AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಧಿಕಾರಿಗಳ ಎಡವಟ್ಟಿನಿಂದ ನೂರಾರು ಎಕರೆ ಜಲಾವೃತ: ಬೆಳೆ ಹಾನಿಯಾಗಿದಕ್ಕೆ ಕಣ್ಣಿರು ಹಾಕಿದ ರೈತ

ರಾಜ್ಯದಲ್ಲಿ ಬರದ ಛಾಯೆ ಆವರಿಸಿ ನೀರಿಲ್ಲದೆ ಬೆಳೆ ಒಣಗುತ್ತಿವೆ. ಆದರೆ ಹಾವೇರಿ ಜಿಲ್ಲೆಯ ಸವಣೂರು ತಾಲ್ಲೂಕಿನ ಹತ್ತಿಮತ್ತೂರು ಗ್ರಾಮದ ದೊಡ್ಡ ಕೆರೆಯ ನೀರಿನಿಂದ ಮೆಕ್ಕೆಜೋಳ, ಕಬ್ಬು, ಸುಗಂಧ ಹೂವಿನ ಬೆಳೆ ಜಲಾವೃತಗೊಂಡಿದೆ. ಕೆರೆಯ ಸುತ್ತುಮುತ್ತಲಿನ ರೈತರ ವಿವಿಧ ಬೆಳೆಗಳು ಹಾನಿಯಾಗಿವೆ. ಕಳೆದ ಮೂರು ವರ್ಷಗಳಿಂದ ಯಾವುದೇ ಒಂದು ಫಸಲು ಸಹ ಬಂದಿಲ್ಲ.

ಅಧಿಕಾರಿಗಳ ಎಡವಟ್ಟಿನಿಂದ ನೂರಾರು ಎಕರೆ ಜಲಾವೃತ: ಬೆಳೆ ಹಾನಿಯಾಗಿದಕ್ಕೆ ಕಣ್ಣಿರು ಹಾಕಿದ ರೈತ
ಜಮೀನಿಗೆ ನುಗ್ಗಿದ ನೀರು
ಸೂರಜ್​, ಮಹಾವೀರ್​ ಉತ್ತರೆ
| Updated By: ಗಂಗಾಧರ​ ಬ. ಸಾಬೋಜಿ|

Updated on: Oct 04, 2023 | 5:41 PM

Share

ಹಾವೇರಿ, ಅಕ್ಟೋಬರ್​ 04: ರಾಜ್ಯದಲ್ಲಿ ಬರದ ಛಾಯೆ ಆವರಿಸಿ ನೀರಿಲ್ಲದೆ ಬೆಳೆ ಒಣಗುತ್ತಿವೆ. ಆದರೆ ಇಲ್ಲಿ ಮಾತ್ರ ನೂರಾರು ಏಕರೆ ಬೆಳೆ ಸಂಪೂರ್ಣ ಜಲಾವೃತ (Waterlogging) ಆಗಿದ್ದು, ನಮ್ಮ ಬೆಳೆಯನ್ನ ರಕ್ಷಿಸಿ ಎಂದು ಮನವಿ ಮಾಡಿದರು ಪರಿಹಾರ ಮಾತ್ರ ಸಿಗುತ್ತಿಲ್ಲ. ಜಿಲ್ಲೆಯ ಸವಣೂರು ತಾಲ್ಲೂಕಿನ ಹತ್ತಿಮತ್ತೂರು ಗ್ರಾಮದ ದೊಡ್ಡ ಕೆರೆಯ ನೀರಿನಿಂದ ಮೆಕ್ಕೆಜೋಳ, ಕಬ್ಬು, ಸುಗಂಧ ಹೂವಿನ ಬೆಳೆ ಜಲಾವೃತಗೊಂಡಿದೆ. ಕೆರೆಯ ಸುತ್ತುಮುತ್ತಲಿನ ರೈತರ ವಿವಿಧ ಬೆಳೆಗಳು ಹಾನಿಯಾಗಿವೆ. ಕಳೆದ ಮೂರು ವರ್ಷಗಳಿಂದ ಯಾವುದೇ ಒಂದು ಫಸಲು ಸಹ ಬಂದಿಲ್ಲ.

