ಇದು ಜಾತಿ ಗಣತಿಯೋ? ಶೈಕ್ಷಣಿಕ ಗಣತಿಯೋ? ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ನೀಡಲಿ: ಮಾಜಿ ಸಿಎಂ ಬೊಮ್ಮಾಯಿ

ಬಿಹಾರದಲ್ಲಿ ಜಾತಿಗಣತಿ ವರದಿ ಬಹಿರಂಗವಾದ ಬಳಿಕ ಕರ್ನಾಟಕದಲ್ಲೂ ಸಹ ಒತ್ತಾಯಗಳು ಕೇಳಿ ಬರುತ್ತಿವೆ. ಈ ಕುರಿತಾಗಿ ಸದ್ಯ ಹಾವೇರಿಯಲ್ಲಿ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಮಾತನಾಡಿದ್ದು, ಜಾತಿ ಗಣತಿ ವರದಿ ಬಗ್ಗೆ ನಮ್ಮಲ್ಲಿ ಚರ್ಚೆಯೇ ಆಗಿಲ್ಲ. ಜಾತಿ ಗಣತಿಯೋ? ಶೈಕ್ಷಣಿಕ ಗಣತಿಯೋ? ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ಕೊಡಬೇಕು ಎಂದಿದ್ದಾರೆ.

ಇದು ಜಾತಿ ಗಣತಿಯೋ? ಶೈಕ್ಷಣಿಕ ಗಣತಿಯೋ? ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ನೀಡಲಿ: ಮಾಜಿ ಸಿಎಂ ಬೊಮ್ಮಾಯಿ
ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
Follow us
| Updated By: ಗಂಗಾಧರ​ ಬ. ಸಾಬೋಜಿ

Updated on: Oct 07, 2023 | 4:34 PM

ಹಾವೇರಿ, ಅಕ್ಟೋಬರ್​ 07: ಜಾತಿ ಗಣತಿ ವರದಿ ಬಗ್ಗೆ ನಮ್ಮಲ್ಲಿ ಚರ್ಚೆಯೇ ಆಗಿಲ್ಲ. ಜಾತಿ ಗಣತಿಯೋ? ಶೈಕ್ಷಣಿಕ ಗಣತಿಯೋ? ಎಂದು ಸಿಎಂ ಸಿದ್ದರಾಮಯ್ಯ (Siddaramaiah) ಸ್ಪಷ್ಟನೆ ಕೊಡಬೇಕು ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಜಿಲ್ಲೆಯ ಶಿಗ್ಗಾಂವಿಯ ಬಂಕಾಪುರದಲ್ಲಿ ಮಾತನಾಡಿದ ಅವರು, ಇದು ಆರ್ಥಿಕ ಹಾಗೂ ಶೈಕ್ಷಣಿಕ ಸಮೀಕ್ಷೆ, ಜಾತಿ ಗಣತಿ ಅಲ್ಲ ಎಂದು ಹೇಳಿದ್ದಾರೆ. ಸದ್ಯ ಜಾತಿ ಗಣತಿ ವರದಿ ರಾಜ್ಯ ಸರ್ಕಾರಕ್ಕೆ ಸಲ್ಲಿಸುವಂತೆ ಒತ್ತಾಯಿಸಲಾಗಿದೆ.

ಕಾಂಗ್ರೆಸ್ ವಿರುದ್ಧ ಮಾಜಿ ಸಿಎಂ ಬೊಮ್ಮಾಯಿ ವಾಗ್ದಾಳಿ

ಬಾರ್ ಲೈಸೆನ್ಸ್ ವಿಚಾರವಾಗಿ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್​ ದ್ವಂದ್ವ ಹೇಳಿಕೆ ವಿಚಾರವಾಗಿ ಪ್ರತಿಕ್ರಿಯಿಸಿದ್ದು, ಸಿಎಂ ಇದ್ದಾರೋ, ಸೂಪರ್ ಸಿಎಂ ಇದ್ದಾರೋ ಎಂದು ತಿಳಿಯುತ್ತಿಲ್ಲ. ಒಂದು ನೀತಿ ಬಗ್ಗೆ ಮಾತನಾಡಿದಾಗ ಸರ್ಕಾರ ಅದಕ್ಕೆ ಸ್ಪಷ್ಟನೆ ಕೊಡಲಿ. ಎಲ್ಲಾ ವಿಚಾರದಲ್ಲಿಯೂ ಸಿಎಂ ಒಂದು ದಾರಿ, ಡಿಸಿಎಂ ಒಂದು ದಾರಿ ಆಗಿದೆ. ಕಾವೇರಿ ನೀರು ಬಿಡುವ ವಿಚಾರದಲ್ಲಿ ಡಿಸಿಎಂ ನೀರು ಬಿಡಲ್ಲ ಎಂದರು. ಆದರೆ ಸಿಎಂ ನೀರು ಬಿಟ್ಟಿದ್ದನ್ನು ನಾವು ನೋಡಿದ್ದೇವೆ ಎಂದು ಕಾಂಗ್ರೆಸ್ ವಿರುದ್ಧ ಮಾಜಿ ಸಿಎಂ ಬೊಮ್ಮಾಯಿ ವಾಗ್ದಾಳಿ ಮಾಡಿದ್ದಾರೆ.

