AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯವೆಸಗಿ ಕೊಲೆ: ಅಪರಾಧಿಗೆ ಗಲ್ಲುಶಿಕ್ಷೆ ಹಾಗೂ 1.5 ಲಕ್ಷ ರೂ. ದಂಡ

Haveri News: ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯವೆಸಗಿ ಕೊಲೆ ಮಾಡಿರುವ ಅಪರಾಧಿ ಶೆಟ್ಟಪ್ಪ ವಡ್ಡರ್‌ಗೆ ಗಲ್ಲುಶಿಕ್ಷೆ ಮತ್ತು 1.5 ಲಕ್ಷ ರೂ. ದಂಡ ವಿಧಿಸಿ ಹಾವೇರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ನ್ಯಾಯಾಧೀಶ ನಿಂಗೌಡ ಪಾಟೀಲರಿಂದ ತೀರ್ಪು ಪ್ರಕಟಿಸಲಾಗಿದೆ.

ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯವೆಸಗಿ ಕೊಲೆ: ಅಪರಾಧಿಗೆ ಗಲ್ಲುಶಿಕ್ಷೆ ಹಾಗೂ 1.5 ಲಕ್ಷ ರೂ. ದಂಡ
ಹಾವೇರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ
ಸೂರಜ್​, ಮಹಾವೀರ್​ ಉತ್ತರೆ
| Edited By: |

Updated on: Oct 22, 2023 | 8:24 PM

Share

ಹಾವೇರಿ, ಅಕ್ಟೋಬರ್​​​ 22: ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯವೆಸಗಿ ಕೊಲೆ ಮಾಡಿರುವ ಅಪರಾಧಿ ಶೆಟ್ಟಪ್ಪ ವಡ್ಡರ್‌ಗೆ ಗಲ್ಲುಶಿಕ್ಷೆ (Death penalty) ಮತ್ತು 1.5 ಲಕ್ಷ ರೂ. ದಂಡ ವಿಧಿಸಿ ಹಾವೇರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ನ್ಯಾಯಾಧೀಶ ನಿಂಗೌಡ ಪಾಟೀಲರಿಂದ ತೀರ್ಪು ಪ್ರಕಟಿಸಲಾಗಿದೆ. ದಂಡದ ಹಣದಲ್ಲಿ  75 ಸಾವಿರ ರೂ. ಮತ್ತು ಪೋಷಕರಿಗೆ 10 ಲಕ್ಷ ರೂ. ಪರಿಹಾರ ನೀಡಲು ಸರ್ಕಾರಕ್ಕೆ ಸೂಚನೆ ನೀಡಲಾಗಿದೆ. 2019ರ ಮೇ 6ರಂದು ಶಿಗ್ಗಾಂವಿ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿತ್ತು.

ನೇತ್ರಾವತಿ ಪೀಕ್​ಗೆ ಟ್ರಕ್ಕಿಂಗ್‌ಗೆ ತೆರಳಿದ್ದ ವೈದ್ಯೆಯ ಕಾಲುಮುರಿತ

ಚಿಕ್ಕಮಗಳೂರು: ನೇತ್ರಾವತಿ ಪೀಕ್​ಗೆ ಟ್ರಕ್ಕಿಂಗ್ ಮುಗಿಸಿ ವಾಪಸ್​​​ ಬರುತ್ತಿದ್ದ ವೈದ್ಯೆಯ ಕಾಲುಮುರಿದಿರುವಂತಹ ಘಟನೆ ಜಿಲ್ಲೆಯ ಕಳಸ‌ ತಾಲೂಕಿನ ನೇತ್ರಾವತಿ ಪೀಕ್​ನಲ್ಲಿ ನಡೆದಿದೆ. ಸ್ನೇಹಿತರ ಜೊತೆ ಇಂದು ಟ್ರಕ್ಕಿಂಗ್​ಗೆ ನೇತ್ರಾವತಿ ಪೀಕ್​ನ ತಿರುವಿನಲ್ಲಿ ಮೈಸೂರು ಮೂಲದ ವೈದ್ಯೆ ಮಾಧುರಿ ಜಾರಿ ಬಿದಿದ್ದಾರೆ.

