AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಾವೇರಿ: ಕಿಟ್ ಕೊಡುವುದಾಗಿ ಕರೆದು ಕೊನೆಗೆ ಕಿಟ್​ ಇಲ್ಲವೆಂದ ಅಧಿಕಾರಿಗಳು, ಕಾರ್ಮಿಕರ ಆಕ್ರೋಶ

ಅವರೆಲ್ಲ ದುಡಿಯುವ ಕಾರ್ಮಿಕರು. ಅವರ ಮಕ್ಕಳಿಗೆ ಕಾರ್ಮಿಕ ಇಲಾಖೆಯಿಂದ ಕಿಟ್ ನೀಡುವುದಾಗಿ ಘೋಷಣೆ ಮಾಡಿದ್ದರು. ಅದರೆ ಹೋಗಿ ಕೇಳಿದರೆ ಕಿಟ್ ಖಾಲಿ ಆಗಿವೆ ನಾಳೆ ಬನ್ನಿ ಅಂತಿದ್ದಾರೆ. ಇದರಿಂದ ಕಾರ್ಮಿಕ ಇಲಾಖೆಯ ಸಿಬ್ಬಂದಿಯನ್ನ ಫಲಾನುಭವಿಗಳು ತರಾಟೆಗೆ ತೆಗೆದುಕೊಂಡಿರುವ ಘಟನೆ ನಡೆದಿದೆ.

ಹಾವೇರಿ:  ಕಿಟ್ ಕೊಡುವುದಾಗಿ ಕರೆದು ಕೊನೆಗೆ ಕಿಟ್​ ಇಲ್ಲವೆಂದ ಅಧಿಕಾರಿಗಳು, ಕಾರ್ಮಿಕರ ಆಕ್ರೋಶ
ಕಾರ್ಮಿಕ ಕಿಟ್​ಗಾಗಿ ಕಾದು ಸುಸ್ತಾದ ಕಾರ್ಮಿಕರು
ಕಿರಣ್ ಹನುಮಂತ್​ ಮಾದಾರ್
ಕಿರಣ್ ಹನುಮಂತ್​ ಮಾದಾರ್|

Updated on: Mar 30, 2023 | 9:14 AM

Share

ಹಾವೇರಿ: ಶಾಲಾ ಕಿಟ್ ಪಡೆಯಲು ಕ್ಯೂ‌ ನಿಂತಿರುವ ಜನರು. ಅಧಿಕಾರಿಗಳನ್ನ ತರಾಟೆಗೆ ತೆಗೆದುಕೊಂಡ ಫಲಾನುಭವಿಗಳು. ಎಪಿಎಂಸಿ ಆವರಣದಲ್ಲಿ ಸೇರಿರುವ ಸಾವಿರಾರು ಜನರು. ಇದು ಹಾವೇರಿ ಎಪಿಎಂಸಿ ಆವರಣದಲ್ಲಿ ಕಂಡುಬಂದ ದೃಶ್ಯಗಳಿವು. ಹೌದು ಕಾರ್ಮಿಕ ಇಲಾಖೆಯ ಕಾರ್ಮಿಕ ಕಾರ್ಡ್ ಹೊಂದಿದ್ದ ಕಾರ್ಮಿಕರ ಮಕ್ಕಳಿಗೆ ಶಾಲೆಯ ಕಿಟ್ ನೀಡುವುದಾಗಿ ಹೇಳಿದ್ದರು. ಹೀಗಾಗಿ ಹಾವೇರಿ, ಸವಣೂರು ಮತ್ತು ಶಿಗ್ಗಾಂವಿ ತಾಲ್ಲೂಕಿನ ಫಲಾನುಭವಿಗಳು ಹಾವೇರಿ ಎಪಿಎಂಸಿ ಆವರಣಕ್ಕೆ ಅಗಮಿಸಿದ್ದರು. ನೂರಾರು ಜನರು ಬೆಳಗ್ಗಿನಿಂದಲೇ ಕ್ಯೂ ಹಚ್ಚಿ ನಿಂತಿದ್ದರು. ಅದರೆ ಕೇವಲ 150 ಕಿಟ್​ಗಳು ಇವೆ. ನಾಳೆ ಬನ್ನಿ ಎಂದು ಹೇಳಿ ಕಳಿಸುತ್ತಿದ್ದರು. ಇದರಿಂದ ಆಕ್ರೋಶಗೊಂಡ ಫಲಾನುಭವಿಗಳು ಇಲಾಖೆಯ ಅಧಿಕಾರಿಗಳನ್ನ ತರಾಟೆಗೆ ತೆಗೆದುಕೊಂಡಿದ್ದಾರೆ. ನಾವು ಯಾರು ಕಿಟ್ ಕೇಳಿರಲಿಲ್ಲ. ಶಾಲೆಯ ಕಿಟ್ ಕೊಡುವುದಾಗಿ ಕರೆಸಿ ಈಗ ಕಿಟ್​ಗಳನ್ನ ಬೇರೆ ಕಡೆ ಕಳಿಸಿ ಮಾರಿಕೊಂಡಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಜಿಲ್ಲೆಯಲ್ಲಿ ಎರಡುವರೆ ಲಕ್ಷಕ್ಕೂ ಅಧಿಕ ಕಾರ್ಮಿಕರಿದ್ದಾರೆ. ಅದರಲ್ಲಿ 60 ಸಾವಿರಕ್ಕೂ ಅಧಿಕ ಕಾರ್ಮಿಕರ ಮಕ್ಕಳು, 9, 10 ನೇ ತರಗತಿ ಹಾಗೂ ಪಿಯುಸಿ ವಿದ್ಯಾಭ್ಯಾಸ ಮಾಡುತ್ತಿದ್ದಾರೆ. ಸರ್ಕಾರದಿಂದ ಪ್ರತಿಯೊಂದು ತಾಲೂಕಿಗೆ 250 ಕಿಟ್​ಗಳು ಬಂದಿವೆ.‌ ನಿನ್ನೆ‌,‌ ಮೊನ್ನೆ ಎರಡು ತಾಲ್ಲೂಕಿನ ಫಲಾನುಭವಿಗಳಿಗೆ ಕಿಟ್ ವಿತರಣೆ ಮಾಡಲಾಗಿದೆ. ಕಿಟ್ ತೆಗೆದುಕೊಂಡು ಹೋದ ಜನರು ಕಾರ್ಮಿಕರಿಗೆ ಹೇಳಿದ್ದು, ಇವತ್ತು ಸಾವಿರಾರು ಕಾರ್ಮಿಕ ಫಲಾನುಭವಿಗಳು ಬಂದಿದ್ದಾರೆ. ಸರ್ಕಾರದ ಗಮನಕ್ಕೆ ತಂದು, ಎಲ್ಲರಿಗೂ ತಲುಪಿಸುವ ವ್ಯವಸ್ಥೆ ಮಾಡುತ್ತೇವೆ ಎನ್ನುತ್ತಾರೆ ಕಾರ್ಮಿಕ ಇಲಾಖೆಯ ಉಪನಿರ್ದೇಶಕರು.

