AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

“ಅಪ್ಪ ನಾನು ಮದುವೆಯಾಗಿದ್ದೇನೆ, ನನ್ನನ್ನು ಬಿಟ್ಟುಬಿಡಿ”: ಮಗಳ ಕಣ್ಣೀರಿಗೂ ಬೆಲೆ ಕೊಡದೆ ಎಳೆದೊಯ್ದ ತಂದೆ

ಹಾನಗಲ್ ತಾಲೂಕಿನ ತಿಲವಳ್ಳಿಯಲ್ಲಿ ಪ್ರೇಮ ವಿವಾಹವಾಗಿದ್ದ ಮಣಿಕಂಠ ಮತ್ತು ಸೃಷ್ಟಿಯನ್ನು ಯುವತಿಯ ಪೋಷಕರು ಬಲವಂತವಾಗಿ ಬೇರ್ಪಡಿಸಿದ್ದಾರೆ. ನೋಂದಣಿ ಮದುವೆಯಾಗಿದ್ದರೂ, ಈ ಜೋಡಿಯ ಮೇಲೆ ನಡೆದ ಹಿಂಸಾತ್ಮಕ ದಾಳಿ ಮೊಬೈಲ್‌ನಲ್ಲಿ ಸೆರೆಯಾಗಿದೆ. ದೂರು ಸ್ವೀಕರಿಸಲು ಪೊಲೀಸರು ನಿರಾಕರಿಸಿದ್ದು, ಕಾನೂನುಬದ್ಧ ಮದುವೆಗೆ ರಕ್ಷಣೆ ನೀಡದ ನಿರ್ಲಕ್ಷ್ಯ ಸಾರ್ವಜನಿಕ ಆಕ್ರೋಶಕ್ಕೆ ಕಾರಣವಾಗಿದೆ. ಇದು ಜಾತಿ ಪ್ರೇಮ ಮತ್ತು ಸಾಮಾಜಿಕ ಭೀತಿಯ ದುರಂತ.

ಅಪ್ಪ ನಾನು ಮದುವೆಯಾಗಿದ್ದೇನೆ, ನನ್ನನ್ನು ಬಿಟ್ಟುಬಿಡಿ: ಮಗಳ ಕಣ್ಣೀರಿಗೂ ಬೆಲೆ ಕೊಡದೆ ಎಳೆದೊಯ್ದ ತಂದೆ
ಪ್ರೀತಿಸಿ ಮದುವೆಯಾದ ಯುವತಿ
ಅಕ್ಷಯ್​ ಪಲ್ಲಮಜಲು​​
|

Updated on:Mar 04, 2026 | 9:01 PM

Share

ಹಾನಗಲ್ ಮಾ.4: ಹೆಚ್ಚಿನ ಹೆತ್ತವರು ಮಕ್ಕಳ ಪ್ರೀತಿ ಒಪ್ಪುವುದಿಲ್ಲ. ಜಾತಿ ಪ್ರೇಮ, ಸಮಾಜ ಏನು ಹೇಳುತ್ತೋ ಎಂಬೆಲ್ಲ ಭಯ ಇರುತ್ತದೆ. ಅದರಲ್ಲೂ ಸಂಬಂಧಿಕ ಕಾಟ ಯಾರಿಗೂ ಬೇಡ. ಪ್ರೀತಿಸಿ ಓಡಿ ಹೋಗಿ ಮದುವೆಯಾದರೆ ಎರಡು ಕುಟುಂಬಗಳು ಸಂಬಂಧ ಕಳೆದುಕೊಳ್ಳಬೇಕು ಎಂಬ ಹೆದರಿಕೆ. ಇದರ ನಡುವೆ ಧೈರ್ಯ ಮಾಡಿ ಮದುವೆಯಾದರೆ ಈ ಪರಿಸ್ಥಿತಿ ನೋಡಿ. ಪ್ರೀತಿಸಿ ಅಧಿಕೃತವಾಗಿ ರಿಜಿಸ್ಟರ್ ಮ್ಯಾರೇಜ್ ಯಾಗಿದ್ದ ನವಜೋಡಿಯನ್ನು ಯುವತಿಯ ಪೋಷಕರು ಮತ್ತು ಸಂಬಂಧಿಕರು ಸಿನಿಮೀಯ ರೀತಿಯಲ್ಲಿ ದಾಳಿ ನಡೆಸಿ ಬೇರ್ಪಡಿಸಿರುವ ಘಟನೆ ಹಾನಗಲ್ ತಾಲೂಕಿನ ತಿಳವಳ್ಳಿ ಗ್ರಾಮದಲ್ಲಿ ನಡೆದಿದೆ. “ನಾನು ಪ್ರೀತಿಸಿ ಮದುವೆಯಾಗಿದ್ದೇನೆ, ನನಗೆ ನನ್ನ ಗಂಡ ಬೇಕು” ಎಂದು ಯುವತಿ ಗೋಳಾಡಿದರೂ ಕಿವಿಗೊಡದ ಪೋಷಕರು ಆಕೆಯನ್ನು ಹೊಡೆದು ಎಳೆದೊಯ್ದಿದ್ದಾರೆ.