ಗ್ರಾಮದ ಬಳಿ 400 ಎಕರೆ ವಿಸ್ತೀರ್ಣ ಬೃಹತ್ ಕೆರೆ ಇದೆ. ಮಳೆಗಾಲದಲ್ಲಿ ಕೆರೆ ತುಂಬಿ ಕ್ರಮೇಣ ಕಡಿಮೆಯಾಗಿತ್ತು. ಸವಣೂರು ಏತನೀರಾವರಿ ಯೋಜನೆಯ ಮೂಲಕ 84 ಕೆರೆ ನೀರು ತುಂಬಿಸುವ ಯೋಜನೆಗೆ ಚಾಲನೆ ನೀಡಲಾಗಿತ್ತು. ವರದಾ ನದಿಯಿಂದ ಹತ್ತಿಮತ್ತೂರು ಕೆರೆಗೆ ನೀರು ಹರಿಸಿ, ಅಲ್ಲಿಂದ ಮತ್ತೆ ನಾಲ್ಕೈದು ಕೆರೆ ತುಂಬಿಸುವ ಯೋಜನೆಯಾಗಿದೆ. ಈ ಯೋಜನೆಯಿಂದ ಕೃಷಿಗೆ ಅನಕೂಲ ಆಗಿದೆ . ಆದರೆ ಕೆರೆಯ ಸುತ್ತುಮುತ್ತಲಿನ ರೈತರ ವಿವಿಧ ಬೆಳೆಗಳು ಹಾನಿಯಾಗಿವೆ.

ಇದನ್ನೂ ಓದಿ: ಕಾವೇರಿ ನೀರಿಗಾಗಿ ರಾಷ್ಟ್ರಪತಿಗಳಿಗೆ ರಕ್ತದಲ್ಲಿ ಪತ್ರ ಬರೆದ ಹಾವೇರಿ ಯುವಕ, ರೈತರಿಗೆ ಸ್ಪಂದಿಸುವಂತೆ ಮನವಿ

ಕಳೆದ ಮೂರು ವರ್ಷಗಳಿಂದ ತಹಶಿಲ್ದಾರ, ಕರ್ನಾಟಕ ನೀರಾವರಿ ನಿಗಮ ಸೇರಿದಂತೆ ವಿವಿಧ ಇಲಾಖೆಗೆ ಮನವಿ ಮಾಡಿದ್ದಾರೆ. ಯಾರು ಸಹ ಪರಿಗಣೆ ಮಾಡಿಲ್ಲ. ಕೆರೆ ಸುತ್ತಮುತ್ತಲೂ ಇರುವ 160 ಕ್ಕೂ ಅಧಿಕ ಎಕರೆ ಜಮೀನಿನಲ್ಲಿ ಬೆಳೆದ ಕಬ್ಬು, ಮೆಕ್ಕೆಜೋಳ, ಮೆಣಸಿನಕಾಯಿ, ಹಾಗೂ ತೋಟಗಾರಿಕೆ ಬೆಳೆ ಹಾನಿಯಾಗಿದೆ.

ಇದನ್ನೂ ಓದಿ: ಹಾವೇರಿ: ಕಡಿಮೆ ಬೆಲೆಗೆ ಚಿನ್ನದ ಆಸೆ ತೊರಿಸಿ 25 ಲಕ್ಷ ವಂಚನೆ; ಇಲ್ಲಿದೆ ವಿವರ

ಬ್ಯಾಂಕ್​ನಲ್ಲಿ ಇರುವ ಬೆಳೆಸಾಲ ಹೆಚ್ಚಾಗುತ್ತಿದೆ. ಆದರೆ ನಮ್ಮ ಸಮಸ್ಯೆ ಕೇಳುವವರು ಯಾರೂ ಇಲ್ಲ. ಇರುವುದೆ ನಮಗೆ ಒಂದು ಎಕರೆ, ಎರಡು ಎಕರೆ ಜಮೀನು. ಹೀಗೆ ಪ್ರತಿವರ್ಷ ಕೆರೆಯ ನೀರು ಜಮೀನಿಗೆ ‌ನುಗ್ಗಿದರೆ, ಫಸಲು ಎಲ್ಲಿಂದ ಬರಬೇಕು ಎಂದು ರೈತರು ಅಳಲು ತೊಡಿಕೊಂಡಿದ್ದಾರೆ.

ಮೂರು ವರ್ಷಗಳಿಂದ ಅನ್ನದಾತರು ಈ ಸಮಸ್ಯೆ ಇದೆ. ಇ‌ನ್ನದಾರೂ ನೀರಾವರಿ ಇಲಾಖೆ, ತಹಶಿಲ್ದಾರ ಹಾಗೂ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ, ನೊಂದ ರೈತರಿಗೆ ಸಮಸ್ಯೆ ಬಗೆಹರಿಸಬೇಕಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

