AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಪ್ರಾಪ್ತ ಮಗನಿಗೆ ಬೈಕ್ ಓಡಿಸಲು ಕೊಟ್ಟಿದ್ದ ತಂದೆಗೆ 27,000 ರೂ. ದಂಡ

ರಾಣೆಬೆನ್ನೂರಿನ ವ್ಯಕ್ತಿಯೊಬ್ಬರು ಅಪ್ರಾಪ್ತ ಮಗನಿಗೆ ಬೈಕ್ ನೀಡಿದ್ದಕ್ಕೆ 27,000 ರೂ. ದಂಡ ಕಟ್ಟಬೇಕಾಯಿತು. ಕರ್ನಾಟಕದಲ್ಲಿ ಅಪ್ರಾಪ್ತರಿಗೆ ವಾಹನ ನೀಡುವುದು ಅಪರಾಧ ಎಂದು ಪೊಲೀಸರು ಜಾಗೃತಿ ಮೂಡಿಸುತ್ತಿದ್ದಾರೆ. ಪೋಷಕರು ಜಾಗೃತರಾಗಿರಬೇಕು ಮತ್ತು 18 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ವಾಹನ ನೀಡಬಾರದು. ಗಂಭೀರ ಪರಿಣಾಮಗಳನ್ನು ಎದುರಿಸಬೇಕಾಗುತ್ತದೆ.

ಅಪ್ರಾಪ್ತ ಮಗನಿಗೆ ಬೈಕ್ ಓಡಿಸಲು ಕೊಟ್ಟಿದ್ದ ತಂದೆಗೆ 27,000 ರೂ. ದಂಡ
ಮಗನಿಗೆ ಬೈಕ್ ಓಡಿಸಲು ಕೊಟ್ಟಿದ್ದ ತಂದೆಗೆ 27,000 ರೂ. ದಂಡ
ವಿವೇಕ ಬಿರಾದಾರ
|

Updated on: Dec 14, 2024 | 2:55 PM

Share

ಹಾವೇರಿ, ಡಿಸೆಂಬರ್​ 14: ಅಪ್ರಾಪ್ತರ ಕೈಯಲ್ಲಿ ವಾಹನಗಳನ್ನು ಕೊಡಬಾರದೆಂದು ಎಂದು ಎಷ್ಟೇ ಜಾಗೃತಿ ಮೂಡಿಸಿದರೂ ಪೋಷಕರು ಮಾತ್ರ ಇದ್ಯಾವುದಕ್ಕೂ ತಲೆ ಕಡೆಸಿಕೊಳ್ಳದೇ ಮಕ್ಕಳ ಕೈಗೆ ಬೈಕ್​, ಸ್ಕೂಟರ್​ ಕೊಟ್ಟು ಕಳುಹಿಸುತ್ತಾರೆ. ಹೀಗೆಯೇ ಅಪ್ರಾಪ್ತಾ ಮಗನ ಕೈಗೆ ಬೈಕ್​ ಕೊಟ್ಟು ತಂದೆ ಸಾವಿರಾರು ರೂಪಾಯಿ ದಂಡ ಕಟ್ಟಿದ್ದಾರೆ.

ಅಪ್ರಾಪ್ತ ಮಗನಿಗೆ ಬೈಕ್ ಚಲಾಯಿಸಲು​ ನೀಡಿದ್ದ ತಂದೆಗೆ ರಾಣೆಬೆನ್ನೂರು (Ranebennur) ಜೆಎಂಎಫ್​​​ಸಿ ನ್ಯಾಯಾಲಯ (JMFC Court) 27,000 ರೂ. ದಂಡ ವಿಧಿಸಿ ಆದೇಶ ಹೊರಡಿಸಿದೆ.​ ರಾಣೇಬೆನ್ನೂರಿನ ದಿಳ್ಳೆಪ್ಪ ಕಾಟಿ ಎಂಬುವರು ಅಪ್ರಾಪ್ತ ಮಗನಿಗೆ ಬೈಕ್​​ ಓಡಿಸಲು ನೀಡಿದ್ದು, ಅಪಘಾತ ಸಂಭವಿಸಿತ್ತು. ರಾಣೇಬೆನ್ನೂರು ಪಟ್ಟಣ ಸಂಚಾರಿ ಪೊಲೀಸ್​ ಠಾಣೆಯಲ್ಲಿ ಅಪಘಾತ ಪ್ರಕರಣ ದಾಖಲಾಗಿತ್ತು. ವಾದ ಪ್ರತಿವಾದ ಆಲಿಸಿದ ನ್ಯಾಯಾಧೀಶರು ಶುಕ್ರವಾರ ಅಪ್ರಾಪ್ತ ಮಗನಿಗೆ ಬೈಕ್ ನೀಡಿದ್ದಕ್ಕೆ ತಂದೆಗೆ ದಂಡ ವಿಧಿಸಿದೆ. ಇದೇ ವೇಳೆ ಅಪ್ರಾಪ್ತ ಮಕ್ಕಗಳಿಗೆ ಬೈಕ್ ನೀಡದಂತೆ ಸಲಹೆ ನೀಡಿತು.

