AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಾವೇರಿ: ಕಿಟ್ ಕೊಡುವುದಾಗಿ ಕರೆದು ಕೊನೆಗೆ ಕಿಟ್​ ಇಲ್ಲವೆಂದ ಅಧಿಕಾರಿಗಳು, ಕಾರ್ಮಿಕರ ಆಕ್ರೋಶ

ಅವರೆಲ್ಲ ದುಡಿಯುವ ಕಾರ್ಮಿಕರು. ಅವರ ಮಕ್ಕಳಿಗೆ ಕಾರ್ಮಿಕ ಇಲಾಖೆಯಿಂದ ಕಿಟ್ ನೀಡುವುದಾಗಿ ಘೋಷಣೆ ಮಾಡಿದ್ದರು. ಅದರೆ ಹೋಗಿ ಕೇಳಿದರೆ ಕಿಟ್ ಖಾಲಿ ಆಗಿವೆ ನಾಳೆ ಬನ್ನಿ ಅಂತಿದ್ದಾರೆ. ಇದರಿಂದ ಕಾರ್ಮಿಕ ಇಲಾಖೆಯ ಸಿಬ್ಬಂದಿಯನ್ನ ಫಲಾನುಭವಿಗಳು ತರಾಟೆಗೆ ತೆಗೆದುಕೊಂಡಿರುವ ಘಟನೆ ನಡೆದಿದೆ.

ಹಾವೇರಿ:  ಕಿಟ್ ಕೊಡುವುದಾಗಿ ಕರೆದು ಕೊನೆಗೆ ಕಿಟ್​ ಇಲ್ಲವೆಂದ ಅಧಿಕಾರಿಗಳು, ಕಾರ್ಮಿಕರ ಆಕ್ರೋಶ
ಕಾರ್ಮಿಕ ಕಿಟ್​ಗಾಗಿ ಕಾದು ಸುಸ್ತಾದ ಕಾರ್ಮಿಕರು
ಕಿರಣ್ ಹನುಮಂತ್​ ಮಾದಾರ್
|

