AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೃಷಿ ಇಲಾಖೆಯಲ್ಲಿ ಭ್ರಷ್ಟಾಚಾರದ ಬಗ್ಗೆ ಎಸಿಬಿಗೆ ದೂರು; ಆರೋಪ ಸತ್ಯಕ್ಕೆ ದೂರವಾಗಿದೆ ಎಂದ ಬಿಸಿ ಪಾಟೀಲ್

BC Patil: ಮಧ್ಯವರ್ತಿಗಳು, ಏಜೆಂಟರಿಗೆ ಅವಕಾಶ ಇಲ್ಲವಾದ ಹಿನ್ನೆಲೆಯಲ್ಲಿ ಕೆಲವರು ಇಂತಹ ಆರೋಪಗಳನ್ನು ಮಾಡಿರಬಹುದು ಎಂದು ಹಾವೇರಿ ಜಿಲ್ಲೆ ಹಿರೇಕೆರೂರಿನಲ್ಲಿ ಸಚಿವ ಬಿ.ಸಿ. ಪಾಟೀಲ್ ಹೇಳಿಕೆ ನೀಡಿದ್ದಾರೆ.

ಕೃಷಿ ಇಲಾಖೆಯಲ್ಲಿ ಭ್ರಷ್ಟಾಚಾರದ ಬಗ್ಗೆ ಎಸಿಬಿಗೆ ದೂರು; ಆರೋಪ ಸತ್ಯಕ್ಕೆ ದೂರವಾಗಿದೆ ಎಂದ ಬಿಸಿ ಪಾಟೀಲ್
ಬಿ ಸಿ ಪಾಟೀಲ್
TV9 Web
| Edited By: |

Updated on:Sep 10, 2021 | 3:08 PM

Share

ಹಾವೇರಿ: ಕೃಷಿ ಇಲಾಖೆಯಲ್ಲಿ ಭ್ರಷ್ಟಾಚಾರದ ಬಗ್ಗೆ ಎಸಿಬಿಗೆ ದೂರು ವಿಚಾರವಾಗಿ ಸಚಿವ ಬಿ.ಸಿ. ಪಾಟೀಲ್ ಪ್ರತಿಕ್ರಿಯೆ ನೀಡಿದ್ದಾರೆ. ಈ ಆರೋಪ ಸತ್ಯಕ್ಕೆ ದೂರವಾಗಿದೆ. ಇದೊಂದು ದುರುದ್ದೇಶದ ಆರೋಪ. ಆರೋಪದ ಬಗ್ಗೆ ಯಾವುದೇ ರೀತಿಯ ತನಿಖೆಗೆ ಇಲಾಖೆ ಸಿದ್ಧವಾಗಿದೆ. ಇಲಾಖೆಯವರು ತನಿಖೆಗೆ ಎಲ್ಲ ರೀತಿ ಸಹಕಾರ ನೀಡುತ್ತಾರೆ. ಮಧ್ಯವರ್ತಿಗಳು, ಏಜೆಂಟರಿಗೆ ಅವಕಾಶ ಇಲ್ಲವಾದ ಹಿನ್ನೆಲೆಯಲ್ಲಿ ಕೆಲವರು ಇಂತಹ ಆರೋಪಗಳನ್ನು ಮಾಡಿರಬಹುದು ಎಂದು ಹಾವೇರಿ ಜಿಲ್ಲೆ ಹಿರೇಕೆರೂರಿನಲ್ಲಿ ಸಚಿವ ಬಿ.ಸಿ. ಪಾಟೀಲ್ ಹೇಳಿಕೆ ನೀಡಿದ್ದಾರೆ.

ಬೊಮ್ಮಾಯಿ ನೇತೃತ್ವದಲ್ಲಿ ಮುಂದಿನ ಚುನಾವಣೆ ಎಂಬ ಅಮಿತ್ ಶಾ ಹೇಳಿಕೆಯ ಬಗ್ಗೆ ಅವರು ಪ್ರತಿಕ್ರಿಯೆ ನೀಡಿದ್ದಾರೆ. ಕೇಂದ್ರ ಗೃಹ ಸಚಿವ ಅಮಿತ್​ ಶಾ ಹೇಳಿಕೆ ಸ್ವಾಗತಾರ್ಹವಾದುದು. ಅಮಿತ್​ ಶಾ ಬಾಯಲ್ಲಿ ಇಂಥಾ ಮಾತುಗಳು ಬರ್ತವೆ ಅಂದ್ರೆ ಅದು ಪ್ರಧಾನಿ ನರೇಂದ್ರ ಮೋದಿ ತಲೆಯಲ್ಲಿ ಇದ್ದಂಥಾ ಮಾತು ಹೇಳಿರುತ್ತಾರೆ. ಸಿಎಂ ಬಸವರಾಜ ಬೊಮ್ಮಾಯಿಯವರ ನೇತೃತ್ವದಲ್ಲೇ ಚುನಾವಣೆ ಮಾಡ್ತೇವೆ ಎಂದು ಬಿ.ಸಿ. ಪಾಟೀಲ್ ತಿಳಿಸಿದ್ದಾರೆ.

