AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಾವೇರಿ ನೈತಿಕ ಪೊಲೀಸ್ ಗಿರಿ ಪ್ರಕರಣಕ್ಕೆ ಮೇಜರ್ ಟ್ವಿಸ್ಟ್; ಗ್ಯಾಂಗ್ ರೇಪ್ ಆರೋಪ

ಜ.08ರಂದು ಸೋಮವಾರ ಅನ್ಯಕೋಮಿನ ಇಬ್ಬರು ವಿವಾಹಿತರು ಹಾವೇರಿ ಜಿಲ್ಲೆ ಹಾನಗಲ್ ತಾಲೂಕಿನ ನಾಕ್ಲಕ್ರಾಸ್ ಬಳಿ ಇರುವ ಖಾಸಗಿ ಹೋಟೆಲ್ ನಲ್ಲಿ ತಂಗಿರುತ್ತಾರೆ. ಇದನ್ನು ಕಂಡ ಕೆಲ ಮುಸ್ಲಿಂ ಯುವಕರು ಏಕಾಏಕಿ ಹೋಟೆಲ್ ಗೆ ನುಗ್ಗಿ ದಾಂದಲೇ ಮಾಡಿ ಮಹಿಳೆ ಮತ್ತು ಪುರುಷನ ಮೇಲೆ ಹಲ್ಲೆ ನಡೆಸಿದ್ದರು. ಅಲ್ಲದೆ ಗ್ಯಾಂಗ್ ರೇಪ್ ನಡೆದಿದೆ ಎನ್ನಲಾಗುತ್ತಿದೆ.

ಹಾವೇರಿ ನೈತಿಕ ಪೊಲೀಸ್ ಗಿರಿ ಪ್ರಕರಣಕ್ಕೆ ಮೇಜರ್ ಟ್ವಿಸ್ಟ್; ಗ್ಯಾಂಗ್ ರೇಪ್ ಆರೋಪ
ಕಾರಿನಲ್ಲಿ ಮಹಿಳೆಯನ್ನು ಘಾಸಿಗೊಳಿಸಿದ ಮತ್ತೊಂದು ಭಯಾನಕ ವಿಡಿಯೋ ವೈರಲ್
TV9 Web
| Edited By: ಆಯೇಷಾ ಬಾನು|

Updated on:Jan 11, 2024 | 12:31 PM

Share

ಹಾವೇರಿ, ಜ.11: ಹಾವೇರಿ ಜಿಲ್ಲೆಯಲ್ಲಿ ನಡೆದ ನೈತಿಕ ಪೊಲೀಸ್ ಗಿರಿ (Moral Police) ಪ್ರಕರಣಕ್ಕೆ ಮೇಜರ್ ಟ್ವಿಸ್ಟ್ ಸಿಕ್ಕಿದೆ. ಅನ್ಯಕೋಮಿನ ಪುರುಷನೊಂದಿಗೆ ಸಿಕ್ಕಿ ಬಿದ್ದ ಮಹಿಳೆಯನ್ನು ಥಳಿಸಿ, ಖಾಸಗಿ ಅಂಗಾಗವನ್ನು ಗಾಸಿ ಗೊಳಿಸಿ ಗ್ಯಾಂಗ್ ರೇಪ್ ಮಾಡಲಾಗಿದೆ ಎಂಬ ಆರೋಪ ಕೇಳಿಬಂದಿದೆ. ಸದ್ಯ ಈ ಪ್ರಕರಣ ಸಂಬಂಧ ಇಬ್ಬರನ್ನು ಬಂಧಿಸಲಾಗಿದ್ದು ಉಳಿದ ಆರೋಪಿಗಳಿಗೆ ಬಲೆ ಬೀಸಲಾಗಿದೆ. ಮತ್ತೊಂದೆಡೆ ನೈತಿಕ ಪೊಲೀಸ್ ಗಿರಿ ಪ್ರಕರಣದ ಆರೋಪಿಗಳ ಮತ್ತೊಂದು ವಿಡಿಯೋ ವೈರಲ್ (Video Viral) ಆಗಿದೆ.

