ಅಧಿಕಾರಿಗಳ ಎಡವಟ್ಟಿನಿಂದ ನೂರಾರು ಎಕರೆ ಜಲಾವೃತ: ಬೆಳೆ ಹಾನಿಯಾಗಿದಕ್ಕೆ ಕಣ್ಣಿರು ಹಾಕಿದ ರೈತ

ರಾಜ್ಯದಲ್ಲಿ ಬರದ ಛಾಯೆ ಆವರಿಸಿ ನೀರಿಲ್ಲದೆ ಬೆಳೆ ಒಣಗುತ್ತಿವೆ. ಆದರೆ ಹಾವೇರಿ ಜಿಲ್ಲೆಯ ಸವಣೂರು ತಾಲ್ಲೂಕಿನ ಹತ್ತಿಮತ್ತೂರು ಗ್ರಾಮದ ದೊಡ್ಡ ಕೆರೆಯ ನೀರಿನಿಂದ ಮೆಕ್ಕೆಜೋಳ, ಕಬ್ಬು, ಸುಗಂಧ ಹೂವಿನ ಬೆಳೆ ಜಲಾವೃತಗೊಂಡಿದೆ. ಕೆರೆಯ ಸುತ್ತುಮುತ್ತಲಿನ ರೈತರ ವಿವಿಧ ಬೆಳೆಗಳು ಹಾನಿಯಾಗಿವೆ. ಕಳೆದ ಮೂರು ವರ್ಷಗಳಿಂದ ಯಾವುದೇ ಒಂದು ಫಸಲು ಸಹ ಬಂದಿಲ್ಲ.

ಅಧಿಕಾರಿಗಳ ಎಡವಟ್ಟಿನಿಂದ ನೂರಾರು ಎಕರೆ ಜಲಾವೃತ: ಬೆಳೆ ಹಾನಿಯಾಗಿದಕ್ಕೆ ಕಣ್ಣಿರು ಹಾಕಿದ ರೈತ
ಜಮೀನಿಗೆ ನುಗ್ಗಿದ ನೀರು
Follow us
| Updated By: ಗಂಗಾಧರ​ ಬ. ಸಾಬೋಜಿ

Updated on: Oct 04, 2023 | 5:41 PM

ಹಾವೇರಿ, ಅಕ್ಟೋಬರ್​ 04: ರಾಜ್ಯದಲ್ಲಿ ಬರದ ಛಾಯೆ ಆವರಿಸಿ ನೀರಿಲ್ಲದೆ ಬೆಳೆ ಒಣಗುತ್ತಿವೆ. ಆದರೆ ಇಲ್ಲಿ ಮಾತ್ರ ನೂರಾರು ಏಕರೆ ಬೆಳೆ ಸಂಪೂರ್ಣ ಜಲಾವೃತ (Waterlogging) ಆಗಿದ್ದು, ನಮ್ಮ ಬೆಳೆಯನ್ನ ರಕ್ಷಿಸಿ ಎಂದು ಮನವಿ ಮಾಡಿದರು ಪರಿಹಾರ ಮಾತ್ರ ಸಿಗುತ್ತಿಲ್ಲ. ಜಿಲ್ಲೆಯ ಸವಣೂರು ತಾಲ್ಲೂಕಿನ ಹತ್ತಿಮತ್ತೂರು ಗ್ರಾಮದ ದೊಡ್ಡ ಕೆರೆಯ ನೀರಿನಿಂದ ಮೆಕ್ಕೆಜೋಳ, ಕಬ್ಬು, ಸುಗಂಧ ಹೂವಿನ ಬೆಳೆ ಜಲಾವೃತಗೊಂಡಿದೆ. ಕೆರೆಯ ಸುತ್ತುಮುತ್ತಲಿನ ರೈತರ ವಿವಿಧ ಬೆಳೆಗಳು ಹಾನಿಯಾಗಿವೆ. ಕಳೆದ ಮೂರು ವರ್ಷಗಳಿಂದ ಯಾವುದೇ ಒಂದು ಫಸಲು ಸಹ ಬಂದಿಲ್ಲ.