ಇದನ್ನೂ ಓದಿ: ಬೆಂಗಳೂರಿನಲ್ಲಿ ಮರ್ಯಾದಾ ಹತ್ಯೆ: ಪ್ರಿಯಕರನೊಂದಿಗೆ ಓಡಿಹೋಗಿದ್ದ ಮಗಳನ್ನೇ ಹತ್ಯೆ ಮಾಡಿದ ತಂದೆ

ಅದೃಷ್ಟವಶಾತ್ ಪ್ರಾಣಪಾಯದಿಂದ ಪಾರಾಗಿದ್ದಾರೆ. ಕಿರಿದಾದ ಎತ್ತರದ ಬೆಟ್ಟದಿಂದ ಜಾರಿ ಬಿದ್ದ ವೈದ್ಯೆಯನ್ನ ಪ್ರವಾಸಿಗರು ರಕ್ಷಿಸಿದ್ದಾರೆ. ಕಳಸ‌ ಪಟ್ಟಣದ ಖಾಸಗಿ ಆಸ್ಪತ್ರೆಗೆ ವೈದ್ಯೆ ಮಾಧುರಿಯನ್ನು ದಾಖಲು ಮಾಡಲಾಗಿದೆ.

ಬೈಕ್‌ಗೆ ಹಿಂಬದಿಯಿಂದ ಕಾರು ಡಿಕ್ಕಿ: ಸವಾರ ಸಾವು

ಧಾರವಾಡ: ಬೈಕ್‌ಗೆ ಹಿಂಬದಿಯಿಂದ ಕಾರು ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವಂತಹ ಘಟನೆ ಧಾರವಾಡ ತಾಲೂಕಿನ ಯರಿಕೊಪ್ಪ‌ ಗ್ರಾಮದ ಬಳಿ ನಡೆದಿದೆ. ಧಾರವಾಡ ತಾಲೂಕಿನ ಮಂಡಿಹಾಳ ಗ್ರಾಮದ ಧರ್ಮರಾಜ್ ಕೇದಾರಿ(50) ಮೃತ ಬೈಕ್ ಸವಾರ. ತಾರಿಹಾಳದಿಂದ ಮಂಡಿಹಾಳಕ್ಕೆ ಬೈಕ್ ಮೇಲೆ ಹೊರಟಿದ್ದಾಗ ಘಟನೆ ಸಂಭವಿಸಿದೆ.

ಸ್ವಿಫ್ಟ್ ಕಾರು, ಬೊಲೆರೊ ವಾಹನದ ನಡುವೆ ಡಿಕ್ಕಿ-ಓರ್ವನ ಸ್ಥಿತಿ ಗಂಭೀರ

ಆನೇಕಲ್: ಸ್ವಿಫ್ಟ್ ಕಾರು, ಬೊಲೆರೊ ವಾಹನದ ನಡುವೆ ಡಿಕ್ಕಿ ಹೊಡೆದ ಪರಿಣಾಮ ಓರ್ವನ ಸ್ಥಿತಿ ಗಂಭೀರವಾಗಿರುವಂತಹ ಘಟನೆ ಬೆಂಗಳೂರು-ಹೊಸೂರು ಹೆದ್ದಾರಿಯ ಅತ್ತಿಬೆಲೆ ಸಮೀಪ ನಡೆದಿದೆ. ಅತಿವೇಗವಾಗಿ ಬಂದು ಬೊಲೆರೊ ವಾಹನಕ್ಕೆ ಸ್ವಿಫ್ಟ್ ಕಾರು ಡಿಕ್ಕಿ ಹೊಡೆದಿದೆ. ಬೊಲೆರೊ ವಾಹನಕ್ಕೆ ಡಿಕ್ಕಿ ಹೊಡೆದ ರಭಸಕ್ಕೆ ಛಿದ್ರವಾಗಿದೆ. ಕಾರು ಡಿಕ್ಕಿ ಹೊಡೆದಿದ್ದರಿಂದ ಹೆದ್ದಾರಿಯ ಡಿವೈಡರ್ ಮುರಿದುಬಿದಿದ್ದೆ. ಚಂದಾಪುರದಿಂದ ಅತ್ತಿಬೆಲೆ ಮಾರ್ಗದಲ್ಲಿ ಸಂಪೂರ್ಣ ಟ್ರಾಫಿಕ್ ಜಾಮ್ ಉಂಟಾಗಿದ್ದು, ಸ್ಥಳಕ್ಕೆ ಎನ್​ಹೆಚ್​ಎಐ ಅಧಿಕಾರಿಗಳು ಮತ್ತು ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
11 ಎಸೆತಗಳಲ್ಲಿ ಸಿಎಸ್​ಕೆಗೆ ಭಯ ಹುಟ್ಟಿಸಿದ ಪ್ರಿಯಾಂಶ್
11 ಎಸೆತಗಳಲ್ಲಿ ಸಿಎಸ್​ಕೆಗೆ ಭಯ ಹುಟ್ಟಿಸಿದ ಪ್ರಿಯಾಂಶ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