ಹಾವೇರಿಯಲ್ಲಿ ನೈತಕ ಪೊಲೀಸ್ ಗಿರಿ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ. ಜ.08ರಂದು ಸೋಮವಾರ ಅನ್ಯಕೋಮಿನ ಇಬ್ಬರು ವಿವಾಹಿತರು ಹಾವೇರಿ ಜಿಲ್ಲೆ ಹಾನಗಲ್ ತಾಲೂಕಿನ ನಾಕ್ಲಕ್ರಾಸ್ ಬಳಿ ಇರುವ ಖಾಸಗಿ ಹೋಟೆಲ್ ನಲ್ಲಿ ತಂಗಿರುತ್ತಾರೆ. ಇದನ್ನು ಕಂಡ ಕೆಲ ಮುಸ್ಲಿಂ ಯುವಕರು ಏಕಾಏಕಿ ಹೋಟೆಲ್ ಗೆ ನುಗ್ಗಿ ದಾಂಧಲೆ ಮಾಡಿ ಮಹಿಳೆ ಮತ್ತು ಪುರುಷನ ಮೇಲೆ ಹಲ್ಲೆ ನಡೆಸಿದ್ದರು. ಅಲ್ಲದೇ ಹಲ್ಲೆ ಮಾಡುವಾಗ ವಿಡಿಯೋ ಮಾಡಿಕೊಂಡಿದ್ದರು. ಈಗಾ ಈ ಘಟನೆಯ 2 ವಿಡಿಯೋ ವೈರಲ್ ಆಗಿದೆ.

ಈ ದುರುಳರು ಮುಸ್ಲಿಂ ಮಹಿಳೆಯರು, ಹುಡುಗಿಯರನ್ನ ಟಾರ್ಗೆಟ್ ಮಾಡಿಕೊಂಡಿದ್ದರು. ಹಿಂದೂ ಹುಡಗರ ಜೊತೆ ಕಾಣಿಸಿಕೊಂಡ ಮುಸ್ಲಿಂ ಹುಡುಗಿಯರು, ಮಹಿಳೆಯರನ್ನ ಟಾರ್ಗೆಟ್ ಮಾಡ್ತಿದ್ದರು. ಜೋಡಿ ಹಕ್ಕಿಗಳ ಮೇಲೆ‌ ಅಟ್ಯಾಕ್ ಮಾಡಿ ಹುಡುಗಿಯರನ್ನ ಎಳೆದೊಯ್ಯುತ್ತಿದ್ದರು. ಇದೀಗ ಎರಡನೇ ವಿಡಿಯೋ ವೈರಲ್ ಆಗುತ್ತಿದ್ದಂತೆ ಹಾನಗಲ್ ಜನರು ಬೆಚ್ಚಿ ಬಿದ್ದಿದ್ದಾರೆ. ಆರೋಪಿಗಳು ಮುಸ್ಲಿಂ ಮಹಿಳೆಯನ್ನು ಕಾರಿನಲ್ಲಿ ಎಳೆದೊಯ್ದು ಚಿತ್ರಹಿಂಸೆ ನೀಡಿದ್ದಾರೆ ಎನ್ನಲಾದ ವಿಡಿಯೋ ವೈರಲ್ ಆಗಿದೆ.

7 ಮುಸ್ಲಿಂ ಯುವಕರಿಂದ ಗ್ಯಾಂಗ್ ರೇಪ್ ?