ಗ್ರಾಮದ ಬಳಿ 400 ಎಕರೆ ವಿಸ್ತೀರ್ಣ ಬೃಹತ್ ಕೆರೆ ಇದೆ. ಮಳೆಗಾಲದಲ್ಲಿ ಕೆರೆ ತುಂಬಿ ಕ್ರಮೇಣ ಕಡಿಮೆಯಾಗಿತ್ತು. ಸವಣೂರು ಏತನೀರಾವರಿ ಯೋಜನೆಯ ಮೂಲಕ 84 ಕೆರೆ ನೀರು ತುಂಬಿಸುವ ಯೋಜನೆಗೆ ಚಾಲನೆ ನೀಡಲಾಗಿತ್ತು. ವರದಾ ನದಿಯಿಂದ ಹತ್ತಿಮತ್ತೂರು ಕೆರೆಗೆ ನೀರು ಹರಿಸಿ, ಅಲ್ಲಿಂದ ಮತ್ತೆ ನಾಲ್ಕೈದು ಕೆರೆ ತುಂಬಿಸುವ ಯೋಜನೆಯಾಗಿದೆ. ಈ ಯೋಜನೆಯಿಂದ ಕೃಷಿಗೆ ಅನಕೂಲ ಆಗಿದೆ . ಆದರೆ ಕೆರೆಯ ಸುತ್ತುಮುತ್ತಲಿನ ರೈತರ ವಿವಿಧ ಬೆಳೆಗಳು ಹಾನಿಯಾಗಿವೆ.

ಇದನ್ನೂ ಓದಿ: ಕಾವೇರಿ ನೀರಿಗಾಗಿ ರಾಷ್ಟ್ರಪತಿಗಳಿಗೆ ರಕ್ತದಲ್ಲಿ ಪತ್ರ ಬರೆದ ಹಾವೇರಿ ಯುವಕ, ರೈತರಿಗೆ ಸ್ಪಂದಿಸುವಂತೆ ಮನವಿ

ಕಳೆದ ಮೂರು ವರ್ಷಗಳಿಂದ ತಹಶಿಲ್ದಾರ, ಕರ್ನಾಟಕ ನೀರಾವರಿ ನಿಗಮ ಸೇರಿದಂತೆ ವಿವಿಧ ಇಲಾಖೆಗೆ ಮನವಿ ಮಾಡಿದ್ದಾರೆ. ಯಾರು ಸಹ ಪರಿಗಣೆ ಮಾಡಿಲ್ಲ. ಕೆರೆ ಸುತ್ತಮುತ್ತಲೂ ಇರುವ 160 ಕ್ಕೂ ಅಧಿಕ ಎಕರೆ ಜಮೀನಿನಲ್ಲಿ ಬೆಳೆದ ಕಬ್ಬು, ಮೆಕ್ಕೆಜೋಳ, ಮೆಣಸಿನಕಾಯಿ, ಹಾಗೂ ತೋಟಗಾರಿಕೆ ಬೆಳೆ ಹಾನಿಯಾಗಿದೆ.

ಇದನ್ನೂ ಓದಿ: ಹಾವೇರಿ: ಕಡಿಮೆ ಬೆಲೆಗೆ ಚಿನ್ನದ ಆಸೆ ತೊರಿಸಿ 25 ಲಕ್ಷ ವಂಚನೆ; ಇಲ್ಲಿದೆ ವಿವರ

ಬ್ಯಾಂಕ್​ನಲ್ಲಿ ಇರುವ ಬೆಳೆಸಾಲ ಹೆಚ್ಚಾಗುತ್ತಿದೆ. ಆದರೆ ನಮ್ಮ ಸಮಸ್ಯೆ ಕೇಳುವವರು ಯಾರೂ ಇಲ್ಲ. ಇರುವುದೆ ನಮಗೆ ಒಂದು ಎಕರೆ, ಎರಡು ಎಕರೆ ಜಮೀನು. ಹೀಗೆ ಪ್ರತಿವರ್ಷ ಕೆರೆಯ ನೀರು ಜಮೀನಿಗೆ ‌ನುಗ್ಗಿದರೆ, ಫಸಲು ಎಲ್ಲಿಂದ ಬರಬೇಕು ಎಂದು ರೈತರು ಅಳಲು ತೊಡಿಕೊಂಡಿದ್ದಾರೆ.

ಮೂರು ವರ್ಷಗಳಿಂದ ಅನ್ನದಾತರು ಈ ಸಮಸ್ಯೆ ಇದೆ. ಇ‌ನ್ನದಾರೂ ನೀರಾವರಿ ಇಲಾಖೆ, ತಹಶಿಲ್ದಾರ ಹಾಗೂ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ, ನೊಂದ ರೈತರಿಗೆ ಸಮಸ್ಯೆ ಬಗೆಹರಿಸಬೇಕಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