AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

R Shankar: ಬಿಜೆಪಿ ಎಂಎಲ್​ಸಿ ಆರ್​.ಶಂಕರ್ ವಿರುದ್ಧ ಎಫ್​ಐಆರ್ ದಾಖಲು

ಚುನಾವಣೆ ವೇಳೆ ಮತದಾರರಿಗೆ ಆಮಿಷವೊಡ್ಡಿದ್ದಾರೆ ಎಂದು ಆರೋಪಿಸಿ ರಾಣೆಬೆನ್ನೂರು ತಹಶೀಲ್ದಾರ್ ನೀಡಿದ ದೂರಿನ ಮೇರೆಗೆ ಬಿಜೆಪಿ ಎಂಎಲ್​ಸಿ ಆರ್​.ಶಂಕರ್ ವಿರುದ್ಧ ಎಫ್​ಐಆರ್ ದಾಖಲಿಸಲಾಗಿದೆ.

R Shankar: ಬಿಜೆಪಿ ಎಂಎಲ್​ಸಿ ಆರ್​.ಶಂಕರ್ ವಿರುದ್ಧ ಎಫ್​ಐಆರ್ ದಾಖಲು
ಬಿಜೆಪಿ ಎಂಎಲ್​ಸಿ ಆರ್.ಶಂಕರ್
Rakesh Nayak Manchi
Rakesh Nayak Manchi|

Updated on:Mar 17, 2023 | 2:55 PM

Share

ಹಾವೇರಿ: ಕರ್ನಾಟಕ ವಿಧಾನಸಭೆ ಚುನಾವಣೆ (Karnataka Assembly Election 2023) ಸಮೀಪಿಸುತ್ತಿದ್ದಂತೆ ರಾಜಕೀಯ ಪಕ್ಷಗಳು ಮತದಾರರನ್ನು ಸೆಳೆಯಲು ಇನ್ನಿಲ್ಲದ ಕಸರತ್ತು, ಆಮಿಷಗಳನ್ನು ಒಡ್ಡುತ್ತಿದ್ದಾರೆ. ಇದೀಗ ಚುನಾವಣೆ ಹಿನ್ನಲೆ ಮತದಾರರಿಗೆ ಆಮಿಷವೊಡ್ಡಿದ ಪ್ರಕರಣ ಸಂಬಂಧ ಬಿಜೆಪಿ ಎಂಎಲ್​ಸಿ ಆರ್​.ಶಂಕರ್ (BJP MLC R. Shankar) ವಿರುದ್ಧ ಜಿಲ್ಲೆಯ ರಾಣೇಬೆನ್ನೂರು ಟೌನ್ ಪೊಲೀಸ್ ಠಾಣೆಯಲ್ಲಿ ಎಫ್​ಐಆರ್ (FIR) ದಾಖಲಿಸಲಾಗಿದೆ. ಎಂಎಸ್​ಸಿ ಶಂಕರ್ ಅವರು ಚುನಾವಣೆ ವೇಳೆ ಮತದಾರರಿಗೆ ಆಮಿಷವೊಡ್ಡಿದ್ದಾರೆ ಎಂದು ಆರೋಪಿಸಿ ತಹಶೀಲ್ದಾರ್​ ಗುರು ಬಸವರಾಜ ಅವರು ಠಾಣೆಗೆ ದೂರು ನೀಡಿದ್ದು, ಮತದಾರರಿಗೆ ಕುಕ್ಕರ್​, ಸೀರೆ ಹಂಚಿಕೆ ಮಾಡಿದ್ದಾರೆಂದು ಉಲ್ಲೇಖಿಸಿದ್ದಾರೆ. ತಹಶೀಲ್ದಾರ್ ನೀಡಿದ ದೂರಿನ ಅನ್ವಯ ಪೊಲೀಸರು ಎಂಎಲ್​ಸಿ ವಿರುದ್ಧ ಎಫ್​ಐಆರ್ ದಾಖಲಿಸಿದ್ದಾರೆ. ಮಾರ್ಚ್​ 14ರಂದು ರಾತ್ರಿ ಆರ್​.ಶಂಕರ್ ಕಚೇರಿ ಮೇಲೆ ಹಾವೇರಿ ಎಸಿ, ವಾಣಿಜ್ಯ ತೆರಿಗೆ ಅಧಿಕಾರಿಗಳು (Commercial Taxes Department) ದಾಳಿ ನಡೆಸಿದ್ದರು. ಈ ವೇಳೆ ಸಿಕ್ಕ ಮಾಹಿತಿಯನ್ನು ಕಂದಾಯ ಇಲಾಖೆ ಕೋರ್ಟ್​ಗೆ ಸಲ್ಲಿಸಿತ್ತು. ಇದೀಗ ಕೋರ್ಟ್ ಅನುಮತಿಯಂತೆ ದೂರು ಸಲ್ಲಿಸಲಾಗಿದೆ.