ಮಣಿಕಂಠ ಮತ್ತು ಸೃಷ್ಟಿ ಎಂಬುವವರು ಕಳೆದ ಕೆಲವು ಕಾಲದಿಂದ ಪ್ರೀತಿಸುತ್ತಿದ್ದರು. ಪೋಷಕರ ವಿರೋಧದ ನಡುವೆಯೂ ಈ ಜೋಡಿ ಇತ್ತೀಚೆಗೆ ರಿಜಿಸ್ಟರ್ ಮ್ಯಾರೇಜ್ ಮಾಡಿಕೊಂಡಿದ್ದರು. ಮದುವೆಯಾದ ಬಳಿಕ ಸೃಷ್ಟಿ ತನ್ನ ಪತಿ ಮಣಿಕಂಠನ ಮನೆಯಲ್ಲಿದ್ದರು. ವಿಷಯ ತಿಳಿಯುತ್ತಿದ್ದಂತೆಯೇ ಸೃಷ್ಟಿಯ ತಂದೆ ಮತ್ತು ಸಂಬಂಧಿಕರು ಮಣಿಕಂಠನ ಮನೆಗೆ ನುಗ್ಗಿದ್ದಾರೆ. ಅಲ್ಲಿ ಸೃಷ್ಟಿಯನ್ನು ಬಲವಂತವಾಗಿ ಹೊಡೆದು, ಎಳೆದಾಡಿ ಕಾರಿಗೆ ಹಾಕಿಕೊಂಡು ಹೋಗಿದ್ದಾರೆ.

ಇದನ್ನೂ ಓದಿ: ಮೌಲ್ವಿ ಮೇಲೆ ಹಿಂದೂ ಯುವಕರ ಹಲ್ಲೆ: ಸಾವಿರಾರು ಮುಸ್ಲಿಮರಿಂದ ಬೃಹತ್ ಪ್ರತಿಭಟನೆ, ಪೊಲೀಸ್ ಠಾಣೆಗೆ ಮುತ್ತಿಗೆ ಯತ್ನ

ಇಲ್ಲಿದೆ ನೋಡಿ ವಿಡಿಯೋ:

“ಅಪ್ಪಾ ನಾನು ಮದುವೆಯಾಗಿದ್ದೇನೆ, ನನ್ನನ್ನು ಬಿಟ್ಟುಬಿಡಿ” ಎಂದು ಸೃಷ್ಟಿ ಕಣ್ಣೀರಿಟ್ಟು ಬೇಡಿಕೊಂಡ ದೃಶ್ಯಗಳು ಮೊಬೈಲ್‌ನಲ್ಲಿ ಸೆರೆಯಾಗಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ. ಈ ಘಟನೆ ಕುರಿತು ದೂರು ನೀಡಲು ಹೋದರೆ ಆಡೂರು ಪೊಲೀಸ್ ಠಾಣೆಯ ಅಧಿಕಾರಿಗಳು ದೂರು ಸ್ವೀಕರಿಸಲು ನಿರಾಕರಿಸಿದ್ದಾರೆ ಎಂದು ಮಣಿಕಂಠ ಆರೋಪಿಸಿದ್ದಾರೆ. ಕಾನೂನುಬದ್ಧವಾಗಿ ಮದುವೆಯಾಗಿದ್ದರೂ ರಕ್ಷಣೆ ನೀಡಬೇಕಾದ ಪೊಲೀಸರೇ ನಿರ್ಲಕ್ಷ್ಯ ವಹಿಸಿರುವುದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ.

