AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ 1 ದಿನದ ವೇತನ ನೀಡುವಂತೆ ಜಿಲ್ಲಾ ಪೊಲೀಸ್​ ಇಲಾಖೆಗೆ ಮಹೇಶ್ ಜೋಶಿ ಪತ್ರ

ಹಾವೇರಿಯಲ್ಲಿ ನಡೆಯುವ 86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ1 ದಿನದ ವೇತನವನ್ನು ನೀಡುವಂತೆ ಕಸಾಪ ಅಧ್ಯಕ್ಷ ನಾಡೋಜ ಮಹೇಶ ಜೋಶಿ ಜಿಲ್ಲಾ ಪೊಲೀಸ್​​ ಇಲಾಖೆಗೆ ಮನವಿ ಮಾಡಿದ್ದಾರೆ.

86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ 1 ದಿನದ ವೇತನ ನೀಡುವಂತೆ ಜಿಲ್ಲಾ ಪೊಲೀಸ್​ ಇಲಾಖೆಗೆ ಮಹೇಶ್ ಜೋಶಿ ಪತ್ರ
ನಾಡೋಜ ಮಹೇಶ್​ ಜೋಶಿ
TV9 Web
| Edited By: |

Updated on:Dec 11, 2022 | 7:57 PM

Share

ಹಾವೇರಿ: ಜನವರಿ 6, 7 ಹಾಗೂ 8 ರಂದು ದಾಸಶ್ರೇಷ್ಠ ಕನಕದಾಸರ ನಾಡು ಹಾವೇರಿಯಲ್ಲಿ “ಸಾಮರಸ್ಯದ ಭಾವ ಕನ್ನಡದ ಜೀವ” ಎಂಬ ಧ್ಯೆಯದೊಂದಿಗೆ 86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ (Akhila Bharata sahitya sammelana) ನಡೆಯಲಿದೆ. ಈ ಸಮ್ಮೇಳನಕ್ಕೆ ಜಿಲ್ಲಾ ಪೊಲೀಸ್ ಸಿಬ್ಬಂದಿಯ ಒಂದು ದಿನದ ವೇತನವನ್ನು ನೀಡುವಂತೆ ಕಸಾಪ ಅಧ್ಯಕ್ಷ ನಾಡೋಜ ಮಹೇಶ ಜೋಶಿ (Nadoja Mahesh joshi) ಎಸ್‌ಪಿ ಹನಮಂತರಾಯ ಅವರಿಗೆ ಪತ್ರ ಬರೆದು ಮನವಿ ಮಾಡಿದ್ದಾರೆ. ಸಮ್ಮೇಳನದ SBI ಖಾತೆ ಸಂಖ್ಯೆ 41212784580 ಗೆ ಜಮೆ ಮಾಡಲು ಕೋರಿದ್ದಾರೆ.

ಅಧಿಕೃತ ಬಿಡುಗಡೆಗೆ ಮುನ್ನವೇ ಅಖಿಲ ಭಾರತ 86ನೇ ಕನ್ನಡ ಸಾಹಿತ್ಯ ಸಮ್ಮೇಳನದ ಆಮಂತ್ರಣ ಪತ್ರಿಕೆ ವೈರಲ್

ಅಖಿಲ ಭಾರತ 86ನೇ ಕನ್ನಡ ಸಾಹಿತ್ಯ ಸಮ್ಮೇಳನ(Akhila bharata kannada sahitya sammelana) ದ ಆಮಂತ್ರಣ ಪತ್ರಿಕೆ ವೈರಲ್ ಆಗಿದೆ.  ಸಮ್ಮೇಳನದ ಆಮಂತ್ರಣ ಪತ್ರಿಕೆಯು ಅಧಿಕೃತ ಬಿಡುಗಡೆ ಮುನ್ನವೇ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ. ಕನ್ನಡದ ಅತಿ ದೊಡ್ಡ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಸೋರಿಕೆ ಆಗಿದ್ದರು ಕನ್ನಡ ಸಾಹಿತ್ಯ ಪರಿಷತ್ತು ಮೌನ‌ ವಹಿಸಿದೆ.

ಈಗಾಗಲೇ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಭರ್ಜರಿ ಸಿದ್ಧತೆ ನಡೆಯುತ್ತಿದೆ. ಯಾಲಕ್ಕಿ ಕಂಪಿನ ನಾಡು ಹಾವೇರಿಯಲ್ಲಿ ಜನೇವರಿ 6,7 ಮತ್ತು 8ರಂದು ಮೂರು ದಿನಗಳ ಕಾಲ ನಡೆಯಲಿರುವ 86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ನಡೆಸುವುದಕ್ಕೆ ಹಾವೇರಿ ನಗರದ ಅಜ್ಜಯ್ಯನ ಗದ್ದುಗೆ ಬಳಿ ಜಾಗ ಅಂತಿಮಗೊಳಿಸಲಾಗಿದೆ. ಸಮ್ಮೇಳನಕ್ಕೆ ಇನ್ನೂ ಕೆಲವು ದಿನಗಳು ಬಾಕಿ ಉಳಿದಿದೆ. ಸಮ್ಮೇಳನ ನಡೆಸುವ ಜಾಗದಲ್ಲಿ ಈಗಾಗಲೇ ಸಿದ್ಧತಾ ಕಾರ್ಯಗಳು ಶುರುವಾಗಿದೆ. ಸಮ್ಮೇಳನ ನಡೆಯುತ್ತಿರುವ ಹಾವೇರಿ ಹಲವು ಅಪರೂಪಗಳಿಗೆ ಸಾಕ್ಷಿಯಾಗಿದೆ. ಸಿಎಂ ಬಸವರಾಜ ಬೊಮ್ಮಾಯಿ ಹಾಗೂ ಕನ್ನಡ ಸಾಹಿತ್ಯ ಪರಿಷತ್ ರಾಜ್ಯಾಧ್ಯಕ್ಷ ಡಾ.ಮಹೇಶ ಜೋಷಿ ಹಾವೇರಿ ಜಿಲ್ಲೆಯವರು ಹೀಗಾಗಿ ಸಮ್ಮೇಳನದ ಜೊತೆಜೊತೆಗೆ ಹಾವೇರಿ ಕೂಡ ಸಾಕಷ್ಟು ಅಭಿವೃದ್ಧಿ ಆಗುತ್ತದೆ ಎನ್ನುವುದು ಸಾಹಿತಿಗಳು ಹಾಗೂ ಜನರ ನಿರೀಕ್ಷೆ ಆಗಿದೆ.

ಇದನ್ನೂ ಓದಿ: 86ನೇ‌ ಕನ್ನಡ ಸಾಹಿತ್ಯ ಸಮ್ಮೇಳನದ ಪ್ರತಿನಿಧಿಗಳಾಗಲು ಆ್ಯಪ್ ಮೂಲಕ ನೊಂದಣಿ ಮಾಡ್ಕೊಳ್ಳಿ

ಸಮ್ಮೇಳನದ ಪೂರ್ವಭಾವಿಯಾಗಿ ಕೆಲವು ದಿನಗಳ ಹಿಂದೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರ ನೇತೃತ್ವದಲ್ಲಿ ಅಧಿಕಾರಿಗಳು, ಜನಪ್ರತಿನಿಧಿಗಳು, ಸಂಘಸಂಸ್ಥೆಗಳು ಹಾಗೂ ವಿವಿಧ ಸಂಘಟನೆಗಳ ಜೊತೆ ಸಭೆಗಳನ್ನು ನಡೆಸಲಾಗಿದೆ. ಈವರೆಗೆ ನಡೆದಿರುವ 85 ಸಮ್ಮೇಳನಗಳಿಗಿಂತಲೂ ವಿಭಿನ್ನವಾಗಿ ಮತ್ತು ವಿಶೇಷವಾಗಿ ಸಮ್ಮೇಳನ ನಡೆಸಲು ನಿರ್ಣಯಿಸಲಾಗಿದೆ ಈ ಮಧ್ಯೆ ಅಧಿಕೃತ ಬಿಡುಗಡೆಯಾಗಬೇಕಿದ್ದ ಆಮಂತ್ರಣ ಪತ್ರಿಕೆ ಈಗಾಗಲೇ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ.

ಇನ್ನಷ್ಟು ರಾಜ್ಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 7:49 pm, Sun, 11 December 22

