AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

2024 ರ ನಂತರ ಪಾಕಿಸ್ತಾನದಲ್ಲಿ ಗಣೇಶನನ್ನು ಕೂರಿಸೋಣ; ಶಾಸಕ ಬಸನಗೌಡ ಪಾಟೀಲ್ ಯತ್ನಾಳ್

ಇಷ್ಟು ಗಣಪತಿ ಕೂರಿಸಿದರೂ ಹಿಂದೂಗಳು ಒಂದೇ ಒಂದು ಕಲ್ಲು ಎಸೆದಿಲ್ಲ. ಉರ್ದು ಶಾಲೆಯಲ್ಲಿ ಕನ್ನಡ ಕಲಿಸಿದ ಗುರುಗಳಿಗೆ ಕಲ್ಲು ತಗೊಂಡು ಹೊಡೆದಿದ್ದಾರೆ. ನಾವು ಗುರು ಎಂದು ಗೌರವ ಕೊಡುತ್ತೇವೆ, ಅವರು ಹಾಗಲ್ಲ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಕಿಡಿಕಾರಿದರು.

2024 ರ ನಂತರ ಪಾಕಿಸ್ತಾನದಲ್ಲಿ ಗಣೇಶನನ್ನು ಕೂರಿಸೋಣ; ಶಾಸಕ ಬಸನಗೌಡ ಪಾಟೀಲ್ ಯತ್ನಾಳ್
ಬಸನಗೌಡ ಪಾಟೀಲ್​ ಯತ್ನಾಳ್​
ಸೂರಜ್​, ಮಹಾವೀರ್​ ಉತ್ತರೆ
| Edited By: ಕಿರಣ್ ಹನುಮಂತ್​ ಮಾದಾರ್|

Updated on:Oct 07, 2023 | 8:26 PM

Share

ಹಾವೇರಿ. ಅ,07: 2024 ರಲ್ಲಿ ನಮ್ಮ ಬಿಜೆಪಿ ಸರ್ಕಾರ ಬಂದ್ರೆ, ಪಾಕಿಸ್ತಾನದಲ್ಲಿ ಗಣೇಶ ಮೂರ್ತಿ ಕೂರಿಸಿ ಪ್ರತಿಷ್ಠಾಪನೆ ಮಾಡುತ್ತೇವೆ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ (Basanagouda Patil Yatnal)​ ಹೇಳಿದರು. ಇಂದು(ಅ.07) ಬಂಕಾಪೂರದಲ್ಲಿ ನಡೆದ ಹಿಂದೂ ಜನ ಜಾಗೃತಿ ಸಭೆಯಲ್ಲಿ ಮಾತನಾಡಿದ ಅವರು ‘ಪಾಕಿಸ್ತಾನದ ಯುವಕರು ಅಲ್ಲಿನ ನಾಯಕರಿಗೆ ಬೈತಿದ್ದಾರೆ. ಅಲ್ಲಿನ ಯುವಕರಿಗೂ ಮೋದಿ ಬೇಕಾಗಿದ್ದಾರೆ. ಅದಕ್ಕಾಗಿ ನಾವು ಮತ್ತೆ ಬಿಜೆಪಿಯನ್ನು ಆಯ್ಕೆ ಮಾಡಬೇಕಿದೆ ಎಂದರು.

ವಸುದೈವ ಕುಟುಂಬಕಂ ನಮ್ಮ ಉದ್ದೇಶ

‘ ಒಂದಿನಾನೂ ಶಿವಾಜಿ ಎದುರಿಗೆ ಬಂದು ಅಕ್ಬರ್ ಯುದ್ದ ಮಾಡಲಿಲ್ಲ. ವಸುದೈವ ಕುಟುಂಬಕಂ ನಮ್ಮ ಉದ್ದೇಶವಾಗಿದೆ. ಇದೇ ವೇಳೆ ಶಿವಮೊಗ್ಗ ಗಲಾಟೆ ಪ್ರಕರಣ ವಿಚಾರ ‘ ಇಷ್ಟು ಗಣಪತಿ ಕೂರಿಸಿದರೂ ಹಿಂದೂಗಳು ಒಂದೇ ಒಂದು ಕಲ್ಲು ಎಸೆದಿಲ್ಲ. ಉರ್ದು ಶಾಲೆಯಲ್ಲಿ ಕನ್ನಡ ಕಲಿಸಿದ ಗುರುಗಳಿಗೆ ಕಲ್ಲು ತಗೊಂಡು ಹೊಡೆದಿದ್ದಾರೆ. ನಾವು ಗುರು ಎಂದು ಗೌರವ ಕೊಡುತ್ತೇವೆ, ಅವರು ಹಾಗಲ್ಲ. ಪೊಲೀಸರು ಒಳ್ಳೆಯವರೇ ಇದ್ದಾರೆ, ಅವರಿಗೂ ಒಳಗೆ ಕುದಿತಿರುತ್ತದೆ. ಆದರೆ, ಪಾಪ ಅವರು ಅವರ ಮೇಲಿನ ಲೀಡರ್​ಗಳ ಮಾತು ಕೇಳಬೇಕಾಗುತ್ತೆ. ಇವರದು ಬಹಳ ದಿನ ಇರುವ ಸರ್ಕಾರ ಅಲ್ಲ ಎಂದು ಕಿಡಿಕಾರಿದರು.