ಒಟ್ಟಿನಲ್ಲಿ ಹಾವೇರಿ ಎಪಿಎಂಸಿ ಆವರಣದಲ್ಲಿ ಕಾರ್ಮಿಕ ಇಲಾಖೆಯಿಂದ ನೀಡುವ ಶಾಲಾ ಕಿಟ್​ಗಳಿಗೆ ಸಾವಿರಾರು ಫಲಾನುಭವಿಗಳು ಮುಗಿಬಿದ್ದರು. ಅದರೆ ಕಿಟ್​ಗಳು ಕಡಿಮೆ ಇರುವ ಹಿನ್ನಲೆಯಲ್ಲಿ ಕಾರ್ಮಿಕ ಇಲಾಖೆಯ ಸಿಬ್ಬಂದಿ ಕಂಗಾಲಾಗಿದ್ದರು. ಚುನಾವಣೆಯ ನೀತಿ ಸಂಹಿತೆ ಘೋಷಣೆ ಆಗುತ್ತಿದ್ದಂತೆ ಫಲಾನುಭವಿಗಳು ಕಾದು ಕಾದು ಸುಸ್ತಾಗಿ ಮನೆಗೆ ಹೋಗಿದ್ದಾರೆ.

ಇನ್ನಷ್ಟು ರಾಜ್ಯಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಆ ಶಾಸಕರಿಂದಲೇ ಅಡ್ಡಮತದಾನ? ಸಿಟಿ ರವಿ ಏನಂದ್ರು ನೋಡಿ
ಆ ಶಾಸಕರಿಂದಲೇ ಅಡ್ಡಮತದಾನ? ಸಿಟಿ ರವಿ ಏನಂದ್ರು ನೋಡಿ
ಮರದ ಕೊಂಬೆ ಬಿದ್ದು ಖಾಸಗಿ ಬಸ್ ಜಖಂ; ಚಾಲಕ, ಕ್ಲೀನರ್ ಜಸ್ಟ್ ಮಿಸ್!
ಮರದ ಕೊಂಬೆ ಬಿದ್ದು ಖಾಸಗಿ ಬಸ್ ಜಖಂ; ಚಾಲಕ, ಕ್ಲೀನರ್ ಜಸ್ಟ್ ಮಿಸ್!
ಕನ್ನಡ ಬಾವುಟಕ್ಕೆ ಅಪಮಾನ: ನಮ್ಮ ಮೆಟ್ರೋ ಸಿಬ್ಬಂದಿ ವಿರುದ್ಧ ಆಕ್ರೋಶ
ಕನ್ನಡ ಬಾವುಟಕ್ಕೆ ಅಪಮಾನ: ನಮ್ಮ ಮೆಟ್ರೋ ಸಿಬ್ಬಂದಿ ವಿರುದ್ಧ ಆಕ್ರೋಶ
ಕೊಳ್ಳೇಗಾಲದಲ್ಲಿ ಪ್ರಿಂಟಿಂಗ್ ಪ್ರೆಸ್‌ಗೆ ನುಗ್ಗಿದ ಬೃಹತ್ ಗಾತ್ರದ ಉಡ
ಕೊಳ್ಳೇಗಾಲದಲ್ಲಿ ಪ್ರಿಂಟಿಂಗ್ ಪ್ರೆಸ್‌ಗೆ ನುಗ್ಗಿದ ಬೃಹತ್ ಗಾತ್ರದ ಉಡ
‘ಆ ರೀತಿ ಗಿಮಿಕ್ ಯಾರೂ ಮಾಡಲ್ಲ’; ವಿನೋದ್ ಆರೋಗ್ಯದ ಬಗ್ಗೆ ಸ್ಪಷ್ಟನೆ
‘ಆ ರೀತಿ ಗಿಮಿಕ್ ಯಾರೂ ಮಾಡಲ್ಲ’; ವಿನೋದ್ ಆರೋಗ್ಯದ ಬಗ್ಗೆ ಸ್ಪಷ್ಟನೆ
ಇಂದು ಈ ರಾಶಿಯವರಿಗೆ ಧನಯೋಗ!
ಇಂದು ಈ ರಾಶಿಯವರಿಗೆ ಧನಯೋಗ!
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