AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

2024 ರ ನಂತರ ಪಾಕಿಸ್ತಾನದಲ್ಲಿ ಗಣೇಶನನ್ನು ಕೂರಿಸೋಣ; ಶಾಸಕ ಬಸನಗೌಡ ಪಾಟೀಲ್ ಯತ್ನಾಳ್

ಇಷ್ಟು ಗಣಪತಿ ಕೂರಿಸಿದರೂ ಹಿಂದೂಗಳು ಒಂದೇ ಒಂದು ಕಲ್ಲು ಎಸೆದಿಲ್ಲ. ಉರ್ದು ಶಾಲೆಯಲ್ಲಿ ಕನ್ನಡ ಕಲಿಸಿದ ಗುರುಗಳಿಗೆ ಕಲ್ಲು ತಗೊಂಡು ಹೊಡೆದಿದ್ದಾರೆ. ನಾವು ಗುರು ಎಂದು ಗೌರವ ಕೊಡುತ್ತೇವೆ, ಅವರು ಹಾಗಲ್ಲ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಕಿಡಿಕಾರಿದರು.

2024 ರ ನಂತರ ಪಾಕಿಸ್ತಾನದಲ್ಲಿ ಗಣೇಶನನ್ನು ಕೂರಿಸೋಣ; ಶಾಸಕ ಬಸನಗೌಡ ಪಾಟೀಲ್ ಯತ್ನಾಳ್
ಬಸನಗೌಡ ಪಾಟೀಲ್​ ಯತ್ನಾಳ್​
ಸೂರಜ್​, ಮಹಾವೀರ್​ ಉತ್ತರೆ
| Edited By: |

Updated on:Oct 07, 2023 | 8:26 PM

Share

ಹಾವೇರಿ. ಅ,07: 2024 ರಲ್ಲಿ ನಮ್ಮ ಬಿಜೆಪಿ ಸರ್ಕಾರ ಬಂದ್ರೆ, ಪಾಕಿಸ್ತಾನದಲ್ಲಿ ಗಣೇಶ ಮೂರ್ತಿ ಕೂರಿಸಿ ಪ್ರತಿಷ್ಠಾಪನೆ ಮಾಡುತ್ತೇವೆ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ (Basanagouda Patil Yatnal)​ ಹೇಳಿದರು. ಇಂದು(ಅ.07) ಬಂಕಾಪೂರದಲ್ಲಿ ನಡೆದ ಹಿಂದೂ ಜನ ಜಾಗೃತಿ ಸಭೆಯಲ್ಲಿ ಮಾತನಾಡಿದ ಅವರು ‘ಪಾಕಿಸ್ತಾನದ ಯುವಕರು ಅಲ್ಲಿನ ನಾಯಕರಿಗೆ ಬೈತಿದ್ದಾರೆ. ಅಲ್ಲಿನ ಯುವಕರಿಗೂ ಮೋದಿ ಬೇಕಾಗಿದ್ದಾರೆ. ಅದಕ್ಕಾಗಿ ನಾವು ಮತ್ತೆ ಬಿಜೆಪಿಯನ್ನು ಆಯ್ಕೆ ಮಾಡಬೇಕಿದೆ ಎಂದರು.

ವಸುದೈವ ಕುಟುಂಬಕಂ ನಮ್ಮ ಉದ್ದೇಶ

‘ ಒಂದಿನಾನೂ ಶಿವಾಜಿ ಎದುರಿಗೆ ಬಂದು ಅಕ್ಬರ್ ಯುದ್ದ ಮಾಡಲಿಲ್ಲ. ವಸುದೈವ ಕುಟುಂಬಕಂ ನಮ್ಮ ಉದ್ದೇಶವಾಗಿದೆ. ಇದೇ ವೇಳೆ ಶಿವಮೊಗ್ಗ ಗಲಾಟೆ ಪ್ರಕರಣ ವಿಚಾರ ‘ ಇಷ್ಟು ಗಣಪತಿ ಕೂರಿಸಿದರೂ ಹಿಂದೂಗಳು ಒಂದೇ ಒಂದು ಕಲ್ಲು ಎಸೆದಿಲ್ಲ. ಉರ್ದು ಶಾಲೆಯಲ್ಲಿ ಕನ್ನಡ ಕಲಿಸಿದ ಗುರುಗಳಿಗೆ ಕಲ್ಲು ತಗೊಂಡು ಹೊಡೆದಿದ್ದಾರೆ. ನಾವು ಗುರು ಎಂದು ಗೌರವ ಕೊಡುತ್ತೇವೆ, ಅವರು ಹಾಗಲ್ಲ. ಪೊಲೀಸರು ಒಳ್ಳೆಯವರೇ ಇದ್ದಾರೆ, ಅವರಿಗೂ ಒಳಗೆ ಕುದಿತಿರುತ್ತದೆ. ಆದರೆ, ಪಾಪ ಅವರು ಅವರ ಮೇಲಿನ ಲೀಡರ್​ಗಳ ಮಾತು ಕೇಳಬೇಕಾಗುತ್ತೆ. ಇವರದು ಬಹಳ ದಿನ ಇರುವ ಸರ್ಕಾರ ಅಲ್ಲ ಎಂದು ಕಿಡಿಕಾರಿದರು.

