಿ.ಸೋಮಶೇಖರ್ ಸೇರಿ ಘಟಾನುಘಟಿಗಳ ದಂಡೇ ಕ್ಷೇತ್ರದಲ್ಲಿ ಬೀಡುಬಿಟ್ಟಿದ್ದು, ಕಮಲ ಅರಳಿಸಲು ಶ್ರಮಿಸುತ್ತಿದ್ದಾರೆ.

ಹಾನಗಲ್ ಅಖಾಡದಲ್ಲಿ ಸಿಎಂ ಬೊಮ್ಮಾಯಿ ಹಾವೇರಿ ಜಿಲ್ಲೆ ಹಾನಗಲ್ ಕ್ಷೇತ್ರದ ಉಪಚುನಾವಣೆ ಅಖಾಡಕ್ಕೆ ಸಿಎಂ ಬಸವರಾಜ ಬೊಮ್ಮಾಯಿ ಇಳಿದಿದ್ದು ನಿನ್ನೆಯಿಂದ ಕ್ಷೇತ್ರದಲ್ಲೇ ಬೀಡುಬಿಟ್ಟಿದ್ದಾರೆ. ಗೆಲುವಿಗಾಗಿ ಇನ್ನಿಲ್ಲದಂತೆ ಹೋರಾಡ್ತಿದ್ದಾರೆ. ನಿನ್ನೆ ರಾತ್ರಿ 7.30ರ ಸುಮಾರಿಗೆ ನರೇಗಲ್‌ನ ವಿರಕ್ತಮಠ ಮತ್ತು ಮಾರನಬೀಡದ ಚನ್ನಬಸವೇಶ್ವರ ಮಠಕ್ಕೆ ಭೇಟಿ ನೀಡಿದ್ರು. ನರೇಗಲ್‌ನಲ್ಲಿ ಮಲ್ಲಿಕಾರ್ಜುನ ಸ್ವಾಮೀಜಿ ಗದ್ದುಗೆ ದರ್ಶನ ಪಡೆದುಕೊಂಡ್ರೆ, ಮಾರನಬೀಡ ಗ್ರಾಮದಲ್ಲಿ ಚನ್ನಬಸವೇಶ್ವರ ಗದ್ದುಗೆ ದರ್ಶನ ಪಡೆದುಕೊಂಡ್ರು.. ಇದೇ ವೇಳೆ ಮಾತಾಡಿರುವ ಸಿಎಂ, ಕಾಂಗ್ರೆಸ್, ಜೆಡಿಎಸ್ನವರು ಅಲ್ಪಸಂಖ್ಯಾತರ ಮತಗಳಿಗಾಗಿ ಆರ್ಎಸ್ಎಸ್ ವಿರುದ್ಧ ಮಾತಾಡ್ತಿದ್ದಾರೆ ಅಂತಾ ಟಾಂಗ್ ಕೊಟ್ರು.

ಇದನ್ನೂ ಓದಿ: ದೇಶ ಅಭಿವೃದ್ಧಿಯಾಗಬೇಕಾದರೆ ಶಾಂತಿ ಮುಖ್ಯ: ಹುಬ್ಬಳ್ಳಿಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಾತು

Follow Us
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?