ಇದನ್ನೂ ಓದಿ:ಕೇರಳದ ರೀತಿ ರಾಜ್ಯದಲ್ಲೂ ಮುಸ್ಲಿಮರಿಗೆ ಪ್ರಚೋದಿಸುವ ಕೆಲಸ ಸಿದ್ದರಾಮಯ್ಯ ಸರ್ಕಾರ ಮಾಡ್ತಿದೆ; ಯತ್ನಾಳ್​

ತ್ರಿಮೂರ್ತಿಗಳ ಆರ್ಶಿವಾದದಿಂದ ಸನಾತನ ಧರ್ಮ ಹುಟ್ಟಿದೆ

‘ಉದಯ್ ನಿಧಿ ಸ್ಟಾಲಿನ್ ಇಡೀ ಸನಾತನ ಧರ್ಮ ನಿರ್ಮೂಲನೆ ಮಾಡಬೇಕು ಎಂದಿದ್ದಾನೆ. ಅವರ ತಾಯಿ ಕೃಷ್ಣನ ಪೂಜೆ ಮಾಡುತ್ತಾಳೆ. ಸನಾತನ ಧರ್ಮ ನಾಶ ಮಾಡಲು ಯಾರಿಂದಲೂ ಸಾಧ್ಯವಿಲ್ಲ. ಸನಾತನ ಧರ್ಮ ಒಬ್ಬರೆ, ಹುಟ್ಟಿಸಿದ ಧರ್ಮ ಅಲ್ಲ. ತ್ರಿಮೂರ್ತಿಗಳಾದ ಬ್ರಹ್ಮ, ವಿಷ್ಣು ಮಹೇಶ್ವರ ಮೂವರ ಆಶೀರ್ವಾದದಿಂದ ಸನಾತನ ಧರ್ಮ ಹುಟ್ಟಿದೆ. ಟಿಪ್ಪು ಸುಲ್ತಾನ, ಔರಂಗ ಜೇಬ್, ಹೈದರ ಅಲಿ ಇಂತಹ ಎಷ್ಟೋ ರಾಜರು ಬಂದು ಹೋದರು. ಆದ್ರೆ, ಇದುವರೆಗೂ ನಮ್ಮ ಸನಾತನ ಧರ್ಮ‌ ತೆಗೆಯಲು ಯಾರಿಂದಲೂ ಸಾಧ್ಯವಾಗಿಲ್ಲ.

ರಾಜ್ಯದ 28 ಲೋಕಸಭಾ ಕ್ಷೇತ್ರಗಳಲ್ಲಿ ಗೆಲ್ಲುವುದು ನಿಶ್ಚಿತ

ನಾನು, ಬೊಮ್ಮಾಯಿ ಹಾಗೂ ಪ್ರಹ್ಲಾದ್ ಜೋಶಿ ಅವರು ರಾಜ್ಯಾದ್ಯಂತ ಪ್ರವಾಸ ಮಾಡುತ್ತೇವೆ. 28 ಕ್ಕೆ 28 ಸ್ಥಾನ ಗೆಲ್ಲುವ ಶಪಥವನ್ನು ಇಲ್ಲಿಂದಲೆ ನಿಮಗೆಲ್ಲ ಸಂದೇಶ ಕೊಡುತ್ತೇನೆ. ಲೋಕಸಭಾ ಚುನಾವಣೆ ಬಳಿಕ ಈ ಸರ್ಕಾರ ಇರಲ್ಲ. ಬಿಜೆಪಿ ಗೆಲ್ಲುವುದು, ನಾವು ಮತ್ತೆ ಕೇಂದ್ರದಲ್ಲಿ ಅಧಿಕಾರಕ್ಕೆ ಬಂದೇ ಬರುತ್ತೇವೆ. ಬಳಿಕ ಈ ಕಾಂಗ್ರೆಸ್ ಸರ್ಕಾರ ಇರಲ್ಲ. ನೈತಿಕ ಹೊಣೆ ಹೊತ್ತು ರಾಜೀನಾಮೆ, ಸಿಎಂ ರಿಂದ ರಾಜ್ಯಪಾಲರ ಭೇಟಿ ಎಂದು ಬರುತ್ತದೆ. ಮುಸ್ಲಿಂರು ಎಲ್ಲರೂ ಒಂದಾಗಿ ಕಾಂಗ್ರೆಸ್​ಗೆ ಮತ ಹಾಕುತ್ತಾರೆ. ಅಂದರೆ, ನೀವು ಹಿಂದೂಗಳೆಲ್ಲ ಒಂದಾಗಿ ಬಿಜೆಪಿಗೆ ಓಟ್ ಹಾಕಿ ಎಂದಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 8:24 pm, Sat, 7 October 23

Follow Us
Suraj Mahaveer Utture
Suraj Mahaveer Utture

ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ನವಲಿಹಾಳ ಗ್ರಾಮದ ಸೂರಜ ಉತ್ತೂರೆ. ಕಸ್ತೂರಿ ವಾಹಿನಿಯಲ್ಲಿ ರಾಜಕೀಯ ವರದಿಗಾರನಾಗಿ ಪತ್ರಿಕೊದ್ಯಮ ಪ್ರವೇಶಿಸಿದ ಇವರು. ಡಿಸೆಂಬರ್ 2022 ರಂದು ಹಾವೇರಿ ಜಿಲ್ಲೆ tv9 ವರದಿಗಾರನಾಗಿ ಕೆಲಸ ಆರಂಭಿಸಿದ್ರು ನವೆಂಬರ್ 2023 ರಂದು ಉತ್ತರ ಕನ್ನಡ ಜಿಲ್ಲೆಗೆ ವರ್ಗಾವಣೆ ಆಗಿದ್ದೂ ಸದ್ಯ ಉತ್ತರ ಕನ್ನಡ ಜಿಲ್ಲೆಯ tv9 ವರದಿಗಾರನಾಗಿ ಕೆಲಸ ಮಾಡುತ್ತಿದ್ದಾರೆ.

Read More
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