ಇದನ್ನೂ ಓದಿ: ಜಾತಿಗಣತಿಯ ವರದಿ ಅಂತಿಮ ಘಟ್ಟದಲ್ಲಿದೆ: ಹಿಂದುಳಿದ ವರ್ಗಗಳ ಆಯೋಗ ಅಧ್ಯಕ್ಷ ಜಯಪ್ರಕಾಶ್ ಹೆಗ್ಡೆ

ಬರಗಾಲ ಸಮರ್ಥವಾಗಿ ನಿಭಾಯಿಸುತ್ತೇವೆ ಎಂದಿರುವ ಸರ್ಕಾರದ ಹೇಳಿಕೆ ಕುರಿತು ಪ್ರತಿಕ್ರಿಯೆ ನೀಡಿದ್ದು, ಬರೀ ಹೇಳಿಕೆಯಿಂದ ಬರಗಾಲ ಸಮರ್ಥವಾಗಿ ಎದುರಿಸುವುದಕ್ಕೆ ಆಗುವುದಿಲ್ಲ. ನಾವು ಇಂತಹ ಹೇಳಿಕೆ ಬಹಳ ನೋಡಿದ್ದೇವೆ. ಒಂದು ಬಿಡಿ ಕಾಸು ಎಲ್ಲೂ ಬಿಡುಗಡೆ ಮಾಡಿಲ್ಲ. ಕೇಂದ್ರಕ್ಕೆ ಪತ್ರ ಬರೆದಿದ್ದು, ತಂಡ ಬರುತ್ತದೆ ಅಂತಾ ಹೇಳುತ್ತಿದ್ದಾರೆ. ಆದರೆ ನಾವು ಯಾವುದಕ್ಕೂ ಕಾಯಲೆ ಇಲ್ಲಾ.

ಇದನ್ನೂ ಓದಿ: ಕೇಂದ್ರ ಎಷ್ಟಾದರೂ ಪರಿಹಾರ ಕೊಡಲಿ, ರಾಜ್ಯ ಸರ್ಕಾರ ಬರಗಾಲವನ್ನ ಸಮರ್ಥವಾಗಿ ಎದುರಿಸುತ್ತದೆ: ಸಿಎಂ ಸಿದ್ದರಾಮಯ್ಯ

ನಾವು ಕೂಡಲೆ ಹಣ ಕೊಟ್ಟು ಪರಿಹಾರ ನೀಡಿದ್ದೇವೆ. ಸುಮಾರು 2 ಸಾವಿರ ಕೋಟಿಗೂ ಅಧಿಕ ಹಣ ತಕ್ಷಣ ಬಿಡುಗಡೆ ಮಾಡಿದ್ದೆವು. ರಾಜ್ಯದ ಬೊಕ್ಕಸದಿಂದಲೇ ಸಹಾಯ ಮಾಡಬಹುದು. ಇಲ್ಲಾ ಎಂದರೆ ಕುಂಟು ನೆಪ ಹೇಳಿ ಮುಂದಕ್ಕೆ ಹಾಕಬಹುದು ಎಂದು ಸರ್ಕಾರದ ನೀತಿ ವಿರುದ್ಧ ಬೊಮ್ಮಾಯಿ ವ್ಯಂಗ್ಯವಾಡಿದ್ದಾರೆ.

ಜಿಲ್ಲೆಯ ಮೂರು ತಾಲೂಕು ಬರಪೀಡಿತ ಪ್ರದೇಶ ಘೋಷಣೆ ವಿಳಂಬ ಕುರಿತಾಗಿ ಪ್ರತಿಕ್ರಿಯಿಸಿ, ರೆವೆನೂ ಮಿನಿಸ್ಟರ್ ಬಳಿ ಮಾತಾಡಿದ್ದೇನೆ. ಮತ್ತೊಮ್ಮೆ ವರದಿ ತರಿಸಿಕೊಂಡು ಪರಿಶೀಲನೆ ಮಾಡುತ್ತೇವೆ. ಸೋಮವಾರದ ಒಳಗೆ ಈ ಮೂರು ತಾಲೂಕು ಬರಗಾಲ ಪೀಡಿತ ಪಟ್ಟಿಯಲ್ಲಿ ಸೇರುತ್ತವೆ ಎಂದು ರೈತರಿಗೆ  ಬೊಮ್ಮಾಯಿ ಭರವಸೆ ನೀಡಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ವೇದಿಕೆ ಏರುತ್ತಿದ್ದಂತೆ ಹಾಸ್ಯದ ಹೊಳೆ ಹರಿಸಿದಿ ಕಿಚ್ಚ ಸುದೀಪ್
ವೇದಿಕೆ ಏರುತ್ತಿದ್ದಂತೆ ಹಾಸ್ಯದ ಹೊಳೆ ಹರಿಸಿದಿ ಕಿಚ್ಚ ಸುದೀಪ್
Vastu Tips: ಮನೆಯಲ್ಲಿ ಆಮೆ ಇಡುವುದರ ಹಿಂದಿನ ಮಹತ್ವವೇನು?
Vastu Tips: ಮನೆಯಲ್ಲಿ ಆಮೆ ಇಡುವುದರ ಹಿಂದಿನ ಮಹತ್ವವೇನು?
ಮೈಸೂರು: ಕಾದಾಡುತ್ತಾ ಅರಮನೆ ಆವರಣದಿಂದ ರಸ್ತೆಗೆ ಬಂದ ದಸರಾ ಆನೆಗಳು
ಮೈಸೂರು: ಕಾದಾಡುತ್ತಾ ಅರಮನೆ ಆವರಣದಿಂದ ರಸ್ತೆಗೆ ಬಂದ ದಸರಾ ಆನೆಗಳು
ಇಂದು ಶಶ ರಾಜಯೋಗ, ಈ ರಾಶಿಯವರಿಗೆ ಶನಿದೇವನ ಕೃಪೆಯಿಂದ ಒಳಿತಾಗಲಿದೆ
ಇಂದು ಶಶ ರಾಜಯೋಗ, ಈ ರಾಶಿಯವರಿಗೆ ಶನಿದೇವನ ಕೃಪೆಯಿಂದ ಒಳಿತಾಗಲಿದೆ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು