AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಿಕ್ಷಕಿಯ ಅಪಹರಿಸಿ ಲವ್ ಜಿಹಾದ್ ಆರೋಪ: ಪೊಲೀಸರು ಮತ್ತು ಅನ್ಯಕೋಮಿನ ಯುವಕನ ವಿರುದ್ಧ ಹಿಂದೂ ಕಾರ್ಯಕರ್ತರಿಂದ ಪ್ರತಿಭಟನೆ

Love Jihad suspected: 24 ವರ್ಷದ ಅತಿಥಿ ಶಿಕ್ಷಕಿ, ಸವಣೂರು ತಾಲೂಕಿನ ಕಡಕೋಳ ಗ್ರಾಮದ ಯುವತಿ ಎಂದು ತಿಳಿದುಬಂದಿದೆ. ಗದಗ ಜಿಲ್ಲೆ ಲಕ್ಷ್ಮೇಶ್ವರ ಪಟ್ಟಣದ ಭಾಷಾ ರತನಖಾನ ಎಂಬ ಯುವಕನಿಂದ ಅಪಹರಣ ನಡೆದಿದೆ ಎನ್ನಲಾಗಿದೆ

ಶಿಕ್ಷಕಿಯ ಅಪಹರಿಸಿ ಲವ್ ಜಿಹಾದ್ ಆರೋಪ: ಪೊಲೀಸರು ಮತ್ತು ಅನ್ಯಕೋಮಿನ ಯುವಕನ ವಿರುದ್ಧ ಹಿಂದೂ ಕಾರ್ಯಕರ್ತರಿಂದ ಪ್ರತಿಭಟನೆ
ಶಿಕ್ಷಕಿಯ ಅಪಹರಿಸಿ ಲವ್ ಜಿಹಾದ್ ಆರೋಪ: ಅನ್ಯಕೋಮಿನ ಯುವಕನ ವಿರುದ್ಧ ಹಿಂದೂ ಕಾರ್ಯಕರ್ತರಿಂದ ಪ್ರತಿಭಟನೆ
TV9 Web
| Updated By: ಸಾಧು ಶ್ರೀನಾಥ್​|

Updated on:Apr 22, 2022 | 6:28 PM

Share

ಹಾವೇರಿ: ಹಾವೇರಿ ಜಿಲ್ಲೆ ಸವಣೂರಿನಲ್ಲಿ ಲವ್ ಜಿಹಾದ್ ಆರೋಪ ಕೇಳಿಬಂದಿದೆ (Love Jihad suspected). ಇದರ ವಿರುದ್ಧ ಯುವತಿಯ ಚಿಕ್ಕಪ್ಪನಿಂದ ದೂರು ದಾಖಲಾಗಿದ್ದು, ಹಿಂದೂ ಸಂಘಟನೆಗಳ ಕಾರ್ಯಕರ್ತರ ಕಡೆಯಿಂದ ಪ್ರತಿಭಟನೆ ನಡೆದಿದೆ (Savanur Police). ಏಪ್ರಿಲ್ 13ರಂದು ಅತಿಥಿ ಶಿಕ್ಷಕಿಯನ್ನು ಅನ್ಯಕೋಮಿನ ಯುವಕ ಅಪಹರಿಸಿದ್ದಾನೆಂದು ಪ್ರತಿಭಟನೆ ನಡೆದಿದೆ. 24 ವರ್ಷದ ಅತಿಥಿ ಶಿಕ್ಷಕಿ, ಸವಣೂರು ತಾಲೂಕಿನ ಕಡಕೋಳ ಗ್ರಾಮದ ಯುವತಿ ಎಂದು ತಿಳಿದುಬಂದಿದೆ. ಗದಗ ಜಿಲ್ಲೆ ಲಕ್ಷ್ಮೇಶ್ವರ ಪಟ್ಟಣದ ಭಾಷಾ ರತನಖಾನ ಎಂಬ ಯುವಕನಿಂದ ಅಪಹರಣ ನಡೆದಿದೆ ಎನ್ನಲಾಗಿದೆ (Savanur in Haveri District).