ಹೋಟೆಲ್​ನಲ್ಲಿ ಹಲ್ಲೆ ಮಾಡಿದ ಬಳಿಕ ಅರಣ್ಯ ಪ್ರದೇಶಕ್ಕೆ ಕಾರಿನಲ್ಲಿ ಕರೆದೊಯ್ದು 7 ಮುಸ್ಲಿಂ ಯುವಕರು ಗ್ಯಾಂಗ್ ರೇಪ್ ಮಾಡಿದ್ದಾರೆ ಎಂದು ಮಹಿಳೆ ಆರೋಪಿಸಿದ್ದಾರೆ. ಹಿಂದೂ ಪುರುಷನ ಜೊತೆ ಲಾಡ್ಜ್​ನಲ್ಲಿ ಕಾಣಿಸಿಕೊಂಡಿದ್ದಕ್ಕೆ ಮಹಿಳೆ ಮೇಲೆ ಗ್ಯಾಂಗ್ ರೇಪ್? ಮಾಡಲಾಗಿದೆ ಎನ್ನಲಾಗುತ್ತಿದೆ. ಒಬ್ಬರಾದ ಮೇಲೆ ಒಬ್ಬರು ನನ್ನ ರೇಪ್ ಮಾಡಿದ್ದಾರೆಂದು ಮಹಿಳೆ ಆರೋಪಿಸಿದ್ದಾರೆ. ಮತ್ತೊಂದೆಡೆ ತನ್ನ ಪತ್ನಿ ಮೇಲೆ ಸಾಮೂಹಿಕ ಅತ್ಯಾಚಾರ ಮಾಡಲಾಗಿದೆ ಎಂದು ಮಹಿಳೆಯ ಪತಿ ಕೂಡ ಹೇಳಿಕೆ ನೀಡಿದ್ದಾರೆ. ಜಂಗಲ್​ನಲ್ಲಿ ರೇಪ್ ಮಾಡಿದ್ದ ವಿಡಿಯೋ ಇದೆ ಎಂದು ಮಹಿಳೆಯ ಪತಿ ಆರೋಪಿಸಿದ್ದಾರೆ.

ಇದನ್ನೂ ಓದಿ: ಸ್ನೇಹಿತನನ್ನು ಕ್ರಿಮಿನಲ್ ಪ್ರಕರಣದಲ್ಲಿ ಸಿಲುಕಿಸಲು ತನ್ನ ತೋಳಿಗೆ ತಾನೇ ಗುಂಡು ಹಾರಿಸಿಕೊಂಡ ವ್ಯಕ್ತಿ

ಇನ್ನು ಈ ಹಿಂದೆ ಈ ಪ್ರಕರಣದ ಕುರಿತು ಸ್ವತಃ ಸಂತ್ರಸ್ತೆ ಮಾಧ್ಯಮಕ್ಕೆ ಸ್ಪಷ್ಟೀಕರಣ ನೀಡಿ ನನಗೆ ಐದಾರು ಅಪರಿಚಿತ ಯುವಕರು ನಾನು ತಂಗಿದ್ದ ಹೋಟೆಲ್ ಗೆ ನುಗ್ಗಿ ಹಲ್ಲೆ ಮಾಡಿ ನನ್ನ ಖಾಸಗಿ ಅಂಗಾಂಗಗಳನ್ನು ಘಾಸಿಗೊಳಿಸಿದ್ದಾರೆ ಎಂದು ತಿಳಿಸಿದ್ದರು. ಆದರೆ ನನ್ನ ಮೇಲೆ ಗ್ಯಾಂಗ್ ರೇಪ್ ಆಗಿದೆ ಎಂದು ಆಕೆ ಹೇಳಿರಲಿಲ್ಲ.

ನೈತಿಕ ಪೊಲೀಸ್​ಗಿರಿ ಯಾರೇ ನಡೆಸಿದ್ರೂ ಮುಲಾಜಿಲ್ಲದೆ ಕ್ರಮ

ಹಾವೇರಿ ಜಿಲ್ಲೆಯ ಹಾನಗಲ್​ನಲ್ಲಿ ನೈತಿಕ ಪೊಲೀಸ್​ಗಿರಿ ಪ್ರಕರಣ ಸಂಬಂಧ ಬೆಂಗಳೂರಿನಲ್ಲಿ ಡಿಜಿ & ಐಜಿಪಿ ಅಲೋಕ್ ಮೋಹನ್ ಎಚ್ಚರಿಕೆ ನೀಡಿದ್ದಾರೆ. ನೈತಿಕ ಪೊಲೀಸ್​ಗಿರಿ ಯಾರೇ ನಡೆಸಿದ್ರೂ ಮುಲಾಜಿಲ್ಲದೆ ಕ್ರಮ ಕೈಗೊಳ್ಳಲಾಗುತ್ತೆ. ಇಂತಹ ಘಟನೆ ಎಲ್ಲೇ ನಡೆದ್ರೂ ತಕ್ಷಣ ಕ್ರಮ ಕೈಗೊಳ್ಳುತ್ತಿದ್ದೇವೆ. ಸಮಾಜದಲ್ಲಿ ಎಲ್ಲರಿಗೂ ಕಾನೂನು ಒಂದೇ ಎಂದರು.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 10:20 am, Thu, 11 January 24

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