ಕರ್ನಾಟಕದ ಕೃಷಿ ಇಲಾಖೆಯಲ್ಲಿ 210 ಕೋಟಿ ರೂಪಾಯಿ ಭ್ರಷ್ಟಾಚಾರ ನಡೆದಿದೆ ಎಂದು ಆರೋಪಿಸಿ ಕೃಷಿ ಖಾತೆ ಸಚಿವ ಬಿ.ಸಿ. ಪಾಟೀಲ್ ವಿರುದ್ಧ ಎಸಿಬಿಗೆ ದೂರು ಸಲ್ಲಿಸಲಾಗಿತ್ತು. ‘ಎಸಿಎಫ್ ಕರ್ನಾಟಕ’ ಸಂಘಟನೆಯ ಕೃಷ್ಣಮೂರ್ತಿ ಎಂಬುವವರು ಕೃಷಿ ಖಾತೆ ಸಚಿವ ಬಿ.ಸಿ. ಪಾಟೀಲ್ ಮತ್ತು ಕೃಷಿ ಇಲಾಖೆ ಹೆಚ್ಚುವರಿ ನಿರ್ದೇಶಕ ದಿವಾಕರ್ ವಿರುದ್ಧ ದೂರು ದಾಖಲಿಸಿದ್ದರು. ರೈತರಿಗೆ ನೀಡುವ ಯಂತ್ರಗಳ ಖರೀದಿ ವೇಳೆ ಭ್ರಷ್ಟಾಚಾರ ನಡೆದಿದೆ ಎಂದು ದೂರಿರುವ ಕೃಷ್ಣಮೂರ್ತಿ ದೂರಿನ ಜತೆ ಕೆಲವು ದಾಖಲೆಗಳನ್ನೂ ಆಧಾರವಾಗಿ ನೀಡಿದ್ದರು.

ಆದಿಜಾಂಬವ ಸಮಾಜದಿಂದ ಧರಣಿ: ಮನವಿ ಪತ್ರ ಸ್ವೀಕರಿಸಿದ ಬಿ.ಸಿ. ಪಾಟೀಲ್ ನ್ಯಾ. ಎ.ಜೆ. ಸದಾಶಿವ ಆಯೋಗದ ವರದಿ ಜಾರಿಗೆ ಒತ್ತಾಯ ಮಾಡಿ ಹಾವೇರಿ ಜಿಲ್ಲೆ ಹಿರೇಕೆರೂರು ತಾಲೂಕು ಪಂಚಾಯತ್ ಕಚೇರಿ ಎದುರು ಆದಿಜಾಂಬವ ಸಮಾಜದಿಂದ ಧರಣಿ ನಡೆಸಲಾಗಿದೆ. ಮುಂದಿನ ಅಧಿವೇಶನದಲ್ಲಿ ವರದಿ ಅನುಷ್ಠಾನದ ಬಗ್ಗೆ ಚರ್ಚಿಸಿ, ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡುವಂತೆ ಸಚಿವರಿಗೆ ಆಗ್ರಹಿಸಲಾಗಿದೆ. ಈ ವೇಳೆ, ಧರಣಿ ಸ್ಥಳಕ್ಕೆ ಭೇಟಿ ನೀಡಿ ಕೃಷಿ ಖಾತೆ ಸಚಿವ ಬಿ.ಎಸ್. ಪಾಟೀಲ್​ ಮನವಿ ಪತ್ರ ಸ್ವೀಕರಿಸಿದ್ದಾರೆ. ಆದಿಜಾಂಬವ ಸಮುದಾಯದ ಬೇಡಿಕೆ ನ್ಯಾಯಯುತವಾಗಿದೆ. ಸಿಎಂಗೆ ಮನವಿ ತಲುಪಿಸುತ್ತೇನೆ ಎಂದು ಸಚಿವ ಬಿ.ಸಿ. ಪಾಟೀಲ್​ ತಿಳಿಸಿದ್ದಾರೆ.

ಇದನ್ನೂ ಓದಿ: ಬೀದರ್ ಗಡಿಭಾಗದ 14 ಹಳ್ಳಿಗಳಿಗೆ ಈಗಲೂ ರಸ್ತೆಯಿಲ್ಲ, ಬಸ್ಸಿಲ್ಲ; ಶಾಲಾಮಕ್ಕಳ ಬವಣೆ ವೀಕ್ಷಿಸಿದ ಮುಖ್ಯಮಂತ್ರಿ ಬೊಮ್ಮಾಯಿ

ಇದನ್ನೂ ಓದಿ: ಖೇಲೋ ಇಂಡಿಯಾದಲ್ಲಿ ಮಿಂಚಲು ಬಡತನ ಅಡ್ಡಿ: ಬಾಲಕಿಗೆ ಎಲ್ಲ ಸೌಲಭ್ಯ ಒದಗಿಸುತ್ತೇವೆ ಎಂದ ಸಿಎಂ ಬೊಮ್ಮಾಯಿ

Published On - 3:01 pm, Fri, 10 September 21

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್