AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Haveri News: ಮಾಂಸಹಾರ ತ್ಯಜಿಸಿದ ಮುಸ್ಲಿಂ ಬಾಂಧವರು, ಸಿಹಿ ತಿಂದು ಬಕ್ರಿದ್ ಹಬ್ಬ ಆಚರಣೆ

ಒಂದೇ ತಿಂಗಳಲ್ಲಿ ಗ್ರಾಮದ ಐವರು ಯುವಕರು ಮೃತಪಟ್ಟ ಹಿನ್ನೆಲೆ ಧರ್ಮಾತೀತವಾಗಿ 12 ದಿನ ಮಾಂಸಹಾರ ತ್ಯಜಿಸಿ ಗ್ರಾಮ ದೇವತೆಗೆ ವಿಶೇಷ ಪೂಜೆ ಸಲ್ಲಿಸಲು ಗ್ರಾಮಸ್ಥರು ನಿರ್ಣಯಿಸಿದ್ದರು. ಹಾಗಾಗಿ ಇಂದು ಹಾವೇರಿ ಜಿಲ್ಲೆಯ ಹಾನಗಲ್ ತಾಲೂಕಿನ ಬಾಳಂಬಿಡ ಗ್ರಾಮದಲ್ಲಿ ಮಾಂಸಹಾರ ತ್ಯಜಿಸಿ ಬಕ್ರೀದ್​ ಹಬ್ಬ ಆಚರಣೆ ಮಾಡಲಾಗಿದೆ.

Haveri News: ಮಾಂಸಹಾರ ತ್ಯಜಿಸಿದ ಮುಸ್ಲಿಂ ಬಾಂಧವರು, ಸಿಹಿ ತಿಂದು ಬಕ್ರಿದ್ ಹಬ್ಬ ಆಚರಣೆ
ಬಾಳಂಬಿಡ ಗ್ರಾಮ
ಸೂರಜ್​, ಮಹಾವೀರ್​ ಉತ್ತರೆ
| Edited By: |

Updated on:Jun 29, 2023 | 8:29 PM

Share

ಹಾವೇರಿ: ಇಂದು ರಾಜ್ಯದೆಲ್ಲೆಡೆ ಬಕ್ರೀದ್ (Bakrid) ಹಬ್ಬದ ಸಂಭ್ರಮ. ಈ ಹಬ್ಬದಂದು ಮುಸ್ಲಿಂ ಬಾಂಧವರು ಮಾಂಸಹಾರ ಮಾಡಿ ಸೇವಿಸುತ್ತಾರೆ. ಆದರೆ ಜಿಲ್ಲೆಯ ಹಾನಗಲ್ ತಾಲೂಕಿನ ಬಾಳಂಬಿಡ ಗ್ರಾಮದಲ್ಲಿ ಮಾತ್ರ ಈ ವರ್ಷ ಮಾಂಸಹಾರ ತ್ಯಜಿಸಿ ಬಕ್ರೀದ್​ ಹಬ್ಬ ಆಚರಣೆ ಮಾಡಲಾಗಿದೆ. ಗ್ರಾಮಸ್ಥರ ನಿರ್ಣಯದಂತೆ ಮಾಂಸಹಾರ ತ್ಯಜಿಸಿ ಸಿಹಿ ತಿಂದು ಮುಸ್ಲಿಂ ಬಾಂಧವರು ಬಕ್ರೀದ್​​ ಹಬ್ಬವನ್ನು ಆಚರಿಸಿದ್ದಾರೆ.

ಒಂದೇ ತಿಂಗಳಲ್ಲಿ ಗ್ರಾಮದ ಐವರು ಯುವಕರು ಮೃತಪಟ್ಟ ಹಿನ್ನೆಲೆ ಧರ್ಮಾತೀತವಾಗಿ 12 ದಿನ ಮಾಂಸಹಾರ ತ್ಯಜಿಸಿ ಗ್ರಾಮ ದೇವತೆಗೆ ವಿಶೇಷ ಪೂಜೆ ಸಲ್ಲಿಸಲು ಗ್ರಾಮಸ್ಥರು ನಿರ್ಣಯಿಸಿದ್ದರು. ಹಾಗಾಗಿ ಕಳೆದ 10 ದಿನಗಳಿಂದ ಮಾಂಸಹಾರ ತ್ಯಜಿಸಿದ್ದಾರೆ. ಬಕ್ರೀದ್ ಹಬ್ಬವಾದ ಇಂದು ಸಿಹಿ ತಿಂದು ಸರಳವಾಗಿ ಮುಸ್ಲಿಂ ಬಾಂಧವರು ಆಚರಿಸಿದ್ದಾರೆ.

ಇದನ್ನೂ ಓದಿ: ಸಿದ್ದರಾಮಯ್ಯ ನಿವಾಸಕ್ಕೆ ಬೆನ್ಜ್ ಕಾರಿನಲ್ಲಿ ಬಂತು ಬಕ್ರೀದ್ ಬಿರಿಯಾನಿ

ನಮಾಜ್ ಮಾಡುವ ಜಾಗದಲ್ಲೇ ಯುವಕರ ಬಡಿದಾಟ

ಬಕ್ರೀದ್ ಹಬ್ಬದ ಹಿನ್ನೆಲೆ ಪ್ರಾರ್ಥನೆ ಮಾಡುವ ಸ್ಥಳದಲ್ಲಿ ಲೆಕ್ಕಪತ್ರ ನಿರ್ವಹಣೆ ವಿಚಾರವಾಗಿ ಯುವಕರು ಬಡಿದಾಡಿಕೊಂಡಿರುವಂತಹ ಘಟನೆ ಹಾವೇರಿ ಜಿಲ್ಲೆಯ ರಟ್ಟಿಹಳ್ಳಿ ಈದ್ಗಾ ಮೈದಾನದಲ್ಲಿ ನಡೆದಿದೆ. ಈದ್ಗಾ ಮೈದಾನದ ನಿರ್ವಹಣೆಗಾಗಿ ವಂತಿಕೆ ಸಂಗ್ರಹ ವೇಳೆ ಮಾತಿಗೆ ಮಾತು ಬೆಳೆದು ಮುಖಂಡರು ಕೈ ಕೈ ಮಿಲಾಯಿಸಿದ್ದಾರೆ.

ಇದನ್ನೂ ಓದಿ: ಗಾಡಿ ತೊಳೆದು ಬರುವುದರೊಳಗೆ ಪತ್ನಿ, ಮಗಳು ಮಾಯ: ಬ್ರಕೀದ್​ ದಿನವೇ ಅಫ್ತರ್ ಹುಸೇನ್​ಗೆ ಶಾಕ್

ಸಾಮೂಹಿಕ ಪ್ರಾರ್ಥನೆ ಮುಗಿದ ನಂತರ ಮುಖಂಡರು ಗಲಾಟೆ ಮಾಡಿಕೊಂಡಿದ್ದು, ಮುಸ್ತಾಫ್ ಅಹ್ಮದ್ ಖಾಜಿಗೆ ಗಾಯಗಳಾಗಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಸ್ಥಳಕ್ಕೆ ಆಗಮಿಸಿದ ರಟ್ಟಿಹಳ್ಳಿ ಪೊಲೀಸರು ಪರಿಸ್ಥಿತಿ ಶಾಂತಗೊಳಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 8:28 pm, Thu, 29 June 23

ಯಾವುದೇ ಕಾರ್ಯಗಳಲ್ಲಿ ಶಂಕುಸ್ಥಾಪನೆ ಮಾಡುವುದು ಯಾಕೆ?
ಯಾವುದೇ ಕಾರ್ಯಗಳಲ್ಲಿ ಶಂಕುಸ್ಥಾಪನೆ ಮಾಡುವುದು ಯಾಕೆ?
ಇಂದು ಈ ರಾಶಿಯವರಿಗೆ ಖರ್ಚು ಜಾಸ್ತಿ
ಇಂದು ಈ ರಾಶಿಯವರಿಗೆ ಖರ್ಚು ಜಾಸ್ತಿ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