AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ರೂಪಾಂತರ ಆಗುವ ಲಕ್ಷಣ ಇದೆ; ಸಂಶಯ, ಅಸಹನೆ, ದ್ವೇಷ, ರಾಜಕೀಯ ಕಲಹ ಹೆಚ್ಚಾಗುತ್ತೆ: ಕೋಡಿಮಠ ಶ್ರೀ ಭವಿಷ್ಯ

ಆಶ್ವಿಜದಿಂದ ಸಂಕ್ರಾಂತಿಯೊಳಗೆ ರಾಷ್ಟ್ರಮಟ್ಟದಲ್ಲಿ ಅವಘಡ ಸಂಭವಿಸಲಿದೆ ಎಂದು ಹಾವೇರಿ ಜಿಲ್ಲೆ ರಾಣೆಬೆನ್ನೂರಿನಲ್ಲಿ ಕೋಡಿಮಠದ ಡಾ. ಶಿವಾನಂದ ಶಿವಯೋಗೀಂದ್ರಶ್ರೀ ಭವಿಷ್ಯ ನುಡಿದಿದ್ದಾರೆ.

ಕೊರೊನಾ ರೂಪಾಂತರ ಆಗುವ ಲಕ್ಷಣ ಇದೆ; ಸಂಶಯ, ಅಸಹನೆ, ದ್ವೇಷ, ರಾಜಕೀಯ ಕಲಹ ಹೆಚ್ಚಾಗುತ್ತೆ: ಕೋಡಿಮಠ ಶ್ರೀ ಭವಿಷ್ಯ
ಕೋಡಿಮಠದ ಡಾ. ಶಿವಾನಂದ ಶಿವಯೋಗಿ ಸ್ವಾಮೀಜಿ
TV9 Web
| Edited By: |

Updated on:Dec 24, 2021 | 7:41 PM

Share

ಹಾವೇರಿ: ಕೊರೊನಾ ರೂಪಾಂತರ ಆಗುವ ಲಕ್ಷಣಗಳು ಬಹಳ ಇವೆ. ಸಂಶಯ, ಅಸಹನೆ, ದ್ವೇಷ, ರಾಜಕೀಯ ಕಲಹ ಹೆಚ್ಚಾಗುತ್ತೆ. ಆಶ್ವಿಜದಿಂದ ಸಂಕ್ರಾಂತಿಯೊಳಗೆ ರಾಷ್ಟ್ರಮಟ್ಟದಲ್ಲಿ ಅವಘಡ ಸಂಭವಿಸಲಿದೆ ಎಂದು ಹಾವೇರಿ ಜಿಲ್ಲೆ ರಾಣೆಬೆನ್ನೂರಿನಲ್ಲಿ ಕೋಡಿಮಠದ ಡಾ. ಶಿವಾನಂದ ಶಿವಯೋಗೀಂದ್ರಶ್ರೀ ಭವಿಷ್ಯ ನುಡಿದಿದ್ದಾರೆ.

ತಮ್ಮ ಭವಿಷ್ಯ ವಾಣಿಯಿಂದ ಹೆಸರುವಾಸಿಯಾಗಿರುವ ಕೋಡಿಮಠದ ಡಾ. ಶಿವಾನಂದ ಶಿವಯೋಗಿ ಸ್ವಾಮೀಜಿ ಕಳೆದ ಬಾರಿ ಧಾರವಾಡದಲ್ಲಿ ಭವಿಷ್ಯ ನುಡಿದಿದ್ದರು. ಕರ್ನಾಟಕ ರಾಜ್ಯದಲ್ಲಿ ಎದುರಾಗಿದ್ದ ವರುಣನ ಅಬ್ಬರದ ಬಗ್ಗೆ ಭವಿಷ್ಯ ನುಡಿದಿದ್ದರು. ರಾಜ್ಯದಲ್ಲಿ ಇನ್ನೂ ಇದೆ ಮಳೆ ಕಾಟ. ಕಾರ್ತಿಕ ಮುಗಿಯುವವರೆಗೂ ಮಳೆ ನಿಲ್ಲೋದಿಲ್ಲ ಎಂದು ಧಾರವಾಡದಲ್ಲಿ ಕೋಡಿಮಠದ ಸ್ವಾಮೀಜಿ ಭವಿಷ್ಯ ನುಡಿದಿದ್ದರು.

