AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

20 ದಿನಗಳ ಬಳಿಕ ಮಗನ ಮುಖ ನೋಡುವ ಅವಕಾಶ ಸಿಕ್ಕಿದೆ: ನವೀನ್ ನೆನೆದು ಭಾವುಕರಾದ ತಾಯಿ ವಿಜಯಲಕ್ಷ್ಮೀ

‘ಮಗನನ್ನು ನೆನೆದು ಭಾವುಕರಾದ ನವೀನ್ ತಾಯಿ ವಿಜಯಲಕ್ಷ್ಮೀ, ನನ್ನ ಪುತ್ರ ನವೀನ್ ವೈದ್ಯನಾಗಿ ಬರುತ್ತಾನೆಂದು ಕನಸು ಕಂಡಿದ್ದೆ. ಆದರೆ ಮಗ ಜೀವಂತವಾಗಿ ವಾಪಸ್ ಬರಲಿಲ್ಲ’ ಎಂದರು

20 ದಿನಗಳ ಬಳಿಕ ಮಗನ ಮುಖ ನೋಡುವ ಅವಕಾಶ ಸಿಕ್ಕಿದೆ: ನವೀನ್ ನೆನೆದು ಭಾವುಕರಾದ ತಾಯಿ ವಿಜಯಲಕ್ಷ್ಮೀ
ನವೀನ್ ತಾಯಿ ವಿಜಯಲಕ್ಷ್ಮಿ
TV9 Web
| Edited By: |

Updated on: Mar 21, 2022 | 8:15 AM

Share

ಹಾವೇರಿ: ಉಕ್ರೇನ್‌ನಲ್ಲಿ ಮೃತಪಟ್ಟಿದ್ದ ರಾಣೆಬೆನ್ನೂರು ತಾಲ್ಲೂಕು ಚಳಗೇರಿ ಗ್ರಾಮದ ವಿದ್ಯಾರ್ಥಿ ನವೀನ್ ಗ್ಯಾನಗೌಡರ್ ಮೃತದೇಹ ಸ್ವಗ್ರಾಮಕ್ಕೆ ತಲುಪಿದೆ. ಮಗನನ್ನು ನೆನೆದು ಭಾವುಕರಾದ ನವೀನ್ ತಾಯಿ ವಿಜಯಲಕ್ಷ್ಮೀ, ನನ್ನ ಪುತ್ರ ನವೀನ್ ವೈದ್ಯನಾಗಿ ಬರುತ್ತಾನೆಂದು ಕನಸು ಕಂಡಿದ್ದೆ. ಆದರೆ ಮಗ ಜೀವಂತವಾಗಿ ವಾಪಸ್ ಬರಲಿಲ್ಲ’ ಎಂದರು. 20 ದಿನಗಳ ಬಳಿಕ ಮಗನ ಮುಖ ನೋಡುವ ಅವಕಾಶ ಸಿಕ್ಕಿದೆ. ಮಗನ ಮುಖ ನೋಡುವ ಅವಕಾಶ ಸಿಕ್ಕಿದ್ದಕ್ಕೆ ಸ್ವಲ್ಪ ನೆಮ್ಮದಿ ಎನಿಸಿತು ಎಂದರು.

ಸ್ವಗ್ರಾಮದ ಮಗನ ಫೋಟೊ ಎದುರು ಕುಳಿತಿದ್ದ ಅವರು, ಮಗನನ್ನ ನೆನೆದು ಭಾವುಕರಾದರು. ಮಗನ ಮೃತದೇಹ‌ ನಿವಾಸಕ್ಕೆ ಆಗಮಿಸಿದ ಮೇಲೆ ವೀರಶೈವ ಸಂಪ್ರದಾಯದಂತೆ ಪೂಜೆ ಸಲ್ಲಿಸಲಾಗುತ್ತದೆ ಎಂದರು.

