ಮುಡಾ ಹಗರಣ ಆರೋಪಿತ ಅಧಿಕಾರಿ ಹಾವೇರಿ ವಿಶ್ವವಿದ್ಯಾಲಯದ ಕುಲಸಚಿವ!

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ನಿವೇಶನ ಹಂಚಿಕೆ ವಿಚಾರವಾಗಿ ನಡೆದಿರುವ ಹಗರಣ ರಾಜ್ಯದಲ್ಲಿ ಸಾಕಷ್ಟು ಚರ್ಚೆಯಾಗುತ್ತಿದೆ. ಈ ಹಗರಣದ ಆರೋಪ ಹೊತ್ತಿರುವ ಮುಡಾದ ಮಾಜಿ ಆಯುಕ್ತ ದಿನೇಶ್​ ಕುಮಾರ್​ ಜಿಟಿ ಅವರನ್ನು ಹಾವೇರಿ ವಿಶ್ವವಿದ್ಯಾಲಯದ ಕುಲಸಚಿವರಾಗಿ ಸರ್ಕಾರ ವರ್ಗಾಯಿಸಿದೆ.

ಮುಡಾ ಹಗರಣ ಆರೋಪಿತ ಅಧಿಕಾರಿ ಹಾವೇರಿ ವಿಶ್ವವಿದ್ಯಾಲಯದ ಕುಲಸಚಿವ!
ದಿನೇಶ್​ ಕುಮಾರ್​ ಜಿಟಿ
Follow us
| Updated By: ವಿವೇಕ ಬಿರಾದಾರ

Updated on:Aug 30, 2024 | 12:40 PM

ಮೈಸೂರು, ಆಗಸ್ಟ್​ 30: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ)ದಲ್ಲಿ ನಡೆದಿದೆ ಎನ್ನಲಾಗಿರುವ ಹಗರಣ ರಾಜ್ಯದಲ್ಲಿ ಸಂಚಲನ ಸೃಷ್ಟಿಸಿದೆ. ಮುಡಾ (Muda) ಹಗರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರದ್ದೂ ಪಾತ್ರವಿದೆ ಎಂದು ವಿಪಕ್ಷಗಳು ಆರೋಪ ಮಾಡುತ್ತಿವೆ. ಈ ನಡುವೆ, ಮುಡಾದಲ್ಲಿ ನಡೆದಿದೆ ಎನ್ನಲಾಗಿರುವ ಹಗರಣದಲ್ಲಿ ಭಾಗಿಯಾಗಿದ್ದಾರೆ ಎಂಬ ಆರೋಪ ಹೊತ್ತಿರುವ ಮುಡಾ ಮಾಜಿ ಆಯುಕ್ತ, ಕೆಎಎಸ್​ ಅಧಿಕಾರಿ ದಿನೇಶ್ ಕುಮಾರ್ ಜಿ.ಟಿ (Dinesh Kumar GT) ಹಾವೇರಿ ವಿಶ್ವವಿದ್ಯಾಲಯದ (Haveri University) ಕುಲಸಚಿವರಾಗಿ ನೇಮಕಗೊಂಡಿದ್ದಾರೆ.

ಮುಡಾದಲ್ಲಿ 50:50 ಅನುಪಾತದಡಿ ಸೈಟ್​ ಹಂಚಿಕೆಯಲ್ಲಿ ಅಕ್ರಮ ನಡೆದಿದೆ ಎಂಬ ಆರೋಪ ಕೇಳಿ ಬಂದಿತ್ತು. ಈ ಅಕ್ರಮದಲ್ಲಿ ಅಂದಿನ ಮುಡಾ ಆಯಕ್ತ ದಿನೇಶ್ ಕುಮಾರ್ ಜಿ.ಟಿ​​ ಅವರ ಪಾಲುಗಾರಿಕೆಯೂ ಇದೆ ಎಂಬ ಆರೋಪ ಕೇಳಿಬಂದಿತ್ತು. ಆರೋಪ ಕೇಳಿಬಂದ ತಕ್ಷಣ ಮೈಸೂರಿಗೆ ಆಗಮಿಸಿದ್ದ ಸಚಿವ ಭೈರತಿ ಸುರೇಶ್‌ ಸಭೆ ನಡೆಸಿ ಅಂದಿನ ಮುಡಾ ಆಯುಕ್ತರನ್ನು ಜಿಟಿ ದಿನೇಶ್​ ಅವರ ವರ್ಗಾವಣೆಗೆ ಸೂಚಿಸಿದರು. ಅದರಂತೆ, ಸರ್ಕಾರ ದಿನೇಶ್ ಕುಮಾರ್ ಜಿಟಿ​ ಅವರನ್ನು ಮಾಡಿತ್ತು. ಆದರೆ, ಜಿಟಿ ದಿನೇಶ್​ ಅವರಿಗೆ ಸ್ಥಳ ನಿಯೋಜನೆಯಾಗಿರಲಿಲ್ಲ. ಇದೀಗ, ಜಿ.ಟಿ.ದಿನೇಶ್ ಕುಮಾರ್ ಅವ​​ರನ್ನು ಹಾವೇರಿ ವಿಶ್ವ ವಿದ್ಯಾಲಯದ ಕುಲಸಚಿವರಾಗಿ ಸರ್ಕಾರ ನೇಮಕ ಮಾಡಿದೆ.