IND vs ENG: ಇಂಡಿಯಾ ವಿರುದ್ಧ ಇಂಗ್ಲೆಂಡ್ ಮೋಸದಾಟ... ಆದ್ರೂ ಗೆಲ್ಲಲಿಲ್ಲ..
IND vs ENG: ಇಂಡಿಯಾ ವಿರುದ್ಧ ಇಂಗ್ಲೆಂಡ್ ಮೋಸದಾಟ... ಆದ್ರೂ ಗೆಲ್ಲಲಿಲ್ಲ..
ಟೀಮ್ ಇಂಡಿಯಾ ಆಟಗಾರರ ಶತಕ ತಪ್ಪಿಸಲು ಮುಂದಾಗಿದ್ದ ಸ್ಟೋಕ್ಸ್
ಟೀಮ್ ಇಂಡಿಯಾ ಆಟಗಾರರ ಶತಕ ತಪ್ಪಿಸಲು ಮುಂದಾಗಿದ್ದ ಸ್ಟೋಕ್ಸ್
ವರಮಹಾಲಕ್ಷ್ಮೀ ಹಬ್ಬ ಆಚರಣೆ ದಿನಾಂಕ ಯಾವಾಗ? ಆಚರಣೆ ಹೇಗೆ , ಫಲಗಳೇನು?
ವರಮಹಾಲಕ್ಷ್ಮೀ ಹಬ್ಬ ಆಚರಣೆ ದಿನಾಂಕ ಯಾವಾಗ? ಆಚರಣೆ ಹೇಗೆ , ಫಲಗಳೇನು?
ಇಂದು ವಿನಾಯಕಿ ಚತುರ್ಥಿ: ದ್ವಾದಶ ರಾಶಿ ಭವಿಷ್ಯ ಹೇಗಿದೆ ನೋಡಿ
ಇಂದು ವಿನಾಯಕಿ ಚತುರ್ಥಿ: ದ್ವಾದಶ ರಾಶಿ ಭವಿಷ್ಯ ಹೇಗಿದೆ ನೋಡಿ
ಪ್ರಥಮ್​ ಮೇಲೆ ಅಟ್ಯಾಕ್: ಅಲ್ಲೇ ಇದ್ದರು ರಕ್ಷಕ್ ಸುಮ್ಮನಿದ್ದಿದ್ದು ಏಕೆ?
ಪ್ರಥಮ್​ ಮೇಲೆ ಅಟ್ಯಾಕ್: ಅಲ್ಲೇ ಇದ್ದರು ರಕ್ಷಕ್ ಸುಮ್ಮನಿದ್ದಿದ್ದು ಏಕೆ?
ರೌಡಿಗಳ ಜೊತೆಗೆ ರಕ್ಷಕ್​ಗೆ ಏನು ಕೆಲಸ: ಪ್ರಥಮ್ ಆಕ್ರೋಶ
ರೌಡಿಗಳ ಜೊತೆಗೆ ರಕ್ಷಕ್​ಗೆ ಏನು ಕೆಲಸ: ಪ್ರಥಮ್ ಆಕ್ರೋಶ
ಚಡ್ಡಿಯಲ್ಲಿ ಬಂದು ಒಣಗಲು ಹಾಕಿದ್ದ ಬಟ್ಟೆಗಳನ್ನು ಕದ್ದು ಓಡಿದ ಭೂಪ
ಚಡ್ಡಿಯಲ್ಲಿ ಬಂದು ಒಣಗಲು ಹಾಕಿದ್ದ ಬಟ್ಟೆಗಳನ್ನು ಕದ್ದು ಓಡಿದ ಭೂಪ
‘ಸು ಫ್ರಮ್ ಸೋ’ ನಿರ್ದೇಶಕರಿಗೆ ತಾಯಿಯಿಂದ ಸಿಕ್ತು ಬೆಸ್ಟ್ ಪ್ರತಿಕ್ರಿಯೆ
‘ಸು ಫ್ರಮ್ ಸೋ’ ನಿರ್ದೇಶಕರಿಗೆ ತಾಯಿಯಿಂದ ಸಿಕ್ತು ಬೆಸ್ಟ್ ಪ್ರತಿಕ್ರಿಯೆ
ಬಿಳಿ ಪಂಚೆ ಧರಿಸಿ ಚೋಳಪುರಂ ದೇವಸ್ಥಾನಕ್ಕೆ ಭೇಟಿ ಕೊಟ್ಟ ಪ್ರಧಾನಿ ಮೋದಿ
ಬಿಳಿ ಪಂಚೆ ಧರಿಸಿ ಚೋಳಪುರಂ ದೇವಸ್ಥಾನಕ್ಕೆ ಭೇಟಿ ಕೊಟ್ಟ ಪ್ರಧಾನಿ ಮೋದಿ
ಮೈಸೂರಿನಲ್ಲೇ ಡ್ರಗ್ಸ್​ ತಯಾರಿಕಾ ಘಟಕ: ಸ್ಫೋಟಕ ಅಂಶ ಬಾಯ್ಬಿಟ್ಟ ಪೆಡ್ಲರ್
ಮೈಸೂರಿನಲ್ಲೇ ಡ್ರಗ್ಸ್​ ತಯಾರಿಕಾ ಘಟಕ: ಸ್ಫೋಟಕ ಅಂಶ ಬಾಯ್ಬಿಟ್ಟ ಪೆಡ್ಲರ್