AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಾವೇರಿ: ಕಿಟ್ ಕೊಡುವುದಾಗಿ ಕರೆದು ಕೊನೆಗೆ ಕಿಟ್​ ಇಲ್ಲವೆಂದ ಅಧಿಕಾರಿಗಳು, ಕಾರ್ಮಿಕರ ಆಕ್ರೋಶ

ಅವರೆಲ್ಲ ದುಡಿಯುವ ಕಾರ್ಮಿಕರು. ಅವರ ಮಕ್ಕಳಿಗೆ ಕಾರ್ಮಿಕ ಇಲಾಖೆಯಿಂದ ಕಿಟ್ ನೀಡುವುದಾಗಿ ಘೋಷಣೆ ಮಾಡಿದ್ದರು. ಅದರೆ ಹೋಗಿ ಕೇಳಿದರೆ ಕಿಟ್ ಖಾಲಿ ಆಗಿವೆ ನಾಳೆ ಬನ್ನಿ ಅಂತಿದ್ದಾರೆ. ಇದರಿಂದ ಕಾರ್ಮಿಕ ಇಲಾಖೆಯ ಸಿಬ್ಬಂದಿಯನ್ನ ಫಲಾನುಭವಿಗಳು ತರಾಟೆಗೆ ತೆಗೆದುಕೊಂಡಿರುವ ಘಟನೆ ನಡೆದಿದೆ.

ಹಾವೇರಿ:  ಕಿಟ್ ಕೊಡುವುದಾಗಿ ಕರೆದು ಕೊನೆಗೆ ಕಿಟ್​ ಇಲ್ಲವೆಂದ ಅಧಿಕಾರಿಗಳು, ಕಾರ್ಮಿಕರ ಆಕ್ರೋಶ
ಕಾರ್ಮಿಕ ಕಿಟ್​ಗಾಗಿ ಕಾದು ಸುಸ್ತಾದ ಕಾರ್ಮಿಕರು
ಕಿರಣ್ ಹನುಮಂತ್​ ಮಾದಾರ್
ಕಿರಣ್ ಹನುಮಂತ್​ ಮಾದಾರ್|

Updated on: Mar 30, 2023 | 9:14 AM

Share

ಮುಖ್ಯಾಂಶಗಳು

  • ಕಾರ್ಮಿಕ ಕಾರ್ಡ್​ ಹೊಂದಿದವರಿಗೆ ಕಿಟ್​ ಕೊಡುವುದಾಗಿ ಕರೆಯಿಸಿ ಕಿಟ್​ ಖಾಲಿ ಎಂದ ಅಧಿಕಾರಿಗಳ ವಿರುದ್ದ ಆಕ್ರೋಶ ವ್ಯಕ್ತಪಡಿಸಿದ ಕಾರ್ಮಿಕರು
  • ಕಿಟ್ ಕೊಡುವುದಾಗಿ ಕರೆಸಿ ಈಗ ಕಿಟ್​ಗಳನ್ನ ಬೇರೆ ಕಡೆ ಕಳಿಸಿ ಮಾರಿಕೊಂಡಿದ್ದಾರೆ ಎಂದು ಕಾರ್ಮಿಕರ ಕಾರ್ಡ್ ಹೊಂದಿದವರ ಆಕ್ರೋಶ
  • ಕಿಟ್​ ಖಾಲಿಯಾಗಿದ್ದು, ಸರ್ಕಾರದ ಗಮನಕ್ಕೆ ತಂದು, ಎಲ್ಲರಿಗೂ ತಲುಪಿಸುವ ವ್ಯವಸ್ಥೆ ಮಾಡುತ್ತೇವೆ ಎಂದ ಕಾರ್ಮಿಕ ಅಧಿಕಾರಿಗಳು