ಚುನಾವಣೆ ಹಿನ್ನಲೆ ಎಂಎಲ್​ಸಿ ಶಂಖರ್ ಅವರು ಕುಕ್ಕರ್, ಸೀರೆ ಹಂಚಿಕೆ ಮಾಡಿ ಮತದಾರರಿಗೆ ಆಮಿಷವೊಡ್ಡಿದ್ದಾರೆ. ಇವರ ವಿರುದ್ಧ ಕಾನೂನು ಕ್ರಮ ಜರುಗಿಸಬೇಕು ಎಂದು ಗುರು ಬಸವರಾಜ ಅವರು ದೂರು ನೀಡಿದ್ದಾರೆ. ಅದರಂತೆ ಪೊಲೀಸರು, ಕಲಂ 171 E ಸೆಕ್ಷನ್ ಅಡಿಯಲ್ಲಿ ದೂರು ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ. ಆರ್. ಶಂಕರ ಕಚೇರಿಯಲ್ಲಿಟ್ಟಿದ್ದ ಲಕ್ಷಾಂತರ ರೂಪಾಯಿ ಮೌಲ್ಯದ ಸೀರೆ, ತಟ್ಟೆ, ಮಕ್ಕಳ ಸ್ಕೂಲ್ ಬ್ಯಾಗ್​ಗಳಿಗೆ ಪೊಲೀಸ್ ಭದ್ರತೆ ಕಲ್ಪಿಸಲಾಗಿದ್ದು, ಕಚೇರಿ ಒಳಗೆ ಯಾರೂ ಹೋಗದಂತೆ ಶಹರ ಠಾಣೆ ಪೊಲೀಸರು ಕಟ್ಟೆಚ್ಚರವಹಿಸಿದ್ದಾರೆ.

ಇದನ್ನೂ ಓದಿ: ಮೂಡಿಗೆರೆ ವಿಜಯಸಂಕಲ್ಪ ಯಾತ್ರೆಯಲ್ಲಿ ಬಿಜೆಪಿ ಕಾರ್ಯಕರ್ತರ ಗಲಾಟೆ: ನಾನು ಗೆಲ್ಲಬಾರದು ಅಂತ ಹೀಗೆ ಮಾಡಿದ್ದಾರೆ- ಎಂ.ಪಿ. ಕುಮಾರಸ್ವಾಮಿ

ಹಾವೇರಿ ಜಿಲ್ಲೆ ರಾಣೆಬೆನ್ನೂರಿನ ಬೀರಲಿಂಗೇಶ್ವರ ನಗರದಲ್ಲಿರುವ ಶಂಕರ್​ ಮನೆ ಮೇಲೆ ಮಾರ್ಚ್ 14ರಂದು ವಾಣಿಜ್ಯ ತೆರಿಗೆ ಇಲಾಖೆ ಅಧಿಕಾರಿಗಳು ತಡರಾತ್ರಿ ದಾಳಿಯಾಗಿದ್ದು, ಅಧಿಕಾರಿಗಳು ದಾಖಲೆಗಳನ್ನು ಪರಿಶೀಲನೆಯಲ್ಲಿ ನಡೆಸಿದ್ದಾರೆ. ಈ ವೇಳೆ ಆರ್.ಶಂಕರ್ ಗೃಹಕಚೇರಿಯ ಸಭಾಂಗಣದಲ್ಲಿ ಸಾರ್ವಜನಿಕರಿಗೆ ಹಂಚಲು ತಂದಿದ್ದ ಹಲವು ವಸ್ತುಗಳು ಪತ್ತೆಯಾಗಿತ್ತು. ಆರ್.ಶಂಕರ್ ಭಾವಚಿತ್ರ ಇರುವ ಸೀರೆ ಬಾಕ್ಸ್. ತಟ್ಟೆ, ಲೋಟಾ ಹಾಗೂ ಎಲ್.ಕೆ.ಜಿ ಪದವಿ ಕಾಲೇಜು ಮಕ್ಕಳಿಗೆ ಹಂಚಲು ತಂದಿದ್ದ ಸ್ಕೂಲ್ ಬ್ಯಾಗ್ ಸಿಕ್ಕಿದ್ದವು.