ಇದನ್ನೂ ಓದಿ:ಕೇರಳದ ರೀತಿ ರಾಜ್ಯದಲ್ಲೂ ಮುಸ್ಲಿಮರಿಗೆ ಪ್ರಚೋದಿಸುವ ಕೆಲಸ ಸಿದ್ದರಾಮಯ್ಯ ಸರ್ಕಾರ ಮಾಡ್ತಿದೆ; ಯತ್ನಾಳ್​

ತ್ರಿಮೂರ್ತಿಗಳ ಆರ್ಶಿವಾದದಿಂದ ಸನಾತನ ಧರ್ಮ ಹುಟ್ಟಿದೆ

‘ಉದಯ್ ನಿಧಿ ಸ್ಟಾಲಿನ್ ಇಡೀ ಸನಾತನ ಧರ್ಮ ನಿರ್ಮೂಲನೆ ಮಾಡಬೇಕು ಎಂದಿದ್ದಾನೆ. ಅವರ ತಾಯಿ ಕೃಷ್ಣನ ಪೂಜೆ ಮಾಡುತ್ತಾಳೆ. ಸನಾತನ ಧರ್ಮ ನಾಶ ಮಾಡಲು ಯಾರಿಂದಲೂ ಸಾಧ್ಯವಿಲ್ಲ. ಸನಾತನ ಧರ್ಮ ಒಬ್ಬರೆ, ಹುಟ್ಟಿಸಿದ ಧರ್ಮ ಅಲ್ಲ. ತ್ರಿಮೂರ್ತಿಗಳಾದ ಬ್ರಹ್ಮ, ವಿಷ್ಣು ಮಹೇಶ್ವರ ಮೂವರ ಆಶೀರ್ವಾದದಿಂದ ಸನಾತನ ಧರ್ಮ ಹುಟ್ಟಿದೆ. ಟಿಪ್ಪು ಸುಲ್ತಾನ, ಔರಂಗ ಜೇಬ್, ಹೈದರ ಅಲಿ ಇಂತಹ ಎಷ್ಟೋ ರಾಜರು ಬಂದು ಹೋದರು. ಆದ್ರೆ, ಇದುವರೆಗೂ ನಮ್ಮ ಸನಾತನ ಧರ್ಮ‌ ತೆಗೆಯಲು ಯಾರಿಂದಲೂ ಸಾಧ್ಯವಾಗಿಲ್ಲ.

ರಾಜ್ಯದ 28 ಲೋಕಸಭಾ ಕ್ಷೇತ್ರಗಳಲ್ಲಿ ಗೆಲ್ಲುವುದು ನಿಶ್ಚಿತ

ನಾನು, ಬೊಮ್ಮಾಯಿ ಹಾಗೂ ಪ್ರಹ್ಲಾದ್ ಜೋಶಿ ಅವರು ರಾಜ್ಯಾದ್ಯಂತ ಪ್ರವಾಸ ಮಾಡುತ್ತೇವೆ. 28 ಕ್ಕೆ 28 ಸ್ಥಾನ ಗೆಲ್ಲುವ ಶಪಥವನ್ನು ಇಲ್ಲಿಂದಲೆ ನಿಮಗೆಲ್ಲ ಸಂದೇಶ ಕೊಡುತ್ತೇನೆ. ಲೋಕಸಭಾ ಚುನಾವಣೆ ಬಳಿಕ ಈ ಸರ್ಕಾರ ಇರಲ್ಲ. ಬಿಜೆಪಿ ಗೆಲ್ಲುವುದು, ನಾವು ಮತ್ತೆ ಕೇಂದ್ರದಲ್ಲಿ ಅಧಿಕಾರಕ್ಕೆ ಬಂದೇ ಬರುತ್ತೇವೆ. ಬಳಿಕ ಈ ಕಾಂಗ್ರೆಸ್ ಸರ್ಕಾರ ಇರಲ್ಲ. ನೈತಿಕ ಹೊಣೆ ಹೊತ್ತು ರಾಜೀನಾಮೆ, ಸಿಎಂ ರಿಂದ ರಾಜ್ಯಪಾಲರ ಭೇಟಿ ಎಂದು ಬರುತ್ತದೆ. ಮುಸ್ಲಿಂರು ಎಲ್ಲರೂ ಒಂದಾಗಿ ಕಾಂಗ್ರೆಸ್​ಗೆ ಮತ ಹಾಕುತ್ತಾರೆ. ಅಂದರೆ, ನೀವು ಹಿಂದೂಗಳೆಲ್ಲ ಒಂದಾಗಿ ಬಿಜೆಪಿಗೆ ಓಟ್ ಹಾಕಿ ಎಂದಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 8:24 pm, Sat, 7 October 23

