AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಂಜಾಬ್​ನಲ್ಲಿ ಅಪಘಾತದಲ್ಲಿ ಕನ್ನಡಿಗ ಯೋಧ ಮೃತ: ಇಂದು ಸ್ವಗ್ರಾಮದಲ್ಲಿ ಅಂತ್ಯಕ್ರಿಯೆ

ಪಂಜಾಬ್​ನಲ್ಲಿ ಬಟಿಂಡಾದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ವೇಳೆ ಅಪಘಾತದಲ್ಲಿ ಮೃತರಾಗಿದ್ದ ಶಿಗ್ಗಾಂವಿ ತಾಲೂಕಿನ ಶೀಲವಂತಸೋಮಾಪುರ ಗ್ರಾಮದ ಯೋಧ ಶಿವರಾಜ ಗಂಗಮ್ಮನವರ ಅವರ ಪಾರ್ಥೀವ ಶರೀರ ಸ್ವಗ್ರಾಮಕ್ಕೆ ಆಗಮಿಸಿದೆ.

ಪಂಜಾಬ್​ನಲ್ಲಿ ಅಪಘಾತದಲ್ಲಿ ಕನ್ನಡಿಗ ಯೋಧ ಮೃತ: ಇಂದು ಸ್ವಗ್ರಾಮದಲ್ಲಿ ಅಂತ್ಯಕ್ರಿಯೆ
ಮೃತ ಯೋಧ ಶಿವರಾಜ ಗಂಗಮ್ಮನವರ
TV9 Web
| Edited By: |

Updated on:Oct 03, 2022 | 7:27 PM

Share

ಹಾವೇರಿ: ಪಂಜಾಬ್​ನಲ್ಲಿ (Punjab) ಬಟಿಂಡಾದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ವೇಳೆ ಅಪಘಾತದಲ್ಲಿ ಮೃತರಾಗಿದ್ದ ಶಿಗ್ಗಾಂವಿ ತಾಲೂಕಿನ ಶೀಲವಂತಸೋಮಾಪುರ ಗ್ರಾಮದ ಯೋಧ ಶಿವರಾಜ ಗಂಗಮ್ಮನವರ ಅವರ ಪಾರ್ಥೀವ ಶರೀರ ಸ್ವಗ್ರಾಮಕ್ಕೆ ಆಗಮಿಸಿದೆ. ಶಿಗ್ಗಾಂವಿ ಪಟ್ಟಣ, ದುಂಡಸಿ ಗಂಗ್ಯಾನೂರ ಗ್ರಾಮದ ಮೂಲಕ ಮೆರವಣಿಗೆ ಮುಖಾಂತರ ಪಾರ್ಥೀವ ಶರೀರ ಶೀಲವಂತಸೋಮಾಪುರ ಗ್ರಾಮಕ್ಕೆ ತಲುಪಿದೆ. ಗ್ರಾಮದ ಸರಕಾರಿ ಶಾಲೆ ಆವರಣದಲ್ಲಿ ಅಂತಿಮ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿತ್ತು. ಪೊಲೀಸರು ಮೂರು ಸುತ್ತು ಗಾಳಿಯಲ್ಲಿ ಗುಂಡು ಹಾರಿಸಿ ಸಕಲ ಸರ್ಕಾರಿ  ಗೌರವ ಸಲ್ಲಿಸಿದರು. ಸಾರ್ವಜನಿಕ ದರ್ಶನದ ನಂತರ ಗ್ರಾಮದ ಬಸ್ ನಿಲ್ದಾಣದ ಬಳಿ ಯೋಧನ ಅಂತ್ಯಕ್ರಿಯೆ ನಡೆಯಲಿದೆ.

ಅಕ್ಟೋಬರ್ 1 ಪಂಜಾಬ್​ದ ಬಟಿಂಡಾದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಕನ್ನಡಿಗ ಯೋಧ ಶಿವರಾಜ ಗಂಗಮ್ಮನವರ (23) ಅಪಘಾತದಲ್ಲಿ ಮೃತಪಟ್ಟಿದ್ದರು. ಶಿಗ್ಗಾಂವಿ ತಾಲೂಕಿನ ಶೀಲವಂತಸೋಮಾಪುರ ಗ್ರಾಮದ ಶಿವರಾಜ ಗಂಗಮ್ಮನವರ 2016ರಲ್ಲಿ ಭಾರತೀಯ ಸೇನೆಗೆ ಸೇರ್ಪಡೆಯಾಗಿದ್ದರು. ಅ.1 ರಂದು ಸಂಭವಿಸಿದ ಅಪಘಾತದಲ್ಲಿ ಮೃತಪಟ್ಟಿದ್ದಾರೆ.

ಯೋಧ ಶಿವರಾಜ ಗಂಗಮ್ಮನವರ ನಿಧನಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಟ್ವೀಟ್​ ಮಾಡಿ ಸಂತಾಪ ಸೂಚಿಸಿದ್ದರು. ವೀರಯೋಧ ಶಿವರಾಜ್ ಆತ್ಮಕ್ಕೆ ಶಾಂತಿ ಕೋರುತ್ತೇನೆ. ಕುಟುಂಬದವರಿಗೆ ದುಃಖ ಭರಿಸುವ ಶಕ್ತಿಯನ್ನು ಭಗವಂತ ನೀಡಲಿ ಎಂದು ಸಂತಾಪ ಸೂಚಿಸಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 7:27 pm, Mon, 3 October 22

450 ಕಿ.ಮೀ ಸ್ಕೇಟಿಂಗ್ ಮಾಡಿ ಅಯೋಧ್ಯೆಯ ರಾಮನ ದರ್ಶನ ಪಡೆದ 9 ವರ್ಷದ ಬಾಲಕಿ!
450 ಕಿ.ಮೀ ಸ್ಕೇಟಿಂಗ್ ಮಾಡಿ ಅಯೋಧ್ಯೆಯ ರಾಮನ ದರ್ಶನ ಪಡೆದ 9 ವರ್ಷದ ಬಾಲಕಿ!
ಸೋಮನಾಥ ದೇವಾಲಯದಲ್ಲಿ ಪ್ರಾರ್ಥನೆ ಸಲ್ಲಿಸಿದ ಪ್ರಧಾನಿ ಮೋದಿ
ಸೋಮನಾಥ ದೇವಾಲಯದಲ್ಲಿ ಪ್ರಾರ್ಥನೆ ಸಲ್ಲಿಸಿದ ಪ್ರಧಾನಿ ಮೋದಿ
ಸೋಮನಾಥ ದೇವಾಲಯಕ್ಕೆ ಆಗಮಿಸಿದ ಪ್ರಧಾನಿ ಮೋದಿಗೆ ಅದ್ದೂರಿ ಸ್ವಾಗತ
ಸೋಮನಾಥ ದೇವಾಲಯಕ್ಕೆ ಆಗಮಿಸಿದ ಪ್ರಧಾನಿ ಮೋದಿಗೆ ಅದ್ದೂರಿ ಸ್ವಾಗತ
ಹೆಚ್​​​ಡಿಕೆ VS ಡಿಕೆಶಿ ಸವಾಲು: ಓಪನ್ ಡಿಬೇಟ್ ಮಾಡೋಣ ಬನ್ನಿ
ಹೆಚ್​​​ಡಿಕೆ VS ಡಿಕೆಶಿ ಸವಾಲು: ಓಪನ್ ಡಿಬೇಟ್ ಮಾಡೋಣ ಬನ್ನಿ
ಶ್ವಾನ ದಾಳಿಯಿಂದ ಶ್ರೇಯಸ್ ಅಯ್ಯರ್ ಜಸ್ಟ್ ಮಿಸ್; ವಿಡಿಯೋ ನೋಡಿ
ಶ್ವಾನ ದಾಳಿಯಿಂದ ಶ್ರೇಯಸ್ ಅಯ್ಯರ್ ಜಸ್ಟ್ ಮಿಸ್; ವಿಡಿಯೋ ನೋಡಿ
ಕಿಚ್ಚನ ಮಾತು ಕೇಳಿ ಕಣ್ಣೀರು ಹಾಕಿದ ಅಶ್ವಿನಿ-ಧ್ರುವಂತ್: ವಿಡಿಯೋ ನೋಡಿ
ಕಿಚ್ಚನ ಮಾತು ಕೇಳಿ ಕಣ್ಣೀರು ಹಾಕಿದ ಅಶ್ವಿನಿ-ಧ್ರುವಂತ್: ವಿಡಿಯೋ ನೋಡಿ
ಬಳ್ಳಾರಿ ಗಲಭೆ ಖಂಡಿಸಿ ಬಿಜೆಪಿಯಿಂದ ಸಮರ: ಜ 17ರಂದು ಪ್ರತಿಭಟನೆ ಎಂದ ರೆಡ್ಡಿ
ಬಳ್ಳಾರಿ ಗಲಭೆ ಖಂಡಿಸಿ ಬಿಜೆಪಿಯಿಂದ ಸಮರ: ಜ 17ರಂದು ಪ್ರತಿಭಟನೆ ಎಂದ ರೆಡ್ಡಿ
ಪ್ರೀತಿ ಮಾಡಲು ಒಪ್ಪದಿದ್ದಕ್ಕೆ ಬೆಂಗಳೂರಿನ ಹುಡುಗಿಗೆ ಕೊಲೆ ಬೆದರಿಕೆ
ಪ್ರೀತಿ ಮಾಡಲು ಒಪ್ಪದಿದ್ದಕ್ಕೆ ಬೆಂಗಳೂರಿನ ಹುಡುಗಿಗೆ ಕೊಲೆ ಬೆದರಿಕೆ
ಮನೆ ಕಟ್ಟಲು ಅಡಿಪಾಯ ತೆಗೆಯುವಾಗ ವೇಳೆ ನಿಧಿ ಪತ್ತೆ
ಮನೆ ಕಟ್ಟಲು ಅಡಿಪಾಯ ತೆಗೆಯುವಾಗ ವೇಳೆ ನಿಧಿ ಪತ್ತೆ
ಎಣ್ಣೆ ಮತ್ತಲ್ಲಿ ಡಿವೈಡರ್​​ ಹಾರಿಸಿದ ಕಾರು ಚಾಲಕ: 8 ಜನ ಜಸ್ಟ್​ ಮಿಸ್!​​
ಎಣ್ಣೆ ಮತ್ತಲ್ಲಿ ಡಿವೈಡರ್​​ ಹಾರಿಸಿದ ಕಾರು ಚಾಲಕ: 8 ಜನ ಜಸ್ಟ್​ ಮಿಸ್!​​