AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇದು ಜಾತಿ ಗಣತಿಯೋ? ಶೈಕ್ಷಣಿಕ ಗಣತಿಯೋ? ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ನೀಡಲಿ: ಮಾಜಿ ಸಿಎಂ ಬೊಮ್ಮಾಯಿ

ಬಿಹಾರದಲ್ಲಿ ಜಾತಿಗಣತಿ ವರದಿ ಬಹಿರಂಗವಾದ ಬಳಿಕ ಕರ್ನಾಟಕದಲ್ಲೂ ಸಹ ಒತ್ತಾಯಗಳು ಕೇಳಿ ಬರುತ್ತಿವೆ. ಈ ಕುರಿತಾಗಿ ಸದ್ಯ ಹಾವೇರಿಯಲ್ಲಿ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಮಾತನಾಡಿದ್ದು, ಜಾತಿ ಗಣತಿ ವರದಿ ಬಗ್ಗೆ ನಮ್ಮಲ್ಲಿ ಚರ್ಚೆಯೇ ಆಗಿಲ್ಲ. ಜಾತಿ ಗಣತಿಯೋ? ಶೈಕ್ಷಣಿಕ ಗಣತಿಯೋ? ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ಕೊಡಬೇಕು ಎಂದಿದ್ದಾರೆ.

ಇದು ಜಾತಿ ಗಣತಿಯೋ? ಶೈಕ್ಷಣಿಕ ಗಣತಿಯೋ? ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ನೀಡಲಿ: ಮಾಜಿ ಸಿಎಂ ಬೊಮ್ಮಾಯಿ
ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
ಸೂರಜ್​, ಮಹಾವೀರ್​ ಉತ್ತರೆ
| Edited By: |

Updated on: Oct 07, 2023 | 4:34 PM

Share

ಹಾವೇರಿ, ಅಕ್ಟೋಬರ್​ 07: ಜಾತಿ ಗಣತಿ ವರದಿ ಬಗ್ಗೆ ನಮ್ಮಲ್ಲಿ ಚರ್ಚೆಯೇ ಆಗಿಲ್ಲ. ಜಾತಿ ಗಣತಿಯೋ? ಶೈಕ್ಷಣಿಕ ಗಣತಿಯೋ? ಎಂದು ಸಿಎಂ ಸಿದ್ದರಾಮಯ್ಯ (Siddaramaiah) ಸ್ಪಷ್ಟನೆ ಕೊಡಬೇಕು ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಜಿಲ್ಲೆಯ ಶಿಗ್ಗಾಂವಿಯ ಬಂಕಾಪುರದಲ್ಲಿ ಮಾತನಾಡಿದ ಅವರು, ಇದು ಆರ್ಥಿಕ ಹಾಗೂ ಶೈಕ್ಷಣಿಕ ಸಮೀಕ್ಷೆ, ಜಾತಿ ಗಣತಿ ಅಲ್ಲ ಎಂದು ಹೇಳಿದ್ದಾರೆ. ಸದ್ಯ ಜಾತಿ ಗಣತಿ ವರದಿ ರಾಜ್ಯ ಸರ್ಕಾರಕ್ಕೆ ಸಲ್ಲಿಸುವಂತೆ ಒತ್ತಾಯಿಸಲಾಗಿದೆ.

ಕಾಂಗ್ರೆಸ್ ವಿರುದ್ಧ ಮಾಜಿ ಸಿಎಂ ಬೊಮ್ಮಾಯಿ ವಾಗ್ದಾಳಿ

ಬಾರ್ ಲೈಸೆನ್ಸ್ ವಿಚಾರವಾಗಿ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್​ ದ್ವಂದ್ವ ಹೇಳಿಕೆ ವಿಚಾರವಾಗಿ ಪ್ರತಿಕ್ರಿಯಿಸಿದ್ದು, ಸಿಎಂ ಇದ್ದಾರೋ, ಸೂಪರ್ ಸಿಎಂ ಇದ್ದಾರೋ ಎಂದು ತಿಳಿಯುತ್ತಿಲ್ಲ. ಒಂದು ನೀತಿ ಬಗ್ಗೆ ಮಾತನಾಡಿದಾಗ ಸರ್ಕಾರ ಅದಕ್ಕೆ ಸ್ಪಷ್ಟನೆ ಕೊಡಲಿ. ಎಲ್ಲಾ ವಿಚಾರದಲ್ಲಿಯೂ ಸಿಎಂ ಒಂದು ದಾರಿ, ಡಿಸಿಎಂ ಒಂದು ದಾರಿ ಆಗಿದೆ. ಕಾವೇರಿ ನೀರು ಬಿಡುವ ವಿಚಾರದಲ್ಲಿ ಡಿಸಿಎಂ ನೀರು ಬಿಡಲ್ಲ ಎಂದರು. ಆದರೆ ಸಿಎಂ ನೀರು ಬಿಟ್ಟಿದ್ದನ್ನು ನಾವು ನೋಡಿದ್ದೇವೆ ಎಂದು ಕಾಂಗ್ರೆಸ್ ವಿರುದ್ಧ ಮಾಜಿ ಸಿಎಂ ಬೊಮ್ಮಾಯಿ ವಾಗ್ದಾಳಿ ಮಾಡಿದ್ದಾರೆ.