ಇನ್ನು ಮಳೆ ಹೆಚ್ಚಾಗುವ ಲಕ್ಷಣ ಇದೆ. ಕಾರ್ತಿಕ ಕಳೆಯುವವರೆಗೂ ಮಳೆ ಇರುತ್ತದೆ. ಸದ್ಯ ಪ್ರಕೃತಿ ವಿಕೋಪ ಆಗಿದೆ. ಏನೂ ಮಾಡಲು ಆಗುವುದಿಲ್ಲ. ಅನಾಹುತಗಳು ಹೆಚ್ಚಾಗುವ ಸಾಧ್ಯತೆ ಇದೆ. ಸಂಕ್ರಾಂತಿವರೆಗೂ ಮಳೆ ಇರುತ್ತೆ ಎಂದು ಭವಿಷ್ಯ ನುಡಿದಿದ್ದರು. ಆದ್ರೆ ರಾಜಕೀಯ ಭವಿಷ್ಯ ವಿಚಾರದ ಬಗ್ಗೆ ಪ್ರತಿಕ್ರಿಯೆ ನೀಡಲು ನಿರಾಕರಿಸಿದ್ದರು.

ಈ ಹಿಂದೆ ಮುಂದಿನ ಕಾರ್ತಿಕ ಮಾಸದವರೆಗೆ ಜಲಗಂಡಾತರ ಇದೆ. ಕೊರೊನಾ ಇನ್ನೂ ಹೆಚ್ಚಾಗಲಿದೆ. ಆದಾಗ್ಯೂ ದೈವ ಕೃಪೆಯಿಂದ ಒಳ್ಳೆಯ ದಿನಗಳು ಬರಲಿವೆ ಎಂದು ಕೋಡಿ ಮಠದ ಶ್ರೀ ಶಿವಾನಂದ ಶ್ರೀಗಳು ಭವಿಷ್ಯ ನುಡಿದಿದ್ದರು. ಅಶುಭ ನುಡಿಗಳು ಈಗ ಬೇಡ. ಕುಂಭದಲ್ಲಿ ಗುರುಗ್ರಹ ಅಂದ್ರೆ ತುಂಬುವವು ಕೆರೆ ಕಟ್ಟೆ. ಜಲಗಂಡಾಂತರ ಇನ್ನೂ ಇದೆ. ಏನನ್ನು ಅಶುಭ ನುಡಿಯಬಾರದು. ಕಾರ್ತಿಕ ಮಾಸ ಕಳೆದ ನಂತರ ಹೇಳುತ್ತೇನೆ ಎಂದು ಕೋಲಾರ ತಾಲ್ಲೂಕು ಲಕ್ಷ್ಮೀಸಾಗರ ಗ್ರಾಮದಲ್ಲಿ ಕೋಡಿ ಮಠದ ಶ್ರೀ ಶಿವಾನಂದ ಶ್ರೀಗಳು ಹೇಳಿದ್ದರು.

ಇದನ್ನೂ ಓದಿ: ವಿಶ್ವದಲ್ಲಿ ಕೊರೊನಾ 4 ಬಾರಿ ಉಲ್ಬಣವಾಗಿದೆ: ಒಮಿಕ್ರಾನ್ ಪ್ರಕರಣಗಳ ಸಂಖ್ಯೆ 358 ಕ್ಕೆ ಏರಿಕೆಯಾಗುತ್ತಿದ್ದಂತೆ ಕೇಂದ್ರದಿಂದ ಎಚ್ಚರಿಕೆ

ಇದನ್ನೂ ಓದಿ: Year Ender 2021: ಕೊವಿಡ್​ನಿಂದ ಈ ವರ್ಷ ಚಿತ್ರರಂಗ ಅನುಭವಿಸಿದ ನಷ್ಟ ಅಷ್ಟಿಷ್ಟಲ್ಲ

