AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Naveen Janagoudar: ದಾವಣಗೆರೆ ನಗರದ ಎಸ್ಎಸ್​ ಮೆಡಿಕಲ್ ಕಾಲೇಜಿನ ಅಂಗರಚನಾ ಶಾಸ್ತ್ರ ವಿಭಾಗದಲ್ಲಿ ನವೀನ್ ಪಾರ್ಥಿವ ಶರೀರದ ದರ್ಶನಕ್ಕೆ ವ್ಯವಸ್ಥೆ

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೇರಿದಂತೆ ಹಲವರು ಚಳಗೇರಿಗೆ ಭೇಟಿ ನೀಡಿ ನವೀನ್ ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆಯಲಿದ್ದಾರೆ. ಮನೆಯಲ್ಲಿಯೇ ವೀರಶೈವ ವಿಧಿವಿಧಾನದಂತೆ ಪೂಜೆ ಸಲ್ಲಿಸಿದ ನಂತರ ಸಾರ್ವಜನಿಕ ದರ್ಶನಕ್ಕೆ ಅವಕಾಶ ಕಲ್ಪಿಸಲಾಗುವುದು ನವೀನ್ ಅವರ ತಾಯಿ ವಿಜಯಲಕ್ಷ್ಮೀ ಮತ್ತು ತಂದೆ ಶೇಖರಪ್ಪ ತಿಳಿಸಿದ್ದಾರೆ.

Naveen Janagoudar: ದಾವಣಗೆರೆ ನಗರದ ಎಸ್ಎಸ್​ ಮೆಡಿಕಲ್ ಕಾಲೇಜಿನ ಅಂಗರಚನಾ ಶಾಸ್ತ್ರ ವಿಭಾಗದಲ್ಲಿ ನವೀನ್ ಪಾರ್ಥಿವ ಶರೀರದ ದರ್ಶನಕ್ಕೆ ವ್ಯವಸ್ಥೆ
ಜನರು ನವೀನ್ ಮೃತದೇಹದ ಅಂತಿಮ ದರ್ಶನ ಪಡೆಯುತ್ತಿದ್ದಾರೆ.
TV9 Web
| Updated By: preethi shettigar|

Updated on:Mar 21, 2022 | 6:53 PM

Share

ಬೆಂಗಳೂರು / ಹಾವೇರಿ: ಉಕ್ರೇನ್​ನಲ್ಲಿ ಮೃತಪಟ್ಟ ರಾಣೆಬೆನ್ನೂರು ತಾಲ್ಲೂಕು ಚಳಗೇರಿ ಗ್ರಾಮದ ವಿದ್ಯಾರ್ಥಿ ನವೀನ್ ಶೇಖರಪ್ಪ ಗ್ಯಾನಗೌಡರ್ ಅವರ ಪಾರ್ಥಿವ ಶರೀರದ ಅಂತಿಮ ನಮನಕ್ಕೆ ಸ್ವಗ್ರಾಮದಲ್ಲಿ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ. ಗಣ್ಯರು ಭೇಟಿ ನೀಡುವ ಸಾಧ್ಯತೆಯಿರುವ ಹಿನ್ನೆಲೆಯಲ್ಲಿ ಸುಮಾರು 300 ಪೊಲೀಸ್ ಸಿಬ್ಬಂದಿಯನ್ನು ಬಂದೋಬಸ್ತ್​ಗೆ ನಿಯೋಜಿಸಲಾಗಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೇರಿದಂತೆ ಹಲವರು ಚಳಗೇರಿಗೆ ಭೇಟಿ ನೀಡಿ ನವೀನ್ ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆಯಲಿದ್ದಾರೆ. ಮನೆಯಲ್ಲಿಯೇ ವೀರಶೈವ ವಿಧಿವಿಧಾನದಂತೆ ಪೂಜೆ ಸಲ್ಲಿಸಿದ ನಂತರ ಸಾರ್ವಜನಿಕ ದರ್ಶನಕ್ಕೆ ಅವಕಾಶ ಕಲ್ಪಿಸಲಾಗುವುದು ನವೀನ್ ಅವರ ತಾಯಿ ವಿಜಯಲಕ್ಷ್ಮೀ ಮತ್ತು ತಂದೆ ಶೇಖರಪ್ಪ ತಿಳಿಸಿದ್ದಾರೆ.

Published On - 8:39 am, Mon, 21 March 22