AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಾವೇರಿ: ಹೋರಿ ಬೆದರಿಸುವ ಸ್ಪರ್ಧೆಯಲ್ಲಿ ಹಾರಿ ಹೋಯ್ತು ಮೂವರ ಪ್ರಾಣ

ದೀಪಾವಳಿ ಹಬ್ಬದ ಹಿನ್ನಲೆ ಆಯೋಜಿಸಲಾಗಿದ್ದ ಹೋರಿ ಬೆದರಿಸುವ ಸ್ಪರ್ಧೆಯಿಂದಾಗಿ ಹಾವೇರಿ ಜಿಲ್ಲೆಯಲ್ಲಿ ಸಾಲು ಸಾಲು ಅನಾಹುತಗಳು ಸಂಭವಿಸಿದ್ದು, ಪ್ರತ್ಯೇಕ ಪ್ರಕರಣಗಳಲ್ಲಿ ಯುವಕ ಸೇರಿ ಒಟ್ಟು ಮೂವರು ಪ್ರಾಣ ಕಳೆದುಕೊಂಡಿದ್ದಾರೆ. ಹೋರಿ ಮನೆಗೆ ನುಗ್ಗಿದ ಪರಿಣಾಮ ಹಲವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಹಾವೇರಿ ಜಿಲ್ಲೆ ಬ್ಯಾಡಗಿ ತಾಲೂಕಿನ ಮಲ್ಲೂರು ಗ್ರಾಮದಲ್ಲಿ ನಡೆದಿದೆ.

ಹಾವೇರಿ: ಹೋರಿ ಬೆದರಿಸುವ ಸ್ಪರ್ಧೆಯಲ್ಲಿ ಹಾರಿ ಹೋಯ್ತು ಮೂವರ ಪ್ರಾಣ
ಹೋರಿ ಬೆದರಿಸುವ ಸ್ಪರ್ಧೆ (ಸಾಂದರ್ಭಿಕ ಚಿತ್ರ)
ಪ್ರಸನ್ನ ಹೆಗಡೆ
|

Updated on: Oct 23, 2025 | 5:53 PM

Share

ಹಾವೇರಿ, ಅಕ್ಟೋಬರ್​ 23: ದೀಪಾವಳಿ ಹಬ್ಬದ ಹಿನ್ನಲೆ ಆಯೋಜಿಸಲಾಗಿದ್ದ ಹೋರಿ ಬೆದರಿಸುವ ಸ್ಪರ್ಧೆಯಲ್ಲಿ ಸಂಭವಿಸಿದ ದುರಂತದಿಂದಾಗಿ ಹಾವೇರಿ (Haveri) ಜಿಲ್ಲೆಯ ವಿವಿಧೆಡೆ ಒಟ್ಟು ಮೂವರು ಮೃತಪಟ್ಟಿರುವ ಘಟನೆ ನಡೆದಿದೆ. ಚಂದ್ರಶೇಖರ ಕೋಡಿಹಳ್ಳಿ (75), ಘನಿಸಾಬ್ (75) ಮತ್ತು ಭರತ್(22) ಮೃತ ದುರ್ದೈವಿಗಳಾಗಿದ್ದಾರೆ. ಮೃತಪಟ್ಟಿರುವ ಮೂವರ ಪೈಕಿ ಇಬ್ಬರು ನಿನ್ನೆ ಪ್ರಾಣ ಕಳೆದುಕೊಂಡಿದ್ದರೆ, ಇಂದು ನಡೆದಿರುವ ಅನಾಹುತದಲ್ಲಿ ಮತ್ತೊಬ್ಬ ಯುವಕನ ಪ್ರಾಣಪಕ್ಷಿ ಹಾರಿಹೋಗಿದೆ.

ಹಾವೇರಿ ಜಿಲ್ಲೆ ಹಾನಗಲ್ ತಾಲೂಕಿನ ತಿಳವಳ್ಳಿ ಗ್ರಾಮದಲ್ಲಿ ನಡೆದ ಹೋರಿ ಹಬ್ಬ ನೋಡಲು ಹೋಗಿದ್ದಾಗ ಹೋರಿ ತಿವಿದ ಪರಿಣಾಮ ಗಂಭೀರವಾಗಿ ಗಾಯಗೊಂಡು ಭರತ್​ ಎಂಬ ಯುವಕ ಮೃತಪಟ್ಟಿದ್ದಾನೆ. ನಿನ್ನೆ ದಾನೇಶ್ವರಿ ನಗರದ ನಿವಾಸಿ, ಹೆಸ್ಕಾಂ ನಿವೃತ್ತ ನೌಕರ ಚಂದ್ರಶೇಖರ್​ ಅವರು ಮನೆಗೆ ಹೊರಟಿದ್ದ ವೇಳೆ ಹಿಂದಿನಿಂದ ಬಂದು ಹೋರಿ ಹಾಯ್ದಿತ್ತು. ಬರೋಡಾ ಬ್ಯಾಂಕ್ ಎದುರುಗಡೆ ಘಟನೆ ನಡೆದಿದ್ದು, ಗಾಯಾಳುವನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೆ ಅವರು ಮೃತಪಟ್ಟಿದ್ದಾರೆ. ಸ್ಪರ್ಧೆ ವೇಳೆ ಹೋರಿ ಮನೆಗೆ ನುಗ್ಗಿದ ಪರಿಣಾಮ ದೇವಿಹೊಸೂರು ಗ್ರಾಮದ‌ಲ್ಲಿ ಮನೆ ಕಟ್ಟೆ ಮೇಲೆ ಕುಳಿತಿದ್ದ ಘನಿಸಾಬ ಎಂಬವರು ಗಂಭೀರವಾಗಿ ಗಾಯಗೊಂಡು ಪ್ರಾಣ ಕಳೆದುಕೊಂಡಿದ್ದಾರೆ. ಈ ಬಗ್ಗೆ ಹಾವೇರಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: ತಂದೆ ಪಿಂಚಣಿ ಹಣಕ್ಕಾಗಿ ತಂಗಿಗೆ ಅಣ್ಣಂದಿರ ಕಾಟ: ಗೃಹ ಬಂಧನದಲ್ಲಿರಿಸಿ ಹಿಂಸೆ?

ಮನೆಗೆ ನುಗ್ಗಿದ ಹೋರಿ: ಹಲವರಿಗೆ ಗಾಯ

ಹೋರಿ ಬೆದರಿಸುವ ಹಬ್ಬದ ವೇಳೆ ಕೊಬ್ಬರಿ ಹೋರಿ ಮನೆಗೆ ನುಗ್ಗಿದ ಪರಿಣಾಮ ಹಲವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಹಾವೇರಿ ಜಿಲ್ಲೆ ಬ್ಯಾಡಗಿ ತಾಲೂಕಿನ ಮಲ್ಲೂರು ಗ್ರಾಮದಲ್ಲಿ ನಡೆದಿದೆ. ಅಖಾಡದಲ್ಲಿ ಬಿಡ್ತಿದ್ದಂತೆ ಹೋರಿ ಏಕಾಏಕಿ ಸಮೀಪದ ಮನೆಗೆ ನುಗ್ಗಿದೆ. ಇದನ್ನು ಗಮನಿಸಿ ಮನೆಯಲ್ಲಿದ್ದವರು ತಕ್ಷಣವೇ ಹೊರಬಂದ ಕಾರಣ ಹೆಚ್ಚಿನ ಅನಾಹುತ ತಪ್ಪಿದೆ. ಬ್ಯಾಡಗಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​ ಮಾಡಿ.

ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್​ ಹೇಳಿದ ಗಿಲ್ಲಿ
ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್​ ಹೇಳಿದ ಗಿಲ್ಲಿ
ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ
ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ
ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ
ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ
ಇಂಡಿಗೋ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ: ಪ್ರಯಾಣಿಕರ ಗೋಳಾಟ ನೋಡಿ!
ಇಂಡಿಗೋ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ: ಪ್ರಯಾಣಿಕರ ಗೋಳಾಟ ನೋಡಿ!
ಪುಟಿನ್ ಸ್ವಾಗತಕ್ಕೆ ಸುಂದರವಾಗಿ ಅಲಂಕೃತಗೊಂಡ ಪ್ರಧಾನಿ ನಿವಾಸ
ಪುಟಿನ್ ಸ್ವಾಗತಕ್ಕೆ ಸುಂದರವಾಗಿ ಅಲಂಕೃತಗೊಂಡ ಪ್ರಧಾನಿ ನಿವಾಸ