ವರದಿ: ಅಣ್ಣಪ್ಪ ಬಾರ್ಕಿ

ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 8:56 pm, Wed, 4 March 26

Follow Us
ಹಾಳಾದ ಲಿಫ್ಟ್​​ನಲ್ಲಿ ಸಿಲುಕಿದ ವ್ಯಕ್ತಿಯ ಶಾಕಿಂಗ್ ವಿಡಿಯೋ ಇಲ್ಲಿದೆ
ಹಾಳಾದ ಲಿಫ್ಟ್​​ನಲ್ಲಿ ಸಿಲುಕಿದ ವ್ಯಕ್ತಿಯ ಶಾಕಿಂಗ್ ವಿಡಿಯೋ ಇಲ್ಲಿದೆ
ಕ್ಲಾಸ್ ರೂಂನಲ್ಲೇ ಶಿಕ್ಷಕನಿಗೆ ಹೊಡೆದ 10ನೇ ತರಗತಿ ವಿದ್ಯಾರ್ಥಿ!
ಕ್ಲಾಸ್ ರೂಂನಲ್ಲೇ ಶಿಕ್ಷಕನಿಗೆ ಹೊಡೆದ 10ನೇ ತರಗತಿ ವಿದ್ಯಾರ್ಥಿ!
ಆಗ್ರಾ-ಲಖನೌ ಎಕ್ಸ್‌ಪ್ರೆಸ್‌ವೇಯಲ್ಲಿ ಭೀಕರ ಅಪಘಾತ: ವಿಡಿಯೋ ವೈರಲ್
ಆಗ್ರಾ-ಲಖನೌ ಎಕ್ಸ್‌ಪ್ರೆಸ್‌ವೇಯಲ್ಲಿ ಭೀಕರ ಅಪಘಾತ: ವಿಡಿಯೋ ವೈರಲ್
ಪ್ರತಿದಿನ ಆಕೆ ಹಿಂಸೆ ನೀಡುತ್ತಾಳೆ ಎಂದ ಶಾಲೆ ಮುಖ್ಯ ಶಿಕ್ಷಕ
ಪ್ರತಿದಿನ ಆಕೆ ಹಿಂಸೆ ನೀಡುತ್ತಾಳೆ ಎಂದ ಶಾಲೆ ಮುಖ್ಯ ಶಿಕ್ಷಕ
ಹಾರ್ಮುಜ್ ಜಲಸಂಧಿ ಕ್ಲೋಸ್: ಪರ್ಷಿಯನ್ ಕೊಲ್ಲೀಲಿ ಸಿಲುಕಿದ ಭಾರತದ 37 ಹಡಗು
ಹಾರ್ಮುಜ್ ಜಲಸಂಧಿ ಕ್ಲೋಸ್: ಪರ್ಷಿಯನ್ ಕೊಲ್ಲೀಲಿ ಸಿಲುಕಿದ ಭಾರತದ 37 ಹಡಗು
ದಾವಣಗೆರೆ ಜಿಲ್ಲಾಧಿಕಾರಿ ನಿವಾಸಕ್ಕೆ ಬಾಂಬ್ ಬೆದರಿಕೆ
ದಾವಣಗೆರೆ ಜಿಲ್ಲಾಧಿಕಾರಿ ನಿವಾಸಕ್ಕೆ ಬಾಂಬ್ ಬೆದರಿಕೆ
ದಂಪತಿ ಜಗಳ ಶಾಲೆ ತನಕ:ಶಿಕ್ಷಕನಿಗಾಗಿ ಗಲಾಟೆ ಮಾಡಿದ ಪತ್ನಿ ಹೇಳಿದ್ದೇನು?
ದಂಪತಿ ಜಗಳ ಶಾಲೆ ತನಕ:ಶಿಕ್ಷಕನಿಗಾಗಿ ಗಲಾಟೆ ಮಾಡಿದ ಪತ್ನಿ ಹೇಳಿದ್ದೇನು?
ಹಾಲು ಮಾರುವ ಕೆಲಸ ಕೊಟ್ಟದ್ದಾರೆ: ಡಿ.ಕೆ.ಸುರೇಶ್
ಹಾಲು ಮಾರುವ ಕೆಲಸ ಕೊಟ್ಟದ್ದಾರೆ: ಡಿ.ಕೆ.ಸುರೇಶ್
ಡಿಕೆ, ನಾನು ಹಾಲು ಜೇನು ಇದ್ದಂತೆ ಎಂದ ಸಿದ್ದು ಹೇಳಿಕೆಗೆ ಜೋಶಿ ವ್ಯಂಗ್ಯ
ಡಿಕೆ, ನಾನು ಹಾಲು ಜೇನು ಇದ್ದಂತೆ ಎಂದ ಸಿದ್ದು ಹೇಳಿಕೆಗೆ ಜೋಶಿ ವ್ಯಂಗ್ಯ
ಶಾಲೆಗೆ ಬಂದು ಮುಖ್ಯಶಿಕ್ಷಕನ 2ನೇ ಪತ್ನಿ ಹೈಡ್ರಾಮಾ: ವಿದ್ಯಾರ್ಥಿಗಳು ಕಂಗಾಲು
ಶಾಲೆಗೆ ಬಂದು ಮುಖ್ಯಶಿಕ್ಷಕನ 2ನೇ ಪತ್ನಿ ಹೈಡ್ರಾಮಾ: ವಿದ್ಯಾರ್ಥಿಗಳು ಕಂಗಾಲು