AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇದು ಜಾತಿ ಗಣತಿಯೋ? ಶೈಕ್ಷಣಿಕ ಗಣತಿಯೋ? ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ನೀಡಲಿ: ಮಾಜಿ ಸಿಎಂ ಬೊಮ್ಮಾಯಿ

ಬಿಹಾರದಲ್ಲಿ ಜಾತಿಗಣತಿ ವರದಿ ಬಹಿರಂಗವಾದ ಬಳಿಕ ಕರ್ನಾಟಕದಲ್ಲೂ ಸಹ ಒತ್ತಾಯಗಳು ಕೇಳಿ ಬರುತ್ತಿವೆ. ಈ ಕುರಿತಾಗಿ ಸದ್ಯ ಹಾವೇರಿಯಲ್ಲಿ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಮಾತನಾಡಿದ್ದು, ಜಾತಿ ಗಣತಿ ವರದಿ ಬಗ್ಗೆ ನಮ್ಮಲ್ಲಿ ಚರ್ಚೆಯೇ ಆಗಿಲ್ಲ. ಜಾತಿ ಗಣತಿಯೋ? ಶೈಕ್ಷಣಿಕ ಗಣತಿಯೋ? ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ಕೊಡಬೇಕು ಎಂದಿದ್ದಾರೆ.

ಇದು ಜಾತಿ ಗಣತಿಯೋ? ಶೈಕ್ಷಣಿಕ ಗಣತಿಯೋ? ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ನೀಡಲಿ: ಮಾಜಿ ಸಿಎಂ ಬೊಮ್ಮಾಯಿ
ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
ಸೂರಜ್​, ಮಹಾವೀರ್​ ಉತ್ತುರೆ
| Edited By: |

Updated on: Oct 07, 2023 | 4:34 PM

Share

ಹಾವೇರಿ, ಅಕ್ಟೋಬರ್​ 07: ಜಾತಿ ಗಣತಿ ವರದಿ ಬಗ್ಗೆ ನಮ್ಮಲ್ಲಿ ಚರ್ಚೆಯೇ ಆಗಿಲ್ಲ. ಜಾತಿ ಗಣತಿಯೋ? ಶೈಕ್ಷಣಿಕ ಗಣತಿಯೋ? ಎಂದು ಸಿಎಂ ಸಿದ್ದರಾಮಯ್ಯ (Siddaramaiah) ಸ್ಪಷ್ಟನೆ ಕೊಡಬೇಕು ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಜಿಲ್ಲೆಯ ಶಿಗ್ಗಾಂವಿಯ ಬಂಕಾಪುರದಲ್ಲಿ ಮಾತನಾಡಿದ ಅವರು, ಇದು ಆರ್ಥಿಕ ಹಾಗೂ ಶೈಕ್ಷಣಿಕ ಸಮೀಕ್ಷೆ, ಜಾತಿ ಗಣತಿ ಅಲ್ಲ ಎಂದು ಹೇಳಿದ್ದಾರೆ. ಸದ್ಯ ಜಾತಿ ಗಣತಿ ವರದಿ ರಾಜ್ಯ ಸರ್ಕಾರಕ್ಕೆ ಸಲ್ಲಿಸುವಂತೆ ಒತ್ತಾಯಿಸಲಾಗಿದೆ.

ಕಾಂಗ್ರೆಸ್ ವಿರುದ್ಧ ಮಾಜಿ ಸಿಎಂ ಬೊಮ್ಮಾಯಿ ವಾಗ್ದಾಳಿ

ಬಾರ್ ಲೈಸೆನ್ಸ್ ವಿಚಾರವಾಗಿ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್​ ದ್ವಂದ್ವ ಹೇಳಿಕೆ ವಿಚಾರವಾಗಿ ಪ್ರತಿಕ್ರಿಯಿಸಿದ್ದು, ಸಿಎಂ ಇದ್ದಾರೋ, ಸೂಪರ್ ಸಿಎಂ ಇದ್ದಾರೋ ಎಂದು ತಿಳಿಯುತ್ತಿಲ್ಲ. ಒಂದು ನೀತಿ ಬಗ್ಗೆ ಮಾತನಾಡಿದಾಗ ಸರ್ಕಾರ ಅದಕ್ಕೆ ಸ್ಪಷ್ಟನೆ ಕೊಡಲಿ. ಎಲ್ಲಾ ವಿಚಾರದಲ್ಲಿಯೂ ಸಿಎಂ ಒಂದು ದಾರಿ, ಡಿಸಿಎಂ ಒಂದು ದಾರಿ ಆಗಿದೆ. ಕಾವೇರಿ ನೀರು ಬಿಡುವ ವಿಚಾರದಲ್ಲಿ ಡಿಸಿಎಂ ನೀರು ಬಿಡಲ್ಲ ಎಂದರು. ಆದರೆ ಸಿಎಂ ನೀರು ಬಿಟ್ಟಿದ್ದನ್ನು ನಾವು ನೋಡಿದ್ದೇವೆ ಎಂದು ಕಾಂಗ್ರೆಸ್ ವಿರುದ್ಧ ಮಾಜಿ ಸಿಎಂ ಬೊಮ್ಮಾಯಿ ವಾಗ್ದಾಳಿ ಮಾಡಿದ್ದಾರೆ.