ನವೀನ್ ಅವರ ತಂದೆ ಶೇಖರ್ ಗೌಡ ಮಾತನಾಡಿ, ಬೆಳಿಗ್ಗೆ ಒಂಬತ್ತು ಗಂಟೆಗೆ ನವೀನ ಪಾರ್ಥೀವ ಶರೀರ ನಿವಾಸಕ್ಕೆ ಬರಲಿದೆ. ವೀರಶೈವ ಸಂಪ್ರದಾಯದಂತೆ ಸ್ಥಳೀಯ ಸ್ವಾಮಿಗಳ‌ ನೇತೃತ್ವದಲ್ಲಿ ಪಾರ್ಥೀವ ಶರೀರಕ್ಕೆ ಪೂಜೆ ಸಲ್ಲಿಸಲಾಗುತ್ತದೆ. ಪೂಜೆಯ ನಂತರ ಪಾರ್ಥಿವ ಶರೀರವನ್ನ ನಿವಾಸದ ಮುಂದೆ ಸಾರ್ವಜನಿಕ ದರ್ಶನಕ್ಕೆ ಇರಿಸಲಾಗುತ್ತದೆ. ಸಾರ್ವಜನಿಕ ದರ್ಶನದ ನಂತರ ಗ್ರಾಮದಲ್ಲಿ ನವೀನ ಪಾರ್ಥಿವ ಶರೀರದ ಮೆರವಣಿಗೆ ನಡೆಯಲಿದೆ.

ಪೂಜೆ, ಸಾರ್ವಜನಿಕ ದರ್ಶನ, ಮೆರವಣಿಗೆ ಮುಗಿದ ಮೇಲೆ ಶರೀರವನ್ನು ದಾವಣಗೆರೆಯ ಎಸ್.ಎಸ್. ಮೆಡಿಕಲ್ ಕಾಲೇಜಿಗೆ ದಾನ ಮಾಡಲಾಗುತ್ತದೆ.

ಇದನ್ನೂ ಓದಿ: ಉಕ್ರೇನ್​ನಿಂದ ತಾಯ್ನಾಡಿಗೆ ಬಂದ ನವೀನ್ ಮೃತದೇಹ: ವಿಮಾನ ನಿಲ್ದಾಣದಲ್ಲಿ ಗೌರವ ಸಲ್ಲಿಸಿದ ಸಿಎಂ

ಇದನ್ನೂ ಓದಿ: ನಾನು ಸಾಯುವರೆಗೆ ಅವನು ನನ್ನಲ್ಲಿ ಬದುಕಿರುತ್ತಾನೆ ಎಂದರು ನವೀನ್ ಶೇಖರಪ್ಪ ಗ್ಯಾನಗೌಡರ್ ತಾಯಿ

ಸ್ಟ್ರೋಕ್ ಗೆ ಒಳಗಾದವರನ್ನು ಎಷ್ಟು ಸಮಯದೊಳಗೆ ಆಸ್ಪತ್ರೆಗೆ ದಾಖಲಿಸಬೇಕು?
ಸ್ಟ್ರೋಕ್ ಗೆ ಒಳಗಾದವರನ್ನು ಎಷ್ಟು ಸಮಯದೊಳಗೆ ಆಸ್ಪತ್ರೆಗೆ ದಾಖಲಿಸಬೇಕು?
ಇಂದೋರ್‌ನಲ್ಲಿ ಕಲುಷಿತ ನೀರು ಕುಡಿದು 7 ಜನ ಸಾವು; ಆಸ್ಪತ್ರೆಗೆ ಸಿಎಂ ಭೇಟಿ
ಇಂದೋರ್‌ನಲ್ಲಿ ಕಲುಷಿತ ನೀರು ಕುಡಿದು 7 ಜನ ಸಾವು; ಆಸ್ಪತ್ರೆಗೆ ಸಿಎಂ ಭೇಟಿ
ಬಸ್ಸಿನಲ್ಲಿ ನಿದ್ದೆಗೆ ಜಾರಿದ್ದ ವೇಳೆ ಯುವತಿಯ ಎದೆ ಮೇಲೆ ಕೈ ಇಟ್ಟ ಯುವಕ
ಬಸ್ಸಿನಲ್ಲಿ ನಿದ್ದೆಗೆ ಜಾರಿದ್ದ ವೇಳೆ ಯುವತಿಯ ಎದೆ ಮೇಲೆ ಕೈ ಇಟ್ಟ ಯುವಕ
ಪುರಿ ಜಗನ್ನಾಥ ದೇವಸ್ಥಾನದಲ್ಲಿ ಈ ವರ್ಷದ ಕೊನೆಯ ಸೂರ್ಯಾಸ್ತ ಕಂಡಿದ್ದು ಹೀಗೆ
ಪುರಿ ಜಗನ್ನಾಥ ದೇವಸ್ಥಾನದಲ್ಲಿ ಈ ವರ್ಷದ ಕೊನೆಯ ಸೂರ್ಯಾಸ್ತ ಕಂಡಿದ್ದು ಹೀಗೆ
ಬೆಂಗಳೂರಲ್ಲಿ ಪಬ್​​ಗಳತ್ತ ಮುಖ ಮಾಡಿದ ಜನ: ಸಿಲಿಕಾನ್​​ ಸಿಟಿ ಫುಲ್​​ ಝಗಮಗ
ಬೆಂಗಳೂರಲ್ಲಿ ಪಬ್​​ಗಳತ್ತ ಮುಖ ಮಾಡಿದ ಜನ: ಸಿಲಿಕಾನ್​​ ಸಿಟಿ ಫುಲ್​​ ಝಗಮಗ
ವರ್ಷದ ಕೊನೆಯ ಸೂರ್ಯಾಸ್ತ: ನಯನ ಮನೋಹರ ದೃಶ್ಯ ಸೆರೆ
ವರ್ಷದ ಕೊನೆಯ ಸೂರ್ಯಾಸ್ತ: ನಯನ ಮನೋಹರ ದೃಶ್ಯ ಸೆರೆ
ಒಡಿಶಾದಲ್ಲಿ 2 ಪ್ರಲೇ ಕ್ಷಿಪಣಿಗಳ ಯಶಸ್ವಿ ಉಡಾವಣೆ; ವಿಡಿಯೋ ಇಲ್ಲಿದೆ
ಒಡಿಶಾದಲ್ಲಿ 2 ಪ್ರಲೇ ಕ್ಷಿಪಣಿಗಳ ಯಶಸ್ವಿ ಉಡಾವಣೆ; ವಿಡಿಯೋ ಇಲ್ಲಿದೆ
ಗ್ರಾಹಕರಿಗೆ ಶಾಕ್​​ ಕೊಟ್ಟ ಡೆಲವರಿ ಬಾಯ್ಸ್​​​
ಗ್ರಾಹಕರಿಗೆ ಶಾಕ್​​ ಕೊಟ್ಟ ಡೆಲವರಿ ಬಾಯ್ಸ್​​​
ಬಿಗ್​​ಬಾಸ್ ಮನೆಯಲ್ಲಿ ಸ್ಪಂದನಾ-ರಾಶಿಕಾ ಕುಸ್ತಿ: ವಿಡಿಯೋ
ಬಿಗ್​​ಬಾಸ್ ಮನೆಯಲ್ಲಿ ಸ್ಪಂದನಾ-ರಾಶಿಕಾ ಕುಸ್ತಿ: ವಿಡಿಯೋ
New Year 2026: ಹೊಸ ವರ್ಷ ಸ್ವಾಗತಿಸಿದ ಮೊದಲ ದೇಶ ನ್ಯೂಜಿಲೆಂಡ್‌
New Year 2026: ಹೊಸ ವರ್ಷ ಸ್ವಾಗತಿಸಿದ ಮೊದಲ ದೇಶ ನ್ಯೂಜಿಲೆಂಡ್‌