ಸುಮಾರು 8 ಕೊಟಿ ರೂಪಾಯಿ ವೆಚ್ಚದ ವಸ್ತುಗಳು ಪತ್ತೆಯಾಗಿತ್ತು ಎಂದು ಅಂದಾಜಿಸಲಾಗಿದ್ದು, ಈ ಎಲ್ಲ ವಸ್ತುಗಳ GST ಬಿಲ್ ಕೇಳಲಾಗಿತ್ತು. ಈ ಹಿನ್ನಲೆಯಲ್ಲಿ ಆರ್ ಶಂಕರ್ ಬಿಲ್ ಕೊಡಲು ಅವಕಾಶ ಕೇಳಿದ್ದಾರೆ. ಒಂದು ವೇಳೆ ಸರಿಯಾದ ಜಿಎಸ್​ಟಿ ಬಿಲ್ ಇಲ್ಲದಿದದ್ದರೆ ದಂಡ ವಿಧಿಸುವ ಸಾಧ್ಯತೆ ಇದೆ. ಇನ್ನು ಚುನಾವಣೆ ನಿಯಮ ಉಲ್ಲಂಘಣೆ ಮಾಡಿದಾರಾ ಎಂಬುವುದಕ್ಕೆ ಕಂದಾಯ ಇಲಾಖೆ ಅಧಿಕಾರಿಗಳು ಸಹ ದಾಳಿ ಮಾಡಿದ್ದು, ಎಲ್ಲ ದಾಖಲೆಗಳನ್ನು ಕೊರ್ಟ್ ಮುಂದೆ ಹಾಜರುಪಡಿಸಿ, ಒಪ್ಪಿಗೆ ಮೇರೆಗೆ ಎಫ್ಐಆರ್ ದಾಖಲು ಮಾಡಲಾಗುವುದು ಎಂದು ಹಾವೇರಿ ಜಿಲ್ಲಾಧಿಕಾರಿ ರಘುನಂದನಮೂರ್ತಿ ಅವರು Tv9ಗೆ ಮಾಹಿತಿ ನೀಡಿದ್ದರು.

ವಾಣಿಜ್ಯ ತೆರಿಗೆ ಇಲಾಖೆ ಅಧಿಕಾರಿಗಳು ತಮ್ಮ ಮನೆ ಮೇಲೆ ದಾಳಿ ನಡೆಸಿರುವುದಕ್ಕೆ ಬಿಜೆಪಿ ವಿಧಾನಪರಿಷತ್ ಸದಸ್ಯ ಆರ್​. ಶಂಕರ್ ಸ್ವಪಕ್ಷದ ವಿರುದ್ಧವೇ ಆಕ್ರೋಶ ವ್ಯಕ್ತಪಡಿಸಿದ್ದರು. ತಮ್ಮ ವಿರುದ್ಧ ಸಂಚು ಹೂಡಲಾಗಿದೆ ಎಂದು ಆರೋಪಿಸಿರುವ ಅವರು, ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿಯಿಂದ ಟಿಕೆಟ್ ದೊರೆಯದಿದ್ದರೆ ಸ್ವತಂತ್ರ ಅಭ್ಯರ್ಥಿಯಾಗಿ ಕಣಕ್ಕಿಳಿಯುವುದಾಗಿ ಎಚ್ಚರಿಕೆ ನೀಡಿದ್ದರು. ಬಿಜೆಪಿ ಮರಳಿ ಅಧಿಕಾರಕ್ಕೆ ಬರಲು ನಾನೂ ಕಾರಣ. ಬಸವರಾಜ ಬೊಮ್ಮಾಯಿ ಮತ್ತು ಆರ್ ಅಶೋಕ ನನ್ನ ಮನೆಗೆ ಬಂದು ಬೆಂಬಲ ಕೋರಿದ್ದರು. ಅದಾದ ನಂತರ ಅವರು ಪ್ರತಿ ದಿನ ನನ್ನನ್ನು ನೋಯಿಸಿದ್ದಾರೆ. ಸಚಿವ ಸಂಪುಟದಲ್ಲಿ ಆರು ಖಾಲಿ ಸ್ಥಾನಗಳಿದ್ದರೂ ನಮ್ಮನ್ನು ಪರಿಗಣಿಸಿಲ್ಲ ಎಂದು ಅಸಮಾಧಾನ ಹೊರಹಾಕಿದ್ದರು. ಶಂಕರ್ ಆರೋಪ ತಳ್ಳಿಹಾಕಿದ್ದ ಸಿಎಂ ಬೊಮ್ಮಾಯಿ, ತನಿಖಾ ಸಂಸ್ಥೆಗಳಿಗೆ ಸ್ವಾತಂತ್ರ್ಯ ನೀಡಿದ್ದೇವೆ. ಯಾರೇ ತಪ್ಪು ಮಾಡಿದರೂ ಶಿಕ್ಷಿಸುವ ಕಾರ್ಯ ಮಾಡುತ್ತಿದೆ ಎಂದು ಹೇಳಿದ್ದರು.

ರಾಜಕೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 2:41 pm, Fri, 17 March 23

Follow Us
Rakesh Nayak Manchi
Rakesh Nayak Manchi

ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಮಂಚಿ ಗ್ರಾಮದವನಾದ ನಾನು, ಪದವಿ ಮುಗಿಸಿದ ನಂತರ ಏನು ಮಾಡಬೇಕು ಎಂಬ ಯೋಚನೆಯಲ್ಲಿದ್ದಾಗ ಪತ್ರಿಕೋದ್ಯಮ ಕ್ಷೇತ್ರದ ಮೇಲೆ ಕಣ್ಣುಬಿತ್ತು. ಅದರಂತೆ ಎಂಎ ಮುಗಿಸಿ ಕಳೆದ ನಾಲ್ಕು ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದೇನೆ. ದಿನ ಪತ್ರಿಕೆ, ನ್ಯೂಸ್ ಆ್ಯಪ್​ನಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಪ್ರಸ್ತುತ ಕಳೆದ ಒಂದೂವರೆ ವರ್ಷಗಳಿಂದ 'ಉತ್ತಮ ಸಮಾಜಕ್ಕಾಗಿ' ಟಿವಿ9 ಡಿಜಿಟಲ್​ನಲ್ಲಿ ಕೆಲಸ ಮಾಡುತ್ತಿದ್ದೇನೆ.

ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಡಿಕೆಶಿ ಜೊತೆಗಿನ 25 ವರ್ಷದ ಆತ್ಮೀಯತೆ ಹಂಚಿಕೊಂಡ ಕಡಲೆಕಾಯಿ ವ್ಯಾಪಾರಿ
ಡಿಕೆಶಿ ಜೊತೆಗಿನ 25 ವರ್ಷದ ಆತ್ಮೀಯತೆ ಹಂಚಿಕೊಂಡ ಕಡಲೆಕಾಯಿ ವ್ಯಾಪಾರಿ
ಡಿಕೆಶಿ ಸಿಎಂ, ಪರಮೇಶ್ವರ್-ಡಿಸಿಎಂ: ಇಲ್ಲಿದೆ ಸಚಿವರ ಅಧಿಕೃತ ಲಿಸ್ಟ್
ಡಿಕೆಶಿ ಸಿಎಂ, ಪರಮೇಶ್ವರ್-ಡಿಸಿಎಂ: ಇಲ್ಲಿದೆ ಸಚಿವರ ಅಧಿಕೃತ ಲಿಸ್ಟ್
ಡಿಕೆಶಿ ಪ್ರಮಾಣವಚನ ಕಾರ್ಯಕ್ರಮದ ಬಗ್ಗೆ ನೊಣವಿನಕೆರೆ ಶ್ರೀಗಳು ಹೇಳಿದ್ದಿಷ್ಟು
ಡಿಕೆಶಿ ಪ್ರಮಾಣವಚನ ಕಾರ್ಯಕ್ರಮದ ಬಗ್ಗೆ ನೊಣವಿನಕೆರೆ ಶ್ರೀಗಳು ಹೇಳಿದ್ದಿಷ್ಟು
‘ಬ್ಲಾಸ್ಟ್​’ ಸಿನಿಮಾಗೆ ಬ್ಲಾಸ್ಟ್​ ಮ್ಯೂಸಿಕ್ ಕೊಟ್ಟ ರವಿ ಬಸ್ರೂರು
‘ಬ್ಲಾಸ್ಟ್​’ ಸಿನಿಮಾಗೆ ಬ್ಲಾಸ್ಟ್​ ಮ್ಯೂಸಿಕ್ ಕೊಟ್ಟ ರವಿ ಬಸ್ರೂರು
ಬೆಂಗಳೂರಿನಾದ್ಯಂತ ಡಿಕೆ ಶಿವಕುಮಾರ್ ಫ್ಲೆಕ್ಸ್, ಕಟೌಟ್​​ಗಳ ಅಬ್ಬರ!
ಬೆಂಗಳೂರಿನಾದ್ಯಂತ ಡಿಕೆ ಶಿವಕುಮಾರ್ ಫ್ಲೆಕ್ಸ್, ಕಟೌಟ್​​ಗಳ ಅಬ್ಬರ!