Follow Us
ತುಳಸಿ ಕಟ್ಟೆ ಪ್ರದಕ್ಷಿಣೆ ಹಾಗೂ ಇದರ ಮಹತ್ವವೇನು ಗೊತ್ತಾ?
ತುಳಸಿ ಕಟ್ಟೆ ಪ್ರದಕ್ಷಿಣೆ ಹಾಗೂ ಇದರ ಮಹತ್ವವೇನು ಗೊತ್ತಾ?
ಇಂದು ಈ ರಾಶಿಯ ಪತಿ-ಪತ್ನಿಯರಲ್ಲಿ ಭಿನ್ನಾಭಿಪ್ರಾಯ!
ಇಂದು ಈ ರಾಶಿಯ ಪತಿ-ಪತ್ನಿಯರಲ್ಲಿ ಭಿನ್ನಾಭಿಪ್ರಾಯ!
ಮೋದಿ ನೇತೃತ್ವದಲ್ಲಿ ಮಹತ್ವದ ಸಭೆ:ನಾಗರಿಕರ ಹಿತರಕ್ಷಣೆ ಮೊದಲ ಆದ್ಯತೆ
ಮೋದಿ ನೇತೃತ್ವದಲ್ಲಿ ಮಹತ್ವದ ಸಭೆ:ನಾಗರಿಕರ ಹಿತರಕ್ಷಣೆ ಮೊದಲ ಆದ್ಯತೆ
ದಾವಣಗೆರೆ ದಕ್ಷಿಣ ಉಪಚುನಾವಣೆ: ಆರಂಭದಲ್ಲೇ ಕಾಂಗ್ರೆಸ್​​​ಗೆ ಮರ್ಮಾಘಾತ
ದಾವಣಗೆರೆ ದಕ್ಷಿಣ ಉಪಚುನಾವಣೆ: ಆರಂಭದಲ್ಲೇ ಕಾಂಗ್ರೆಸ್​​​ಗೆ ಮರ್ಮಾಘಾತ
ಹಬ್ಬಕ್ಕೆ ಹೋಗಿದ್ದ ಜನ ಬೆಂಗಳೂರಿಗೆ ವಾಪಸ್: ನೆಲಮಂಗಲ ಬಳಿ ಫುಲ್ ಟ್ರಾಫಿಕ್
ಹಬ್ಬಕ್ಕೆ ಹೋಗಿದ್ದ ಜನ ಬೆಂಗಳೂರಿಗೆ ವಾಪಸ್: ನೆಲಮಂಗಲ ಬಳಿ ಫುಲ್ ಟ್ರಾಫಿಕ್
3ನೇ ವ್ಯಕ್ತಿಯ ಹಸ್ತಕ್ಷೇಪದ ಬಗ್ಗೆ ಉಮೇಶ್‌ ಮೇಟಿ ತಂಗಿ ಮಹಾದೇವಿ ಹೇಳಿದ್ದೇನು
3ನೇ ವ್ಯಕ್ತಿಯ ಹಸ್ತಕ್ಷೇಪದ ಬಗ್ಗೆ ಉಮೇಶ್‌ ಮೇಟಿ ತಂಗಿ ಮಹಾದೇವಿ ಹೇಳಿದ್ದೇನು
ಸಲ್ಮಾನ್ ಖಾನ್ ಮನೆ ಎದುರು ಅಭಿಮಾನಿಗಳ ದಂಡು: ಶುಭ ಕೋರಿದ ಸಲೀಂ ಖಾನ್
ಸಲ್ಮಾನ್ ಖಾನ್ ಮನೆ ಎದುರು ಅಭಿಮಾನಿಗಳ ದಂಡು: ಶುಭ ಕೋರಿದ ಸಲೀಂ ಖಾನ್
ದಾವಣಗೆರೆ ಬೈ ಎಲೆಕ್ಷನ್: ಕಾಂಗ್ರೆಸ್​​ ವಿರುದ್ಧವೇ ತೊಡೆತಟ್ಟಿದ ಪೈಲ್ವಾನ್
ದಾವಣಗೆರೆ ಬೈ ಎಲೆಕ್ಷನ್: ಕಾಂಗ್ರೆಸ್​​ ವಿರುದ್ಧವೇ ತೊಡೆತಟ್ಟಿದ ಪೈಲ್ವಾನ್
ಸ್ವಚ್ಛತಾ ಅಭಿಯಾನದಲ್ಲಿ ಭಾಗಿಯಾದ ಖ್ಯಾತ ನಟ ಅನಿರುದ್ಧ ಜತ್ಕರ್
ಸ್ವಚ್ಛತಾ ಅಭಿಯಾನದಲ್ಲಿ ಭಾಗಿಯಾದ ಖ್ಯಾತ ನಟ ಅನಿರುದ್ಧ ಜತ್ಕರ್
ಕಾಂಗ್ರೆಸ್​​ ಟಿಕೆಟ್​​ ಸಿಕ್ಕ ಬೆನ್ನಲ್ಲೇ ತಂದೆ ನೆನೆದು ಉಮೇಶ್ ಮೇಟಿ ಭಾವುಕ
ಕಾಂಗ್ರೆಸ್​​ ಟಿಕೆಟ್​​ ಸಿಕ್ಕ ಬೆನ್ನಲ್ಲೇ ತಂದೆ ನೆನೆದು ಉಮೇಶ್ ಮೇಟಿ ಭಾವುಕ