Updated on: Mar 30, 2023 | 9:14 AM

Share

ಹಾವೇರಿ: ಶಾಲಾ ಕಿಟ್ ಪಡೆಯಲು ಕ್ಯೂ‌ ನಿಂತಿರುವ ಜನರು. ಅಧಿಕಾರಿಗಳನ್ನ ತರಾಟೆಗೆ ತೆಗೆದುಕೊಂಡ ಫಲಾನುಭವಿಗಳು. ಎಪಿಎಂಸಿ ಆವರಣದಲ್ಲಿ ಸೇರಿರುವ ಸಾವಿರಾರು ಜನರು. ಇದು ಹಾವೇರಿ ಎಪಿಎಂಸಿ ಆವರಣದಲ್ಲಿ ಕಂಡುಬಂದ ದೃಶ್ಯಗಳಿವು. ಹೌದು ಕಾರ್ಮಿಕ ಇಲಾಖೆಯ ಕಾರ್ಮಿಕ ಕಾರ್ಡ್ ಹೊಂದಿದ್ದ ಕಾರ್ಮಿಕರ ಮಕ್ಕಳಿಗೆ ಶಾಲೆಯ ಕಿಟ್ ನೀಡುವುದಾಗಿ ಹೇಳಿದ್ದರು. ಹೀಗಾಗಿ ಹಾವೇರಿ, ಸವಣೂರು ಮತ್ತು ಶಿಗ್ಗಾಂವಿ ತಾಲ್ಲೂಕಿನ ಫಲಾನುಭವಿಗಳು ಹಾವೇರಿ ಎಪಿಎಂಸಿ ಆವರಣಕ್ಕೆ ಅಗಮಿಸಿದ್ದರು. ನೂರಾರು ಜನರು ಬೆಳಗ್ಗಿನಿಂದಲೇ ಕ್ಯೂ ಹಚ್ಚಿ ನಿಂತಿದ್ದರು. ಅದರೆ ಕೇವಲ 150 ಕಿಟ್​ಗಳು ಇವೆ. ನಾಳೆ ಬನ್ನಿ ಎಂದು ಹೇಳಿ ಕಳಿಸುತ್ತಿದ್ದರು. ಇದರಿಂದ ಆಕ್ರೋಶಗೊಂಡ ಫಲಾನುಭವಿಗಳು ಇಲಾಖೆಯ ಅಧಿಕಾರಿಗಳನ್ನ ತರಾಟೆಗೆ ತೆಗೆದುಕೊಂಡಿದ್ದಾರೆ. ನಾವು ಯಾರು ಕಿಟ್ ಕೇಳಿರಲಿಲ್ಲ. ಶಾಲೆಯ ಕಿಟ್ ಕೊಡುವುದಾಗಿ ಕರೆಸಿ ಈಗ ಕಿಟ್​ಗಳನ್ನ ಬೇರೆ ಕಡೆ ಕಳಿಸಿ ಮಾರಿಕೊಂಡಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಜಿಲ್ಲೆಯಲ್ಲಿ ಎರಡುವರೆ ಲಕ್ಷಕ್ಕೂ ಅಧಿಕ ಕಾರ್ಮಿಕರಿದ್ದಾರೆ. ಅದರಲ್ಲಿ 60 ಸಾವಿರಕ್ಕೂ ಅಧಿಕ ಕಾರ್ಮಿಕರ ಮಕ್ಕಳು, 9, 10 ನೇ ತರಗತಿ ಹಾಗೂ ಪಿಯುಸಿ ವಿದ್ಯಾಭ್ಯಾಸ ಮಾಡುತ್ತಿದ್ದಾರೆ. ಸರ್ಕಾರದಿಂದ ಪ್ರತಿಯೊಂದು ತಾಲೂಕಿಗೆ 250 ಕಿಟ್​ಗಳು ಬಂದಿವೆ.‌ ನಿನ್ನೆ‌,‌ ಮೊನ್ನೆ ಎರಡು ತಾಲ್ಲೂಕಿನ ಫಲಾನುಭವಿಗಳಿಗೆ ಕಿಟ್ ವಿತರಣೆ ಮಾಡಲಾಗಿದೆ. ಕಿಟ್ ತೆಗೆದುಕೊಂಡು ಹೋದ ಜನರು ಕಾರ್ಮಿಕರಿಗೆ ಹೇಳಿದ್ದು, ಇವತ್ತು ಸಾವಿರಾರು ಕಾರ್ಮಿಕ ಫಲಾನುಭವಿಗಳು ಬಂದಿದ್ದಾರೆ. ಸರ್ಕಾರದ ಗಮನಕ್ಕೆ ತಂದು, ಎಲ್ಲರಿಗೂ ತಲುಪಿಸುವ ವ್ಯವಸ್ಥೆ ಮಾಡುತ್ತೇವೆ ಎನ್ನುತ್ತಾರೆ ಕಾರ್ಮಿಕ ಇಲಾಖೆಯ ಉಪನಿರ್ದೇಶಕರು.

ಒಟ್ಟಿನಲ್ಲಿ ಹಾವೇರಿ ಎಪಿಎಂಸಿ ಆವರಣದಲ್ಲಿ ಕಾರ್ಮಿಕ ಇಲಾಖೆಯಿಂದ ನೀಡುವ ಶಾಲಾ ಕಿಟ್​ಗಳಿಗೆ ಸಾವಿರಾರು ಫಲಾನುಭವಿಗಳು ಮುಗಿಬಿದ್ದರು. ಅದರೆ ಕಿಟ್​ಗಳು ಕಡಿಮೆ ಇರುವ ಹಿನ್ನಲೆಯಲ್ಲಿ ಕಾರ್ಮಿಕ ಇಲಾಖೆಯ ಸಿಬ್ಬಂದಿ ಕಂಗಾಲಾಗಿದ್ದರು. ಚುನಾವಣೆಯ ನೀತಿ ಸಂಹಿತೆ ಘೋಷಣೆ ಆಗುತ್ತಿದ್ದಂತೆ ಫಲಾನುಭವಿಗಳು ಕಾದು ಕಾದು ಸುಸ್ತಾಗಿ ಮನೆಗೆ ಹೋಗಿದ್ದಾರೆ.

ಇನ್ನಷ್ಟು ರಾಜ್ಯಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
Kiran Hanumant Madar
Kiran Hanumant Madar

ಹುಟ್ಟೂರು- ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ಮಾವಿನಕಟ್ಟ, ಶಿರಸಿಯಲ್ಲಿ ಬಿ.ಎ ಪತ್ರಿಕೋಧ್ಯಮ ಮುಗಿಸಿ, ವಾರ್ತಾ ಇಲಾಖೆಯಲ್ಲಿ ಒಂದು ವರ್ಷದ ತರಭೇತಿ ಪಡೆದು, ಟಿವಿ9 ಡಿಜಿಟಲ್​ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ.

Read More
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!