ಇದನ್ನೂ ಓದಿ: ಜಾತಿಗಣತಿಯ ವರದಿ ಅಂತಿಮ ಘಟ್ಟದಲ್ಲಿದೆ: ಹಿಂದುಳಿದ ವರ್ಗಗಳ ಆಯೋಗ ಅಧ್ಯಕ್ಷ ಜಯಪ್ರಕಾಶ್ ಹೆಗ್ಡೆ

ಬರಗಾಲ ಸಮರ್ಥವಾಗಿ ನಿಭಾಯಿಸುತ್ತೇವೆ ಎಂದಿರುವ ಸರ್ಕಾರದ ಹೇಳಿಕೆ ಕುರಿತು ಪ್ರತಿಕ್ರಿಯೆ ನೀಡಿದ್ದು, ಬರೀ ಹೇಳಿಕೆಯಿಂದ ಬರಗಾಲ ಸಮರ್ಥವಾಗಿ ಎದುರಿಸುವುದಕ್ಕೆ ಆಗುವುದಿಲ್ಲ. ನಾವು ಇಂತಹ ಹೇಳಿಕೆ ಬಹಳ ನೋಡಿದ್ದೇವೆ. ಒಂದು ಬಿಡಿ ಕಾಸು ಎಲ್ಲೂ ಬಿಡುಗಡೆ ಮಾಡಿಲ್ಲ. ಕೇಂದ್ರಕ್ಕೆ ಪತ್ರ ಬರೆದಿದ್ದು, ತಂಡ ಬರುತ್ತದೆ ಅಂತಾ ಹೇಳುತ್ತಿದ್ದಾರೆ. ಆದರೆ ನಾವು ಯಾವುದಕ್ಕೂ ಕಾಯಲೆ ಇಲ್ಲಾ.

ಇದನ್ನೂ ಓದಿ: ಕೇಂದ್ರ ಎಷ್ಟಾದರೂ ಪರಿಹಾರ ಕೊಡಲಿ, ರಾಜ್ಯ ಸರ್ಕಾರ ಬರಗಾಲವನ್ನ ಸಮರ್ಥವಾಗಿ ಎದುರಿಸುತ್ತದೆ: ಸಿಎಂ ಸಿದ್ದರಾಮಯ್ಯ

ನಾವು ಕೂಡಲೆ ಹಣ ಕೊಟ್ಟು ಪರಿಹಾರ ನೀಡಿದ್ದೇವೆ. ಸುಮಾರು 2 ಸಾವಿರ ಕೋಟಿಗೂ ಅಧಿಕ ಹಣ ತಕ್ಷಣ ಬಿಡುಗಡೆ ಮಾಡಿದ್ದೆವು. ರಾಜ್ಯದ ಬೊಕ್ಕಸದಿಂದಲೇ ಸಹಾಯ ಮಾಡಬಹುದು. ಇಲ್ಲಾ ಎಂದರೆ ಕುಂಟು ನೆಪ ಹೇಳಿ ಮುಂದಕ್ಕೆ ಹಾಕಬಹುದು ಎಂದು ಸರ್ಕಾರದ ನೀತಿ ವಿರುದ್ಧ ಬೊಮ್ಮಾಯಿ ವ್ಯಂಗ್ಯವಾಡಿದ್ದಾರೆ.

ಜಿಲ್ಲೆಯ ಮೂರು ತಾಲೂಕು ಬರಪೀಡಿತ ಪ್ರದೇಶ ಘೋಷಣೆ ವಿಳಂಬ ಕುರಿತಾಗಿ ಪ್ರತಿಕ್ರಿಯಿಸಿ, ರೆವೆನೂ ಮಿನಿಸ್ಟರ್ ಬಳಿ ಮಾತಾಡಿದ್ದೇನೆ. ಮತ್ತೊಮ್ಮೆ ವರದಿ ತರಿಸಿಕೊಂಡು ಪರಿಶೀಲನೆ ಮಾಡುತ್ತೇವೆ. ಸೋಮವಾರದ ಒಳಗೆ ಈ ಮೂರು ತಾಲೂಕು ಬರಗಾಲ ಪೀಡಿತ ಪಟ್ಟಿಯಲ್ಲಿ ಸೇರುತ್ತವೆ ಎಂದು ರೈತರಿಗೆ  ಬೊಮ್ಮಾಯಿ ಭರವಸೆ ನೀಡಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