Published On - 7:36 pm, Fri, 24 December 21

ಬಿಗ್​​ಬಾಸ್​​ ಶೋನಲ್ಲಿ ಈ ವಾರ ಏನು ಮಾಡ್ತೀನಿ ನೋಡ್ತಿರಿ: ಸುದೀಪ್
ಬಿಗ್​​ಬಾಸ್​​ ಶೋನಲ್ಲಿ ಈ ವಾರ ಏನು ಮಾಡ್ತೀನಿ ನೋಡ್ತಿರಿ: ಸುದೀಪ್
ಬೆಂಗಳೂರಲ್ಲಿ 26 ಕಿ.ಮೀ. ಹೆಜ್ಜೆ ಹಾಕಿದ ಪಾದಚಾರಿಗಳು: ಕಾರಣ ಏನು?
ಬೆಂಗಳೂರಲ್ಲಿ 26 ಕಿ.ಮೀ. ಹೆಜ್ಜೆ ಹಾಕಿದ ಪಾದಚಾರಿಗಳು: ಕಾರಣ ಏನು?
ಟಿ20 ವಿಶ್ವಕಪ್​ಗೆ ತಂಡ ಪ್ರಕಟವಾದ ಬೆನ್ನಲ್ಲೇ ಅಬ್ಬರಿಸಿದ ಆಸೀಸ್ ನಾಯಕ
ಟಿ20 ವಿಶ್ವಕಪ್​ಗೆ ತಂಡ ಪ್ರಕಟವಾದ ಬೆನ್ನಲ್ಲೇ ಅಬ್ಬರಿಸಿದ ಆಸೀಸ್ ನಾಯಕ
ಗಿಲ್ಲಿ ಹಾಡಿಗೆ ಧ್ರುವಂತ್ ಅಪಸ್ವರ: ಉಗುರಲ್ಲೇ ಕೊಲ್ಲುವೆ ಎಂದ ಗಿಲ್ಲಿ
ಗಿಲ್ಲಿ ಹಾಡಿಗೆ ಧ್ರುವಂತ್ ಅಪಸ್ವರ: ಉಗುರಲ್ಲೇ ಕೊಲ್ಲುವೆ ಎಂದ ಗಿಲ್ಲಿ
ರಾಮನಗರ: ನಡುರಸ್ತೆಯಲ್ಲೇ ವಾಮಾಚಾರ; ನ್ಯೂಇಯರ್​ ಸಂಭ್ರಮದಲ್ಲಿದ್ದವರಿಗೆ ಶಾಕ್
ರಾಮನಗರ: ನಡುರಸ್ತೆಯಲ್ಲೇ ವಾಮಾಚಾರ; ನ್ಯೂಇಯರ್​ ಸಂಭ್ರಮದಲ್ಲಿದ್ದವರಿಗೆ ಶಾಕ್
ಮನೆಯ ಎದುರು ಕುರ್ಚಿ ಮೇಲೆ ಕುಳಿತಿದ್ಧ ವೃದ್ಧೆ ಮೇಲೆ ಕೋತಿಗಳ ದಾಳಿ
ಮನೆಯ ಎದುರು ಕುರ್ಚಿ ಮೇಲೆ ಕುಳಿತಿದ್ಧ ವೃದ್ಧೆ ಮೇಲೆ ಕೋತಿಗಳ ದಾಳಿ
Video: ತಂದೆ ತಾಯಿ ಜಗಳದಲ್ಲಿ ಮಗಳು ಸತ್ತೇ ಹೋದಳು!
Video: ತಂದೆ ತಾಯಿ ಜಗಳದಲ್ಲಿ ಮಗಳು ಸತ್ತೇ ಹೋದಳು!
ಎಣ್ಣೆ ನಶೆಯಲ್ಲಿ ನಾಯಿ ಜೊತೆ ಯುವಕನ ಡ್ಯಾನ್ಸ್​​: ವಿಡಿಯೋ ವೈರಲ್​
ಎಣ್ಣೆ ನಶೆಯಲ್ಲಿ ನಾಯಿ ಜೊತೆ ಯುವಕನ ಡ್ಯಾನ್ಸ್​​: ವಿಡಿಯೋ ವೈರಲ್​
‘ನಗ್ತಾ ಇರಿ, ಖುಷಿಯಾಗಿರಿ’; ಮಾತಿನ ಮೂಲಕ ವಿಶ್ ಮಾಡಿದ ಸುದೀಪ್
‘ನಗ್ತಾ ಇರಿ, ಖುಷಿಯಾಗಿರಿ’; ಮಾತಿನ ಮೂಲಕ ವಿಶ್ ಮಾಡಿದ ಸುದೀಪ್
ನಮಗೊಂದು ಟ್ವೀಟ್ ಮಾಡಿಕೊಡಿ: ಕೇರಳ ಸಿಎಂಗೆ ದುಂಬಾಲು ಬಿದ್ದ ಬಿಜೆಪಿ!
ನಮಗೊಂದು ಟ್ವೀಟ್ ಮಾಡಿಕೊಡಿ: ಕೇರಳ ಸಿಎಂಗೆ ದುಂಬಾಲು ಬಿದ್ದ ಬಿಜೆಪಿ!