ಚಿತ್ರದುರ್ಗ ಬಸ್ ದುರಂತದ ಬಳಿಕವೂ ಎಚ್ಚೆತ್ತುಕೊಳ್ಳದ RTO ಅಧಿಕಾರಿಗಳು
ಚಿತ್ರದುರ್ಗ ಬಸ್ ದುರಂತದ ಬಳಿಕವೂ ಎಚ್ಚೆತ್ತುಕೊಳ್ಳದ RTO ಅಧಿಕಾರಿಗಳು
ಚಿತ್ರರಂಗಕ್ಕೆ ಬಂದಿದ್ದು ಗಲಾಟೆ ಮಾಡೋಕಲ್ಲ, ನಟಿಸೋಕೆ; ಸುದೀಪ್
ಚಿತ್ರರಂಗಕ್ಕೆ ಬಂದಿದ್ದು ಗಲಾಟೆ ಮಾಡೋಕಲ್ಲ, ನಟಿಸೋಕೆ; ಸುದೀಪ್
ತಮಿಳು ನಟ ನವೀನ್ ಚಂದ್ರಗೆ ಅಷ್ಟು ಸ್ಪಷ್ಟ ಕನ್ನಡ ಹೇಗೆ ಬರುತ್ತೆ?
ತಮಿಳು ನಟ ನವೀನ್ ಚಂದ್ರಗೆ ಅಷ್ಟು ಸ್ಪಷ್ಟ ಕನ್ನಡ ಹೇಗೆ ಬರುತ್ತೆ?
ವಿಶ್ವ ಕ್ರಿಕೆಟ್​ನಲ್ಲಿ ಈ ಸಾಧನೆ ಮಾಡಿದ ಏಕೈಕ ಮಹಿಳಾ ಆಟಗಾರ್ತಿ ದೀಪ್ತಿ
ವಿಶ್ವ ಕ್ರಿಕೆಟ್​ನಲ್ಲಿ ಈ ಸಾಧನೆ ಮಾಡಿದ ಏಕೈಕ ಮಹಿಳಾ ಆಟಗಾರ್ತಿ ದೀಪ್ತಿ
ಕರ್ನಾಟಕದಲ್ಲಿ ಸಿಎಂ ಬದಲಾವಣೆ ಬಗ್ಗೆ ಕೋಡಿಶ್ರೀ ಸ್ಫೋಟಕ ಭವಿಷ್ಯ
ಕರ್ನಾಟಕದಲ್ಲಿ ಸಿಎಂ ಬದಲಾವಣೆ ಬಗ್ಗೆ ಕೋಡಿಶ್ರೀ ಸ್ಫೋಟಕ ಭವಿಷ್ಯ
ನಾನು ಸಿನಿಮಾ ಡೈಲಾಗ್ ಮೂಲಕ ಟಾಂಟ್ ಕೊಡಲ್ಲ ಎಂದ ಸುದೀಪ್
ನಾನು ಸಿನಿಮಾ ಡೈಲಾಗ್ ಮೂಲಕ ಟಾಂಟ್ ಕೊಡಲ್ಲ ಎಂದ ಸುದೀಪ್
ಅವರೇ ಮೇಳದಲ್ಲಿ ಡಿಕೆಶಿಗೆ ಮಹಿಳೆ ಕೇಳಿದ ಪ್ರಶ್ನೆಗೆ ಕಕ್ಕಾಬಿಕ್ಕಿಯಾದ ಜನ
ಅವರೇ ಮೇಳದಲ್ಲಿ ಡಿಕೆಶಿಗೆ ಮಹಿಳೆ ಕೇಳಿದ ಪ್ರಶ್ನೆಗೆ ಕಕ್ಕಾಬಿಕ್ಕಿಯಾದ ಜನ
ಮುಸ್ಲಿಂ ಕುಟುಂಬಗಳಿಗೆ ಬೇರೆ ಜಾಗ ನೀಡುತ್ತೇವೆ
ಮುಸ್ಲಿಂ ಕುಟುಂಬಗಳಿಗೆ ಬೇರೆ ಜಾಗ ನೀಡುತ್ತೇವೆ
‘ಮಾರ್ಕ್’ ಮೊದಲ ದಿನದ ಕಲೆಕ್ಷನ್ 15 ಕೋಟಿ ನಾ? ಸುದೀಪ್ ಕಡೆಯಿಂದ ಸ್ಪಷ್ಟನೆ
‘ಮಾರ್ಕ್’ ಮೊದಲ ದಿನದ ಕಲೆಕ್ಷನ್ 15 ಕೋಟಿ ನಾ? ಸುದೀಪ್ ಕಡೆಯಿಂದ ಸ್ಪಷ್ಟನೆ
ನಪುಂಸಕ, ಗಂಡಸೇ ಅಲ್ಲ ಎಂದಿದ್ದಕ್ಕೆ ಮನನೊಂದು ವ್ಯಕ್ತಿ ಸಾವಿಗೆ ಶರಣು
ನಪುಂಸಕ, ಗಂಡಸೇ ಅಲ್ಲ ಎಂದಿದ್ದಕ್ಕೆ ಮನನೊಂದು ವ್ಯಕ್ತಿ ಸಾವಿಗೆ ಶರಣು