AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ 1 ದಿನದ ವೇತನ ನೀಡುವಂತೆ ಜಿಲ್ಲಾ ಪೊಲೀಸ್​ ಇಲಾಖೆಗೆ ಮಹೇಶ್ ಜೋಶಿ ಪತ್ರ

ಹಾವೇರಿಯಲ್ಲಿ ನಡೆಯುವ 86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ1 ದಿನದ ವೇತನವನ್ನು ನೀಡುವಂತೆ ಕಸಾಪ ಅಧ್ಯಕ್ಷ ನಾಡೋಜ ಮಹೇಶ ಜೋಶಿ ಜಿಲ್ಲಾ ಪೊಲೀಸ್​​ ಇಲಾಖೆಗೆ ಮನವಿ ಮಾಡಿದ್ದಾರೆ.

86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ 1 ದಿನದ ವೇತನ ನೀಡುವಂತೆ ಜಿಲ್ಲಾ ಪೊಲೀಸ್​ ಇಲಾಖೆಗೆ ಮಹೇಶ್ ಜೋಶಿ ಪತ್ರ
ನಾಡೋಜ ಮಹೇಶ್​ ಜೋಶಿ
TV9 Web
| Edited By: |

Updated on:Dec 11, 2022 | 7:57 PM

Share

ಹಾವೇರಿ: ಜನವರಿ 6, 7 ಹಾಗೂ 8 ರಂದು ದಾಸಶ್ರೇಷ್ಠ ಕನಕದಾಸರ ನಾಡು ಹಾವೇರಿಯಲ್ಲಿ “ಸಾಮರಸ್ಯದ ಭಾವ ಕನ್ನಡದ ಜೀವ” ಎಂಬ ಧ್ಯೆಯದೊಂದಿಗೆ 86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ (Akhila Bharata sahitya sammelana) ನಡೆಯಲಿದೆ. ಈ ಸಮ್ಮೇಳನಕ್ಕೆ ಜಿಲ್ಲಾ ಪೊಲೀಸ್ ಸಿಬ್ಬಂದಿಯ ಒಂದು ದಿನದ ವೇತನವನ್ನು ನೀಡುವಂತೆ ಕಸಾಪ ಅಧ್ಯಕ್ಷ ನಾಡೋಜ ಮಹೇಶ ಜೋಶಿ (Nadoja Mahesh joshi) ಎಸ್‌ಪಿ ಹನಮಂತರಾಯ ಅವರಿಗೆ ಪತ್ರ ಬರೆದು ಮನವಿ ಮಾಡಿದ್ದಾರೆ. ಸಮ್ಮೇಳನದ SBI ಖಾತೆ ಸಂಖ್ಯೆ 41212784580 ಗೆ ಜಮೆ ಮಾಡಲು ಕೋರಿದ್ದಾರೆ.

ಅಧಿಕೃತ ಬಿಡುಗಡೆಗೆ ಮುನ್ನವೇ ಅಖಿಲ ಭಾರತ 86ನೇ ಕನ್ನಡ ಸಾಹಿತ್ಯ ಸಮ್ಮೇಳನದ ಆಮಂತ್ರಣ ಪತ್ರಿಕೆ ವೈರಲ್

ಅಖಿಲ ಭಾರತ 86ನೇ ಕನ್ನಡ ಸಾಹಿತ್ಯ ಸಮ್ಮೇಳನ(Akhila bharata kannada sahitya sammelana) ದ ಆಮಂತ್ರಣ ಪತ್ರಿಕೆ ವೈರಲ್ ಆಗಿದೆ.  ಸಮ್ಮೇಳನದ ಆಮಂತ್ರಣ ಪತ್ರಿಕೆಯು ಅಧಿಕೃತ ಬಿಡುಗಡೆ ಮುನ್ನವೇ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ. ಕನ್ನಡದ ಅತಿ ದೊಡ್ಡ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಸೋರಿಕೆ ಆಗಿದ್ದರು ಕನ್ನಡ ಸಾಹಿತ್ಯ ಪರಿಷತ್ತು ಮೌನ‌ ವಹಿಸಿದೆ.

ಈಗಾಗಲೇ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಭರ್ಜರಿ ಸಿದ್ಧತೆ ನಡೆಯುತ್ತಿದೆ. ಯಾಲಕ್ಕಿ ಕಂಪಿನ ನಾಡು ಹಾವೇರಿಯಲ್ಲಿ ಜನೇವರಿ 6,7 ಮತ್ತು 8ರಂದು ಮೂರು ದಿನಗಳ ಕಾಲ ನಡೆಯಲಿರುವ 86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ನಡೆಸುವುದಕ್ಕೆ ಹಾವೇರಿ ನಗರದ ಅಜ್ಜಯ್ಯನ ಗದ್ದುಗೆ ಬಳಿ ಜಾಗ ಅಂತಿಮಗೊಳಿಸಲಾಗಿದೆ. ಸಮ್ಮೇಳನಕ್ಕೆ ಇನ್ನೂ ಕೆಲವು ದಿನಗಳು ಬಾಕಿ ಉಳಿದಿದೆ. ಸಮ್ಮೇಳನ ನಡೆಸುವ ಜಾಗದಲ್ಲಿ ಈಗಾಗಲೇ ಸಿದ್ಧತಾ ಕಾರ್ಯಗಳು ಶುರುವಾಗಿದೆ. ಸಮ್ಮೇಳನ ನಡೆಯುತ್ತಿರುವ ಹಾವೇರಿ ಹಲವು ಅಪರೂಪಗಳಿಗೆ ಸಾಕ್ಷಿಯಾಗಿದೆ. ಸಿಎಂ ಬಸವರಾಜ ಬೊಮ್ಮಾಯಿ ಹಾಗೂ ಕನ್ನಡ ಸಾಹಿತ್ಯ ಪರಿಷತ್ ರಾಜ್ಯಾಧ್ಯಕ್ಷ ಡಾ.ಮಹೇಶ ಜೋಷಿ ಹಾವೇರಿ ಜಿಲ್ಲೆಯವರು ಹೀಗಾಗಿ ಸಮ್ಮೇಳನದ ಜೊತೆಜೊತೆಗೆ ಹಾವೇರಿ ಕೂಡ ಸಾಕಷ್ಟು ಅಭಿವೃದ್ಧಿ ಆಗುತ್ತದೆ ಎನ್ನುವುದು ಸಾಹಿತಿಗಳು ಹಾಗೂ ಜನರ ನಿರೀಕ್ಷೆ ಆಗಿದೆ.

ಇದನ್ನೂ ಓದಿ: 86ನೇ‌ ಕನ್ನಡ ಸಾಹಿತ್ಯ ಸಮ್ಮೇಳನದ ಪ್ರತಿನಿಧಿಗಳಾಗಲು ಆ್ಯಪ್ ಮೂಲಕ ನೊಂದಣಿ ಮಾಡ್ಕೊಳ್ಳಿ

ಸಮ್ಮೇಳನದ ಪೂರ್ವಭಾವಿಯಾಗಿ ಕೆಲವು ದಿನಗಳ ಹಿಂದೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರ ನೇತೃತ್ವದಲ್ಲಿ ಅಧಿಕಾರಿಗಳು, ಜನಪ್ರತಿನಿಧಿಗಳು, ಸಂಘಸಂಸ್ಥೆಗಳು ಹಾಗೂ ವಿವಿಧ ಸಂಘಟನೆಗಳ ಜೊತೆ ಸಭೆಗಳನ್ನು ನಡೆಸಲಾಗಿದೆ. ಈವರೆಗೆ ನಡೆದಿರುವ 85 ಸಮ್ಮೇಳನಗಳಿಗಿಂತಲೂ ವಿಭಿನ್ನವಾಗಿ ಮತ್ತು ವಿಶೇಷವಾಗಿ ಸಮ್ಮೇಳನ ನಡೆಸಲು ನಿರ್ಣಯಿಸಲಾಗಿದೆ ಈ ಮಧ್ಯೆ ಅಧಿಕೃತ ಬಿಡುಗಡೆಯಾಗಬೇಕಿದ್ದ ಆಮಂತ್ರಣ ಪತ್ರಿಕೆ ಈಗಾಗಲೇ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ.

ಇನ್ನಷ್ಟು ರಾಜ್ಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 7:49 pm, Sun, 11 December 22

ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
‘45’ ಶೂಟ್​​ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್
‘45’ ಶೂಟ್​​ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್
2026ರಲ್ಲಿ ಕಟಕ ರಾಶಿಯವರ ವರ್ಷ ಭವಿಷ್ಯ ಹೇಗಿದೆ ನೋಡಿ
2026ರಲ್ಲಿ ಕಟಕ ರಾಶಿಯವರ ವರ್ಷ ಭವಿಷ್ಯ ಹೇಗಿದೆ ನೋಡಿ
ಅಶ್ವಗಂಧ ಹಾಗೂ ಸಾಂಪ್ರದಾಯಿಕ ಔಷಧಿಗಳ ಬಗ್ಗೆ ಪ್ರಧಾನಿ ಮೋದಿ ಹೇಳಿದ್ದೇನು?
ಅಶ್ವಗಂಧ ಹಾಗೂ ಸಾಂಪ್ರದಾಯಿಕ ಔಷಧಿಗಳ ಬಗ್ಗೆ ಪ್ರಧಾನಿ ಮೋದಿ ಹೇಳಿದ್ದೇನು?
ಡಿಕೆಶಿ​ಗೆ ಸಿಕ್ತಾ ಸಿಎಂ ಆಗುವ ಸೂಚನೆ? ಬಲಗಡೆ ಹೂ ಕೊಟ್ಟ ಗೋಕರ್ಣ ಮಹಾಗಣಪತಿ
ಡಿಕೆಶಿ​ಗೆ ಸಿಕ್ತಾ ಸಿಎಂ ಆಗುವ ಸೂಚನೆ? ಬಲಗಡೆ ಹೂ ಕೊಟ್ಟ ಗೋಕರ್ಣ ಮಹಾಗಣಪತಿ
ತೈವಾನ್​ನ ತೈಪೆ ರೈಲು ನಿಲ್ದಾಣದ ಬಳಿ ವ್ಯಕ್ತಿಯಿಂದ ಮನಬಂದಂತೆ ಚಾಕು ದಾಳಿ
ತೈವಾನ್​ನ ತೈಪೆ ರೈಲು ನಿಲ್ದಾಣದ ಬಳಿ ವ್ಯಕ್ತಿಯಿಂದ ಮನಬಂದಂತೆ ಚಾಕು ದಾಳಿ
VIDEO: ಸಿಕ್ಸ್ ಹಿಟ್... ಕ್ಯಾಮೆರಾಮ್ಯಾನ್ ಕ್ಷಮೆಯಾಚಿಸಿದ ಹಾರ್ದಿಕ್ ಪಾಂಡ್ಯ
VIDEO: ಸಿಕ್ಸ್ ಹಿಟ್... ಕ್ಯಾಮೆರಾಮ್ಯಾನ್ ಕ್ಷಮೆಯಾಚಿಸಿದ ಹಾರ್ದಿಕ್ ಪಾಂಡ್ಯ