ಸಂಚಾರ ಪೊಲೀಸ್ ಜಾಗೃತಿ​

18 ವರ್ಷಕ್ಕಿಂತ ಕಡಿಮೆ ವಯಸ್ಸಿನವರು ವಾಹನ ಚಲಾಯಿಸುವುದು ಅಪರಾಧವಾಗಿದೆ ಎಂದು ಸಂಚಾರ ಪೊಲೀಸ್​​ ಜಾಗೃತಿ ಮೂಡಿಸುತ್ತಿದೆ. ಈ ಕುರಿತಾಗಿ ಟ್ವೀಟ್​ ಮಾಡಿ ಪೋಷಕರಲ್ಲಿ ಅರಿವು ಮೂಡಿಸುತ್ತಿದೆ.

18 ವರ್ಷಕ್ಕಿಂತ ಕಡಿಮೆ ವಯಸ್ಸಿನವರನ್ನು ಅಪ್ರಾಪ್ತರು ಎಂದು ಪರಿಗಣಿಸಲಾಗುತ್ತದೆ. ಅಪ್ರಾಪ್ತರು ವಾಹನ ಚಲಾಯಿಸಿದರೆ ದಂಡ, ಜೈಲು ಶಿಕ್ಷೆ, ಪೋಷಕರ ಡ್ರೈವಿಂಗ್ ಲೈಸೆನ್ಸ್ ರದ್ದು, ನ್ಯಾಯಾಲಯದ ವೆಚ್ಚ, ವಕೀಲರ ಶುಲ್ಕ, ವಿಮಾ ಹೆಚ್ಚಳ ಸೇರಿದಂತೆ ಇನ್ನೂ ಹಲವು ದಂಡ ಪಾವತಿಸಬೇಕಾಗುತ್ತದೆ.

ಇದನ್ನೂ ಓದಿ: ಬೆಂಗಳೂರು ಸಂಚಾರ ನಿಯಮ ಉಲ್ಲಂಘನೆ: ಕೇವಲ 5 ಗಂಟೆಯಲ್ಲಿ ಸಂಗ್ರಹವಾಯ್ತು 7.62 ಲಕ್ಷ ರೂ. ದಂಡ

ಒಂದು ವೇಳೆ ಪೋಷಕರು ತಮ್ಮ 18 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಬೈಕ್ ಚಾಲನೆಗಾಗಿ ನೀಡಿದರೆ, ಅವರಿಗೆ 25 ಸಾವಿರ ರೂ. ದಂಡ ಹಾಗೂ 3 ವರ್ಷ ಜೈಲು ಶಿಕ್ಷೆಯಾಗಬಹುದು.

ವರದಿ: ಅಣ್ಣಪ್ಪ ಬಾರ್ಕಿ

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಮಾಡದ ತಪ್ಪಿಗೆ ಸುಟ್ಟು ಕರಕಲಾದ ಸೀಬರ್ಡ್ ಬಸ್ಸಿನ ಕೊನೆಯ ದೃಶ್ಯ
ಮಾಡದ ತಪ್ಪಿಗೆ ಸುಟ್ಟು ಕರಕಲಾದ ಸೀಬರ್ಡ್ ಬಸ್ಸಿನ ಕೊನೆಯ ದೃಶ್ಯ