ಹಾವೇರಿ: ಶಾಲಾ ಕಿಟ್ ಪಡೆಯಲು ಕ್ಯೂ‌ ನಿಂತಿರುವ ಜನರು. ಅಧಿಕಾರಿಗಳನ್ನ ತರಾಟೆಗೆ ತೆಗೆದುಕೊಂಡ ಫಲಾನುಭವಿಗಳು. ಎಪಿಎಂಸಿ ಆವರಣದಲ್ಲಿ ಸೇರಿರುವ ಸಾವಿರಾರು ಜನರು. ಇದು ಹಾವೇರಿ ಎಪಿಎಂಸಿ ಆವರಣದಲ್ಲಿ ಕಂಡುಬಂದ ದೃಶ್ಯಗಳಿವು. ಹೌದು ಕಾರ್ಮಿಕ ಇಲಾಖೆಯ ಕಾರ್ಮಿಕ ಕಾರ್ಡ್ ಹೊಂದಿದ್ದ ಕಾರ್ಮಿಕರ ಮಕ್ಕಳಿಗೆ ಶಾಲೆಯ ಕಿಟ್ ನೀಡುವುದಾಗಿ ಹೇಳಿದ್ದರು. ಹೀಗಾಗಿ ಹಾವೇರಿ, ಸವಣೂರು ಮತ್ತು ಶಿಗ್ಗಾಂವಿ ತಾಲ್ಲೂಕಿನ ಫಲಾನುಭವಿಗಳು ಹಾವೇರಿ ಎಪಿಎಂಸಿ ಆವರಣಕ್ಕೆ ಅಗಮಿಸಿದ್ದರು. ನೂರಾರು ಜನರು ಬೆಳಗ್ಗಿನಿಂದಲೇ ಕ್ಯೂ ಹಚ್ಚಿ ನಿಂತಿದ್ದರು. ಅದರೆ ಕೇವಲ 150 ಕಿಟ್​ಗಳು ಇವೆ. ನಾಳೆ ಬನ್ನಿ ಎಂದು ಹೇಳಿ ಕಳಿಸುತ್ತಿದ್ದರು. ಇದರಿಂದ ಆಕ್ರೋಶಗೊಂಡ ಫಲಾನುಭವಿಗಳು ಇಲಾಖೆಯ ಅಧಿಕಾರಿಗಳನ್ನ ತರಾಟೆಗೆ ತೆಗೆದುಕೊಂಡಿದ್ದಾರೆ. ನಾವು ಯಾರು ಕಿಟ್ ಕೇಳಿರಲಿಲ್ಲ. ಶಾಲೆಯ ಕಿಟ್ ಕೊಡುವುದಾಗಿ ಕರೆಸಿ ಈಗ ಕಿಟ್​ಗಳನ್ನ ಬೇರೆ ಕಡೆ ಕಳಿಸಿ ಮಾರಿಕೊಂಡಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಜಿಲ್ಲೆಯಲ್ಲಿ ಎರಡುವರೆ ಲಕ್ಷಕ್ಕೂ ಅಧಿಕ ಕಾರ್ಮಿಕರಿದ್ದಾರೆ. ಅದರಲ್ಲಿ 60 ಸಾವಿರಕ್ಕೂ ಅಧಿಕ ಕಾರ್ಮಿಕರ ಮಕ್ಕಳು, 9, 10 ನೇ ತರಗತಿ ಹಾಗೂ ಪಿಯುಸಿ ವಿದ್ಯಾಭ್ಯಾಸ ಮಾಡುತ್ತಿದ್ದಾರೆ. ಸರ್ಕಾರದಿಂದ ಪ್ರತಿಯೊಂದು ತಾಲೂಕಿಗೆ 250 ಕಿಟ್​ಗಳು ಬಂದಿವೆ.‌ ನಿನ್ನೆ‌,‌ ಮೊನ್ನೆ ಎರಡು ತಾಲ್ಲೂಕಿನ ಫಲಾನುಭವಿಗಳಿಗೆ ಕಿಟ್ ವಿತರಣೆ ಮಾಡಲಾಗಿದೆ. ಕಿಟ್ ತೆಗೆದುಕೊಂಡು ಹೋದ ಜನರು ಕಾರ್ಮಿಕರಿಗೆ ಹೇಳಿದ್ದು, ಇವತ್ತು ಸಾವಿರಾರು ಕಾರ್ಮಿಕ ಫಲಾನುಭವಿಗಳು ಬಂದಿದ್ದಾರೆ. ಸರ್ಕಾರದ ಗಮನಕ್ಕೆ ತಂದು, ಎಲ್ಲರಿಗೂ ತಲುಪಿಸುವ ವ್ಯವಸ್ಥೆ ಮಾಡುತ್ತೇವೆ ಎನ್ನುತ್ತಾರೆ ಕಾರ್ಮಿಕ ಇಲಾಖೆಯ ಉಪನಿರ್ದೇಶಕರು.

ಒಟ್ಟಿನಲ್ಲಿ ಹಾವೇರಿ ಎಪಿಎಂಸಿ ಆವರಣದಲ್ಲಿ ಕಾರ್ಮಿಕ ಇಲಾಖೆಯಿಂದ ನೀಡುವ ಶಾಲಾ ಕಿಟ್​ಗಳಿಗೆ ಸಾವಿರಾರು ಫಲಾನುಭವಿಗಳು ಮುಗಿಬಿದ್ದರು. ಅದರೆ ಕಿಟ್​ಗಳು ಕಡಿಮೆ ಇರುವ ಹಿನ್ನಲೆಯಲ್ಲಿ ಕಾರ್ಮಿಕ ಇಲಾಖೆಯ ಸಿಬ್ಬಂದಿ ಕಂಗಾಲಾಗಿದ್ದರು. ಚುನಾವಣೆಯ ನೀತಿ ಸಂಹಿತೆ ಘೋಷಣೆ ಆಗುತ್ತಿದ್ದಂತೆ ಫಲಾನುಭವಿಗಳು ಕಾದು ಕಾದು ಸುಸ್ತಾಗಿ ಮನೆಗೆ ಹೋಗಿದ್ದಾರೆ.

ಇನ್ನಷ್ಟು ರಾಜ್ಯಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್