ಇದನ್ನೂ ಓದಿ: ಮುಡಾ ಹಗರಣ: ವಿಚಾರಣೆ ಮತ್ತೆ ಮುಂದೂಡಿದ ಹೈಕೋರ್ಟ್‌, ಸಿಎಂಗೆ 2 ದಿನ ರಿಲೀಫ್​

ಕೆಎಎಸ್​ ಅಧಿಕಾರಿ ದಿನೇಶ್​​ ಕುಮಾರ್​ ಜಿಟಿ ಸೇರಿದಂತೆ ಸರ್ಕಾರ ಒಟ್ಟು ಒಂಬತ್ತು ಕೆಎಎಸ್​ ಅಧಿಕಾರಿಗಳನ್ನು ವರ್ಗಾವಣೆ ಮಾಡಿದೆ.

ವರ್ಗಾವಣೆಯಾದ ಅಧಿಕಾರಿಗಳು

  • ವೀರಭದ್ರ ಹಂಚಿನಾಳ – ವ್ಯವಸ್ಥಾಪ ನಿರ್ದೇಶಕರು ಕರ್ನಾಟಕ ರಾಜ್ಯ ಕರಕುಶಲ ಅಭಿವೃದ್ಧಿ ನಿಗಮ ನಿಯಮಿತ ಬೆಂಗಳೂರಿಗೆ ವರ್ಗಾಯಿಸಲಾಗಿದೆ.
  • ಅನುರಾಧ ಜಿ – ಮುಖ್ಯ ಆಡಳಿತಾಧಿಕಾರಿ ವಿಜಯನಗರ ವೈದ್ಯಕೀಯ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆ, ಬಳ್ಳಾರಿ.
  • ರಾಘವೇಂದ್ರ ಟಿ – ನಿರ್ದೇಶಕರು ವಿಕಲಚೇನರ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಇಲಾಖೆ ಬೆಂಗಳೂರು.
  • ಚಿದಾನಂದ ಸದಾಶಿವ ವಟಾರೆ – ಮುಖ್ಯ ಆಡಳಿತಾಧಿಕಾರಿ ಇನ್ಸ್ಟಿಟ್ಯೂಟ್​ ಆಫ್​ ಗ್ಯಾಸ್ಟ್ರೋಎಂಟ್ರಾಲಜಿ ಸೈನ್ಸಸ್​ ಆ್ಯಂಡ್​ ಆರ್ಗನ್​ ಟ್ರಾನ್ಸ್​ಪ್ಲಾಂಟ್​, ಬೆಂಗಳೂರು.
  • ಮಹದೇವ್​ ಎ ಮುರಗಿ – ಕುಲಸಚಿವರು (ಆಡಳಿತ) ತೋಟಗಾರಿಕೆ ವಿಶ್ವವಿದ್ಯಾಲಯ ಬಾಗಲಕೋಟೆ. ಮತ್ತು ಪ್ರಾಭರಿ ಆಯುಕ್ತರು ಕೂಡಲಸಂಗಮ ಅಭಿವೃದ್ಧಿ ಮಂಡಳಿ, ಕೂಡಲಸಂಗಮ, ಬಾಗಲಕೋಟೆ.
  • ರವಿಕುಮಾರ್ ಪಿ – ಪ್ರಧಾನ ವ್ಯವಸ್ಥಾಪಕರು (ಆಡಳಿತ) ಕೃಷ್ಣಾ ಭಾಗ್ಯ ಜಲ ನಿಗಮ ನಿಯಮಿತ ಬೆಂಗಳೂರು.
  • ಡಾ. ಶಂಕರಪ್ಪ ವಣಿಕ್ಯಾಳ್​​ – ಪ್ರಧಾನ ವ್ಯವಸ್ಥಾಪಕರು (ಆಡಳಿತ) ರಾಯಚೂರು ವಿಶ್ವವಿದ್ಯಾಲಯ, ರಾಯಚೂರು.
  • ಗೀತಾ ಈ ಕೌಲಗಿ – ಕುಲಸಚಿವರು (ಆಡಳಿತ) ಬಾಗಲಕೋಟೆ ವಿಶ್ವವಿದ್ಯಾಲಯ, ಬಾಗಲಕೋಟೆ

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 12:04 pm, Fri, 30 August 24