ಇದನ್ನೂ ಓದಿ: ಜಾತಿಗಣತಿಯ ವರದಿ ಅಂತಿಮ ಘಟ್ಟದಲ್ಲಿದೆ: ಹಿಂದುಳಿದ ವರ್ಗಗಳ ಆಯೋಗ ಅಧ್ಯಕ್ಷ ಜಯಪ್ರಕಾಶ್ ಹೆಗ್ಡೆ

ಬರಗಾಲ ಸಮರ್ಥವಾಗಿ ನಿಭಾಯಿಸುತ್ತೇವೆ ಎಂದಿರುವ ಸರ್ಕಾರದ ಹೇಳಿಕೆ ಕುರಿತು ಪ್ರತಿಕ್ರಿಯೆ ನೀಡಿದ್ದು, ಬರೀ ಹೇಳಿಕೆಯಿಂದ ಬರಗಾಲ ಸಮರ್ಥವಾಗಿ ಎದುರಿಸುವುದಕ್ಕೆ ಆಗುವುದಿಲ್ಲ. ನಾವು ಇಂತಹ ಹೇಳಿಕೆ ಬಹಳ ನೋಡಿದ್ದೇವೆ. ಒಂದು ಬಿಡಿ ಕಾಸು ಎಲ್ಲೂ ಬಿಡುಗಡೆ ಮಾಡಿಲ್ಲ. ಕೇಂದ್ರಕ್ಕೆ ಪತ್ರ ಬರೆದಿದ್ದು, ತಂಡ ಬರುತ್ತದೆ ಅಂತಾ ಹೇಳುತ್ತಿದ್ದಾರೆ. ಆದರೆ ನಾವು ಯಾವುದಕ್ಕೂ ಕಾಯಲೆ ಇಲ್ಲಾ.

ಇದನ್ನೂ ಓದಿ: ಕೇಂದ್ರ ಎಷ್ಟಾದರೂ ಪರಿಹಾರ ಕೊಡಲಿ, ರಾಜ್ಯ ಸರ್ಕಾರ ಬರಗಾಲವನ್ನ ಸಮರ್ಥವಾಗಿ ಎದುರಿಸುತ್ತದೆ: ಸಿಎಂ ಸಿದ್ದರಾಮಯ್ಯ

ನಾವು ಕೂಡಲೆ ಹಣ ಕೊಟ್ಟು ಪರಿಹಾರ ನೀಡಿದ್ದೇವೆ. ಸುಮಾರು 2 ಸಾವಿರ ಕೋಟಿಗೂ ಅಧಿಕ ಹಣ ತಕ್ಷಣ ಬಿಡುಗಡೆ ಮಾಡಿದ್ದೆವು. ರಾಜ್ಯದ ಬೊಕ್ಕಸದಿಂದಲೇ ಸಹಾಯ ಮಾಡಬಹುದು. ಇಲ್ಲಾ ಎಂದರೆ ಕುಂಟು ನೆಪ ಹೇಳಿ ಮುಂದಕ್ಕೆ ಹಾಕಬಹುದು ಎಂದು ಸರ್ಕಾರದ ನೀತಿ ವಿರುದ್ಧ ಬೊಮ್ಮಾಯಿ ವ್ಯಂಗ್ಯವಾಡಿದ್ದಾರೆ.

ಜಿಲ್ಲೆಯ ಮೂರು ತಾಲೂಕು ಬರಪೀಡಿತ ಪ್ರದೇಶ ಘೋಷಣೆ ವಿಳಂಬ ಕುರಿತಾಗಿ ಪ್ರತಿಕ್ರಿಯಿಸಿ, ರೆವೆನೂ ಮಿನಿಸ್ಟರ್ ಬಳಿ ಮಾತಾಡಿದ್ದೇನೆ. ಮತ್ತೊಮ್ಮೆ ವರದಿ ತರಿಸಿಕೊಂಡು ಪರಿಶೀಲನೆ ಮಾಡುತ್ತೇವೆ. ಸೋಮವಾರದ ಒಳಗೆ ಈ ಮೂರು ತಾಲೂಕು ಬರಗಾಲ ಪೀಡಿತ ಪಟ್ಟಿಯಲ್ಲಿ ಸೇರುತ್ತವೆ ಎಂದು ರೈತರಿಗೆ  ಬೊಮ್ಮಾಯಿ ಭರವಸೆ ನೀಡಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