AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಾವೇರಿ: ಕಿಟ್ ಕೊಡುವುದಾಗಿ ಕರೆದು ಕೊನೆಗೆ ಕಿಟ್​ ಇಲ್ಲವೆಂದ ಅಧಿಕಾರಿಗಳು, ಕಾರ್ಮಿಕರ ಆಕ್ರೋಶ

ಅವರೆಲ್ಲ ದುಡಿಯುವ ಕಾರ್ಮಿಕರು. ಅವರ ಮಕ್ಕಳಿಗೆ ಕಾರ್ಮಿಕ ಇಲಾಖೆಯಿಂದ ಕಿಟ್ ನೀಡುವುದಾಗಿ ಘೋಷಣೆ ಮಾಡಿದ್ದರು. ಅದರೆ ಹೋಗಿ ಕೇಳಿದರೆ ಕಿಟ್ ಖಾಲಿ ಆಗಿವೆ ನಾಳೆ ಬನ್ನಿ ಅಂತಿದ್ದಾರೆ. ಇದರಿಂದ ಕಾರ್ಮಿಕ ಇಲಾಖೆಯ ಸಿಬ್ಬಂದಿಯನ್ನ ಫಲಾನುಭವಿಗಳು ತರಾಟೆಗೆ ತೆಗೆದುಕೊಂಡಿರುವ ಘಟನೆ ನಡೆದಿದೆ.

ಹಾವೇರಿ:  ಕಿಟ್ ಕೊಡುವುದಾಗಿ ಕರೆದು ಕೊನೆಗೆ ಕಿಟ್​ ಇಲ್ಲವೆಂದ ಅಧಿಕಾರಿಗಳು, ಕಾರ್ಮಿಕರ ಆಕ್ರೋಶ
ಕಾರ್ಮಿಕ ಕಿಟ್​ಗಾಗಿ ಕಾದು ಸುಸ್ತಾದ ಕಾರ್ಮಿಕರು
ಕಿರಣ್ ಹನುಮಂತ್​ ಮಾದಾರ್
|

Updated on: Mar 30, 2023 | 9:14 AM

Share

ಹಾವೇರಿ: ಶಾಲಾ ಕಿಟ್ ಪಡೆಯಲು ಕ್ಯೂ‌ ನಿಂತಿರುವ ಜನರು. ಅಧಿಕಾರಿಗಳನ್ನ ತರಾಟೆಗೆ ತೆಗೆದುಕೊಂಡ ಫಲಾನುಭವಿಗಳು. ಎಪಿಎಂಸಿ ಆವರಣದಲ್ಲಿ ಸೇರಿರುವ ಸಾವಿರಾರು ಜನರು. ಇದು ಹಾವೇರಿ ಎಪಿಎಂಸಿ ಆವರಣದಲ್ಲಿ ಕಂಡುಬಂದ ದೃಶ್ಯಗಳಿವು. ಹೌದು ಕಾರ್ಮಿಕ ಇಲಾಖೆಯ ಕಾರ್ಮಿಕ ಕಾರ್ಡ್ ಹೊಂದಿದ್ದ ಕಾರ್ಮಿಕರ ಮಕ್ಕಳಿಗೆ ಶಾಲೆಯ ಕಿಟ್ ನೀಡುವುದಾಗಿ ಹೇಳಿದ್ದರು. ಹೀಗಾಗಿ ಹಾವೇರಿ, ಸವಣೂರು ಮತ್ತು ಶಿಗ್ಗಾಂವಿ ತಾಲ್ಲೂಕಿನ ಫಲಾನುಭವಿಗಳು ಹಾವೇರಿ ಎಪಿಎಂಸಿ ಆವರಣಕ್ಕೆ ಅಗಮಿಸಿದ್ದರು. ನೂರಾರು ಜನರು ಬೆಳಗ್ಗಿನಿಂದಲೇ ಕ್ಯೂ ಹಚ್ಚಿ ನಿಂತಿದ್ದರು. ಅದರೆ ಕೇವಲ 150 ಕಿಟ್​ಗಳು ಇವೆ. ನಾಳೆ ಬನ್ನಿ ಎಂದು ಹೇಳಿ ಕಳಿಸುತ್ತಿದ್ದರು. ಇದರಿಂದ ಆಕ್ರೋಶಗೊಂಡ ಫಲಾನುಭವಿಗಳು ಇಲಾಖೆಯ ಅಧಿಕಾರಿಗಳನ್ನ ತರಾಟೆಗೆ ತೆಗೆದುಕೊಂಡಿದ್ದಾರೆ. ನಾವು ಯಾರು ಕಿಟ್ ಕೇಳಿರಲಿಲ್ಲ. ಶಾಲೆಯ ಕಿಟ್ ಕೊಡುವುದಾಗಿ ಕರೆಸಿ ಈಗ ಕಿಟ್​ಗಳನ್ನ ಬೇರೆ ಕಡೆ ಕಳಿಸಿ ಮಾರಿಕೊಂಡಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಜಿಲ್ಲೆಯಲ್ಲಿ ಎರಡುವರೆ ಲಕ್ಷಕ್ಕೂ ಅಧಿಕ ಕಾರ್ಮಿಕರಿದ್ದಾರೆ. ಅದರಲ್ಲಿ 60 ಸಾವಿರಕ್ಕೂ ಅಧಿಕ ಕಾರ್ಮಿಕರ ಮಕ್ಕಳು, 9, 10 ನೇ ತರಗತಿ ಹಾಗೂ ಪಿಯುಸಿ ವಿದ್ಯಾಭ್ಯಾಸ ಮಾಡುತ್ತಿದ್ದಾರೆ. ಸರ್ಕಾರದಿಂದ ಪ್ರತಿಯೊಂದು ತಾಲೂಕಿಗೆ 250 ಕಿಟ್​ಗಳು ಬಂದಿವೆ.‌ ನಿನ್ನೆ‌,‌ ಮೊನ್ನೆ ಎರಡು ತಾಲ್ಲೂಕಿನ ಫಲಾನುಭವಿಗಳಿಗೆ ಕಿಟ್ ವಿತರಣೆ ಮಾಡಲಾಗಿದೆ. ಕಿಟ್ ತೆಗೆದುಕೊಂಡು ಹೋದ ಜನರು ಕಾರ್ಮಿಕರಿಗೆ ಹೇಳಿದ್ದು, ಇವತ್ತು ಸಾವಿರಾರು ಕಾರ್ಮಿಕ ಫಲಾನುಭವಿಗಳು ಬಂದಿದ್ದಾರೆ. ಸರ್ಕಾರದ ಗಮನಕ್ಕೆ ತಂದು, ಎಲ್ಲರಿಗೂ ತಲುಪಿಸುವ ವ್ಯವಸ್ಥೆ ಮಾಡುತ್ತೇವೆ ಎನ್ನುತ್ತಾರೆ ಕಾರ್ಮಿಕ ಇಲಾಖೆಯ ಉಪನಿರ್ದೇಶಕರು.

ಒಟ್ಟಿನಲ್ಲಿ ಹಾವೇರಿ ಎಪಿಎಂಸಿ ಆವರಣದಲ್ಲಿ ಕಾರ್ಮಿಕ ಇಲಾಖೆಯಿಂದ ನೀಡುವ ಶಾಲಾ ಕಿಟ್​ಗಳಿಗೆ ಸಾವಿರಾರು ಫಲಾನುಭವಿಗಳು ಮುಗಿಬಿದ್ದರು. ಅದರೆ ಕಿಟ್​ಗಳು ಕಡಿಮೆ ಇರುವ ಹಿನ್ನಲೆಯಲ್ಲಿ ಕಾರ್ಮಿಕ ಇಲಾಖೆಯ ಸಿಬ್ಬಂದಿ ಕಂಗಾಲಾಗಿದ್ದರು. ಚುನಾವಣೆಯ ನೀತಿ ಸಂಹಿತೆ ಘೋಷಣೆ ಆಗುತ್ತಿದ್ದಂತೆ ಫಲಾನುಭವಿಗಳು ಕಾದು ಕಾದು ಸುಸ್ತಾಗಿ ಮನೆಗೆ ಹೋಗಿದ್ದಾರೆ.

ಇನ್ನಷ್ಟು ರಾಜ್ಯಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Video: ಗಾಳಿಯ ರಭಸಕ್ಕೆ ಕುಸಿದು ಬಿತ್ತು ಬ್ರೆಜಿಲ್​ನ ಲಿಬರ್ಟಿ ಸ್ಟ್ಯಾಚ್ಯೂ
Video: ಗಾಳಿಯ ರಭಸಕ್ಕೆ ಕುಸಿದು ಬಿತ್ತು ಬ್ರೆಜಿಲ್​ನ ಲಿಬರ್ಟಿ ಸ್ಟ್ಯಾಚ್ಯೂ
ವೇದಿಕೆಯಲ್ಲಿ ವೈದ್ಯೆಯ ಹಿಜಾಬ್ ಎಳೆದ ಸಿಎಂ ನಿತೀಶ್ ಕುಮಾರ್
ವೇದಿಕೆಯಲ್ಲಿ ವೈದ್ಯೆಯ ಹಿಜಾಬ್ ಎಳೆದ ಸಿಎಂ ನಿತೀಶ್ ಕುಮಾರ್
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು