AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉತ್ತರ ಕರ್ನಾಟಕದ ಮೊಟ್ಟೆ ಉದ್ಯಮಕ್ಕೂ ತಟ್ಟಿದ ಯುದ್ಧದ ಬಿಸಿ; ಲಕ್ಷಾಂತರ ರೂ. ಮೌಲ್ಯದ ಮೊಟ್ಟೆಗಳು ಮಣ್ಣುಪಾಲು!

ಇರಾನ್-ಇಸ್ರೇಲ್ ಯುದ್ಧದಿಂದ ಉತ್ತರ ಕರ್ನಾಟಕದ ಮೊಟ್ಟೆ ಉದ್ಯಮ ತೀವ್ರ ಸಂಕಷ್ಟಕ್ಕೆ ಸಿಲುಕಿದೆ. ಯಾದಗಿರಿ, ಹಾವೇರಿ, ಕೊಪ್ಪಳ ಜಿಲ್ಲೆಗಳಿಂದ ಗಲ್ಫ್ ರಾಷ್ಟ್ರಗಳಿಗೆ ಮೊಟ್ಟೆ ರಫ್ತು ಸ್ಥಗಿತಗೊಂಡಿದ್ದು, ಫಾರ್ಮ್ ಮಾಲೀಕರು ಅಪಾರ ನಷ್ಟ ಅನುಭವಿಸುತ್ತಿದ್ದಾರೆ. ಮೊಟ್ಟೆ ಬೆಲೆ ಕುಸಿದಿದ್ದಲ್ಲದೆ, ಪ್ರತಿದಿನ ಲಕ್ಷಾಂತರ ಮೊಟ್ಟೆಗಳು ಮಾರಾಟವಾಗದೆ ಉಳಿಯುತ್ತಿವೆ ಎಂದು ಫಾರ್ಮ್​ ಮಾಲೀಕರು ಆತಂಕ ವ್ಯಕ್ತಪಡಿಸಿದ್ದಾರೆ.

ಉತ್ತರ ಕರ್ನಾಟಕದ ಮೊಟ್ಟೆ ಉದ್ಯಮಕ್ಕೂ ತಟ್ಟಿದ ಯುದ್ಧದ ಬಿಸಿ; ಲಕ್ಷಾಂತರ ರೂ. ಮೌಲ್ಯದ ಮೊಟ್ಟೆಗಳು ಮಣ್ಣುಪಾಲು!
ಉತ್ತರ ಕರ್ನಾಟಕದ ಮೊಟ್ಟೆ ಉದ್ಯಮಕ್ಕೂ ತಟ್ಟಿದ ಯುದ್ಧದ ಬಿಸಿ; ಲಕ್ಷಾಂತರ ರೂ. ಮೌಲ್ಯದ ಮೊಟ್ಟೆಗಳು ಮಣ್ಣುಪಾಲು!
ಭಾವನಾ ಹೆಗಡೆ
|

Updated on: Mar 14, 2026 | 1:51 PM

Share

ಬೆಂಗಳೂರು, ಮಾರ್ಚ್​ 14: ಇರಾನ್–ಇಸ್ರೇಲ್ ನಡುವೆ ನಡೆಯುತ್ತಿರುವ ಯುದ್ಧದ ಹಿನ್ನೆಲೆ ಸಿಲಿಂಡರ್ (LPG Gas Cylinder)ಕೊರತೆ ಜೊತೆಗೆ ಉತ್ತರ ಕರ್ನಾಟಕದ ಮೊಟ್ಟೆ ಉದ್ಯಮದ ಮೇಲೂ ಗಂಭೀರ ಪರಿಣಾಮ ಉಂಟಾಗಿದೆ. ಯಾದಗಿರಿ, ಹಾವೇರಿ ಹಾಗೂ ಕೊಪ್ಪಳ ಜಿಲ್ಲೆಗಳಲ್ಲಿ ಗಲ್ಫ್ ರಾಷ್ಟ್ರಗಳಿಗೆ ರಫ್ತು ಆಗುತ್ತಿದ್ದ ಮೊಟ್ಟೆಗಳ ವ್ಯಾಪಾರ ಬಹುತೇಕ ಸ್ಥಗಿತಗೊಂಡಿದ್ದು, ಇದರಿಂದ ಕೋಳಿ ಫಾರ್ಮ್ ಮಾಲೀಕರು ಸಂಕಷ್ಟಕ್ಕೆ ಸಿಲುಕಿದ್ದಾರೆ.

ಹಾವೇರಿಯ ಮೊಟ್ಟೆ ವ್ಯಾಪಾರದಲ್ಲಿ ಭಾರೀ ನಷ್ಟ

ಹಾವೇರಿಯಲ್ಲಿ ಪ್ರತಿದಿನ ಭಾರತದಿಂದ ಸುಮಾರು 80 ಲಕ್ಷ ಮೊಟ್ಟೆಗಳು ವಿದೇಶಗಳಿಗೆ ರಫ್ತು ಆಗುತ್ತಿದ್ದವು. ಆದರೆ ಯುದ್ಧದ ಹಿನ್ನೆಲೆ ಆಮದು-ರಫ್ತು ವ್ಯವಹಾರ ಸ್ಥಗಿತಗೊಂಡಿರುವುದರಿಂದ ಮೊಟ್ಟೆಗಳ ದರದಲ್ಲಿ ಭಾರಿ ಇಳಿಕೆ ಕಂಡು ಬಂದಿದೆ. ಮೊದಲು ಒಂದು ಮೊಟ್ಟೆ 5 ರಿಂದ 6 ರೂಪಾಯಿಗೆ ಮಾರಾಟವಾಗುತ್ತಿದ್ದರೆ, ಈಗ 4 ರೂಪಾಯಿಗೆ ಮಾತ್ರ ಮಾರಾಟವಾಗುತ್ತಿದೆ ಎಂದು ಪೌಲ್ಟ್ರಿ ಫಾರ್ಮ್ ಮಾಲೀಕರು ತಿಳಿಸಿದ್ದಾರೆ.

ಕೊಪ್ಪಳ, ಯಾದಗಿರಿಯಲ್ಲೂ ಮೊಟ್ಟೆ ಮಾರುಕಟ್ಟೆ ಕುಸಿತ

ಕೊಪ್ಪಳ ಜಿಲ್ಲೆಯಲ್ಲಿ ಪ್ರತಿದಿನ ಸುಮಾರು 40 ಲಕ್ಷ ಮೊಟ್ಟೆಗಳು ಉತ್ಪಾದನೆಯಾಗುತ್ತಿದ್ದು, ರಫ್ತು ನಿಂತಿರುವ ಕಾರಣ ಸಾವಿರಾರು ಮೊಟ್ಟೆಗಳು ಮಾರಾಟವಾಗದೆ ಉಳಿಯುತ್ತಿವೆ. ಕೆಲವು ಫಾರ್ಮ್‌ಗಳಲ್ಲಿ ಮಾರಾಟವಾಗದ ಮೊಟ್ಟೆಗಳನ್ನು ಗುಂಡಿ ತೋಡಿ ಹೂತು ಹಾಕಲಾಗುತ್ತಿದೆ. ಪ್ರತಿ ಫಾರ್ಮ್‌ಗೆ ದಿನಕ್ಕೆ 1 ರಿಂದ 1.5 ಲಕ್ಷ ರೂಪಾಯಿ ನಷ್ಟವಾಗುತ್ತಿದೆ ಎಂದು ಮಾಲೀಕರು ಆತಂಕ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ ಬೆಂಗಳೂರಿನಲ್ಲಿ ಎಲ್​ಪಿಜಿ ಸಿಲಿಂಡರ್ ಎಮರ್ಜೆನ್ಸಿ! ಪ್ರಧಾನಿಗೆ ಪತ್ರ ಬರೆದ ಹೋಟೆಲ್ ಮಾಲಕಿ

ಯಾದಗಿರಿ ಜಿಲ್ಲೆಯಿಂದಲೂ ಕತಾರ್, ಕುವೈತ್, ಸೌದಿ ಹಾಗೂ ದುಬೈ ಸೇರಿದಂತೆ ಗಲ್ಫ್ ರಾಷ್ಟ್ರಗಳಿಗೆ ಲಕ್ಷಾಂತರ ಮೊಟ್ಟೆಗಳು ರಫ್ತು ಆಗುತ್ತಿತ್ತು. ಆದರೆ ರಫ್ತು ನಿಂತಿರುವ ಕಾರಣ ಸ್ಥಳೀಯ ಮಾರುಕಟ್ಟೆಯಲ್ಲಿ ಕಡಿಮೆ ದರಕ್ಕೆ ಮಾರಾಟ ಮಾಡಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
ದರ್ಶನ್ ಅಭಿಮಾನಿಗಳಿಗೆ ನಗುತ್ತಲೇ ಬುದ್ಧಿವಾದ ಹೇಳಿದ ವಿಜಯಲಕ್ಷ್ಮಿ ದರ್ಶನ್
ದರ್ಶನ್ ಅಭಿಮಾನಿಗಳಿಗೆ ನಗುತ್ತಲೇ ಬುದ್ಧಿವಾದ ಹೇಳಿದ ವಿಜಯಲಕ್ಷ್ಮಿ ದರ್ಶನ್
ವಂದೇ ಮಾತರಂಗೆ ಅವಮಾನಿಸಿದ ಆರೋಪ: ಸೋನಿಯಾ ಗಾಂಧಿ ವಿರುದ್ಧ ಕೇಸ್ ಬುಕ್!
ವಂದೇ ಮಾತರಂಗೆ ಅವಮಾನಿಸಿದ ಆರೋಪ: ಸೋನಿಯಾ ಗಾಂಧಿ ವಿರುದ್ಧ ಕೇಸ್ ಬುಕ್!
ಮತ್ತೆ ಮುನ್ನೆಲೆಗೆ ಬಂದ ನೈಸ್ ರಸ್ತೆ ಟೋಲ್:ಸಿಡಿದೆದ್ದ ಪ್ರತಿಪಕ್ಷಗಳು
ಮತ್ತೆ ಮುನ್ನೆಲೆಗೆ ಬಂದ ನೈಸ್ ರಸ್ತೆ ಟೋಲ್:ಸಿಡಿದೆದ್ದ ಪ್ರತಿಪಕ್ಷಗಳು
ಹಾನೂರು ಶೂಟೌಟ್ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಹೇಳಿದ್ದಿಷ್ಟು
ಹಾನೂರು ಶೂಟೌಟ್ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಹೇಳಿದ್ದಿಷ್ಟು
ತಿಪಟೂರು​ ಶಾಸಕನಿಂದ ಪ್ರತ್ಯೇಕ ಜಿಲ್ಲೆಯ ಕೂಗು!
ತಿಪಟೂರು​ ಶಾಸಕನಿಂದ ಪ್ರತ್ಯೇಕ ಜಿಲ್ಲೆಯ ಕೂಗು!
ಮೊಳಕಾಲ್ಮೂರು ಕ್ಷೇತ್ರವನ್ನು ಆಂಧ್ರಕ್ಕೆ ಸೇರಿಸಿ: ಎನ್​.ವೈ. ಗೋಪಾಲಕೃಷ್ಣ
ಮೊಳಕಾಲ್ಮೂರು ಕ್ಷೇತ್ರವನ್ನು ಆಂಧ್ರಕ್ಕೆ ಸೇರಿಸಿ: ಎನ್​.ವೈ. ಗೋಪಾಲಕೃಷ್ಣ
ಮಹಿಳೆ ಜೊತೆ ಅಸಭ್ಯ ವರ್ತನೆ; ತಮ್ಮೇನಹಳ್ಳಿ ಸ್ವಾಮೀಜಿಗೆ ಜನರಿಂದ ಗೂಸಾ!
ಮಹಿಳೆ ಜೊತೆ ಅಸಭ್ಯ ವರ್ತನೆ; ತಮ್ಮೇನಹಳ್ಳಿ ಸ್ವಾಮೀಜಿಗೆ ಜನರಿಂದ ಗೂಸಾ!
ಬೆಳೆ ವಿಮೆ ವಿಚಾರಕ್ಕೆ ಪ್ರಗತಿ ಪರಿಶೀಲನಾ ಸಭೆಯಲ್ಲಿ ಶಿವಲಿಂಗೇಗೌಡ ಗರಂ
ಬೆಳೆ ವಿಮೆ ವಿಚಾರಕ್ಕೆ ಪ್ರಗತಿ ಪರಿಶೀಲನಾ ಸಭೆಯಲ್ಲಿ ಶಿವಲಿಂಗೇಗೌಡ ಗರಂ
ಆಗಸ್ಟ್ 17ರಿಂದ 23ರ ವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿ ತಿಳಿದುಕೊಳ್ಳಿ
ಆಗಸ್ಟ್ 17ರಿಂದ 23ರ ವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿ ತಿಳಿದುಕೊಳ್ಳಿ
ರವಿಚಂದ್ರನ್ ಮನೆ ಮಾರಿದ್ದು ನಿಜವೇ? ಅಸಲಿ ವಿಷಯ ತೆರೆದಿಟ್ಟ ದಿಲ್ ಸೇ ದಿಲೀಪ್
ರವಿಚಂದ್ರನ್ ಮನೆ ಮಾರಿದ್ದು ನಿಜವೇ? ಅಸಲಿ ವಿಷಯ ತೆರೆದಿಟ್ಟ ದಿಲ್ ಸೇ ದಿಲೀಪ್