ಯುವತಿಯ ಚಿಕ್ಕಪ್ಪ ಏಪ್ರಿಲ್ 13ರಂದೇ ಪ್ರಕರಣ ದಾಖಲಿಸಿದ್ದಾರೆ. ಆದರೂ ಕೇಸ್ ದಾಖಲಿಸಿ 10 ದಿನಗಳಾದರೂ ಭಾಷಾ ರತನಖಾನ್ ವಿರುದ್ಧ ಪೊಲೀಸರು ಕ್ರಮಕೈಗೊಂಡಿಲ್ಲವೆಂದು ಹಿಂದೂ ಕಾರ್ಯಕರ್ತರು ಆರೋಪಿಸಿದ್ದಾರೆ. ಯುವತಿಯನ್ನು ಪತ್ತೆ ಹಚ್ಚದ ಸವಣೂರು ಠಾಣೆ ಪೊಲೀಸರ ವಿರುದ್ಧ ಪ್ರತಿಭಟನಾ ಮೆರವಣಿಗೆ ನಡೆಸಿ, ತಹಶೀಲ್ದಾರ್‌ಗೆ ಮನವಿ ಸಲ್ಲಿಸಿದ್ದಾರೆ. ಹಿಂದೂ ಯುವತಿಯನ್ನ ಅಪಹರಿಸಿ, ಲವ್ ಜಿಹಾದ್ ಮಾಡಿದ್ದಾರೆ ಅಂತಾ ಹಿಂದೂ ಸಂಘಟನೆಗಳ ಕಾರ್ಯಕರ್ತರು ಆರೋಪ ಮಾಡಿದ್ದಾರೆ. ಸವಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬೆಟಕೆರೂರು ಗ್ರಾಮದಲ್ಲಿ ಹೋರಿ ತಿವಿದು ಯುವಕ ಸಾವು; ಹೋರಿ ಬೆದರಿಸುವ ಸ್ಪರ್ಧೆ ನೋಡುತ್ತಿದ್ದ ವೇಳೆ ದುರ್ಘಟನೆ ಹಾವೇರಿ: ಹೋರಿ (Bull) ಬೆದರಿಸುವ ಸ್ಪರ್ಧೆ ನೋಡುತ್ತಾ ನಿಂತಿದ್ದ ವೇಳೆ ಓಡಿ ಬಂದ ಹೋರಿ ಹೊಟ್ಟೆಗೆ ತಿವಿದು ಯುವಕ ಸಾವನ್ನಪ್ಪಿರುವಂತಹ ಘಟನೆ ಜಿಲ್ಲೆಯ ಹಿರೇಕೆರೂರು ತಾಲೂಕಿನ ಬೆಟಕೆರೂರು ಗ್ರಾಮದಲ್ಲಿ ನಡೆದಿದೆ. ರಾಣೆಬೆನ್ನೂರು ತಾಲೂಕಿನ ಗುಡ್ಡದಹೊಸಳ್ಳಿ ಗ್ರಾಮದ ನಿವಾಸಿ ಷಣ್ಮುಖ ಹುಡೇದ (22) ಮೃತ ಯುವಕ. ಬೆಟಕೆರೂರು ಗ್ರಾಮದ ಭೂತಪ್ಪನ ಗುಡ್ಡದ ಇಳಿಜಾರಿನಲ್ಲಿ‌ ನಡೆದ ಹೋರಿ ಬೆದರಿಸುವ ಸ್ಪರ್ಧೆಯ ವೇಳೆ ದುರ್ಘಟನೆ ಸಂಭವಿಸಿದೆ. ಹಿರೇಕೆರೂರು ತಾಲೂಕು ಸರಕಾರಿ ಆಸ್ಪತ್ರೆಗೆ ಕರೆದೊಯ್ದ ವೇಳೆ ಯುವಕ ಮೃತಪಟ್ಟಿದ್ದಾನೆ. ಹಂಸಭಾವಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

ಅಕ್ರಮವಾಗಿ ಭಾರತಕ್ಕೆ ನುಸುಳಿ, ಬಂಧನದಲ್ಲಿದ್ದ ಪಾಕಿಸ್ತಾನ ಮಹಿಳೆಯ ಪತಿ ಭಟ್ಕಳದಲ್ಲಿ ಸಾವು ಉತ್ತರ ಕನ್ನಡ ಜಿಲ್ಲೆಯ ಭಟ್ಕಳದಲ್ಲಿ ಬಂಧನಕ್ಕೆ ಒಳಗಾದ ಪಾಕಿಸ್ತಾನ ಮಹಿಳೆ ಖತೀಜಾ ಎಂಬುವವರ ಪತಿ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಜಾವೇದ್ ಮೊಹಮ್ಮದ್ ರುಕ್ನುದ್ದಿನ (50) ಸಾವನ್ನಪ್ಪಿದ ವ್ಯಕ್ತಿ. 2014 ರಲ್ಲಿ ಕಾನೂನುಬಾಹಿರವಾಗಿ ಭಾರತಕ್ಕೆ ನುಸುಳಿದ್ದ ಖತೀಜಾ ಎಂಬ ಮಹಿಳೆ ಭಟ್ಕಳದಲ್ಲಿ ವಾಸವಿದ್ದರು. ಖತೀಜಾ ಮೆಹ್ರುನ್ನಿಸ್ ಪಾಕಿಸ್ತಾನದ ಮಹಿಳೆ, ರುಕ್ನುದ್ದಿನನ ಪತ್ನಿ.

ಮೃತನಿಗೆ ಎರಡು ಹೆಣ್ಣುಮಕ್ಕಳು ಮತ್ತು ಒಂದು ಗಂಡು ಮಗು: ಪಾಕಿಸ್ತಾನ ಮಹಿಳೆ ಖತೀಜಾ ಮೆಹ್ರುನ್ನಿಸ್ ಭಟ್ಕಳದ ನವಾಯತ್ ಕಾಲೋನಿ ವೈಟ್ ಹೌಸ್‌ನಲ್ಲಿ ವಾಸವಿದ್ದರು. ಕಳೆದ ವರ್ಷ ಜೂನ್ 9 ರಂದು ಖತೀಜಾ ರನ್ನ ಬಂಧಿಸಿ ನ್ಯಾಯಾಲಕ್ಕೆ ಒಪ್ಪಿಸಲಾಗಿತ್ತು. ಈ ಮಹಿಳೆಯ ಪತಿ ಮೊಹಮ್ಮದ್ ರುಕ್ನುದ್ದಿನನ ಆರೋಗ್ಯದಲ್ಲಿ ಏರುಪೇರಾಗಿ ಹೃದಯಾಘಾತದಿಂದ ಸಾವಿಗೀಡಾಗಿದ್ದಾರೆ. ಮೃತನಿಗೆ ಎರಡು ಹೆಣ್ಣುಮಕ್ಕಳು ಮತ್ತು ಒಂದು ಗಂಡು ಮಗುವಿದೆ. ಪ್ರಸ್ತುತ ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ನವಾಯತ್ ಕಾಲೋನಿಯಲ್ಲಿ ವಾಸವಾಗಿದ್ದರು.

Published On - 6:21 pm, Fri, 22 April 22

ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?