ಭಾರತದ ಷೇರುಪೇಟೆ ಇನ್ನೆಷ್ಟು ಬೇಗ ಡಬಲ್ ಆಗುತ್ತೆ?
ಭಾರತದ ಷೇರುಪೇಟೆ ಇನ್ನೆಷ್ಟು ಬೇಗ ಡಬಲ್ ಆಗುತ್ತೆ?
ಚಾಮುಂಡೇಶ್ವರಿ ತಾಯಿಗೆ ವಿಶೇಷ ಪೂಜೆ ಸಲ್ಲಿಸಿದ ನಿಖಿಲ್ ಕುಮಾರಸ್ವಾಮಿ
ಚಾಮುಂಡೇಶ್ವರಿ ತಾಯಿಗೆ ವಿಶೇಷ ಪೂಜೆ ಸಲ್ಲಿಸಿದ ನಿಖಿಲ್ ಕುಮಾರಸ್ವಾಮಿ
ಡ್ರೋನ್​​ನಲ್ಲಿ ಗಣಪತಿಯನ್ನು ವಿಸರ್ಜನೆ ಮಾಡಿದ ಯುವಕರು! ವಿಡಿಯೋ ನೋಡಿ
ಡ್ರೋನ್​​ನಲ್ಲಿ ಗಣಪತಿಯನ್ನು ವಿಸರ್ಜನೆ ಮಾಡಿದ ಯುವಕರು! ವಿಡಿಯೋ ನೋಡಿ
ಫ್ಲಿಪ್​ಕಾರ್ಟ್ ಬಿಗ್ ಬಿಲಿಯನ್ ಡೇ ಆಫರ್ ಸೇಲ್ 26ಕ್ಕೆ ಸ್ಟಾರ್ಟ್​!
ಫ್ಲಿಪ್​ಕಾರ್ಟ್ ಬಿಗ್ ಬಿಲಿಯನ್ ಡೇ ಆಫರ್ ಸೇಲ್ 26ಕ್ಕೆ ಸ್ಟಾರ್ಟ್​!
CM Siddaramaiah Press Meet Live: ಸಿಎಂ ಸಿದ್ದರಾಮಯ್ಯ ಸುದ್ದಿಗೋಷ್ಠಿ
CM Siddaramaiah Press Meet Live: ಸಿಎಂ ಸಿದ್ದರಾಮಯ್ಯ ಸುದ್ದಿಗೋಷ್ಠಿ
ಬೆಂಗಳೂರಿನ ಅನೇಕ ಕೆರೆಗಳಲ್ಲಿ ಕರಗದೇ ತೇಲುತ್ತಿವೆ ಗಣೇಶ ಮೂರ್ತಿಗಳು
ಬೆಂಗಳೂರಿನ ಅನೇಕ ಕೆರೆಗಳಲ್ಲಿ ಕರಗದೇ ತೇಲುತ್ತಿವೆ ಗಣೇಶ ಮೂರ್ತಿಗಳು
‘ಯುಐ’ ಕುರಿತು ಉಪೇಂದ್ರ ವಿಶೇಷ ಸುದ್ದಿಗೋಷ್ಠಿ; ಇಲ್ಲಿದೆ ಲೈವ್ ವಿಡಿಯೋ
‘ಯುಐ’ ಕುರಿತು ಉಪೇಂದ್ರ ವಿಶೇಷ ಸುದ್ದಿಗೋಷ್ಠಿ; ಇಲ್ಲಿದೆ ಲೈವ್ ವಿಡಿಯೋ
ಮೆಡಿಕಲ್​ಗಳಲ್ಲೂ ಸಿಂಥೆಟಿಕ್ ಡ್ರಗ್ಸ್: ಗೃಹ ಸಚಿವ ಪರಮೇಶ್ವರ್ ಹೇಳಿದ್ದೇನು?
ಮೆಡಿಕಲ್​ಗಳಲ್ಲೂ ಸಿಂಥೆಟಿಕ್ ಡ್ರಗ್ಸ್: ಗೃಹ ಸಚಿವ ಪರಮೇಶ್ವರ್ ಹೇಳಿದ್ದೇನು?
VIDEO: ಎಲ್ಲಾ ಮಸಾಲೆಗೆ ವಿರಾಟ್ ಕೊಹ್ಲಿ-ಗೌತಮ್ ಗಂಭೀರ್ ಬ್ರೇಕ್..!
VIDEO: ಎಲ್ಲಾ ಮಸಾಲೆಗೆ ವಿರಾಟ್ ಕೊಹ್ಲಿ-ಗೌತಮ್ ಗಂಭೀರ್ ಬ್ರೇಕ್..!
ಜನ್ಮದಿನದಂದು ಹೇಗಿತ್ತು ನೋಡಿ ಉಪೇಂದ್ರ ಮನೆ ಮುಂದೆ ಫ್ಯಾನ್ಸ್​ ಸಂಭ್ರಮ
ಜನ್ಮದಿನದಂದು ಹೇಗಿತ್ತು ನೋಡಿ ಉಪೇಂದ್ರ ಮನೆ ಮುಂದೆ ಫ್ಯಾನ್ಸ್​ ಸಂಭ್ರಮ